BCM Hostel : ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ; ಇನ್ನೊಬ್ಬ ಅಧಿಕಾರಿ ತಲೆದಂಡ - Vistara News

ತುಮಕೂರು

BCM Hostel : ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ; ಇನ್ನೊಬ್ಬ ಅಧಿಕಾರಿ ತಲೆದಂಡ

BCM Hostel : ತುಮಕೂರಿನ ಬಿಸಿಎಂ ಹಾಸ್ಟೆಲ್‌ಗೆ ಸಿದ್ದಗಂಗಾ ಮಠದಿಂದ ಅಕ್ಕಿ ಪಡೆದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನೇ ವರ್ಗಾವಣೆ ಮಾಡಲಾಗಿದೆ. ಇದು ಪ್ರಕರಣಕ್ಕೆ ಸಂಬಂಧಿಸಿ ಮಾಡಿರುರುವ ಎರಡನೇ ತಲೆದಂಡ.

VISTARANEWS.COM


on

BCM Hostel Case Officer Transfer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ತುಮಕೂರು ಜಿಲ್ಲೆಯ (Tumkur News) ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ (BCM Hostel) ಸಿದ್ಧಗಂಗಾ ಮಠದಿಂದ ಅಕ್ಕಿ (Rice from Siddaganga Matt) ಎರವಲು ಪಡೆದು ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ (Karnataka Government) ಮತ್ತೊಬ್ಬ ಅಧಿಕಾರಿಯ ತಲೆದಂಡ ಪಡೆದಿದೆ. ಮಂಗಳವಾರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿದ್ದ ಸರ್ಕಾರ ಇದೀಗ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಎತ್ತಂಗಡಿ (Office transfer) ಮಾಡಿದೆ. ಅಂದರೆ ಈಗ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಬ್ಬರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಂತಾಗಿದೆ.

ರಾಜ್ಯ ಸರ್ಕಾರ ಸೂಕ್ತ ಪ್ರಮಾಣದಲ್ಲಿ ಅಕ್ಕಿಯನ್ನು ಸರಬರಾಜು ಮಾಡಿದ್ದರೂ ಅದನ್ನು ಸೂಕ್ತ ಸಮಯದಲ್ಲಿ ಬಿಸಿಎಂ ಹಾಸ್ಟೆಲ್‌ ಸರಬರಾಜು ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

BCM Hostel  Anna Bhagya Scheme

ಗಂಗಪ್ಪ ಅವರ ಸ್ಥಾನಕ್ಕೆ ಸೋನಿಯಾ ವರ್ಣೇಕರ್‌

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆಗಿರುವ ಹೇಮಲತಾ ಎಂ. ಅವರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ. ಗಂಗಪ್ಪ ಅ ಮಾತೃ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶ ನೀಡಲಾಗಿದೆ. ಗಂಗಪ್ಪ ಅವರ ಸ್ಥಾನಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿದ್ದ ಸೋನಿಯಾ ವರ್ಣಿಕರ್ ಅವರನ್ನು ನೇಮಕ ಮಾಡಲಾಗಿದೆ.

ಏನಿದು ಪ್ರಕರಣ?

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆಯಲಾಗಿತ್ತು. ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಿಗೆ ಸರ್ಕಾರದಿಂದ ಸಕಾಲಕ್ಕೆ ರೇಷನ್ ಪೂರೈಕೆಯಾಗುತ್ತಿಲ್ಲ. ಆದರೆ, ಮಕ್ಕಳನ್ನು ಹೊಟ್ಟೆಗಿಲ್ಲದೆ ಕೂರಿಸಲು ಸಾಧ್ಯವೇ? ಆ ಸಕಾರಣದಿಂದ ಬಿಸಿಎಂ ಇಲಾಖೆ ಅಧಿಕಾರಿಗಳು ಸಿದ್ದಗಂಗಾ ಮಠದಿಂದ ಅಕ್ಕಿ ದಾಸ್ತಾನು ಸಾಲ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 500 ಚೀಲ ಅಕ್ಕಿಯನ್ನು ಸಾಲವಾಗಿ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು.

