School Children: POCSO ಆರೋಪಿ ಶಿಕ್ಷಕನ ಕಿತಾಪತಿ; 18 ವಿದ್ಯಾರ್ಥಿಗಳು ಶಾಲೆಗೆ ಗೈರು - Vistara News

ಕರ್ನಾಟಕ

School Children: POCSO ಆರೋಪಿ ಶಿಕ್ಷಕನ ಕಿತಾಪತಿ; 18 ವಿದ್ಯಾರ್ಥಿಗಳು ಶಾಲೆಗೆ ಗೈರು

School Children : ಅವನು ಪೋಕ್ಸೋ ಆರೋಪಿ ಶಿಕ್ಷಕ. ಆದರೆ, ಎಷ್ಟು ಬುದ್ಧಿವಂತನೆಂದರೆ ಅಪರಾಧಿ ತಾನಲ್ಲ, ಹೆಡ್‌ ಮಿಸ್‌ ಎಂದು ಹೇಳಿ ಅವರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದಾನೆ. ಅವನ ಮಾತು ನಂಬಿ ಈಗ ಪೋಷಕರು ಮಕ್ಕಳನ್ನು ಶಾಲೆಗೇ ಕಳುಹಿಸುತ್ತಿಲ್ಲ!

VISTARANEWS.COM


on

Teacher Gous peer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು : ಪೋಕ್ಸೋ ಪ್ರಕರಣದಲ್ಲಿ (POCSO Case) ಸಿಕ್ಕಿಬಿದ್ದ ಶಿಕ್ಷಕನೊಬ್ಬನ ಮಾತು ಕೇಳಿ ಮಕ್ಕಳನ್ನು (School Children) ಶಾಲೆಗೆ ಕಳುಹಿಸದೆ ಪೋಷಕರು ಎಡವಟ್ಟು ಮಾಡಿಕೊಂಡಿರುವ ಘಟನೆ ತುಮಕೂರು ತಾಲೂಕು (Tumkur News) ಕೋರಾ ಹೋಬಳಿಯ ಗೇರಹಳ್ಳಿಯಲ್ಲಿ ನಡೆದಿದೆ. ಇಲ್ಲಿ ಶಿಕ್ಷಕರಿಬ್ಬರ ನಡುವೆ ಮುಸುಕಿನ ಗುದ್ದಾಟ (Fight between teachers) ಮತ್ತು ಪೋಷಕರ ಮೊಂಡುತನದ ಫಲವಾಗಿ 18 ವಿದ್ಯಾರ್ಥಿಗಳ ಜೀವನದಲ್ಲಿ ಕತ್ತಲು (18 students out of School) ಆವರಿಸಿದೆ.

ಪೋಕ್ಸೋ ಆರೋಪಿಯ ಮಾತು ಕೇಳಿದ ಪೋಷಕರು ಮಕ್ಕಳ ಭವಿಷ್ಯದ ಜೊತೆ ಪೋಷಕರ ಚೆಲ್ಲಾಟವಾಡುತ್ತಿದ್ದು, 18 ವಿದ್ಯಾರ್ಥಿಗಳು ಸತತ ಒಂದೂವರೆ ತಿಂಗಳಿನಿಂದ ಶಾಲೆಗೆ ಗೈರುಹಾಜರಾಗುತ್ತಿದ್ದಾರೆ. ಸ್ವತಃ ಬಿಇಒ ಬಂದು ಮನವೊಲಿಸಿದರೂ ಈ ಮಕ್ಕಳನ್ನು ಶಾಲೆಗೆ ಹೋಗಲು ಹೆತ್ತವರು ಬಿಡುತ್ತಿಲ್ಲ.

ಇಲ್ಲಿ ಆಗಿರುವುದೇನು? ಏನಿದು ಪೋಕ್ಸೋ ಪ್ರಕರಣ?

ಗೇರಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡೂವರೆ ತಿಂಗಳ ಹಿಂದೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ‌ ಕಿರುಕುಳದ ಆರೋಪ ಕೇಳಿಬಂದಿತ್ತು. ಕನ್ನಡ ಶಿಕ್ಷಕ ಗೌಸ್ ಪೀರ್ ಎಂಬಾತನೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕವಾಗಿ ಕಿರುಕುಳ ನೀಡಿದವರು.

