Site icon Vistara News

ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ, ಇಬ್ಬರಿಗೆ ಗಾಯ

ಫ್ಲೆಕ್ಸ್

ತುಮಕೂರು: ಜಿಲ್ಲೆಯ ಡಿ.ಕೊರಟಗೆರೆ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಈ ಸಂಬಂಧ ಇಬ್ಬರಿಗೆ ಗಾಯಗಳಾಗಿವೆ.

ಗ್ರಾಮದಲ್ಲಿ ಜಾತ್ರೆಯಿದ್ದ ಕಾರಣ ತುಮಕೂರು ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕ ಗೌರಿಶಂಕರ್ ಅಭಿಮಾನಿಗಳು ಅವರ ಭಾವಚಿತ್ರವಿರುವ ಫ್ಲೆಕ್ಸ್ ಕಟ್ಟಲು ಭಾನುವಾರ ಮುಂದಾಗಿದ್ದರು. ಈ ವೇಳೆ ಮಾಜಿ ಶಾಸಕ ಸುರೇಶ್‌ಗೌಡ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಾಸಕ ಗೌರಿಶಂಕರ್ ಬೆಂಬಲಿಗರು ಆರೋಪಿಸಿದ್ದಾರೆ. ಇನ್ನು ಈ ಘಟನೆಯಲ್ಲಿ ಜೆಡಿಎಸ್ ಕಾರ್ಯಕರ್ತ ಸಿರಾಜ್ ಮತ್ತು ಮತ್ತೊಬ್ಬ ಗಾಯಗೊಂಡಿದ್ದು, ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹೆಬ್ಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಪತಿ, ಹಿರಿಯ ಪುತ್ರನ ಸಮಾಧಿ ಪಕ್ಕದಲ್ಲೇ ನಟ ಅರ್ಜುನ್ ಸರ್ಜಾ ತಾಯಿ ಅಂತ್ಯಸಂಸ್ಕಾರ

Exit mobile version