Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ - Vistara News

ತುಮಕೂರು

Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

Murder case : ತುಮಕೂರಿನಲ್ಲಿ ಸ್ನೇಹಿತನ ಕೊಲೆಗಾರನಾಗಿದ್ದಾನೆ. ಶೆಡ್ಡಿಗೆ ಬಾ ಎಂದು ಕರೆದು ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದು ಕಡೆ ಹಾವೇರಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ.

VISTARANEWS.COM


on

murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ (Murder case) ಮಾಡಲಾಗಿದೆ. ತುಮಕೂರಿನ ಕುಣಿಗಲ್ ಪಟ್ಟಣದ ಅಗ್ರಹಾರದಲ್ಲಿ ಘಟನೆ ನಡೆದಿದೆ. ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮ ನಿವಾಸಿ ರವಿ (40) ಎಂಬಾತ ಕೊಲೆಯಾದವರು.

ಗಾರೆ ಕೆಲಸಗಾರನಾಗಿದ್ದ ರವಿ ತನ್ನ ಸ್ನೇಹಿತ ಶೆಡ್ಡಿಗೆ ಹೋಗಿದ್ದಾಗ ಕೊಲೆಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಶಿವಕುಮಾರ್ ಹಾಗೂ ರವಿ ಸ್ನೇಹಿತರಾಗಿದ್ದರು. ಸ್ನೇಹಿತ ಶಿವಕುಮಾರ್ ಕರೆದ ಎಂದು ರವಿ ಭಾನುವಾರ ಶೆಡ್ಡಿಗೆ ತೆರಳಿದ್ದ.

ಶಿವಕುಮಾರ್ ಹಾಗೂ ರವಿ ನಡುವೆ ಶೆಡ್‌ನಲ್ಲಿ ಗಲಾಟೆ ನಡೆದಿರುವ ಶಂಕೆ ಇದೆ. ಇಬ್ಬರ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿ ರವಿಯ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ತಲೆಯ ಮೇಲೆ ಹಾಲೋಬ್ರಿಕ್ಸ್ ಇಟ್ಟಿಗೆ ಎತ್ತಿ ಹಾಕಿ ಕೊಲೆ‌ ಮಾಡಲಾಗಿದೆ.

ಸ್ಥಳಕ್ಕೆ ತುಮಕೂರು ಎಎಸ್ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕ ಯಾರೆಂದು ತಿಳಿಯಲು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case: ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಕೊಲೆ

ಹಾವೇರಿಯಲ್ಲಿ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಹಳೆಹೊನ್ನತ್ತಿ ಬಳಿ ಪತ್ತೆಯಾಗಿದೆ. ಚಂದ್ರಪ್ಪ ಹೊಳೆಯಪ್ಪನವರ್ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ರಾಣೇಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Teachers Recruitment: ಶಿಕ್ಷಕರ ಕೊರತೆ ನೀಗಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

VISTARANEWS.COM


on

Teachers Recruitment
Koo

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ (Teachers Recruitment) ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ತಕ್ಷಣಕ್ಕೆ ಸಮಸ್ಯೆ ಪರಿಹರಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಶಿಕ್ಷಕರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ

ಶಿಕ್ಷಕರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿಕ್ಷಕರಿಂದ ಕೆಲ ಬೇಡಿಕೆಗಳಿವೆ. ನಾಲ್ಕೈದು ದಿನಗಳ ಹಿಂದೆ ಸಭೆ ಕರೆದಿದ್ದೆ. ನಾವು ಪ್ರತಿಭಟನೆ ಕರೆದುಬಿಟ್ಟಿದ್ದೀವಿ, ಹೀಗಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ. ನಾನು ಹೋಗಿ ಮನವಿ ಪಡೆದು ಬಳಿಕ ಏನು ಮಾಡಬೇಕೋ ಪರಿಶೀಲನೆ ಮಾಡುತ್ತೇನೆ. ಇದು ನನ್ನ ಅವಧಿಯಲ್ಲಿ ಆಗಿರುವ ಸಮಸ್ಯೆಯಲ್ಲ. 2017ರಲ್ಲಿ ಆಗಿರೋ ವಿಚಾರ ಇದು, ಆಗಲೇ ಇವರು ಸ್ವಲ್ಪ ಒತ್ತಡ ಹಾಕಬೇಕಿತ್ತು. ಆದರೆ ಇಲ್ಲಿಯವರೆಗೂ ಅದು ಎಳೆದುಕೊಂಡು ಬಂದಿದೆ. ಅದು ನನ್ನ ಮಟ್ಟದಲ್ಲಿ ಅನ್ನೋಕ್ಕಿಂತ, ಮುಖ್ಯಮಂತ್ರಿ ಮಟ್ಟದಲ್ಲಿ ನಿರ್ಧಾರ ಆಗೋ ವಿಚಾರ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಅವರಿಗೆ ನಿವೃತ್ತಿ ಸಮಯದಲ್ಲಿ ಪ್ರಮೋಷನ್ ಆಗೋ ಆಸೆ ಇರುತ್ತೆ. ಹೀಗಾಗಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

By

karnataka rain weather forecast
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ಭಾರಿ ಮಳೆಯಾಗುವ (Heavy Rain alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ್‌ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರ

ಬೆಂಗಳೂರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rent Agreement
ವಾಣಿಜ್ಯ7 mins ago

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

NIRF 2024 Rank
ಶಿಕ್ಷಣ25 mins ago

NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Rakshabandhan Shopping 2024
ಫ್ಯಾಷನ್32 mins ago

Rakshabandhan Shopping 2024: ವಾರಕ್ಕೆ ಮುನ್ನವೇ ಶುರುವಾಯ್ತು ರಕ್ಷಾ ಬಂಧನದ ಶಾಪಿಂಗ್‌!

Viral News
Latest34 mins ago

Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

Teachers Recruitment
ಕರ್ನಾಟಕ35 mins ago

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Hindenburg Report
ಪ್ರಮುಖ ಸುದ್ದಿ47 mins ago

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Independence Day 2024
ದೇಶ1 hour ago

Independence Day 2024: ಈ ಬಾರಿ ಆಚರಿಸುತ್ತಿರುವುದು ಎಷ್ಟನೇ ಸ್ವಾತಂತ್ರ್ಯೋತ್ಸವ? 77 or 78?

KSET updates
ಬೆಂಗಳೂರು1 hour ago

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

Indian Dessert 2024
Latest1 hour ago

Indian Dessert 2024: ವಿಶ್ವದ ಪ್ರಸಿದ್ಧ ʼಸಿಹಿತಿಂಡಿ ತಾಣʼಗಳ ಪಟ್ಟಿಯಲ್ಲಿ ಸ್ಥಾನ ಪಡೆದ 10 ಭಾರತೀಯ ಸ್ವೀಟ್‌ ಸ್ಟಾಲ್‌ಗಳಿವು

Teachers Protest
ಕರ್ನಾಟಕ1 hour ago

Teachers Protest: ಶಿಕ್ಷಕರ ಪ್ರತಿಭಟನೆ; ಬಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