ಗೌಸ್ ಪೀರ್ ಕಾಟದಿಂದ ಹಲವು ವಿದ್ಯಾರ್ಥಿಗಳು ಟಿಸಿ ಪಡೆದು ಬೇರೆ ಶಾಲೆಗೆ ವರ್ಗಾವಣೆಯಾಗಿದ್ದರು. ಬಳಿಕ ಪೋಷಕರಿಂದ ಡಿಡಿಪಿಐಗೆ ದೂರು ಕೂಡ ದಾಖಲಾಗಿತ್ತು. ಬಳಿಕ ಇಲಾಖೆ ವತಿಯಿಂದ ತನಿಖೆ ನಡೆಸಿದಾಗ ಶಿಕ್ಷಕನ ಕೃತ್ಯ ಬಯಲಾಗಿತ್ತು.

ಈತ ಶಾಲೆಗೆ ರಜೆಯಿದ್ದ ದಿನ ತನ್ನ ಖಾಸಗಿ ಕಾರಿನಲ್ಲಿ ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸಿದ ವಿಷಯವೂ ಬಯಲಾಗಿತ್ತು. ಬಳಿಕ ವಿದ್ಯಾರ್ಥಿನಿಯರ ಹೇಳಿಕೆ ಪಡೆದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಶಿಕ್ಷಕ ಗೌಸ್ ಪೀರ್ ವಿರುದ್ಧ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿತ್ತು.

ಆದರೆ, ಗೌಸ್ ಪೀರ್ ತನ್ನ ಪ್ರಭಾವವನ್ನು ಬಳಸಿ ಪೋಷಕರೇ ಉಲ್ಟಾ ಹೊಡೆಯುವಂತೆ ಮಾಡಿದ್ದ. ಕೊನೆಗೆ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಜೈಲಿನಿಂದ ಹೊರಗೆ ಬಂದ ಬಳಿಕ ತನ್ನ ಆಟ ಶುರು ಮಾಡಿದ ಗೌಸ್ ಪೀರ್ ಸ್ಥಳೀಯ ಮುಖಂಡನ ಜೊತೆ ಸೇರಿ ಪೋಷಕರ ಮೇಲೆ ಪ್ರಭಾವ ಬೀರಲು ಶುರು ಮಾಡಿದ.

ಇದಕ್ಕೆಲ್ಲ ನಾನು ಕಾರಣ ಅಲ್ಲ, ಮುಖ್ಯಶಿಕ್ಷಕಿ ನೂರ್ ಜಹಾನ್‌ ಅವರೇ ಪ್ರಧಾನ ಆರೋಪಿ ಎಂದು ಕತೆ ಹೆಣೆದ. ಆತನ ಮಾತಿನಿಂದ ಪ್ರಭಾವಿತರಾಗಿರುವ ಪೋಷಕರು ನೂರ್‌ ಜಹಾನ್‌ ಇರುವವರೆಗೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪೋಷಕರ ಹಠದಿಂದ ಸತತ ಒಂದೂವರೆ ತಿಂಗಳಿನಿಂದ 18 ವಿದ್ಯಾರ್ಥಿಗಳು ಗೈರಾಗುತ್ತಿದ್ದಾರೆ. ಪೋಷಕರ ಹಠ ಎಷ್ಟಿದೆ ಎಂದರೆ, ವಿದ್ಯಾರ್ಥಿಗಳು ಪರೀಕ್ಷೆಗೂ ಹಾಜರಾಗಿಲ್ಲ.

ವಿದ್ಯಾರ್ಥಿಗಳು ಏಳು ದಿನಕ್ಕಿಂತ ಹೆಚ್ಚು ಶಾಲೆಗೆ ಶಾಲೆಗೆ ಬರಲಿಲ್ಲ ಎಂದಾದರೆ ಶಿಕ್ಷಕರೇ ಮಕ್ಕಳ ಮನೆಗೆ ಭೇಟಿ ನೀಡಬೇಕು, ಮಕ್ಕಳನ್ನು ಕೌನ್ಸೆಲಿಂಗ್‌ ನಡೆಸಿ ಶಾಲೆಗೆ ಕರೆತರಬೇಕೆಂಬ ಇಲಾಖೆ ನಿಯಮವಿದೆ. ಆದರೆ, ಆದ್ರೆ ನಿಯಮವನ್ನು ಪಾಲಿಸಲಾಗಿಲ್ಲ.

