Site icon Vistara News

Copra Price: ಕ್ವಿಂಟಲ್‌ ಕೊಬ್ಬರಿಗೆ ಹೆಚ್ಚುವರಿ 1500 ರೂಪಾಯಿ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah in Tumkur

ತುಮಕೂರು: ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ (Copra Price) 12000 ರೂಪಾಯಿಯೊಂದಿಗೆ ರಾಜ್ಯ ಸರ್ಕಾರ 1500 ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟು ನಮ್ಮ ಸರ್ಕಾರದಿಂದ ಕೊಬ್ಬರಿ ಬೆಳೆಗಾಗಿ ಕ್ವಿಂಟಲ್‌ಗೆ 1500 ರೂಪಾಯಿಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ

ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ 1500 ರೂಪಾಯಿಯನ್ನು ಹೆಚ್ಚಾಗಿ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಸೋಮವಾರ (ಜ. 22) ಸರ್ಕಾರಿ ರಜೆಯನ್ನು ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಿಚಾರ ಮಾಡಲಾಗುವುದು

ಹಿಂದಿನ ಸರ್ಕಾರ ಜನವರಿ 21 ಅನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವಾಗ ಮಾಡಿದರು? ಯಾವ ಸಂದರ್ಭದಲ್ಲಿ ಹಾಗೂ ಯಾಕಾಗಿ ಮಾಡಿದರು ಎಂದು ನನಗೆ ತಿಳಿದಿಲ್ಲ , ವಿಚಾರ ಮಾಡಲಾಗುವುದು ಎಂದು ಹೇಳಿದರು.

ವಿಶೇಷ ಪೂಜೆ

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ನಾಳೆ ಉದ್ಘಾಟಿಸುತ್ತಿರುವುದಾಗಿ ತಿಳಿಸಿದರು.

ನಿಷೇಧ ಇಲ್ಲ

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನೆರಪ್ರಸಾರವನ್ನು ತಮಿಳುನಾಡಿನಲ್ಲಿ ನಿಷೇಧ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿನ ಬಗ್ಗೆ ನಾನು ಯಾಕೆ ಮಾತನಾಡಲಿ. ಇಲ್ಲಿ ಹಾಗೆ ಮಾಡುವುದಿಲ್ಲ ಎಂದು ತಿಳಿಸಿದರು.

ಕುಣಿಗಲ್ ಸ್ಟಡ್ ಫಾರಂ ಸ್ಥಳಾಂತರಕ್ಕೆ ಸಲಹೆ

ಟಿಪ್ಪು ಸುಲ್ತಾನರ ಕಾಲದ ಕುಣಿಗಲ್ ಸ್ಟಡ್ ಫಾರಂ ಅನ್ನು ಸರ್ಕಾರ ಮುಚ್ಚುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಹೃದಯ ಭಾಗದಲ್ಲಿ ರೇಸ್ ಕೋರ್ಸ್ ಇದ್ದು, ಅಲ್ಲಿಗೆ ಸ್ಥಳಾಂತರ ಮಾಡಿ ಎಂದು ಸಲಹೆ ನೀಡಿದ್ದೇನೆ. ಕುಣಿಗಲ್‌ನಲ್ಲಿ 400 ಏಕರೆಯಷ್ಟು ಜಮೀನು ಇದ್ದು, ಇಲ್ಲಿ 80 ಎಕರೆಯಷ್ಟಿದೆ. ಅಲ್ಲಿ ಸ್ಥಳ ನೀಡುವುದಾಗಿ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ‌Ram Mandir: ನಾವು ಭೂತದ ಪೂಜೆ ಮಾಡೋರು ದೆವ್ವದ ಬಳಿಗೇ ಹೋಗ್ತೇವೆ: ಬಿ.ಕೆ. ಹರಿಪ್ರಸಾದ್

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರು ಅಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ಪ್ರಾರಂಭಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಅವರನ್ನೇ ಕೇಳಿ ಎಂದು ಹೇಳಿದರು.

Exit mobile version