Illicit Relationship : ಸಡಿಲ ಬಟ್ಟೆ ಧರಿಸಿ 9 ತಿಂಗಳು ಅಕ್ರಮ ಗರ್ಭ ಮುಚ್ಚಿಟ್ಟ ಯುವತಿ! ಕೊನೆಗೆ ಮಗು ಹೆತ್ತು ಎಸೆದಳು! - Vistara News

ಕರ್ನಾಟಕ

Illicit Relationship : ಸಡಿಲ ಬಟ್ಟೆ ಧರಿಸಿ 9 ತಿಂಗಳು ಅಕ್ರಮ ಗರ್ಭ ಮುಚ್ಚಿಟ್ಟ ಯುವತಿ! ಕೊನೆಗೆ ಮಗು ಹೆತ್ತು ಎಸೆದಳು!

Illicit relationship : ಆಕೆ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿ ಮಗುವನ್ನು ಹೆರುವ ವರೆಗೂ ಯಾರಿಗೂ ಆಕೆ ಗರ್ಭಿಣಿ ಎಂದೇ ಗೊತ್ತಿರಲಿಲ್ಲ. ಆಕೆ ಸಡಿಲ ಬಟ್ಟೆ ಧರಿಸಿ ಎಲ್ಲವನ್ನೂ ಮುಚ್ಚಿಟ್ಟಿದ್ದಳು. ಹಾಗಿದ್ದರೆ ಕೊನೆಗೆ ಏನಾಯಿತು?

VISTARANEWS.COM


on

pregnant Lady Tumkur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಅಕ್ರಮ ಸಂಬಂಧದಿಂದ (Illicit Relationship) ಗರ್ಭಿಣಿಯಾಗಿದ್ದ ಯುವತಿಯೊಬ್ಬಳು (Pregnant Lady) ಒಂಬತ್ತು ತಿಂಗಳ ಕಾಲ ಯಾರಿಗೂ ಗೊತ್ತಾಗದ ಹಾಗೆ ಮ್ಯಾನೇಜ್‌ ಮಾಡಿದ್ದಲ್ಲದೆ, ಬಳಿಕ ತಾನೇ ಸ್ವಯಂ ಹೆರಿಗೆ ಮಾಡಿಕೊಂಡು ಮಗುವನ್ನು ಎಸೆದು ತೆಪ್ಪಗೆ ಕುಳಿತ ಘಟನೆ ತುಮಕೂರಿನಲ್ಲಿ (Tumkur News) ನಡೆದಿದೆ.

ತುಮಕೂರಿನ ಅರೇಗುಜ್ಜನಹಳ್ಳಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಆಕೆ ಬಯಲಿನಲ್ಲಿ ಎಸೆದ ಮಗು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೂಲತಃ ಗೌರೀಪುರ ಗ್ರಾಮದ 25 ವರ್ಷದ ಯುವತಿ ಪೋಷಕರು ಇಲ್ಲದ ಹಿನ್ನೆಲೆ ಸ್ವಂತ ಅಕ್ಕನ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅರೇಗುಜ್ಜನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಈಕೆಗೆ ಯಾರದೋ ಜತೆಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ಅಕ್ರಮ ಸಂಬಂಧದಿಂದಾಗಿ ಆಕೆ ಗರ್ಭ ಧರಿಸಿದ್ದಳು. ಅದನ್ನು ನಿವಾರಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಫಲ ಸಿಗದೆ ಅದು ಬೆಳೆಯುತ್ತಲೇ ಹೋಯಿತು.

ಸಾಮಾನ್ಯವಾಗಿ ಗರ್ಭ ಧರಿಸಿ ಮೂರು ತಿಂಗಳಾಗುತ್ತಲೇ ಬೇಬಿ ಬಂಪ್‌ಗಳು ಕಾಣಿಸಿಕೊಳ್ಳುತ್ತವೆ. ಆರೋಗ್ಯದ ವಿಚಾರದಲ್ಲಿ ಕೂಡಾ ವ್ಯತ್ಯಯಗಳು ಆಗುತ್ತವೆ. ಈಕೆಗೂ ಹಾಗೇ ಆಗಿದೆ. ಆದರೆ, ಆಕೆ ಇದ್ಯಾವುದನ್ನೂ ತೋರಿಸಿಕೊಳ್ಳದೆ ಏನೂ ಆಗಿಲ್ಲ ಎಂಬಂತೆ ಒಂಬತ್ತು ತಿಂಗಳು ಸಂಶಯವೇ ಬರದ ರೀತಿಯಲ್ಲಿ ನಡೆದುಕೊಂಡಿದ್ದಾಳೆ.

