Bengaluru Bandh: ಸೋಮವಾರ ಖಾಸಗಿ ವಾಹನ ಬಂದ್‌; ವಿದ್ಯಾರ್ಥಿಗಳು, ನೌಕರರಿಗೆ ಬಿಸಿ; ಪರ್ಯಾಯ ವ್ಯವಸ್ಥೆ ಏನು? - Vistara News

ಕರ್ನಾಟಕ

Bengaluru Bandh: ಸೋಮವಾರ ಖಾಸಗಿ ವಾಹನ ಬಂದ್‌; ವಿದ್ಯಾರ್ಥಿಗಳು, ನೌಕರರಿಗೆ ಬಿಸಿ; ಪರ್ಯಾಯ ವ್ಯವಸ್ಥೆ ಏನು?

ಬೆಂಗಳೂರಿನಲ್ಲಿ ಶಾಲೆ, ಏರ್‌ಪೋರ್ಟ್, ಆಸ್ಪತ್ರೆಗಳಿರುವ ಕಡೆಗಳಲ್ಲಿ ಹೆಚ್ಚು ಟ್ರಿಪ್ ಬಸ್ ಓಡಿಸಲು ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

VISTARANEWS.COM


on

Private vehicles
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಸೆ.11ರಂದು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವುದರಿಂದ ಭಾನುವಾರ ಮಧ್ಯರಾತ್ರಿಯಿಂದಲೇ ಬಸ್‌, ಶಾಲಾ ವಾಹನ, ಆಟೋ, ಕ್ಯಾಬ್‌ಗಳ ಸೇವೆ ಸ್ಥಗಿತವಾಗಲಿದೆ. ಈ ನಡುವೆ, ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಸಾರಿಗೆ ಇಲಾಖೆ ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ. ರಾಜಧಾನಿಯಲ್ಲಿ ಶಾಲೆ, ಏರ್‌ಪೋರ್ಟ್, ಪ್ರಮುಖ ಆಸ್ಪತ್ರೆಗಳಿರುವ ಕಡೆ ಹೆಚ್ಚು ಟ್ರಿಪ್ ಬಸ್ ಓಡಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಬಂದ್‌ ಬಗ್ಗೆ ಶಾಂತಿ ನಗರದಲ್ಲಿದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶಾಲೆ, ಏರ್‌ಪೋರ್ಟ್, ಆಸ್ಪತ್ರೆ ಮುಂತಾದ ಕಡೆಗಳಲ್ಲಿ ಹೆಚ್ಚು ಟ್ರಿಪ್ ಬಸ್ ಓಡಿಸಲು ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಸಹ ನಿಗಾ ಇಡುವಂತೆ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

ನಾಳೆ ಬಸ್‌ಗಳು ಹೆಚ್ಚುವರಿ 4 ಸಾವಿರ ಟ್ರಿಪ್ ಓಡುತ್ತವೆ. ಏರ್‌ಪೋರ್ಟ್‌ ಹೆಚ್ಚುವರಿ 100 ಬಸ್ ಹಾಕಿದ್ದೇವೆ. ಬೇಡಿಕೆ ಹೆಚ್ಚಿರುವ ಕಡೆ ಬಸ್‌ಗಳು ಹೆಚ್ಚಾಗಿ ಓಡುತ್ತೆ. 1 ಕೋಟಿಗೂ ಹೆಚ್ಚು ಮಂದಿ ನಮ್ಮ ಬಿಎಂಟಿಸಿಯಲ್ಲಿ ಪ್ರತಿ ನಿತ್ಯ ಪ್ರಯಾಣ ಮಾಡುತ್ತಾರೆ. ಅವರು ಎಷ್ಟು ಸಂಘ ಆದರೂ ಇಟ್ಟುಕೊಳ್ಳಲಿ, ಮುಷ್ಕರ ಮಾಡಿಯೇ ಮಾಡುತ್ತೇವೆ ಎಂಬುವವರ ಬಗ್ಗೆ ಏನು ಹೇಳಲಿ ಎಂದರು.

ಇದನ್ನೂ ಓದಿ | Weather Report : ಸೆ.11ಕ್ಕೆ ಕರಾವಳಿಯಲ್ಲಿ ಅಬ್ಬರಿಸುವ ಮಳೆ; ಮೀನುಗಾರಿಕೆಗೆ ಬ್ರೇಕ್‌

ಖಾಸಗಿ ಸಾರಿಗೆಯವರ ಬಂದ್‌ಗೆ ನಮ್ಮಿಂದ ಯಾವ ಅಡ್ಡಿಯೂ ಇಲ್ಲ, ಸಾರಿಗೆ ಹೆಚ್ಚುವರಿ ಆಯುಕ್ತರ ಮೇಲೆ ಸಹ ಅವರು ಆರೋಪ ಮಾಡಿದ್ದಾರೆ. ಅದನ್ನು ಪರಿಶೀಲಿಸಿ ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಅವರ ವೈಯಕ್ತಿಕ ಸಂಭಾಷಣೆ ವಿಚಾರ ನಾನು ಏನು ಹೇಳಲಿ ಎಂದು ತಿಳಿಸಿದರು.

