Jana sankalpa yatre | ಕುಣಿಗಲ್‌ ತಾಲೂಕಿನ ಎಲ್ಲ ಗ್ರಾಮಗಳಿಗೂ ಹೇಮಾವತಿ ನೀರು: ಸಿಎಂ ಬಸವರಾಜ್ ಬೊಮ್ಮಾಯಿ - Vistara News

ತುಮಕೂರು

Jana sankalpa yatre | ಕುಣಿಗಲ್‌ ತಾಲೂಕಿನ ಎಲ್ಲ ಗ್ರಾಮಗಳಿಗೂ ಹೇಮಾವತಿ ನೀರು: ಸಿಎಂ ಬಸವರಾಜ್ ಬೊಮ್ಮಾಯಿ

Jana sankalpa yatre | ಕಳೆದ ಚುನಾವಣೆಯಲ್ಲಿ ಕುಣಿಗಲ್‌, ತುಮಕೂರು ಗ್ರಾಮಾಂತರ, ಕೊರಟಗೆರೆ ಹಾಗೂ ಮಧುಗಿರಿಯಲ್ಲಿ ಅಲ್ಪ ಮತಗಳಲ್ಲಿ ಬಿಜೆಪಿ ಸೋತಿತ್ತು. ಆದರೆ ಈ ಬಾರಿ ತುಮಕೂರು ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಾರಿ ಅಂತರರಿಂದ ಗೆಲ್ಲುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

bommai birth day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಮಾಜಿ ಸಚಿವರು, ಹಿರಿಯ ಮುತ್ಸದ್ದಿಯಾಗಿದ್ದ ವೈ.ಕೆ.ರಾಮಯ್ಯ ಅವರ ಹೋರಾಟ ಮಾಡಿದ್ದರಿಂದ ಜಿಲ್ಲೆಗೆ ಹೇಮಾವತಿ ನೀರು ದೊರೆಯಿತು. ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಜಿಲ್ಲೆಯ ಎಲ್ಲ ಭಾಗಕ್ಕೂ ನೀರು ಒದಗಿಸುವ ಕೆಲಸ ಮಾಡಿದರು. ಆದರೆ, ಕುಣಿಗಲ್‌ನ ಇನ್ನೂ 45 ಕಿ.ಮೀ ಭಾಗಕ್ಕೆ ನೀರು ಸಿಗಬೇಕಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಹೇಮಾವತಿ ಕಾಲುವೆ ಮೂಲಕ ನೀರು ಪೂರೈಸಲಾಗುತ್ತದೆ. ಅದೇ ರೀತಿ ಮಾರ್ಕೋನಹಳ್ಳಿ ಜಲಾಶಯದಿಂದ ಮಂಗಳ ಜಲಾಶಯಕ್ಕೆ ನೀರು ಹರಿಸುವ ಕೆಲಸವನ್ನು ಬಿಜೆಪಿ ಸರ್ಕಾರ (Jana sankalpa yatre) ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕುಣಿಗಲ್‌ನಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಜನ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಬಿಜೆಪಿಯ ಗಾಳಿ ಬೀಸುತ್ತಿದೆ. ಕಳೆದ ಚುನಾವಣೆಯಲ್ಲಿ ಕುಣಿಗಲ್‌, ತುಮಕೂರು ಗ್ರಾಮಾಂತರ, ಕೊರಟಗೆರೆ ಹಾಗೂ ಮಧುಗಿರಿಯಲ್ಲಿ ಅಲ್ಪ ಮತಗಳಲ್ಲಿ ನಾವು ಸೋತಿದ್ದೆವು. ಆದರೆ ಈ ಬಾರಿ ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಾರಿ ಅಂತರರಿಂದ ಗೆಲ್ಲುತ್ತದೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂತು. ಇದಕ್ಕೆ ಪರ್ಯಾಯ ಶಕ್ತಿಯಾಗಿ ಬಿಜೆಪಿ ಬೆಳೆದಿದೆ. ಇಡೀ ದೇಶದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್‌ ಈ ಬಾರಿಯೂ ರಾಜ್ಯದಲ್ಲಿ ನೆಲಕಚ್ಚುತ್ತದೆ, ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಈಗಾಗಲೇ ಜನಸಂಕಲ್ಪ ಯಾತ್ರೆಯ ಮೂಲಕ ಹೈದರಾಬಾದ್‌ ಕರ್ನಾಟಕ, ಮುಂಬೈ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಜಿಲ್ಲೆಗಳನ್ನು ಸುತ್ತಿ ತುಮಕೂರು ಜಿಲ್ಲೆಗೆ ಬಂದಿದ್ದೇವೆ. ಎಲ್ಲಿ ಹೋದರೂ ಜನರಿಂದ ನಿರೀಕ್ಷೆಗೂ ಮೀರಿ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಇದನ್ನು ನೋಡಿದರೆ ನಮ್ಮ ಈ ಜನಸಂಕಲ್ಪ ಯಾತ್ರೆ ಮುಂದಿನ ದಿನಗಳಲ್ಲಿ ವಿಜಯಸಂಕಲ್ಪ ಆಗುತ್ತದೆ ಎನ್ನುವ ವಿಶ್ವಾಸ ಮೂಡುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ | Siddaramaiah | ಸಿದ್ರಾಮುಲ್ಲಾ ಖಾನ್‌ ಹೆಸರಿಟ್ಟಿದ್ದಕ್ಕೆ ಬೇಸರವಿಲ್ಲ, ಜಾತ್ಯತೀತ ನಂಬಿಕೆಗೆ ಸಿಕ್ಕ ಪುರಸ್ಕಾರ ಎಂದು ಭಾವಿಸುವೆ ಎಂದ ಸಿದ್ದರಾಮಯ್ಯ