ಹೊಟ್ಟೆ ದೊಡ್ಡದಾಗಿದ್ದು ಕಾಣಬಾರದು ಎಂದು ಸಡಿಲವಾದ ಬಟ್ಟೆ ಹಾಕಿಕೊಳ್ಳುತ್ತಿದ್ದ ಆಕೆ, ಯಾರಾದರೂ ಹೊಟ್ಟೆ ದೊಡ್ಡದಾಗಿದೆ ಎಂದರೆ ಹೌದು ಸಣ್ಣ ಮಾಡಿಸಿಕೊಳ್ಳಬೇಕು ಎನ್ನುತ್ತಿದ್ದಳು. ಹೀಗೆ ಹೇಳುತ್ತಲೇ ಗರ್ಭ ಧರಿಸಿರುವುದನ್ನು ಎಲ್ಲರಿಂದಲೂ ಮುಚ್ಚಿಡಲು ಸಮರ್ಥಳಾಗಿದ್ದಳು.

ಈ ನಡುವೆ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಆಕೆ ಮನೆಯಿಂದ ಹೊರಗೆ ಹೋಗಿ ಸ್ವಯಂ ಹೆರಿಗೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ನಂತರ ಮಗುವನ್ನ ಅಲ್ಲಿಯೇ ಪಕ್ಕದಲ್ಲಿ ಎಸೆದು ಮನೆಗೆ ಮರಳಿದ್ದಳು. ಮನೆಗೆ ಹೋಗಿ ಋತುಚಕ್ರದ ಕಾರಣ ಹೇಳಿ ಸ್ನಾನ ಮಾಡಿದ್ದಳು.

ಗುರುವಾರ ಬೆಳಗ್ಗೆ ನವಜಾತ ಹೆಣ್ಣುಮಗುವಿನ ಶವ ಕಂಡುಬಂದಿದೆ. ಕೂಡಲೇ ಗ್ರಾಮಸ್ಥರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದರು. ಈ ನಡುವೆ ಕೆಲವರಿಗೆ ಈ ಯುವತಿ ಮೇಲೆ ಸಂಶಯ ಬಂದಿದೆ. ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆಕೆಯ ಬಗ್ಗೆ ಮಾಹಿತಿ ಪಡೆಯುವಂತೆ ಮನವಿ ಮಾಡಿದರು. ಮನೆಗೆ ಹೋಗಿ ಪರಿಶೀಲಿಸಿದಾಗ ಆಕೆ ರಕ್ತಸ್ರಾವದಿಂದ ಬಳಲುತ್ತಿರುವುದು ಕಂಡುಬಂದಿದೆ. ಆಕೆಯನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಆಕೆಯನ್ನು ವಿಚಾರಿಸಿದಾಗ ಸತ್ಯ ಹೊರಬಿದ್ದಿದೆ.

ನವಜಾತ ಶಿಶುವಿನ ಶವ ಕೂಡ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆಯ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Election Results 2024: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣಗಳನ್ನು ತಿಳಿಯಲು ಎಐಸಿಸಿಯಿಂದ ಪರಾಮರ್ಶೆ ಸಮಿತಿ ರಚನೆ‌ ಮಾಡಲಾಗಿದೆ. ಇದರಿಂದ ಲೀಡ್ ಕಡಿಮೆ ಆಗಿರುವ ಕ್ಷೇತ್ರಗಳ ಸಚಿವರಿಗೆ ಢವ ಢವ ಶುರುವಾಗಿದೆ. ಪರಾಮರ್ಶೆ ಬಳಿಕ ಹಲವರ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ.

