Site icon Vistara News

Lok Sabha Election 2024: ಚಿತ್ರದುರ್ಗದ ಸರ್ವತೋಮುಖ ಅಭಿವೃದ್ಧಿಗಾಗಿ ಕಾರಜೋಳಗೆ ಬೆಂಬಲಿಸಲು ಮನವಿ

BJP and JDS leaders Meeting in shira, Support Govinda Karajola for all round development of Chitradurga says Umesh Karajola

ಶಿರಾ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ (Lok Sabha Election 2024) ಸರ್ವತೋಮುಖ ಅಭಿವೃದ್ಧಿಗೆ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಅತ್ಯಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ತಿಳಿಸಿದರು.

ಶಿರಾ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರನ್ನು ಭೇಟಿ ಮಾಡಿ, ಮತಪ್ರಚಾರ ನಡೆಸಿ, ಬಳಿಕ ಅವರು ಮಾತನಾಡಿದರು.

ಗೋವಿಂದ ಕಾರಜೋಳ ಅವರು ಮುಧೋಳ ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಳೆಯನ್ನೇ ಹರಿಸಿ, ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಪಡಿಸುವ ಸಂಕಲ್ಪ ಹೊಂದಿದ್ದಾರೆ ಎಂದರು.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಗೋವಿಂದ ಕಾರಜೋಳ ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಬೆಂಬಲ ಸಹ ಬಿಜೆಪಿಗೆ ದೊರಕಿದ್ದು ಆನೆ ಬಲ ಬಂದಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಜನಪರ ಯೋಜನೆಗಳಿಗೆ ಸರಿಸಾಟಿಯೇ ಇಲ್ಲ, ಜನರೇ ಅವುಗಳನ್ನು ಮೆಚ್ಚಿಕೊಂಡಿದ್ದಾರೆ. ಚಿತ್ರದುರ್ಗ ಜನತೆ ಈ ಬಾರಿ ಗೋವಿಂದ ಕಾರಜೋಳರಿಗೆ ಒಂದು ಅವಕಾಶ ನೀಡಿ, ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಈ ಸಂದರ್ಭದಲ್ಲಿ ಮುಖಂಡರಾದ ಸತ್ಯಪ್ರಕಾಶ್, ಉಗ್ರೇಶ್, ಎಸ್.ಆರ್ ಗೌಡ್ರು, ಚಿಕ್ಕಣ್ಣ, ಗಿರಿಧರ್ , ಮಂಜಣ್ಣ, ಚಂಗಾವರ ಮಾರಣ್ಣ, ನರಸಿಂಹರಾಜು, ರಂಗನಾಥ, ನಟರಾಜ, ಕೃಷ್ಣಮೂರ್ತಿ, ಶಿವಕುಮಾರ ಬರಗೂರು, ಪ್ರಕಾಶ್ ಮುದ್ದರಾಜು, ಲಕ್ಷ್ಮೀನಾರಾಯಣಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Exit mobile version