ಈ ಹಿಂದೆ ಎರಡು ಬಾರಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಜತೆ ಸಭೆ ಮಾಡಿದ್ದೆವು. ಸಿಎಂ ಬಳಿಗೆ ಸಹ ಎಲ್ಲರನ್ನೂ ಕರೆದುಕೊಂಡು ಹೋಗಿದ್ದೆ. ಸಭೆಗೆ ಕೆಲವರು ಬಂದಿದ್ದರು, ಕೆಲವರು ಬಂದಿರಲಿಲ್ಲ. ಮುಷ್ಕರ ಮಾಡುವುದಕ್ಕೆ ಎಲ್ಲರಿಗೂ ಅವಕಾಶ ಇದೆ ಎಂದು ಹೇಳಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟಸ ಬೇಡಿಕೆ ಅನುಸಾರ ಅನುಪಾಲನಾ ವರದಿ ಸಹ ಮಾಡಿದ್ದೇವೆ. ಅವರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5 ಸಾವಿರ ಕೋಟಿ ರೂ. ಹೆಚ್ಚುವರಿ ಹಣ ಬೇಕಾಗುತ್ತದೆ. ಅವರಿಗೆ ಸಮಸ್ಯೆ ಆಗುತ್ತೆ ಎಂದು ತೆರಿಗೆ ಹೆಚ್ಚಳ ನಿರ್ಧಾರವನ್ನು ತಡೆ ಹಿಡಿದಿದ್ದೇವೆ. ಶಕ್ತಿ ಯೋಜನೆ ಪರಿಣಾಮ ಹಾಗೂ ಲೈಫ್ ಟೈಮ್ ಟ್ಯಾಕ್ಸ್‌ನಿಂದ ಖಾಸಗಿ ವಾಹನ ಚಾಲಕರಿಗೆ ಆಗಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮೇಲಿನ ವಿಷಯಕ್ಕೆ ಸಂಬಂಧಿಸಿದದಂತೆ, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ ಅನುಸೂಚಿಗಳಿಂದ 5601 57.450 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸುತ್ತಿದ್ದು, ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಖಾಸಗಿ ಆಟೋ, ಟ್ಯಾಕ್ಸಿ ಮತ್ತು ವಾಹನಗಳ ಚಾಲಕರ ಒಕ್ಕೂಟವು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಸಂಸ್ಥೆಯು, ಬೆಂಗಳೂರಿನ ಶಾಲಾ/ಕಾಲೇಜು ಮಕ್ಕಳು ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ಬಸ್‌ ನಿಲ್ದಾಣಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್‌, ಬನ್ನೇರುಘಟ್ಟ/ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ. ನೆಲಮಂಗಲ, ಹೆಸರಘಟ್ಟ, ದೊಡ್ಡಬಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆಗೆ ಹಾಗೂ ಹೊರ ವರ್ತುಲ ಒಳ ವರ್ತುಲ ರಸ್ತೆಗಳಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ 500 ಅನುಸೂಚಿಗಳಿಂದ ಸುಮಾರು 4000 ಹೆಚ್ಚುವರಿ ಸುತ್ತುವಳಿಗಳನ್ನು ಕಾರ್ಯಾಚರಿಸಲು ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ.

ಮುಂದುವರೆದು, ನಗರದ ಪ್ರಮುಖ ರಸ್ತೆ, ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಲ್ಲಿ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳನ್ನು ಹಾಗೂ ಸಾರಥಿ ಗಸ್ತು ಪಡೆಗಳನ್ನು ನಿಯೋಜಿಸಿ, ಸಂಸ್ಥೆಯ ಸಾರಿಗೆಗಳ ಮೇಲ್ವಿಚಾರಣೆ ಮಾಡಿಸಲಾಗುತ್ತಿದೆ. ಅಲ್ಲದೇ ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆಗೆ ಕ್ರಮ ವಹಿಸಲಾಗುವುದು.