VISTARANEWS.COM


on

Election Results 2024
Koo

ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ (Lok sabha Election 2024) ಟಾರ್ಗೆಟ್ 20 ರೀಚ್ ಆಗದೆ ಪಕ್ಷಕ್ಕೆ ಹಿನ್ನಡೆ ಆಗಿರುವುದನ್ನು ಕಾಂಗ್ರೆಸ್‌ ಹೈಕಮಾಂಡ್ ಗಂಭೀರವಾಗಿ ತೆಗೆದುಕೊಂಡಿದೆ. ಗ್ಯಾರಂಟಿ ಕೊಟ್ಟರೂ ನಿರೀಕ್ಷಿತ ಗುರಿ ಮುಟ್ಟಲು ವಿಫಲವಾದ ಹಿನ್ನೆಲೆಯಲ್ಲಿ ಪರಾಮರ್ಶೆ ಸಮಿತಿ ರಚನೆಗೆ ಎಐಸಿಸಿ ನಿರ್ಧಾರ ಮಾಡಿದೆ. ಸಮಿತಿಯು ಎಐಸಿಸಿ ಹಾಗೂ ರಾಜ್ಯದ ಹಿರಿಯ ನಾಯಕರನ್ನು ಒಳಗೊಳ್ಳಲಿದ್ದು, ಪ್ರತಿ ವಿಧಾನಸಭಾವಾರು ಮತ ಪ್ರಮಾಣ ಕಲೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಚುನಾವಣೆಯಲ್ಲಿ (Election Results 2024) ಯಾಕೆ ಲೀಡ್ ಕಡಿಮೆ ಆಯಿತು ಎಂಬ ಮಾಹಿತಿ ಸಂಗ್ರಹಿಸಿ ಎಐಸಿಸಿಗೆ ಸಮಿತಿಯು ವರದಿ ಸಲ್ಲಿಕೆ ಮಾಡಲಿದೆ.

ಎಐಸಿಸಿಯಿಂದ ಪರಾಮರ್ಶೆ ಸಮಿತಿ ರಚನೆ‌ ಬೆನ್ನಲ್ಲೇ ಲೀಡ್ ಕಡಿಮೆ ಆಗಿರುವ ಕ್ಷೇತ್ರಗಳ ಸಚಿವರಿಗೆ ಢವ ಢವ ಶುರುವಾಗಿದೆ. ಪರಾಮರ್ಶೆ ಬಳಿಕ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ. ಹೀಗಾಗಿ ಆತಂಕದಿಂದ ಕೆಲ ಸಚಿವರು ಒಂದಷ್ಟು ಸೇಫ್ ಗೇಮ್ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ | Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

ಸಚಿವರ ಸೇಫ್ ಗೇಮ್ ಪ್ಲ್ಯಾನ್ ಏನು?

ಚುನಾವಣೆಯಲ್ಲಿ ಪಕ್ಷ ಯಾಕೆ ಸೋತಿದೆ ಎಂಬ ಬಗ್ಗೆ ವಿವರಣೆ ನೀಡಲು ಸಚಿವರು ಕೆಲ ಅಂಶಗಳನ್ನು ಹೈಕಮಾಂಡ್‌ ಮುಂದಿಡಲು ಚಿಂತನೆ ನಡೆಸಿದ್ದಾರೆ. ಈ ಮೂಲಕ ಹೈ ಕಮಾಂಡ್‌ ಕೋಪಕ್ಕೆ ಗುರಿಯಾಗದೇ ಸೇಫ್‌ ಆಗಲು ಪ್ಲ್ಯಾನ್‌ ಮಾಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ…

  • ಸಮುದಾಯವಾರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿಲ್ಲ
  • ಎಸ್ಸಿ, ಎಸ್ಟಿ, ಲಿಂಗಾಯತ, ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಹುದ್ದೆಗೆ ಬೇಡಿಕೆ
  • ಡಿಸಿಎಂ ಹುದ್ದೆ ನೀಡಿದ್ದರೆ ಪಕ್ಷಕ್ಕೆ ಅನುಕೂಲ ಆಗುತ್ತಿತ್ತು
  • ಈ ಚುನಾವಣೆಯಲ್ಲಿ ಅಹಿಂದ ಮತ ಬ್ಯಾಂಕ್ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದೆ
  • ಒಕ್ಕಲಿಗ- ಲಿಂಗಾಯತ ಸಮುದಾಯ ಮೈತ್ರಿಕೂಟ ಜೊತೆ ಹೋಗಿದೆ
  • ಸಮುದಾಯವಾರು ಡಿಸಿಎಂ ಹುದ್ದೆ ಕೊಟ್ಟಿದ್ದರೆ ಲಾಭ ಆಗುತ್ತಿತ್ತು
  • ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ ಬೆಂಬಲ ಸಿಕ್ಕಿಲ್ಲ
  • ಗ್ಯಾರಂಟಿಗಳ ಪ್ರಚಾರ ಎಫೆಕ್ಟಿವ್ ಆಗಿ ಆಗಿಲ್ಲ
  • ಜೆಡಿಎಸ್- ಬಿಜೆಪಿ ಮೈತ್ರಿಕೂಟ ಸರಿ ಸುಮಾರು 10 ಕ್ಷೇತ್ರಗಳಲ್ಲಿ ಆಗಿದೆ

