Site icon Vistara News

Hit and Run: ಕಾರಿನ ಟೈರ್‌ ಬದಲಿಸುವಾಗ ಅಪರಿಚಿತ ವಾಹನ ಡಿಕ್ಕಿ, ಇಬ್ಬರು ಸಾವು

hit and run tumkur

ತುಮಕೂರು: ಹಿಟ್‌ ಆ್ಯಂಡ್‌ ರನ್‌ (Hit and Run) ಪ್ರಕರಣವೊಂದರಲ್ಲಿ, ಕಾರಿನ ಟೈರ್‌ ಬದಲಿಸುತ್ತಿದ್ದ ಇಬ್ಬರು ಅಪರಿಚಿತ ವಾಹನ ಡಿಕ್ಕಿಯಾಗಿ (Road Accinent) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟೇಗೌಡನಹಳ್ಳಿ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ಆವಲಹಳ್ಳಿ ಮೂಲದ ಮಹೇಶ್ (38) ಹಾಗೂ ಉಮೇಶ್ (40) ಮೃತ ದುರ್ದೈವಿಗಳು.

ಬೆಂಗಳೂರು ಕಡೆಯಿಂದ ಶಿರಾ‌ ಕಡೆಗೆ ಹೋಗುತ್ತಿದ್ದ ಇವರು ತಮ್ಮ ಕಾರು ಪಂಚರ್ ಆದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಲ್ಲಿಸಿ ಕಾರಿನ ಟೈರ್ ಬದಲಿಸುತ್ತಿದ್ದರು. ಈ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದು ಅಪರಿಚಿತ ವಾಹನ, ನಿಲ್ಲಿಸದೆ ಪರಾರಿಯಾಗಿದೆ.

ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಲ್ಲಿಸಿದ್ದ ಲಾರಿಗೆ ಬೈಕ್‌ ಡಿಕ್ಕಿ, ಸವಾರ ಸಾವು

ಹಾವೇರಿ: ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಗೆಜ್ಜಿಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಹನುಮಕೊಪ್ಪ ಗ್ರಾಮದ ಮೆಹೆಬೂಬ (40) ಮೃತ ದುರ್ದೈವಿ.

ಹಾನಗಲ್‌ನ ಹೊಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೆಹೆಬೂಬ, ಬೆಳಗಿನ ಜಾವ ಹಾನಗಲ್‌ಗೆ ತೆರಳುವ ವೇಳೆ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಜಂಬಿಟ್ಟಿಗೆ ತುಂಬಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಬೈಕ್‌ ಹೊಡೆದಿದೆ. ಮಂಜಿನಿಂದಾಗಿ ರಸ್ತೆ ಕಾಣದ ಪರಿಣಾಮ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version