ಹೆಚ್ಚುವರಿ 4000 ಬಸ್ ಟ್ರಿಪ್‌

ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ 5601 ಅನುಸೂಚಿಗಳಿಂದ(ಷೆಡ್ಯೂಲ್) 57,450 ಟ್ರಿಪ್‌(ಸುತ್ತುವಳಿ) ಕಾರ್ಯಾಚರಣೆ ಮಾಡಲಾಗುತ್ತಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಖಾಸಗಿ ಆಟೋ, ಟ್ಯಾಕ್ಸಿ ಮತ್ತು ವಾಹನಗಳ ಸೇವೆ ಇರುವುದಿಲ್ಲ. ಹೀಗಾಗಿ ಬೆಂಗಳೂರಿನ ಶಾಲಾ, ಕಾಲೇಜು ಮಕ್ಕಳು ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ಬಸ್‌ ನಿಲ್ದಾಣಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್‌, ಬನ್ನೇರುಘಟ್ಟ, ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ. ನೆಲಮಂಗಲ, ಹೆಸರಘಟ್ಟ, ದೊಡ್ಡಬಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆಗೆ ಹಾಗೂ ಹೊರ ವರ್ತುಲ ಒಳ ವರ್ತುಲ ರಸ್ತೆಗಳಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ 500 ಅನುಸೂಚಿಗಳಿಂದ ಸುಮಾರು 4000 ಹೆಚ್ಚುವರಿ ಸುತ್ತುವಳಿಗಳನ್ನು ಕಾರ್ಯಾಚರಿಸಲು ಯೋಜನೆಯನ್ನು ರೂಪಿಸಲಾಗಿದೆ.

ಮುಂದುವರಿದು ನಗರದ ಪ್ರಮುಖ ರಸ್ತೆ, ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಲ್ಲಿ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಯನ್ನು ಹಾಗೂ ಸಾರಥಿ ಗಸ್ತು ಪಡೆಗಳನ್ನು ನಿಯೋಜಿಸಿ, ಸಂಸ್ಥೆಯ ಸಾರಿಗೆಗಳ ಮೇಲ್ವಿಚಾರಣೆ ಮಾಡಿಸಲಾಗುತ್ತಿದೆ. ಅಲ್ಲದೇ ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆಗೆ ಕ್ರಮ ವಹಿಸಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಸೋಮವಾರ ರಸ್ತೆಗಿಳಿಯಲ್ಲ ಸ್ಕೂಲ್‌ ಬಸ್‌, ವ್ಯಾನ್‌;‌ ಮಕ್ಕಳಿಗೆ ಶಾಲೆ ಇದ್ಯಾ, ಇಲ್ವಾ?

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟವು ಸೆ.11ರಂದು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವುದರಿಂದ ಬಂದ್‌ ಬಿಸಿ ಶಾಲಾ ಕಾಲೇಜುಗಳಿಗೂ ತಟ್ಟಲಿದೆ. ಮಕ್ಕಳ ಓಡಾಟಕ್ಕೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.

ಸೆಪ್ಟೆಂಬರ್‌ 10ರ ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆವರೆಗೆ ಖಾಸಗಿ ಸಾರಿಗೆ ಸೇವೆಗಳು ಬಂದ್ ಆಗಲಿವೆ. ಖಾಸಗಿ ಬಸ್‌ಗಳು, ಮಿನಿ ಲಗೇಜ್ ವಾಹನಗಳು, ಸ್ಕೂಲ್‌ ಬಸ್‌, ವ್ಯಾನ್‌, ಆಟೋ ಸೇರಿದಂತೆ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌, ಕಂಪೆನಿ ಕ್ಯಾಬ್‌ಗಳ ಓಡಾಟ ಇರುವುದಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ.

ಬೆಂಗಳೂರು ಬಂದ್‌ ಬಿಸಿ ಶಾಲಾ ಮಕ್ಕಳ ಓಡಾಟಕ್ಕೂ ತಟ್ಟಲಿದೆ. ಸ್ಕೂಲ್‌ ಬಸ್‌, ವ್ಯಾನ್‌, ಆಟೋ ಯಾವುದು ಇರುವುದಿಲ್ಲ. ಈ ಕಾರಣದಿಂದಾಗಿ ನಿಮ್ಮ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ಹೋಗಬೇಕಾದರೆ ನಿಮ್ಮ ಸ್ವಂತ ವಾಹನ ಅಥವಾ ಬಿಎಂಟಿಸಿ ಬಸ್‌ ಗಟ್ಟಿ.

ರಜೆ ಘೋಷಿಸಿದ ಖಾಸಗಿ ಶಾಲೆಗಳು

ಖಾಸಗಿ ಸಾರಿಗೆ ಒಕ್ಕೂಟದಿಂದ ಬಂದ್ ಕರೆ ನೀಡುವುದರಿಂದ ಮುಂಜಾಗ್ರತಾ ಕ್ರಮವಾಗಿ ಕೆಲವು ಶಾಲೆಗಳು ರಜೆ ಘೋಷಣೆ ಮಾಡಿವೆ. ಈಗಾಗಲೇ ಹೆಬ್ಬಾಳದ ವಿದ್ಯಾನಿಕೇತನ ಶಾಲೆ, ಆರ್ಕಿಡ್ ಶಾಲೆ ಸೇರಿದಂತೆ ಹಲವು ಶಾಲೆಗಳು ಮಕ್ಕಳಿಗೆ ರಜೆ ನೀಡಿವೆ. ಈ ಬಗ್ಗೆ ಪೋಷಕರಿಗೆ ಶಾಲಾ ಆಡಳಿತ ಮಂಡಳಿ ಸೂಚನೆ ನೀಡಿದೆ. ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆ ರಜೆ ಘೋಷಣೆ ಎಂದು ಉಲ್ಲೇಖಿಸಿದೆ. ಸದ್ಯ ಇತರೆ ಶಾಲೆಗಳು ರಜೆ ಬಗ್ಗೆ ಸ್ಪಷ್ಟ ನಿಲುವು ಹೊಂದಿಲ್ಲ. ಎಂದಿನಂತೆ ಬಹುತೇಕ ಕಡೆಗಳಲ್ಲಿ ಶಾಲೆ ನಡೆಯಲಿದೆ.