ಯಾವ ಸಚಿವರ ಮೇಲೆ ಪರಾಮರ್ಶೆ ತೂಗುಗತ್ತಿ

ಬೆಂಗಳೂರು ಸೆಂಟ್ರಲ್ ಕ್ಷೇತ್ರ

ಸಚಿವ ದಿನೇಶ್ ಗುಂಡೂರಾವ್ – ಗಾಂಧಿನಗರ ಕ್ಷೇತ್ರ
ಪಿ.ಸಿ ಮೋಹನ್, ಬಿಜೆಪಿ – 74,447
ಮನ್ಸೂರ್ ಖಾನ್, ಕಾಂಗ್ರೆಸ್ – 51,123
ಬಿಜೆಪಿ ಲೀಡ್ – 23,324

ಕೋಲಾರ ಲೋಕಸಭಾ ಕ್ಷೇತ್ರ

ಸಚಿವ ಎಂಸಿ ಸುಧಾಕರ್ – ಚಿಂತಾಮಣಿ ಕ್ಷೇತ್ರ
ಕೆ.ವಿ. ಗೌತಮ್, ಕಾಂಗ್ರೆಸ್ – 82,206
ಮಲ್ಲೇಶ್ ಬಾಬು, ಜೆಡಿಎಸ್ – 89,456
ಜೆಡಿಎಸ್ ಲೀಡ್ – 7,250

ಶಿವಮೊಗ್ಗ ಲೋಕಸಭಾ ಕ್ಷೇತ್ರ

ಸಚಿವ ಮಧು ಬಂಗಾರಪ್ಪ – ಸೊರಬ ಕ್ಷೇತ್ರ
ಗೀತಾ ಶಿವರಾಜ್ ಕುಮಾರ್ – 70233
ಬಿವೈ ರಾಘವೇಂದ್ರ – 88170
ಬಿಜೆಪಿ ಲೀಡ್ – 17937

ಬೆಂಗಳೂರು ದಕ್ಷಿ‌ಣ ಲೋಕಸಭಾ ಕ್ಷೇತ್ರ

ಸಚಿವ ರಾಮಲಿಂಗಾರೆಡ್ಡಿ – ಬಿಟಿಎಂ ಲೇಔಟ್ ಕ್ಷೇತ್ರ
ತೇಜಸ್ವಿ ಸೂರ್ಯ, ಬಿಜೆಪಿ – 72,541
ಸೌಮ್ಯ ರೆಡ್ಡಿ, ಕಾಂಗ್ರೆಸ್ – 63,192
ಬಿಜೆಪಿ ಲೀಡ್ -‌ 9,349

ಧಾರವಾಡ ಲೋಕಸಭಾ ಕ್ಷೇತ್ರ

ಸಚಿವ ಸಂತೋಷ್ ಲಾಡ್ – ಕಲಘಟಗಿ ಕ್ಷೇತ್ರ
ಪ್ರಹ್ಲಾದ್ ಜೋಶಿ, ಬಿಜೆಪಿ – 96,402
ವಿನೋದ್ ಅಸೂಟಿ, ಕಾಂಗ್ರೆಸ್ – 63,665
ಬಿಜೆಪಿ ಲೀಡ್ – 32,737

ತುಮಕೂರು ಲೋಕಸಭಾ ಕ್ಷೇತ್ರ

ಸಚಿವ ಡಾ.‌ಜಿ ಪರಮೇಶ್ವರ್ – ಕೊರಟಗೆರೆ ಕ್ಷೇತ್ರ
ವಿ. ಸೋಮಣ್ಣ, ಬಿಜೆಪಿ – 93,446
ಮುದ್ದಹನುಮೇಗೌಡ – 67,905
ಬಿಜೆಪಿ ಲೀಡ್ – 25,541