ಇದನ್ನೂ ಓದಿ: Pocso case: ʼʼಎರಡು ನಿಮಿಷದ ಸುಖಕ್ಕಾಗಿ…ʼʼ: ಹುಡುಗಿಯರಿಗೆ ಕೋಲ್ಕೊತಾ ಹೈಕೋರ್ಟ್‌ ಕಿವಿಮಾತು!

ಈ ನಡುವೆ, ಬಿಇಓ ಶಾಲೆಯ ಬಳಿ ಹೋಗಿ ಪೋಷಕರ ಬಳಿ ಮಾತುಕತೆ ನಡೆಸಿದರೂ ಯಾವುದೇ ಉಪಯೋಗವಾಗಿಲ್ಲ. ಶಿಕ್ಷಕರ ನಡುವಿನ ಹಗ್ಗ ಜಗ್ಗಾಟ, ಪೋಷಕರ ಹಠದಿಂದಾಗಿ ಮಕ್ಕಳಿಗೆ ಸಮಸ್ಯೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

MLC Election: ಜೆಡಿಎಸ್‌ನ ವಿವೇಕಾನಂದ.ಕೆ ಅವರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಇದೀಗ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವಾಗಿ ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

VISTARANEWS.COM


on

MLC Election
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಅವರು ಜೆಡಿಎಸ್ ವರಿಷ್ಠರಾದ ಎಚ್. ಡಿ. ದೇವೇಗೌಡ ಅವರಿಂದ ಬಿ ಫಾರಂ ಪಡೆದರು.
Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ವಿವೇಕಾನಂದ.ಕೆ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್‌ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ‌.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.

ಜೆಡಿಎಸ್‌ನಿಂದ ವಿವೇಕಾನಂದಗೆ ಜೆಡಿಎಸ್ ವರಿಷ್ಠರು ಬಿ ಫಾರ್ಮ್ ನೀಡಿದ್ದರಿಂದ ಉಂಟಾದ ಗೊಂದಲದ ನಡುವೆಯೂ ಬಿಜೆಪಿಯಿಂದ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

ಜೆಡಿಎಸ್‌ನಲ್ಲೂ ಬಂಡಾಯ?

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ವಿವೇಕಾನಂದ.ಕೆ ಹಾಗೂ ಕೆ.ಟಿ ಶ್ರೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ.ಕೆ ಅವರಿಗೆ ಜೆಡಿಎಸ್‌ ಮಣೆ ಹಾಕಿರುವುದರಿಂದ ಕೆ.ಟಿ ಶ್ರೀಕಂಠೇಗೌಡ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಾನು ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆ ಮಾಡಲು ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿ ಎಲ್ಲರ ಮುಂದೆ ಇಟ್ಟು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ಮೇ 16ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

Fortis Hospital: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ತಿಳಿಸಿದ್ದಾರೆ.ಆಸ್ಪತ್ರೆಯ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡವು ಈ ಶಸ್ತ್ರಚಿಕಿತ್ಸೆ ನಡೆಸಿದೆ.

VISTARANEWS.COM


on

Fortis Hospital doctors team performed a successful complex kidney transplant surgery for two patients with robotic assistance
Koo

ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆಮೆನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್‌ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ ಎಂದರು.

