Site icon Vistara News

Road Accident: ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ; ನಾಲ್ವರು ಸ್ಥಳದಲ್ಲೇ ಸಾವು

Car And truck Accident

#image_title

ಮಂಡ್ಯ: ನಾಗಮಂಗಲ ತಾಲೂಕಿನ ತಿರುಮಲಾಪುರದ ಬಳಿ ಇಂದು ಮುಂಜಾನೆ ಟಿಪ್ಪರ್ ಲಾರಿಗೆ ಸ್ಯಾಂಟ್ರೋ ಕಾರು ಡಿಕ್ಕಿಯಾಗಿ (Road Accident)ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಲಾರಿ ಡಸ್ಟ್​ ತುಂಬಿದ ಈ ಲಾರಿ ಬೆಂಗಳೂರು ಕಡೆಯಿಂದ ಚೆನ್ನರಾಯಪಟ್ಟಣದ ಕಡೆಗೆ ತೆರಳುತ್ತಿತ್ತು. ಮುಂದೆ ಹೋಗುತ್ತಿದ್ದ ಕಾರಿಗೆ ತಿರುಮಲಾ ಗ್ರಾಮದ ಬಳಿ ಈ ಲಾರಿ ಹಿಂದಿನಿಂದ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್​ ದಾಖಲಾಗಿದೆ.

ಬಾಗಲಕೋಟೆಯಲ್ಲಿ ಬೈಕ್ ಸವಾರ ಸಾವು
ಬಾಗಲಕೋಟೆಯ ಬಾಡಗಂಡಿ-ಬೀಳಗಿ ಸಂಪರ್ಕಿಸುವ ರಸ್ತೆಯಲ್ಲಿ ಲಾರಿ ಮತ್ತು ಬೈಕ್​ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅವರಿಗೆ 45-50 ವರ್ಷ ವಯಸ್ಸಾಗಿದ್ದಿರಬಹುದು ಎನ್ನಲಾಗಿದೆ. ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Koppal Accident: ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಜನರ ದುರ್ಮರಣ; ಟಯರ್‌ ಸ್ಫೋಟವಾಗಿ ಅಪಘಾತ

ಇತ್ತೀಚೆಗೆ ಮೈಸೂರಲ್ಲಿ ಭೀಕರ ರಸ್ತೆ ಅಪಘಾತವಾಗಿತ್ತು. ಇನ್ನೋವಾ ಕಾರು ಮತ್ತು ಖಾಸಗಿ ಬಸ್​ ನಡುವಿನ ಡಿಕ್ಕಿಯಲ್ಲಿ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದರು. ಇವರೆಲ್ಲ ಬಳ್ಳಾರಿ ಮೂಲದ ಸಂಗನಕಲ್​ ಗ್ರಾಮದವರಾಗಿದ್ದು, ಮೈಸೂರಿಗೆ ಪ್ರವಾಸಕ್ಕೆಂದು ಬಂದವರು ಆಗಿದ್ದರು. ತಮ್ಮ ಊರಿನಿಂದ ರೈಲಿಗೆ ಬಂದಿದ್ದ ಪ್ರವಾಸಿಗರು ಮೈಸೂರಲ್ಲಿ ಬಾಡಿಗೆ ಕಾರು ಮಾಡಿಸಿಕೊಂಡು ವಿವಿಧ ತಾಣಗಳಿಗೆ ಭೇಟಿಕೊಡುತ್ತಿದ್ದರು. ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ಕೊಟ್ಟು ವಾಪಸ್​ ಬರುತ್ತಿದ್ದಾಗ ಖಾಸಗಿ ಬಸ್​ಗೆ ಡಿಕ್ಕಿಯಾಗಿದೆ. ಅಂದು ಚಾಲಕ ಸೇರಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ನಿನ್ನೆ ಒಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.

Exit mobile version