ಸಚಿವ ಕೆ.ಎನ್ ರಾಜಣ್ಣ – ಮಧುಗಿರಿ ಕ್ಷೇತ್ರ

ವಿ. ಸೋಮಣ್ಣ, ಬಿಜೆಪಿ -77,494
ಮುದ್ದಹನುಮೇಗೌಡ – 66,692
ಬಿಜೆಪಿ ಲೀಡ್ – 12,802

ಮಂಡ್ಯ ಲೋಕಸಭಾ ಕ್ಷೇತ್ರ

ಸಚಿವ ಚೆಲುವರಾಯಸ್ವಾಮಿ – ನಾಗಮಂಗಲ ಕ್ಷೇತ್ರ
ಕುಮಾರಸ್ವಾಮಿ, ಜೆಡಿಎಸ್ -1,13,087
ಸ್ಟಾರ್ ಚಂದ್ರು, ಕಾಂಗ್ರೆಸ್ – 66,576
ಜೆಡಿಎಸ್ ಲೀಡ್ – 46,511

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

ಸಚಿವ ಮಂಕಾಳ ವೈದ್ಯ – ಭಟ್ಕಳ ಕ್ಷೇತ್ರ
ವಿಶ್ವೇಶ್ವರ ಹೆಗಡೆ ಕಾಗೇರಿ – 1,00,288
ಅಂಜಲಿ ನಿಂಬಾಳ್ಕರ್, ಕಾಂಗ್ರೆಸ್ – 67,885
ಬಿಜೆಪಿ ಲೀಡ್ – 32,343

ಬೆಳಗಾವಿ ಲೋಕಸಭಾ ಕ್ಷೇತ್ರ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಬೆಳಗಾವಿ ಗ್ರಾಮೀಣ ಕ್ಷೇತ್ರ
ಜಗದೀಶ ಶೆಟ್ಟರ್ – 1,24,970
ಮೃಣಾಲ್ ಹೆಬ್ಬಾಳ್ಕರ್‌ – 74,441
ಬಿಜೆಪಿ ಲೀಡ್ – 50,529

ವಿಜಯಪುರ ಲೋಕಸಭಾ ಕ್ಷೇತ್ರ

ಸಚಿವ ಶಿವಾನಂದ ಪಾಟೀಲ್‌ – ಬಸವನ ಬಾಗೇವಾಡಿ ಕ್ಷೇತ್ರ
ರಮೇಶ ಜಿಗಜಿಣಗಿ,ಬಿಜೆಪಿ – 83916
ರಾಜು ಆಲಗೂರ, ಕಾಂಗ್ರೆಸ್ – 66363
ಬಿಜೆಪಿ ಲೀಡ್ – 17553

ಸಚಿವ ಎಂ.ಬಿ. ಪಾಟೀಲ್ – ಬಬಲೇಶ್ವರ ಕ್ಷೇತ್ರ

ರಮೇಶ ಜಿಗಜಿಣಗಿ ಬಿಜೆಪಿ – 79002
ರಾಜು ಆಲಗೂರ್ ಕಾಂಗ್ರೆಸ್ – 75651
ಬಿಜೆಪಿ ಲೀಡ್ – 3351

ಬೆಂಗಳೂರು ಉತ್ತರ ಕ್ಷೇತ್ರ

ಸಚಿವ ಕೃಷ್ಣಬೈರೇಗೌಡ – ಬ್ಯಾಟರಾಯನಪುರ ಕ್ಷೇತ್ರ
ಶೋಭ ಕರಂದ್ಲಾಜೆ, ಬಿಜೆಪಿ – 1,64,574
ರಾಜೀವ್ ಗೌಡ, ಕಾಂಗ್ರೆಸ್ – 1,29,523
ಬಿಜೆಪಿ ಲೀಡ್ – 35,051