ಚಾಲಕರ ಅಷ್ಟ ದಿಗ್ಬಂಧನ!

ಸೆ.11ರಂದು ಪ್ರಮುಖ ಜಂಕ್ಷನ್, ಹೆದ್ದಾರಿಯಲ್ಲಿ ವಾಹನಗಳ ತಡೆಗೆ ಚಾಲಕರು ಯೋಜನೆ ರೂಪಿಸಿದ್ದಾರೆ. ಮೆಜೆಸ್ಟಿಕ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರ‍್ಯಾಲಿ ನಡೆಸಿ, ಮತ್ತೊಮ್ಮೆ ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಸರ್ಕಾರವು ಲಿಖಿತ ಆದೇಶ ನೀಡುವವರೆಗೂ ಬಂದ್ ಕೈ ಬಿಡದಿರಲು ತೀರ್ಮಾನಿಸಿದ್ದಾರೆ.

ಮೆರವಣಿಗೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ತಯಾರಿ ನಡೆದಿದ್ದು, ನೆಲಮಂಗಲ , ವೈಟ್ ಫೀಲ್ಡ್, ಕೆಂಗೇರಿ, ಕೆ.ಆರ್ ಪುರಂ, ಹೆಬ್ಬಾಳದಿಂದ ರ‍್ಯಾಲಿ ಬಂದು ಫ್ರೀಡಂ ಪಾರ್ಕ್‌ ಸೇರಲಿದ್ದಾರೆ. ಪೊಲೀಸರು ರ‍್ಯಾಲಿ ಹತ್ತಿಕ್ಕುವ ಪ್ರಯತ್ನ ಮಾಡಿದರೆ, ಸ್ಥಳದಲ್ಲೇ ರಸ್ತೆ ತಡೆದು ಪ್ರತಿಭಟನೆ ನಡೆಸಲು ಒಕ್ಕೂಟ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ | Shuchi Scheme: ಶುಚಿ ಯೋಜನೆಯಲ್ಲಿ ಹೊಸ ಪ್ರಯೋಗ; ನ್ಯಾಪ್ಕಿನ್‌ಗೆ ಪರ್ಯಾಯವಾಗಿ ಮೆನ್‌ಸ್ಟ್ರುಯಲ್ ಕಪ್

ಟ್ರಾಫಿಕ್‌ ಕಿರಿಕಿರಿ

ಒಂದು ಕಡೆ ಖಾಸಗಿ ವಾಹನಗಳು ಸಿಗದೆ ಪ್ರಯಾಣಿಕರ ಪರದಾಟ ಅನುಭವಿಸಿದರೆ ಮತ್ತೊಂದು ಕಡೆ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ. ಖಾಸಗಿ ವಾಹನ ಚಾಲಕರ ರ‍್ಯಾಲಿಯಿಂದಾಗಿ ಮೆಜಸ್ಟಿಕ್‌ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಬಹುದು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Wheelchair Cricket Tournament: ಜೀವನದಲ್ಲಿ ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದಿರಬೇಕು. ಬಲವಾದ, ಸಂತೋಷವಾದ ಮನಸ್ಸನ್ನು ಹೊಂದುವುದು ಮುಖ್ಯ ಎಂದು ಖ್ಯಾತ ಆಧ್ಯಾತ್ಮಿಕ ಗುರು ರವಿಶಂಕರ್‌ ಗುರೂಜಿ ಅವರು ತಿಳಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಪರಿಶ್ರಮ ದಿವ್ಯಾಂಗ ಕ್ರೀಡಾ ಅಕಾಡೆಮಿಯು ಆಯೋಜಿಸಿದ್ದ ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿಯನ್ನು (Wheelchair Cricket Tournament) ಆರ್ಟ್ ಆಫ್ ಲಿವಿಂಗ್‌ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಖ್ಯಾತ ಆಧ್ಯಾತ್ಮಿಕ ಗುರುಗಳಾದ ಗುರುದೇವ್‌ ಶ್ರೀ ಶ್ರೀ ರವಿಶಂಕರ್‌ ಹಾಗೂ ಇತರ ಗಣ್ಯರು ಉದ್ಘಾಟಿಸಿದರು. ಪಂದ್ಯಾವಳಿಯಲ್ಲಿ, 35 ಪುರುಷರು, 25 ಮಹಿಳಾ ಕ್ರೀಡಾಪಟುಗಳು ಹಾಗೂ 10 ಸಹಚರರು ಭಾಗಿಯಾಗಿದ್ದರು.

