Site icon Vistara News

ಅಪಘಾತ ಗಾಯಾಳುವಿಗೆ ನೆರವು, ಮಾನವೀಯತೆ ಮೆರೆದ ಗುಬ್ಬಿ ಶಾಸಕ ಶ್ರೀನಿವಾಸ್

gubbi mla

ತುಮಕೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನಡುರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದ ಬೈಕ್ ಸವಾರನನ್ನು ಕಂಡು ಆಸ್ಪತ್ರೆಗೆ ದಾಖಲಿಸಿ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಮಾನವೀಯತೆ ಮೆರೆದಿದ್ದಾರೆ.

ಕಳ್ಳಿಪಾಳ್ಯ ಗೇಟ್ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡಿದ್ದರು. ರಕ್ತಸ್ರಾವದಿಂದ ನಡುರಸ್ತೆಯಲ್ಲೇ ನರಳಾಡುತ್ತಿದ್ದ ಸವಾರ ಕೊಂಚ ಸಮಯದಿಂದ ಅಲ್ಲೇ ಬಿದ್ದಿದ್ದರೂ ಯಾರೂ ನೆರವಿಗೆ ಬಂದಿರಲಿಲ್ಲ. ತುಮಕೂರು ಕಡೆಯಿಂದ ಗುಬ್ಬಿ ಕಡೆಗೆ ತೆರಳುತ್ತಿದ್ದ ಶಾಸಕ ಎಸ್.ಆರ್ ಶ್ರೀನಿವಾಸ್ ಅವರು ಇದನ್ನು ಕಂಡಿದ್ದು, ಕಾರು ನಿಲ್ಲಿಸಿ ಕೂಡಲೇ ಆಂಬ್ಯುಲೆನ್ಸ್ ಕರೆಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌‌‌ ಕೊಡಿಸಿದ್ದಾರೆ. ಸ್ಥಳದಿಂದಲೇ ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ಚಿಕಿತ್ಸೆಗೆ ಮನವಿ ಮಾಡಿದರು. ಶಾಸಕರ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ | Accident | ಕಾರು ಚಲಾಯಿಸುತ್ತಿರುವಾಗಲೇ ಚಾಲಕ ಅಸ್ವಸ್ಥ, ಸರಣಿ ಅಪಘಾತ, ಡೆಲಿವರಿ ಬಾಯ್‌ಗೆ ಗಂಭೀರ ಗಾಯ

Exit mobile version