ಚಿತ್ರದುರ್ಗ ಲೋಕಸಭಾ ಕ್ಷೇತ್ರ

ಸಚಿವ ಡಿ. ಸುಧಾಕರ್ – ಹಿರಿಯೂರು‌ ಕ್ಷೇತ್ರ
ಗೋವಿಂದ ಕಾರಜೋಳ, ಬಿಜೆಪಿ – 88,794
ಬಿಎನ್ ಚಂದ್ರಪ್ಪ, ಕಾಂಗ್ರೆಸ್- 82,597
ಬಿಜೆಪಿ ಲೀಡ್ – 6197

Continue Reading

ಬೆಂಗಳೂರು

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

UGCET 2024: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳಿಗೆ (UGCET 2024) ಜೂನ್‌ 10 ರಿಂದ 12ರವರೆಗೆ ವೈದ್ಯಕೀಯ ತಪಾಸಣೆಯನ್ನು (Medical Test) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆಯೋಜಿಸಿದೆ.

VISTARANEWS.COM


on

By

UGCET 2024
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ (UGCET 2024) ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯು ಜೂ.10 ಸೋಮವಾರದಿಂದ ಆರಂಭವಾಯಿತು. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ನಡೆಯುತ್ತಿರುವ ವೈದ್ಯಕೀಯ ತಪಾಸಣೆಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಚಾಲನೆ ನೀಡಿದರು.

ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದಿದ್ದ ಆರು ಮಂದಿ ಮೂಳೆ ರೋಗ ಮತ್ತು ಕಣ್ಣು- ಮೂಗು-ಕಿವಿ (ಇಎನ್ ಟಿ) ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ದಾಖಲೆಗಳನ್ನು ಪರಿಶೀಲಿಸಿದರು. ಇದನ್ನು ಖುದ್ದು ಪ್ರಸನ್ನ ಅವರು ಮೇಲ್ವಿಚಾರಣೆ ನಡೆಸಿದರು.

ಇನ್ನೂ ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಕಲಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಇದೇ 12ರ ವರೆಗೆ ತಪಾಸಣೆ ನಡೆಸಲಾಗುತ್ತದೆ. ಮೊದಲ ದಿನ 250 ಮಂದಿಗೆ ಬರಲು ಸೂಚಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

UGCET 2024

ಕಣ್ಣಿನ ಸಮಸ್ಯೆ ಇರುವವರ ತಪಾಸಣೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಅಲ್ಲಿಗೆ ಕೆಇಎ ಸಿಬ್ಬಂದಿಯೇ ಅಂತಹವರನ್ನು ವಾಹನದಲ್ಲಿ ಕರೆದೊಯ್ಯುವ ಕೆಲಸ ಮಾಡಲಾಗಿದೆ. ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

ದಾಖಲೆ ಏನು ತರಬೇಕು?

ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು. ಅಭ್ಯರ್ಥಿಗಳು ಬೆಳಗ್ಗೆ 9:30ಕ್ಕೆ ವರದಿ ಮಾಡಿಕೊಳ್ಳಬೇಕು. 10 ಗಂಟೆಯಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Murder case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಸಹಾಯಕನೇ ಬರ್ಬರವಾಗಿ ಕೊಂದಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

murder case
Koo

ಮೈಸೂರು: ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿದೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು.

ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿದೆ. ರವಿ (60) ಎಂಬಾತನಿಂದ ಈ ಕೃತ್ಯ ನಡೆದಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

ಹಾಸನದಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಕೊಲೆ

ಹಾಲಿನ ಡೈರಿ ವಿಚಾರದಲ್ಲಿ ಗಲಾಟೆ ಹಿನ್ನೆಲೆಯಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಸಮೀಪದ ಮಾಯಸಮುದ್ರ ಗ್ರಾಮದ ಬಳಿ ಘಟನೆ ನಡೆದಿದೆ. ಉದ್ದೂರುಹಳ್ಳಿ ಗ್ರಾಮದ ನಿವಾಸಿ ಅಣ್ಣಪ್ಪ(64) ಸ್ಥಳದಲ್ಲೆ ಮೃತಪಟ್ಟರೆ, ಮಂಜುನಾಥ ಎಂಬುಬಬರಿಗೆ ಗಂಭೀರ ಗಾಯವಾಗಿದೆ.