ಇದನ್ನೂ ಓದಿ: ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಯೆಮನ್‌ ದೇಶದ 11 ವರ್ಷದ ಅಹ್ಮದ್ ಎಂಬ ಬಾಲಕನು ನಾಲ್ಕನೇ ವಯಸ್ಸಿನಿಂದಲೇ ಮೂತ್ರಪಿಂಡಕ್ಕೆ ಸಂಬಂಧಿಸಿದ ಸ್ಟೆರಾಯ್ಡ್ ರೆಸಿಸ್ಟೆಂಟ್ ನೆಫ್ರೋಟಿಕ್ ಸಿಂಡ್ರೋಮ್ (ಎಸ್‌ಆರ್‌ಎನ್‌ಎಸ್) ನಿಂದ ಬಳಲುತ್ತಿದ್ದರು. ನೆಫ್ರೋಟಿಕ್ ಸಿಂಡ್ರೋಮ್ ಒಂದು ಮೂತ್ರಪಿಂಡದ ಕಾಯಿಲೆಯಾಗಿದ್ದು, ಮೂತ್ರದಲ್ಲಿ ಪ್ರೋಟೀನ್ ಇರುವಿಕೆ, ರಕ್ತದಲ್ಲಿನ ಕಡಿಮೆ ಮಟ್ಟದ ಪ್ರೋಟೀನ್, ಅಧಿಕ ಕೊಲೆಸ್ಟ್ರಾಲ್ ಮತ್ತು ಊತದಿಂದ ಕೂಡಿತ್ತು. ಎಸ್‌ಆರ್‌ಎನ್‌ಎಸ್‌ನಲ್ಲಿ, ಸ್ಟಿರಾಯ್ಡ್‌ಗಳ ಚಿಕಿತ್ಸೆಯ ಹೊರತಾಗಿಯೂ ಮೂತ್ರಪಿಂಡಗಳು ಹೆಚ್ಚಿನ ಪ್ರಮಾಣದ ಪ್ರೋಟೀನ್‌ಗಳನ್ನು ಮೂತ್ರಕ್ಕೆ ಸೋರಿಕೆ ಮಾಡುವುದನ್ನು ಮುಂದುವರಿಸುತ್ತವೆ ಎಂದು ವಿವರಿಸಿದರು.

ಸ್ಟೀರಾಯ್ಡ್‌ಗಳಿಗೆ ಈ ಪ್ರತಿರೋಧವು ನಿರಂತರ ಅಥವಾ ಮರುಕಳಿಸುವ ನೆಫ್ರೋಟಿಕ್ ಸಿಂಡ್ರೋಮ್‌ಗೆ ಕಾರಣವಾಗಬಹುದು, ಇದರಿಂದ ಭವಿಷ್ಯದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಕಾರಣವಾಗಬಹುದು. ಇದೇ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನಿಗೆ ಸಾಕಷ್ಟು ಕಡೆ ಚಿಕಿತ್ಸೆ ಕೊಡಿಸಿದ್ದರೂ ಸಹ ಫಲಕಾರಿಯಾಗದೆ ಕಾಯಿಲೆ ಕೊನೆಯ ಹಂತಕ್ಕೆ ಬಂದು ತಲುಪಿತ್ತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಬಾಲಕನ ವಯಸ್ಸು ಕಡಿಮೆ ಇರುವ ಕಾರಣ, ಸಾಕಷ್ಟು ಮುತುವರ್ಜಿ ವಹಿಸಿ ರೋಬೋಟ್‌ ಸಹಾಯದ ಮೂಲಕ ಬಾಲಕನಿಗೆ ಕಿಡ್ನಿ ಕಸಿ ಮಾಡಲು ನಿರ್ಣಯಿಸಿದೆವು. ರೋಬೋಟ್‌ ಸಹಾಯದಿಂದ ಮಾತ್ರವೇ ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಾಲಕನ ಚಿಕ್ಕಮ್ಮನ ಒಂದು ಕಿಡ್ನಿಯನ್ನು ಹುಡುಗನಿಗೆ ಶಸ್ತ್ರಚಿಕಿತ್ಸೆಯ ಮೂಲಕ ಅಳವಡಿಸಲಾಯಿತು. ಇದೀಗ ಬಾಲಕ ಆರೋಗ್ಯವಾಗಿದ್ದು, ಶಸ್ತ್ರಚಿಕಿತ್ಸೆಯ ಐದು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಯಿತು ಎಂದು ತಿಳಿಸಿದರು.