ಜಾತಿ, ಧರ್ಮಗಳನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಧೀನ ದಲಿತರ ಉದ್ದಾರಕರು ಎಂದು ಕೈ ನಾಯಕರು ಭಾಷಣ ಮಾಡುತ್ತಾರೆ. ಆದರೆ ಹಿಂದುಳಿದವರು ಹಿಂದೆಯೇ ಇದ್ದಾರೆ, ಸಾಮಾಜಿಕ ನ್ಯಾಯದ ಭಾಷಣ ಮಾಡಿದವರು ಮುಂದೆ ಹೋಗಿದ್ದಾರೆ. ಅತಿ ಹೆಚ್ಚು ಅವಧಿಗೆ ಅಧಿಕಾರ ಕೊಟ್ಟರೂ ನೀವು ಏನೂ ಮಾಡಿಲ್ಲ ಎಂದು ಜನರು ಕಾಂಗ್ರೆಸ್‌ಗೆ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿತ್ತು, ಹಣಕಾಸಿನ ಸ್ಥಿತಿ ಗಂಭೀರವಾಗಿತ್ತು. ಕೋವಿಡ್‌ನಂತಹ ತುರ್ತು ಪರಿಸ್ಥಿತಿ ಇಲ್ಲದಿದ್ದರೂ 2 ಲಕ್ಷ ಕೋಟಿ ರೂಪಾಯಿ ಸಾಲವನ್ನು ಜನತೆ ಮೇಲೆ ಹೇರಿದರು. ಇಷ್ಟು ಸಾಲ ತಂದರೂ ರಾಜ್ಯದ ಅಭಿವೃದ್ಧಿಯಾಗಲಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಐದು ವರ್ಷದಲ್ಲಿ ಸುಮಾರು 32 ಸಾವಿರ ಕೋಟಿ ರೂಪಾಯಿ 7 ಲಕ್ಷ ಎಕರೆಗೆ ನೀರಾವರಿ ಒದಗಿಸಿದ್ದೇವೆ. ಆದರೆ ಕಾಂಗ್ರೆಸ್‌ ಪಕ್ಷ ಐದು ವರ್ಷದಲ್ಲಿ 54 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ಕೇವಲ 2 ಲಕ್ಷ ಎಕರೆ ನೀರಾವರಿ ಮಾಡಿದೆ. ಆದರೆ ಉಳಿದ ಹಣ ಎಲ್ಲಿ ಹೋಯಿತು, ಯಾರ ಕಿಸೆಗೆ ದುಡ್ಡು ಹೋಯಿತು ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ. ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿಹಾಕಿ ಎಸಿಬಿಯನ್ನು ರಚಿಸಿತು. ಸುಮಾರು 50 ಕೇಸ್‌ಗಳ ಮೇಲೆ ಬಿ ರಿಪೋರ್ಟ್‌ ಹಾಕಿ ಯಾವುದೂ ಭ್ರಷ್ಟಾಚಾರ ಮಾಡಿಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿತ್ತು.

ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಜನ ಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ. ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತೋರಿಸಲಿಲ್ಲ ಎಂದರೆ ಸರ್ಕಾರಕ್ಕೆ ಗೌರವ ಇರಲ್ಲ. ಹೀಗಾಗಿ
ಕಾರ್ಯಕರ್ತರು ಸರ್ಕಾರ ಕೆಲಸಗಳನ್ನು ಜನರಿಗೆ ತಲಿಪಿಸುವ ಕೆಲಸ ಮಾಡಬೇಕು ಎಂದರು. ಡೀಮ್ಡ್ ಫಾರೆಸ್ಟ್ ತೆಗೆದು ಜನರಿಗೆ ವಾಸಮಾಡಲು ಅವಕಾಶ ಮಾಡಲಾಗುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿದ್ದೇವೆ. ಮನೆ ಮನೆಗೆ ನೀರು ಕೊಡುವ ಕೆಲಸ ಮಾಡಿದ್ದು ನಮ್ಮ ಸರ್ಕಾರ. ಎಲ್ಲಾ ಭಾಗಕ್ಕೆ ನೀರು ಕೊಡುವ ಕೆಲಸ ಮಾಡಿದ್ದರೆ ಅದು ನಮ್ಮ‌ ಸರ್ಕಾರ ಎಂದು ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್ ವಿರುದ್ಧ ಗುಡುಗಿದರು.

ಅನುದಾನ ಕೊಡಲಿಲ್ಲ ಎಂದು ಸುಳ್ಳು ಹೇಳಿಕೊಂಡು ಕುಣಿಗಲ್‌ ಶಾಸಕರು ಓಡಾಡುತ್ತಾರೆ. ನಾನು ಜಿಲ್ಲಾ ಉಸ್ತುವಾರಿ ಇದ್ದಾಗ ಹೆಚ್ಚಿನ ಅನುದಾನ ಕೊಡಲಾಗಿದೆ. ನನ್ನ ಬಳಿ ದಾಖಲೆ ಇದೆ, ಸುಳ್ಳು ಯಾಕೆ ಹೇಳುತ್ತೀರಾ ಎಂದು ಡಾ.ರಂಗನಾಥ್‌ ವಿರುದ್ಧ ಕಿಡಿಕಾರಿದರು.