ಉದ್ದೂರುಹಳ್ಳಿಯ ಧರ್ಮ ಹಾಗು ಆತನ ಸಂಬಂಧಿ ಚಿದಾನಂದ್ ಎಂಬಾತನಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ವಿಚಾರಕ್ಕೆ ಧರ್ಮ ಹಾಗು ಮಂಜುನಾಥ ನಡುವೆ ಗಲಾಟೆ ನಡೆದಿತ್ತು. ಗಲಾಟೆಯನ್ನೇ ಮನಸ್ಸಿನಲ್ಲಿಟ್ಟುಕೊಂಡ ಆರೋಪಿಗಳು ಇನ್ನೋವಾ ಕಾರಿನಿಂದ ಗುದ್ದಿಸಿ ಕೊಂದಿದ್ದಾರೆ. ಅದೃಷ್ಟವಶಾತ್ ಅಪಾಯದಿಂದ ಮಂಜುನಾಥ ಪಾರಾಗಿದ್ದರೆ, ಅಣ್ಣಪ್ಪ ಮೃತಪಟ್ಟಿದ್ದಾರೆ.

ಹಂತಕರು ಕೊಲೆಗೈದು ಎಸ್ಕೇಪ್ ಆಗಿದ್ದು, ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಗಾಯಾಳು ಮಂಜುನಾಥ್‌ನನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Congress Guarantee: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Congress Guaratee
Koo

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು (Congress Guarantee) ನಿಲ್ಲಿಸಬೇಕೆಂಬ ಚರ್ಚೆ ಹಿನ್ನೆಲೆ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ (HM Revanna) ಪ್ರತಿಕ್ರಿಯಿಸಿದ್ದಾರೆ. ಗ್ಯಾರಂಟಿಗಳು ನಿಲ್ಲಿಸಿ ಎಂದು ಹೇಳಬೇಡಿ. ಎಷ್ಟೇ ದೊಡ್ಡ ನಾಯಕರು ಆದರೂ ನಿಲ್ಲಿಸುವ ಬಗ್ಗೆ ಮಾತನಾಡಬೇಡಿ. ನಾವು ಗ್ಯಾರಂಟಿಗಳನ್ನ ನಿಲ್ಲಿಸುವುದಿಲ್ಲ‌. ಸಣ್ಣ ಪುಟ್ಟ ತಪ್ಪುಗಳು ಇದ್ದರೆ ಸರಿಪಡಿಸುತ್ತೇವೆ ಎಂದು ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗ್ಯಾರಂಟಿಗಳಿಗಾಗಿ 36 ಸಾವಿರ ಕೋಟಿ ಖರ್ಚು ಆಗುತ್ತಿತ್ತು, ಅದು‌ 46 ಸಾವಿರ ಕೋಟಿಗೆ ಏರಿಕೆ ಆಗಿದೆ. ಆದರೂ ಅದು ನಮ್ಮ ಬದ್ಧತೆ. ನಾವು ಬದುಕಿಗಾಗಿ ಇದ್ದೇವೆ, ಬಿಜೆಪಿಯವರು ಭಾವನೆಗಳಿಗಾಗಿ ಇದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲ ಕಡೆಗಳಿಂದ ದೂರು ಬಂದಿವೆ. ಒಂದೇ ಮನೆಯಲ್ಲಿ ಇಬ್ಬರು ಫಲಾನುಭವಿಗಳ ಇರುವ ಬಗ್ಗೆ ದೂರು ಬಂದಿವೆ. ಅವುಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಇತ್ತೀಚೆಗೆ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಮತದಾರರ ವಿರುದ್ಧ ಅಸಮಾಧಾನ ಹೊರಹಾಕುತ್ತಾ, ಜನರಿಗೆ ಗ್ಯಾರಂಟಿಗಳು ಬೇಕಿಲ್ಲ, ಇದರ ಬಗ್ಗೆ ಸಿಂ ಸಿದ್ದರಾಮಯ್ಯ ಅವರು ಮರು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದರು. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ | Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

“ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

Budget Session Siddaramaiah Narendra Modi

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

Continue Reading
Advertisement
Narendra Modi 3.20
ಪ್ರಮುಖ ಸುದ್ದಿ3 mins ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ6 mins ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Yuva Rajkumar Allegation of cruelty against wife
ಸ್ಯಾಂಡಲ್ ವುಡ್19 mins ago

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

UGCET 2024
ಬೆಂಗಳೂರು21 mins ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ27 mins ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು43 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ44 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್49 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ59 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ59 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