ಕ್ರೀಡೆಗಳಲ್ಲಿ ನೈತಿಕತೆಯ ಬೆಂಬಲ ನೀಡಲು ದನಿಯಾಗಿರುವ ಗುರುದೇವ್ ಶ್ರೀ ಶ್ರೀ ರವಿಶಂಕರರು ಮಾತನಾಡಿ, “ಈ ಅಕಾಡೆಮಿಯು ಎಲ್ಲರಿಗೂ ಆಶಾಕಿರಣವನ್ನು ಮೂಡಿಸುತ್ತಿದೆ. ಇಂದಿನ ದಿನಗಳಲ್ಲಿ ಒತ್ತಡಕ್ಕೆ ಒಳಗಾಗುತ್ತಿರುವ ಯುವಕರಿಗೆ ಇದು ದಾರಿಯನ್ನು ತೋರಿಸುತ್ತಿದೆ. ಏನೇ ಆದರೂ ಜೀವನದಲ್ಲಿ ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದಿರಬೇಕು. ಬಲವಾದ, ಸಂತೋಷವಾದ ಮನಸ್ಸನ್ನು ಹೊಂದುವುದು ಮುಖ್ಯ. ಇಂದು ಪ್ರತಿ 40 ಸೆಕೆಂಡುಗಳಿಗೊಮ್ಮೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನೀವು ಆಶಾಕಿರಣವನ್ನು ನೀಡಿ, ಜೀವನವನ್ನು ಸನ್ಮಾನಿಸಿ, ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದುವಂತೆ ಹೇಳುತ್ತಿರುವಿರಿ. ಕ್ರೀಡೆಗಳನ್ನು ಆಡಲು ಉತ್ಸಾಹ, ಸ್ಫೂರ್ತಿ ಮತ್ತು ಧ್ಯಾನ ಬೇಕು” ಎಂದು ಸಲಹೆ ನೀಡಿದರು.

wheelchair cricket tournament

ಇದನ್ನೂ ಓದಿ | IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

ಈ ಪಂದ್ಯಾವಳಿಯನ್ನು, ಜಾಗತಿಕ ಆಧ್ಯಾತ್ಮಿಕ ಗುರುಗಳಾದ ಗುರುದೇವ ಶ್ರೀ ಶ್ರೀ ರವಿಶಂಕರ್, ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ ಕ್ರೀಡಾಪಟುಗಳ ವಿಭಾಗದ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ, ಮಾಜಿ ಯೋಧರು, ಮುಖ್ಯ ಕ್ಲಸಿಫೈಯರ್ ಹಾಗೂ ಟೋಕ್ಯೋ ಪಾರಾ ಒಲಿಂಪಿಕ್ಸ್‌ನ ವೈದ್ಯಕೀಯ ನಿರ್ದೇಶಕರು ಡಾ. ಅಮೇಯ, ಮಾಜಿ ಕೆಪಿಎಸ್‌ಇ ಸದಸ್ಯರು, ಬಿಬಿಎಂಪಿ ಕಾರ್ಪೊರೇಟರ್ ಡಾ.ಮಂಗಳಾ ಶ್ರೀಧರ್, ಸುಮಧುರ ಗ್ರೂಪ್ ಸಿಒಒ ಗಿರಿಧರ್ ಕುಮಾರ್. ಬಿ, ಸುಮಧುರ ಗ್ರೂಪ್‌ನ ಸಸ್ಟೇಪಬಿಲಿಟಿ ಮತ್ತು ಸಿಎಸ್ ಆರ್ನ ಮುಖ್ಯಸ್ಥೆ ಜೀವನ ಕಲಾಕುಂದಲ, ಟಿಸಿಎಫ್ಎಂ-ಎಂಬಸ್ಸಿ ಗ್ರೂಪ್ ಸಿಇಒ ಅಶ್ವಿನಿ ವಲಾವಲ್ಕರ್ ಉದ್ಘಾಟಿಸಿದರು.

ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಕ್ರೀಡಾಪಟುಗಳ ಅಧ್ಯಕ್ಷರಾದ ಸತ್ಯನಾರಾಯಣ ಅವರು ಗುರುದೇವರನ್ನು ಕುರಿತು ಮಾತನಾಡಿ, “ತಮ್ಮ ಆಶ್ರಮದಲ್ಲಿ ಅನೇಕ ವರ್ಷಗಳಿಂದಲೂ, ಗುರುದೇವ ಶ್ರೀ ಶ್ರೀ ರವಿಶಂಕರರು ಈ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಇಂದು ಎಲ್ಲೆಡೆಯೂ ಪ್ಯಾರಾ ಒಲಿಂಪಿಕ್ ಕ್ರೀಡೆಗಳಿಗೆ ಬಹಳ ಪ್ರೋತ್ಸಾಹ ದೊರಕುತ್ತಿದೆ. ಹಿಂದೆ ಈ ರೀತಿಯ ಪ್ರೋತ್ಸಾಹ ಇರಲಿಲ್ಲ. ಈಗ ಸರ್ಕಾರವೂ ಸಹ ಬಹಳ ಪ್ರೋತ್ಸಾಹವನ್ನು ನೀಡುತ್ತಿದೆ. ಈಗ ಬೇಕಾಗಿರುವುದೆಂದರೆ, ದಿವ್ಯಾಂಗ ಪಟುಗಳು ಪ್ರತಿ ದಿನ ಅಭ್ಯಾಸ ಮಾಡುವುದು” ಎಂದರು.

ಇದನ್ನೂ ಓದಿ | Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

ಜೂನ್ 8 ಮತ್ತು 9ರಂದು ಎಸ್‌ಎಸ್ಆರ್‌ವಿಎಮ್‌ ಗ್ರೌಂಡ್ಸ್‌ನಲ್ಲಿ ಪುರುಷರ ಪಂದ್ಯಾವಳಿ ನಡೆಯಲಿದ್ದು, ವಿರಾಮದ ಸಮಯದಲ್ಲಿ ಮಹಿಳೆಯರ ಟಿ20 ಪಂದ್ಯಾವಳಿಯೂ ನಡೆಯಲಿದೆ.

Continue Reading

ಕರ್ನಾಟಕ

Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

Congress Guarantee: ಮತದಾರರನ್ನು ʼಸ್ಯಾಡಿಸ್ಟ್ʼ ಮನಸ್ಥಿತಿಯವರು ಎಂದು ಕರೆದಿರುವ ಮೈಸೂರು- ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್, ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ ಎಂದು ಮತದಾರರನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

Congress Guarantee
Koo

ಮೈಸೂರು: ಗ್ಯಾರಂಟಿಗಳನ್ನು ನೀಡಿದರೂ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಮತದಾರರ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ (M. Lakshman) ಅಸಮಾಧಾನ ಹೊರಹಾಕಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ (Congress Guarantee) ಇಷ್ಟ ಆಗಿಲ್ಲ. ಅದನ್ನು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿ ನಮ್ಮ ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿತ್ತು. ಆದರೂ ಅವರನ್ನು ಜನ ಬೆಂಬಲಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜನರಿಗೆ ಗ್ಯಾರಂಟಿಗಳು ಇಷ್ಟವಿಲ್ಲ ಎಂಬುವುದು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಹೀಗಾಗಿ ನಿಲ್ಲಿಸುವುದು ಒಳಿತು. ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ಮರು ಪರಿಶೀಲನೆ ಮಾಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

ಶೇ.70 ರಷ್ಟು ಮೇಲ್ವರ್ಗದವರು ಈ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ, ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ. ಬೆಂಜ್ ಕಾರ್ ಹೊಂದಿರುವವನು, 25 ಸಾವಿರ ರೂ. ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ಮರು ಪರಿಶೀಲಿಸುವ ಮಾಡುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಅನುಕೂಲ ಪಡೆದು ವೋಟ್‌ ಹಾಕದವರಿಗೆ ಉದಾಹರಣೆ ನೀಡುತ್ತಾ, ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದ್ದಾರೆ. ನನಗೆ ಕೇವಲ ಮೂರು, ಏಳು ಮತಗಳನ್ನು ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮತದಾರರು ‌ʼಸ್ಯಾಡಿಸ್ಟ್ʼ ಎಂದು ಟೀಕೆ

ಮತದಾರರನ್ನು ಸ್ಯಾಡಿಸ್ಟ್ ಎಂದು ಕರೆದಿರುವ ಎಂ.ಲಕ್ಷ್ಮಣ್, ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ? ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಐದು ರೂಪಾಯಿ ಕೊಟ್ಟಿದ್ರಾ? ಆದರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟೋ ಬಾರಿ ನೋವು ಕೊಡ್ತೀರಿ? ಎಂದು ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಯದುವೀರ್ ಜನರನ್ನು ಎಷ್ಟರ ಮಟ್ಟಿಗೆ ಅರಮನೆಗೆ ಬಿಟ್ಟುಕೊಳ್ಳುತ್ತಾರೋ, ಇಲ್ಲವೋ ಗೊತ್ತಿಲ್ಲ.
ನಾಳೆಯಿಂದಲೇ ನಾನು ಜನರ ಸಮಸ್ಯೆ ಪರಿಹರಿಸಲು ಮುಂದಾಗುತ್ತೇನೆ. ನನಗೆ ಮತ ಕೊಟ್ಟವರು, ಕೊಡದೇ ಇರುವವರು ಎಲ್ಲರೂ ನನ್ನ ಸಂಪರ್ಕ ಮಾಡಬಹುದು. ನಾಳೆಯೇ ನನ್ನ ಕಚೇರಿ ಸಹ ತೆರೆಯುತ್ತೇನೆ. ಆ ಕಚೇರಿಗೆ ಎಲ್ಲರಿಗೂ ಮುಕ್ತ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ

ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಆದರೂ ಚುನಾವಣೆ ವೇಳೆ ನನ್ನನ್ನು ಒಕ್ಕಲಿಗನೇ ಅಲ್ಲ ಅಂದು ಪ್ರಚಾರ ಮಾಡಿದರು. ಹಳೇ ಮೈಸೂರು ಭಾಗದಲ್ಲಿ 8 ಜನ ಒಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಒಬ್ಬ ಒಕ್ಕಲಿಗನನ್ನು ನೀವು ಆಯ್ಕೆ ಮಾಡಿಕೊಳ್ಳಲಿಲ್ಲ? ಮೈಸೂರಿನಲ್ಲಿ ಹಲವು ವರ್ಷಗಳ ನಂತರ ಒಕ್ಕಲಿಗೆ ಸಮುದಾಯಕ್ಕೆ ಟಿಕೆಟ್ ನೀಡಿದ್ದರು. ಈ ಅವಕಾಶವನ್ನೂ ನೀವು ಕೈ ಚೆಲ್ಲಿದ್ದೀರಿ ಎಂದು ಸಮುದಾಯದ ವಿರುದ್ಧ ಬೇಸರ ಹೊರಹಾಕಿದ್ದಾರೆ.

Continue Reading

ಮೈಸೂರು

Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

Murder Case : ತಂಗಿಗೆ ವರದಕ್ಷಿಣಿ ಕಿರುಕುಳ ಕೊಡುತ್ತಿದ್ದ ಕಾರಣಕ್ಕೆ ತವರು ಮನೆಗೆ ಕರೆದುಕೊಂಡು ಬರಲು ಹೋದ ಅಣ್ಣನ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಮೈಸೂರಿನಲ್ಲಿ ಬಾವನೇ ಬಾಮೈದನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

By

Murder case in Mysuru
ಕೊಲೆಯಾದ ಅಭಿಷೇಕ್‌ ಹಾಗೂ ಆರೋಪಿ ರವಿಕುಮಾರ್‌
Koo

ಮೈಸೂರು: ತಂಗಿ ಗಂಡನಿಂದಲೇ ಯುವಕನೊಬ್ಬ (Murder Case) ಕೊಲೆಯಾಗಿ ಹೋಗಿದ್ದಾನೆ. ಮೈಸೂರಿನ ಕುವೆಂಪು ನಗರದ ಐ ಬ್ಲಾಕ್‌ನಲ್ಲಿ ಘಟನೆ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿ.

ಅಭಿಷೇಕ್‌ ತಂಗಿಗೆ ಆಕೆಯ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ತಂಗಿಗೆ ಹೊಡೆದು ಬಡಿದು ಮಾಡುತ್ತಿದ್ದರು. ಗಂಡನ ಮನೆಯವರ ಕಾಟಕ್ಕೆ ಬೇಸತ್ತ ತಂಗಿಗೆ ಹೆತ್ತವರಿಗೆ ತನ್ನ ಸಂಕಷ್ಟವನ್ನು ಹೇಳಿಕೊಂಡಿದ್ದಳು. ಈ ವಿಷಯ ತಿಳಿದ ಅಭಿಷೇಕ್‌ ತಂಗಿಯನ್ನು ತವರು ಮನೆಗೆ ಕರೆದುಕೊಂಡು ಬರಲು ಹೋಗಿದ್ದ.

ಈ ವೇಳೆ ಬಾವ ರವಿಕುಮಾರ್‌ ಚಾಕುವಿನಿಂದ ಬಾಮೈದ ಅಭಿಷೇಕ್‌ಗೆ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾದ ಅಭಿಷೇಕ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡ ಅಭಿ ಮೃತಪಟ್ಟಿದ್ದಾನೆ. ಸದ್ಯ ಸ್ಥಳಕ್ಕೆ ಕುವೆಂಪು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

MM Hills

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Bengaluru Murder : ಪರಿಚಿತನಿಂದಲೇ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ವ್ಯಕ್ತಿಯನ್ನು ಕೊಂದು ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಹಂತಕ ಮೋರಿಗೆ ಬಿಸಾಡಿ ಪರಾರಿ ಆಗಿದ್ದ. ಇದೀಗ ಆರೋಪಿಯನ್ನು ಬಂಧಿಸಿ, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Bengaluru murder
ಕೊಲೆ ಆರೋಪಿ ಮಾಧವ್‌ ರಾವ್‌ ಹಾಗೂ ತುಂಡಾರಿಸಿದ ಮೃತದೇಹವನ್ನು ಬ್ಯಾಗ್‌ನಲ್ಲಿ ಕೊಂಡೊಯ್ಯುತ್ತಿರುವ ದೃಶ್ಯ ಸೆರೆ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್‌ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್‌ ಫಂಡ್‌ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್‌ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್‌ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್‌ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.