ಸಚಿವ ಗೋವಿಂದ ಕಾರಜೋಳ ಮಾತನಾಡಿ, ಜನರ ಉತ್ಸಾಹ ನೋಡಿದರೆ 2023ರ ಫಲಿತಾಂಶ ಬಂದು ಸಂಭ್ರಮ ಮಾಡುತ್ತಿದ್ದಾರಾ ಎನ್ನಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕುಣಿಗಲ್‌ನಲ್ಲಿ ಬಿಜೆಪಿ ಬರುವುದು ಪಕ್ಕಾ‌. ಕಾಂಗ್ರೆಸ್‌ನವರು ರೈತರು, ಧೀನ ದಲಿತರು ಹಾಗೂ ಬಡವರನ್ನು ವೋಟ್‌ ಬ್ಯಾಂಕ್ ಮಾಡಿಕೊಂಡು ಮೋಸ ಮಾಡಿದ್ದಾರೆ. ಒಂದು ಸುಳ್ಳನ್ನು ಹತ್ತು ಬಾರಿ ಹೇಳುತ್ತಾರೆ. ಜಾತಿ ಜಾತಿಗಳು, ಧರ್ಮ ಧರ್ಮಗಳ ಮಧ್ಯೆ ವಿಷ ಬೀಜ ಭಿತ್ತಿ ರಾಜಕಾರಣ ಮಾಡಿದ್ದಾರೆ. 45 ವರ್ಷಗಳಿಂದ ರಾಜ್ಯದಲ್ಲಿ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಕಾಯಂ ನೇಮಕಾತಿ ಮಾಡುವ ಕೆಲಸವನ್ನು ಕಾಂಗ್ರೆಸ್‌ ಮಾಡಲಿಲ್ಲ. ಅವರಿಗೆ ಬರೀ ವೋಟ್‌ ಬೇಕು ಅಷ್ಟೇ. ಅವರು ಅದ್ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂಬುದು ಗೊತ್ತಿಲ್ಲ ಎಂದು ಕುಟುಕಿದರು.

ರೈತ ದೇಶದ ಬೆನ್ನೆಲುಬು ಎಂದು ಹೇಳುತ್ತಾರೆ. ಆದರೆ ಕಾಂಗ್ರೆಸ್‌ ರೈತರ ಬೆನ್ನನ್ನೇ ಮುರಿದಿದೆ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಾಗಿವೆ. ನಮ್ಮ ಸರ್ಕಾರ ಕುಣಿಗಲ್ ಹಾಗೂ ರಾಮನಗರಕ್ಕೆ 800 ಕೋಟಿ ಹಣ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಿದೆ. ಇನ್ನು ಸಾಕಷ್ಟು ಕಾಮಗಾರಿ ಮಾಡುತ್ತಿದ್ದೇವೆ. ಕಳೆದ ಬಾರಿ ನಮ್ಮ ಮೇಲೆ ಅಪಪ್ರಚಾರ ಮಾಡುವ ಒಬ್ಬ ಶಾಸಕನಿಗೆ ಬೆಂಬಲ ನೀಡಿದ್ದೀರಿ, ಆದರೆ ಈ ಬಾರಿ ಹಾಗೆ ಆಗುವುದು ಬೇಡ ಎಂದು ಮನವಿ ಮಾಡಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಎಷ್ಟು ಬಾರಿ ಸೋತಿದ್ದೀರಾ ಎಂದು ನಾನು ಕೃಷ್ಣಕುಮಾರ್‌ಗೆ ಕೇಳಿದೆ, ಮೂರು ಬಾರಿ ಎಂದಿದ್ದಾರೆ. ಆಗ ನನ್ನ ಜೀವನ ನೆನಪಾಯಿತು. ನಾನು ಸಹ ಮೂರು ಬಾರಿ ಸೋತಿದ್ದೆ. ಆದರೆ ಈ ಬಾರಿ ಆ ಸೋಲಿನ ಶನಿ ಬಿಡುತ್ತದೆ. ತಾಲೂಕಿನಲ್ಲಿ ಅಧಿಕಾರದಲ್ಲಿ ಇಲ್ಲದೆ ಇಷ್ಟೊಂದು ಜನ ಸೇರಿಸಿದ್ದಾರೆ. ಇದೆಲ್ಲಾ ನಮ್ಮ ಗೆಲುವಿನ ವಿಶ್ವಾಸ ತೋರಿಸುತ್ತದೆ‌. ನಮ್ಮ‌ ಸರ್ಕಾರ ರೈತರಿಗೆ ಖಾತೆಗೆ ನೇರವಾಗಿ ಹಣ ಹಾಕಿದೆ. ಬೊಮ್ಮಾಯಿ ಸರ್ಕಾರ 4 ಸಾವಿರ, ಮೋದಿ ಸರ್ಕಾರ 6 ಸಾವಿರ ರೂಪಾಯಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ನೀಡುತ್ತಿವೆ. ಕಾಂಗ್ರೆಸ್ ಸರ್ಕಾರ ದಲಿತರಿಗೆ ಏನು ಮಾಡಿಲ್ಲ, ಬಿಜೆಪಿಗೆ ವೋಟು ಕೊಟ್ಟರೆ ದೇಶ ಬದಲಾಗುತ್ತದೆ ಎಂದರು.

ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅಭ್ಯರ್ಥಿ ಕೃಷ್ಣಕುಮಾರ್ ಪರ ಘೋಷಣೆ
ಸಮಾವೇಶದಲ್ಲಿ ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅಭ್ಯರ್ಥಿ ಕೃಷ್ಣಕುಮಾರ್ ಪರ ಬೆಂಬಲಿಗರು ಘೋಷಣೆ ಕೂಗಿದ್ದು ಕಂಡುಬಂತು. ಈ ಬಾರಿ ಕೃಷ್ಣಕುಮಾರ್‌ಗೆ ಟಿಕೆಟ್‌ ಕೊಡುವಂತೆ ಘೋಷಣೆ ಕೂಗಿದರು. ಈ ವೇಳೆ ಸಚಿವ ಮಾಧುಸ್ವಾಮಿ ಮಾತನಾಡಿ, ನೀವು ಹೀಗೆ ಘೋಷಣೆ ಕೂಗಿದರೆ ನಾವು ಜಾಗ ಖಾಲಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ನೀವು ಸುಮ್ಮನಿದ್ದರೆ ಒಳ್ಳೆಯದು, ಕೃಷ್ಣಕುಮಾರ್‌ ಆರೋಗ್ಯಕ್ಕೂ ಒಳ್ಳೆಯದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ | Basavaraja Bommai | ತುಮಕೂರಿನಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಷಿಪ್‌, ಸಾವಿರಾರು ಜಾಬ್‌: ಸಿಎಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Murder Case : ತುಮಕೂರಿನಲ್ಲಿ ಭೀಕರ ಹತ್ಯೆಯೊಂದು (Tumkur Murder) ನಡೆದಿದೆ. ಪತಿಯೊಬ್ಬ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಕತ್ತರಿಸಿ ಬಿಸಾಡಿದ್ದಾನೆ. ಈತನ ಕ್ರೌರ್ಯತೆಗೆ ಜನರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

tumkur murder
ಕೊಲೆ ಸುದ್ದಿ ಕೇಳಿ ಮನೆ ಮುಂದೆ ಜಮಾಯಿಸಿದ ಜನರು
Koo

ತುಮಕೂರು : ಪತಿಯಿಂದಲೇ ಪತ್ನಿಯ ಭೀಕರ (Murder Case) ಕೊಲೆಯಾಗಿದೆ. ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಪಾಪಿ ಪತಿ ಕತ್ತರಿಸಿದ್ದಾನೆ. ಪುಷ್ಪ (32) ಹತ್ಯೆಯಾದ ದುರ್ದೈವಿ. ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ (Tumkur Murder) ಈ ದುರ್ಘಟನೆ ನಡೆದಿದೆ.

ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾದ ಶಿವರಾಮ್ ಕೊಲೆಗಾರನಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪಾಳನ್ನು ಶಿವರಾಮ್‌ ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ.