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ 34 ವರ್ಷದ ಚೇತನ್, ಮೊದಲಿನಿಂದಲೂ ಕೇವಲ ಒಂದು ಕಿಡ್ನಿಯನ್ನು ಮಾತ್ರ ಹೊಂದಿದ್ದರು, ಜತೆಗೆ ಅಧಿಕ ರಕ್ತದೊತ್ತಡ ಇದ್ದ ಕಾರಣ ಅವರ ಒಂದು ಕಿಡ್ನಿಯೂ ಸಹ ಕಾಯಿಲೆಗೆ ತುತ್ತಾಗಿತ್ತು, ಕೊನೆಯ ಹಂತಕ್ಕೆ ತಲುಪಿದ್ದರಿಂದ ಇವರ ಜೀವಕ್ಕೂ ಆಪತ್ತು ಕಾದಿತ್ತು. ಹೀಗಾಗಿ ಇವರಿಗೆ 74 ವರ್ಷದ ಸ್ವಂತ ತಂದೆಯೇ ತಮ್ಮ ಕಿಡ್ನಿಯನ್ನು ದಾನ ಮಾಡಿದ್ದಾರೆ. ಇವರಿಗೂ ಸಹ ರೋಬೋಟ್‌ ಸಹಾಯದ ಮೂಲಕವೇ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಯಶಸ್ವಿಯಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಒದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ರೋಬೋಟ್‌ ಶಸ್ತ್ರಚಿಕಿತ್ಸೆಯು ಹೆಚ್ಚು ನಿಖರವಾದ ಛೇದನವನ್ನು ಅನುಸರಿಸಲಿದ್ದು, ಇತರೆ ಯಾವುದೇ ಅಂಗಾಂಗಳಿಗೆ ಘಾಸಿ ಮಾಡುವುದಿಲ್ಲ, ರೋಬೋಟಿಕ್‌ ಶಸ್ತ್ರಚಿಕಿತ್ಸೆಯಿಂದ ವೇಗವಾಗಿಯೂ ಚೇತರಿಸಿಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.

Continue Reading

ಬೆಂಗಳೂರು

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

V. Sunil Kumar: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಒಂದು ವರ್ಷದ ಅವಧಿ ಮುಗಿಯುತ್ತಿದೆ. ಗೊತ್ತು-ಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ 1 ವರ್ಷದಲ್ಲಿ ನೋಡಿದ್ದಾರೆ. ಇದು ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಟೀಕಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ಈ ಅಸಮರ್ಥ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

V. Sunil Kumar latest statemetn
Koo

ಬೆಂಗಳೂರು: ಕಾಂಗ್ರೆಸ್ ಪಕ್ಷದ (Congress Party) ರಾಜ್ಯ ಸರ್ಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ (V. Sunil Kumar) ತಿಳಿಸಿದರು.

ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತು-ಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ. ಅಭಿವೃದ್ಧಿ ಶೂನ್ಯ ಸರ್ಕಾರ ಇದು ಎಂದು ಟೀಕಿಸಿದರು.

ಇದನ್ನೂ ಓದಿ: Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರ್ಕಾರ ಬಹಿರಂಗಪಡಿಸಿದರೆ ಸಾಕು ಎಂದು ವ್ಯಂಗ್ಯವಾಗಿ ನುಡಿದರು.

ಇಂಥ ಅಭಿವೃದ್ಧಿ ಶೂನ್ಯ ಆಡಳಿತ, ಸರ್ಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ವರ್ಷ ಕಾಲವನ್ನು ಈ ಸರ್ಕಾರ ಕಳೆದಿದೆ. ನಾವೆಲ್ಲ ಶಾಸಕರು ಒಂದು ವರ್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಒಂದು ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ ಎಂದು ಟೀಕಿಸಿದರು.

ಸರ್ಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ

ಜನರು ಕೂಡ ಈ ಸರ್ಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಪುಟವನ್ನು ಗಮನಿಸಿದರೆ ಇಡೀ ಸಂಪುಟವೇ ಅಸಮರ್ಥವಾಗಿದೆ. ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಸಿಎಂ ಅಸಮರ್ಥವಾಗಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಮುಖ್ಯಮಂತ್ರಿಯ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದ್ದೇವೆ ಎಂದು ವಿ. ಸುನೀಲ್ ಕುಮಾರ್ ತಿಳಿಸಿದರು.

ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯರೂ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಅವರು ಆರೋಪಿಸಿದರು. ಹಣ ಬಿಡುಗಡೆ ಮಾಡಿಲ್ಲ. ಕಂದಾಯ ಸಚಿವರಿಂದ ಗ್ರಾಮೀಣಾಭಿವೃದ್ಧಿ ಸಚಿವರವರೆಗೆ ಎಲ್ಲ ಸಂಪುಟವು ಬರ ಪರಿಹಾರದ ನಿರ್ವಹಣೆಯಲ್ಲಿ ಅಸಮರ್ಥವಾಗಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, 496 ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್‍ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಕೃಷಿ- ಸಹಕಾರಿ ಸಚಿವರು ಇವತ್ತು ಅಸಮರ್ಥವಾಗಿರುವುದೇ ಕಾರಣ ಎಂದರು.