ಬಳಿಕ ಆತನ ಮೊಬೈಲ್‌ ಲೋಕೇಶನ್‌ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್‌ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.

Bengaluru  Murder
ತುಂಡು ತುಂಡಾಗಿ ಕತ್ತರಿಸಿದ ದೇಹಕ್ಕಾಗಿ ಹುಡುಕಾಟ

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಅಕ್ರಮ ಸಂಬಂಧದ ಶಂಕೆ

ಮಾಧವರಾವ್ ಮತ್ತು ಕೆ.ವಿ.ಶ್ರೀನಾಥ್‌ ಇಬ್ಬರು ಎರಡು ವರ್ಷದಿಂದ ಪರಿಚಯಸ್ಥರಾಗಿದ್ದರು. ಕೆ.ವಿ.ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಶ್ರೀನಾಥ್‌ ಒತ್ತಾಯ ಮಾಡುತ್ತಿದ್ದ. ಅಷ್ಟಲ್ಲದೇ ಮಾಧವರಾವ್‌ ಪತ್ನಿ ಜತೆ ಶ್ರೀನಾಥ್‌ ಅಕ್ರಮ ಸಂಬಂಧವನ್ನು ಹೊಂದಿದ್ದನಂತೆ.

ಹೀಗಿರುವಾಗ ಮೇ 28ರಂದು ಬೆಳಗ್ಗೆ ಮಾಧವರಾವ್ ಮನೆಗೆ ಶ್ರೀನಾಥ್‌ ಬಂದಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಲ್ಲಿ ಮಾಧವರಾವ್ ಮನೆಯಲ್ಲಿದ್ದ ಜಾಕ್ ರಾಡ್‌ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀನಾಥ್‌ನ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದ.

ಬಳಿಕ ಸಾಕ್ಷಿ ನಾಶ ಮಾಡಲು ಶ್ರೀನಾಥ್‌ನ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಮೊದಲಿಗೆ ಒಂದು ಬ್ಯಾಗ್ ನಂತರ ಎರಡು ಬ್ಯಾಗ್‌ಗಳಲ್ಲಿ ಮೃತದೇಹದ ತುಂಡುಗಳನ್ನು ತುಂಬಿಕೊಂಡು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಆಂಧ್ರಪ್ರದೇಶಕ್ಕೆ ಎಸ್ಕೇಪ್ ಆಗಿದ್ದ.

ಸದ್ಯ ಕೊಲೆ ಪ್ರಕರಣವನ್ನು ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ರಾಮಮೂರ್ತಿನಗರ ಪೊಲೀಸರು ಕೊಲೆ (302) ಮತ್ತು ಸಾಕ್ಷಿ ನಾಶ(201)ರಡಿ ಕೇಸ್ ದಾಖಲು ಮಾಡಿಕೊಂಡು, ಶ್ರೀನಾಥ್‌ ಮೃತದೇಹದ ತುಂಡುಗಳಿಗೆ ಕಳೆದ ಮೂರು ದಿನದಿಂದ ಹುಡುಕಾಡುತ್ತಿದ್ದಾರೆ. ಸದ್ಯಕ್ಕೆ ಮೋರಿಯಲ್ಲಿ ಮೃತದೇಹದ ತುಂಡುಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದ್ದು, ಮಂಗಳೂರಿನಿಂದ ನುರಿತರನ್ನು ಕರೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಬೆಂಗಳೂರು44 seconds ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್14 mins ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ17 mins ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Norway Chess
ಕ್ರೀಡೆ25 mins ago

Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

IND vs PAK
ಕ್ರೀಡೆ57 mins ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್60 mins ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್1 hour ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Viral Video
ವೈರಲ್ ನ್ಯೂಸ್1 hour ago

Viral Video: ಹೊಟೇಲ್‌ ಮಾಲೀಕನನ್ನು ಮುಖಾಮೂತಿ ನೋಡದೆ ಚಚ್ಚಿದ ಶಾಸಕ; ವಿಡಿಯೋ ಫುಲ್‌ ವೈರಲ್‌

Congress Guarantee
ಕರ್ನಾಟಕ1 hour ago

Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

Food Tips Kannada
ಆರೋಗ್ಯ1 hour ago

Food Tips Kannada: ಇನ್‌ಸ್ಟಂಟ್‌ ನೂಡಲ್ಸ್‌ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ23 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