Site icon Vistara News

Rain News | ಸೇತುವೆ ದಾಟಲು ಹೋಗಿ ಇಬ್ಬರು ನೀರುಪಾಲು; ಶೋಧಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ

rain news

ತುಮಕೂರು: ಇಲ್ಲಿನ ಗುಬ್ಬಿ ತಾಲೂಕಿನಲ್ಲಿ ನಿರಂತರ ಮಳೆಗೆ (Rain News) ಕಲ್ಲೂರು ಕೆರೆ ಕೋಡಿ ಬಿದ್ದಿದೆ. ಇದರ ಅರಿವಿಲ್ಲದೇ ಕಲ್ಲೂರು ಕೆರೆ ಬಳಿ ಸೇತುವೆ ದಾಟಲು ಹೋಗಿ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಹೋದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಲ್ಲೂರಿನ ನಟರಾಜು (32) ಹಾಗೂ ಹನುಮಂತಯ್ಯ(40) ಕೊಚ್ಚಿ ಹೋದವರು.

ನಟರಾಜು, ಹನುಮಂತಯ್ಯ ಇಬ್ಬರು ಪಕ್ಕದ ಗ್ರಾಮದಲ್ಲಿ ಆರ್ಕೆಸ್ಟ್ರಾ ವೀಕ್ಷಣೆ ಮಾಡಿ ಮನೆಗೆ ತೆರಳುತ್ತಿದ್ದರು. ಕಲ್ಲೂರು ಕೆರೆ ಬಳಿಯ ಸೇತುವೆ ದಾಟಲು ಮುಂದಾಗಿದ್ದರೆ, ನೀರಿನ ಪ್ರಮಾಣ ಹೆಚ್ಚಿದ್ದರಿಂದ ಇಬ್ಬರು ಕೆರೆಯಲ್ಲಿ ಕೊಚ್ಚಿ ಹೋಗಿದ್ದಾರೆ.

ಇಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದ್ದು, ಎನ್‌ಡಿಆರ್‌ಎಫ್‌ ತಂಡ (NDRF), ಅಗ್ನಿಶಾಮಕದಳ ಹಾಗೂ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Rain News | ರಾಜ್ಯದಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Exit mobile version