ಈ ಸರ್ಕಾರ ಬಂದ ಬಳಿಕ ಕರ್ನಾಟಕದ ಒಬ್ಬನೇ ಒಬ್ಬ ರೈತನಿಗೆ ಹೊಸ ಪಂಪ್‍ಸೆಟ್ ಸಂಪರ್ಕ ಸಿಗಲಿಲ್ಲ. ರೈತರು ಹಣ ಕಟ್ಟಿದರೂ ಹೊಸ ಸಂಪರ್ಕ ಸಿಕ್ಕಿಲ್ಲ 24 ಗಂಟೆ ವಿದ್ಯುತ್ ನಿರಂತರ ಬಿಡಿ, ಗ್ರಾಮೀಣ ಪ್ರದೇಶದಲ್ಲಿ 10- 12 ಗಂಟೆ ವಿದ್ಯುತ್ ಕೊಡಲಾಗದ ಅಸಮರ್ಥ ಇಂಧನ ಸಚಿವರು ನಮ್ಮ ನಡುವೆ ಇದ್ದಾರೆ ಎಂದು ಟೀಕಿಸಿದರು.

ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ

ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗ್ರೇಸ್ ಮಾರ್ಕ್ ಕೊಟ್ಟಿದ್ದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಎಷ್ಟು ಅಸಮರ್ಥ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಂಗನವಾಡಿಯವರಿಗೆ ಗೌರವಧನ ಹೆಚ್ಚಿಸಿಲ್ಲ; ಅಂಗನವಾಡಿಗಳ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಾಸವಾಗಿದೆ. ಅಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಸಮರ್ಥರಾಗಿದ್ದಾರೆ ಎಂದು ದೂರಿದರು.

ಬ್ರ್ಯಾಂಡ್ ಬೆಂಗಳೂರು ಇವತ್ತು ದಿಕ್ಕೆಟ್ಟ ಬೆಂಗಳೂರಾಗಿದೆ. ಬೆಂಗಳೂರಿಗೆ ಯಾವ ರೀತಿಯ ಯೋಜನೆ ರೂಪಿಸುವುದರಲ್ಲಿ ನಗರಾಭಿವೃದ್ಧಿ ಸಚಿವರು ಅಸಮರ್ಥರಾಗಿದ್ದಾರೆ. ಇದೊಂದು ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಆರೋಪಿಸಿದರು.

ಬೆಲೆ ಹೆಚ್ಚಳ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಪಿಕ್ ಪಾಕೆಟ್ ಕಾಂಗ್ರೆಸ್ ಎಂದು ನಾವು ಈ ಹಿಂದೆ ಹೇಳಿದ್ದೆವು. ಅದನ್ನು ಸರ್ಕಾರ ಸರಿ ಮಾಡಿಕೊಂಡಿಲ್ಲ. ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಇವೆಂಟ್ ಮ್ಯಾನೇಜ್‍ಮೆಂಟಿನ ಸದಸ್ಯರು ಸರ್ಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ಅವರು ದೂರಿದರು.

ಈ ಅಸಮರ್ಥ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು.

ಇದನ್ನೂ ಓದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಈ ವೇಳೆ ರಾಜ್ಯ ಮುಖ್ಯ ವಕ್ತಾರ ಅಶ್ವಥ ನಾರಾಯಣ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಪ್ರಕಾಶ್ ಶೇಷರಾಘವಾಚಾರ್, ಮೋಹನ್ ವಿಶ್ವ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಉಪಸ್ಥಿತರಿದ್ದರು.

Continue Reading

ವಿಜಯನಗರ

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Vijayanagara News: ಹೊಸಪೇಟೆ ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

VISTARANEWS.COM


on

private hospitals heads and health department officers Meeting at vijayanagara DC office
Koo

ಹೊಸಪೇಟೆ: ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ (Vijayanagara News) ಮಂಗಳವಾರ ಸಭೆ ನಡೆಯಿತು.

ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಮಾತನಾಡಿ, ಸರಿಯಾಗಿ ಚಿಕಿತ್ಸೆ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಸಾವುಗಳು ಸಂಭವಿಸುತ್ತಿವೆ ಎನ್ನುವ ದೂರಿನ ಬಗ್ಗೆ ಖಾಸಗಿ ಆಸ್ಪತ್ರೆಗಳು ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ಬರುವ ಯಾವುದೇ ರೋಗಿಗಳು ಮತ್ತು ಆ ರೋಗಿಯ ಸಂಬಂಧಿಕರೊಂದಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯು ಸಹನೆ, ಸಂಯಮ ಮತ್ತು ತಾಳ್ಮೆಯಿಂದ ನಡೆದುಕೊಳ್ಳಬೇಕು. ದುರ್ವರ್ತನೆ ತೋರಬಾರದು. ಮಾನವೀಯತೆಯಿಂದ ನಡೆದುಕೊಳ್ಳಬೇಕು. ಲೋಪ ಎಸಗಿರುವುದು ಕಂಡುಬಂದಲ್ಲಿ ಯಾರೇ ಆಗಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ವೈದ್ಯರನ್ನು ದೇವರ ಸಮಾನ ಎಂದು ನಮ್ಮ ಸಮಾಜವು ವೈದ್ಯರಿಗೆ ಗೌರವಯುತ ಸ್ಥಾನ ನೀಡಿದೆ. ಕೆಲವು ವೈದ್ಯರು ಮತ್ತು ಅವರ ಆಸ್ಪತ್ರೆಗಳಲ್ಲಿನ ಸಿಬ್ಬಂದಿ ತೋರುವ ನಿರ್ಲಕ್ಷ್ಯದಿಂದಾಗಿ ಸಾವುಗಳು ಸಂಭವಿಸಿ ಇಡೀ ವೈದ್ಯ ಸಮೂಹವನ್ನೇ ಕೆಟ್ಟ ದೃಷ್ಟಿಯಿಂದ ನೋಡುವಂತಾಗುತ್ತದೆ. ವೈದ್ಯರು ಮತ್ತು ಸಾರ್ವಜನಿಕ ಮಧ್ಯೆ ಇರುವ ನಂಬಿಕೆಗೆ ಧಕ್ಕೆ ಬಾರದ ಹಾಗೆ ಮತ್ತು ಸಾರ್ವಜನಿಕರಿಗೆ ವೈದ್ಯರ ಮೇಲೆ ವಿಶ್ವಾಸ ಬರುವ ಹಾಗೆ ಎಲ್ಲಾ ವೈದ್ಯರು ಮತ್ತು ಆಯಾ ಆಸ್ಪತ್ರೆಗಳಲ್ಲಿನ ಸಿಬ್ಬಂದಿಯು ಪ್ರಾಮಾಣಿಕಯಿಂದ, ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಡಿಎಚ್‌ಒ ಡಾ. ಶಂಕರ್‌ ನಾಯ್ಕ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯ ಅನುಸಾರವೇ ಇರಬೇಕು. ನೋಂದಣಿ ಸಮಯದಲ್ಲಿ ಯಾವ ವೈದ್ಯರು ಮತ್ತು ಯಾವ ಸಿಬ್ಬಂದಿಯನ್ನು ಡಿಕ್ಲೆರೇಷನ್ ಮಾಡಲಾಗಿರುತ್ತದವೋ ಅದೇ ರೀತಿಯ ವೈದ್ಯರು ಮತ್ತು ಅವಶ್ಯಕ ಸಿಬ್ಬಂದಿಯನ್ನು ಆಸ್ಪತ್ರೆಯು ಹೊಂದಿರಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದುಪಡಿಸಲಾಗುವುದು.