ಮರದ ಸಾಮಿಲ್ ಒಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಮ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ಪುಷ್ಪಾ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಸೋಮವಾರ ರಾತ್ರಿಯೂ (ಮೇ 27) ಗಲಾಟೆಯಾಗಿದ್ದು, ಅದು ವಿಕೋಪಕ್ಕೆ ತಿರುಗಿದೆ. ಬಳಿಕ ಕೋಪದ ಕೈಗೆ ಬುದ್ಧಿ ಕೊಟ್ಟ ಶಿವರಾಮ್‌ ಅಡುಗೆ ಮನೆಯಲ್ಲಿದ್ದ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಶಿವರಾಮ್‌ ತನ್ನ ಮಗುವಿನ ಎದುರಿಗೆ ಕ್ರೌರ್ಯತೆಯನ್ನು ತೋರಿದ್ದಾನೆ.

ಪುಷ್ಫಾಳ ಕೂಗಾಟ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಂಡು ತುಂಡಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೈದ ಪತಿ ಶಿವರಾಮ್‌ನನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿತಕ್ಕೆ ಖರ್ಚು; ಕೇಳಿದ್ದಕ್ಕೆ ಹೆಂಡತಿಯ ಕೊಂದು ನೇಣು ಹಾಕಿಕೊಂಡ

ಬೆಳಗಾವಿ: ಇದ್ದ ಒಂದು ಎಮ್ಮೆಯನ್ನೂ ಮಾರಿ ಅದರಿಂದ ಬಂದ ಕಾಸನ್ನು ಕುಡಿತಕ್ಕೆ ಖರ್ಚು ಮಾಡಿದ ಭಂಡ ಗಂಡನನ್ನು ಆಕ್ಷೇಪಿಸಿದ್ದಕ್ಕೆ ಹೆಂಡತಿಯನ್ನು ಕೊಂದು (Murder Case) ತಾನೂ ನೇಣಿಗೆ (Self harming) ಶರಣಾಗಿದ್ದಾನೆ. ಈ ಘಟನೆ ಬೆಳಗಾವಿ (Belagavi news) ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಣ್ಣಪ್ಪ ನಂದಿ, ಯಲ್ಲವ್ವ ನಂದಿ (41) ದುರಂತ ಅಂತ್ಯ ಕಂಡ ಗಂಡ ಹೆಂಡತಿ. ತನ್ನಲ್ಲಿದ್ದ ಎಮ್ಮೆಯನ್ನು‌ ಮಾರಿ ಬಂದ ಹಣದಿಂದ ಅಣ್ಣಪ್ಪ ಕಂಠಪೂರ್ತಿ ಕುಡಿದು ಬಂದಿದ್ದ. ನಿನ್ನೆ ಸೋಮವಾರ ಸಂಜೆ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಯಲ್ಲವ್ವ ನಂದಿ, ಗಂಡನ ಈ ನಡತೆಯನ್ನು ಆಕ್ಷೇಪಿಸಿದ್ದಳು.

ಇದರಿಂದ ಜಗಳ ಹುಟ್ಟಿಕೊಂಡಿದೆ. ಹೆಂಡತಿಯ ಮೇಲೆ‌ ಮೊದಲೇ ಸಂಶಯ ಪಡುತ್ತಿದ್ದ ಪಾಪಿ ಅಣ್ಣಪ್ಪ, ಹೆಂಡತಿ ಪ್ರಶ್ನೆ ಮಾಡುತ್ತಿದ್ದಂತೆ ಆಕೆಯನ್ನು ಕೊಂದು ಹಾಕಿದ್ದಾನೆ, ನಂತರ ಮನೆಗೆ ಬಂದು ಮನೆಯ ಹೊರ ಭಾಗದ ತಗಡಿನ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಲಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Rain News : ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಪ್ರತ್ಯೇಕ ಕಡೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ತುಮಕೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇನ್ನೂ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Girlfriend
ದೇಶ5 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ5 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ6 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ6 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ7 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ7 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ8 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Timing change of 5 trains arriving at Sri Siddharooda Swamiji Railway Station Hubballi
ಹುಬ್ಬಳ್ಳಿ8 hours ago

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Valmiki corporation Scam
ಕರ್ನಾಟಕ8 hours ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ8 hours ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