ಯಾವುದೇ ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿರುವುದು ಗೊತ್ತಾದಲ್ಲಿ ಅಂತಹ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆಸ್ಪತ್ರೆಯಲ್ಲಿನ ಬಯೋಮೆಡಿಕಲ್ ತ್ಯಾಜ್ಯವನ್ನು ನಿಯಮಾನುಸಾರ ವಿಲೆಗೆ ಕ್ರಮವಹಿಸದಿದ್ದಲ್ಲಿ ಸಹ ಕ್ರಿಮಿನಲ್ ಮೊಕದ್ದಮೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಯ ಎಲ್ಲಾ ಕೋಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರವನ್ನು ಪ್ರದರ್ಶಿಸಿ ಅದೇ ರೀತಿ ಪಾಲನೆ ಮಾಡಬೇಕು. ನಿಗದಿಪಡಿಸಿದ ದರಕ್ಕಿಂತ ಅನವಶ್ಯಕವಾಗಿ ಹೆಚ್ಚಿನ ಹಣ ಪಡೆಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

ಅಪ್ರಾಪ್ತ ವಯಸ್ಸಿನ ಮಹಿಳೆಯು ಗರ್ಭಿಣಿ ಎಂದು ಗೊತ್ತಾದಲ್ಲಿ ಈ ಬಗ್ಗೆ ಕೂಡಲೇ 1098 ಅಥವಾ ಆರೋಗ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು. ಗಂಡಾಂತರ ಗರ್ಭಿಣಿ ಎಂದು ತಿಳಿದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು, ನಾಯಿ ಕಡಿತ, ಹಾವು ಕಡಿತ ಪ್ರಕರಣಗಳ ಬಗ್ಗೆ ಸಹ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎನ್ನುವ ನಿಯಮವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿಯು ತಪ್ಪದೇ ಪಾಲನೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಕೆಪಿಎಂಇ ಕಾಯಿದೆ ಅನುಸಾರ ಕಾರ್ಯನಿರ್ವಹಿಸದೇ ನಿಯಮ ಉಲ್ಲಂಘಿಸಿ ಲೋಪ ಎಸಗಿರುವುದು ಕಂಡುಬಂದಲ್ಲಿ ಕೆಪಿಎಂಇ ಕಾಯಿದೆ ಅಡಿ ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಕೆಪಿಎಂಇ ಕಾಯಿದೆ ಅಡಿಯಲ್ಲಿ ನೋಂದಣಿ ಆಗಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರಯ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ ಮತ್ತು ವೇತನದ ವಿವರಗಳನ್ನು ಪರಿಶೀಲಿಸಲು ತಾಲೂಕುಮಟ್ಟದ ತಂಡಗಳನ್ನು ರಚಿಸಿ ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಸಹ ಸಭೆಯಲ್ಲಿ ಸೂಚಿಸಲಾಯಿತು.

ಇದನ್ನೂ ಓದಿ: Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಸಭೆಯಲ್ಲಿ ಐಎಂಎ ಅಧ್ಯಕ್ಷ ಡಾ. ಶ್ರೀನಿವಾಸ ದೇಶಪಾಂಡೆ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮತ್ತು ಇತರರು ಇದ್ದರು.

Continue Reading
Advertisement
MLC Election
ಕರ್ನಾಟಕ13 mins ago

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

CAA
EXPLAINER15 mins ago

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Fortis Hospital doctors team performed a successful complex kidney transplant surgery for two patients with robotic assistance
ಕರ್ನಾಟಕ17 mins ago

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

V. Sunil Kumar latest statemetn
ಬೆಂಗಳೂರು24 mins ago

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

private hospitals heads and health department officers Meeting at vijayanagara DC office
ವಿಜಯನಗರ34 mins ago

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Ram Pothineni Double iSmart teaser with Sanjay Dutt
ಟಾಲಿವುಡ್36 mins ago

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Prajwal Revanna Case Deve Gowda lashes out at Bhavani
ರಾಜಕೀಯ38 mins ago

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Wedding men's jewel Fashion Artificial pearl necklace has entered
ಫ್ಯಾಷನ್38 mins ago

Wedding men’s jewel Fashion: ವೆಡ್ಡಿಂಗ್‌ ಮೆನ್ಸ್‌ ಜ್ಯುವೆಲರಿ ಫ್ಯಾಷನ್‌ಗೆ ಕಾಲಿಟ್ಟ ಆರ್ಟಿಫಿಶಿಯಲ್‌ ಪರ್ಲ್‌ ಹಾರ!

Team India Coach Applications
ಕ್ರೀಡೆ43 mins ago

Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಪಜೀತಿಗೆ ಸಿಲುಕಿದ ಬಿಸಿಸಿಐ

CAA
ದೇಶ47 mins ago

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ13 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ22 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