ಮಠದ ಆಡಳಿತಾಧಿಕಾರಿ ಸ್ಟಷ್ಟನೆ ಕೊಟ್ಟಿದ್ದರು

ಬಿಸಿಎಂ ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ ಕೊಟ್ಟಿರುವುದು ಹೌದು. ಈಗಾಗಲೇ ಈ ರೀತಿ ಎರಡು ಬಾರಿ ತೆಗೆದುಕೊಂಡು ಹೋಗಿದ್ದಾರೆ. ಒಮ್ಮೆ ವಾಪಸ್‌ ಕೊಟ್ಟಿದ್ದಾರೆ. ಈಗ ವಾಪಸ್‌ ಕೊಡಲಾಗಿದೆಯಾ? ಇಲ್ಲವಾ? ಎಂಬ ಸಂಗತಿ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ. ಉಗ್ರಾಣದಲ್ಲಿ ಈ ಎಲ್ಲ ಮಾಹಿತಿ ಇರುತ್ತದೆ. ನಮ್ಮ ಸಿಬ್ಬಂದಿಗೆ ಈ ವಿಷಯ ಗೊತ್ತಿರುತ್ತದೆ. ಅಕ್ಕಿ ಸಾಲದ ರೂಪದಲ್ಲಿ ಬೇಕು ಎಂದು ಕೇಳಿದಾಗ ಕೊಡಲು ನಾನು ಸೂಚನೆ ನೀಡಿದ್ದೆ. ತರುವಾಯ ಬಂತೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ ಎಂದು ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ : ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ; ಕಲ್ಯಾಣಾಧಿಕಾರಿ ಗೀತಮ್ಮ ತಲೆದಂಡ

ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟನೆ ನೀಡಿದ್ದರು

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ‌ ಅಕ್ಕಿ ಕೊರತೆ ಇಲ್ಲ. ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024: ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

VISTARANEWS.COM


on

SSLC Result 2024 SSLC 2nd and 3rd exam aspirants to have special classes
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಕರ್ನಾಟಕ

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024: ಮಂಡಳಿಯು ಈಗಾಗಲೇ ಪರೀಕ್ಷೆ-1, 2, 3 ರ ಹೊಸ ಮಾದರಿಯನ್ನು ಪರಿಚಯಿಸಿದೆ. ಇದರಿಂದಾಗಿ ಮೊದಲನೆಯ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಉತ್ತೀರ್ಣರಾಗದಿದ್ದರೆ, ಫಲಿತಾಂಶವನ್ನು ಫೇಲ್‌ ಎಂದು ನಮೂದು ಮಾಡಲಾಗುತ್ತಿಲ್ಲ. ಈ ವಿದ್ಯಾರ್ಥಿಗಳಿಗೆ ಬಾಕಿ 2 ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಆ ಪರೀಕ್ಷೆಗಳಲ್ಲಿ ಬರುವ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು. ಹೀಗಾಗಿ ಸದ್ಯಕ್ಕೆ ಯಾರನ್ನೂ ಫೇಲ್‌ ಎಂದು ಪ್ರಕಟಿಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

VISTARANEWS.COM


on

No one has failed in SSLC says Education Department
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಇಷ್ಟಾದರೂ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ. ಅಂದರೆ, ಫಲಿತಾಂಶವನ್ನು ನೋಡಿದ ವಿದ್ಯಾರ್ಥಿಗಳಿಗೆ ಆಘಾತವಾಗದಿರಲು ಕ್ರಮ ಕೈಗೊಳಳಲಾಗಿದೆ. ವಿದ್ಯಾರ್ಥಿಯು ಉತ್ತೀರ್ಣರಾಗದಿದ್ದರೆ, ವಿದ್ಯಾರ್ಥಿಯ ಫಲಿತಾಂಶವನ್ನು NC (Not Completed -ಪೂರ್ಣಗೊಳಿಸಲಾಗಿಲ್ಲ) ಎಂದು ತೋರಿಸಲಾಗುತ್ತದೆ.

ಮಂಡಳಿಯು ಈಗಾಗಲೇ ಪರೀಕ್ಷೆ-1, 2, 3 ರ ಹೊಸ ಮಾದರಿಯನ್ನು ಪರಿಚಯಿಸಿದೆ. ಇದರಿಂದಾಗಿ ಮೊದಲನೆಯ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಉತ್ತೀರ್ಣರಾಗದಿದ್ದರೆ, ವಿದ್ಯಾರ್ಥಿಯ ಫಲಿತಾಂಶವನ್ನು NC-Not Completed (ಪೂರ್ಣಗೊಳಿಸಲಾಗಿಲ್ಲ) ಎಂದು ತೋರಿಸಲಾಗುತ್ತದೆ.

ಇದನ್ನೂ ಓದಿ: SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಈ ವೇಳೆ ಈ ವಿದ್ಯಾರ್ಥಿಗಳಿಗೆ ಬಾಕಿ 2 ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಆ ಪರೀಕ್ಷೆಗಳಲ್ಲಿ ಬರುವ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು. ಹೀಗಾಗಿ ಸದ್ಯಕ್ಕೆ ಯಾರನ್ನೂ ಫೇಲ್‌ ಎಂದು ಪ್ರಕಟಿಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

ಫಲಿತಾಂಶ ಕುಸಿತಕ್ಕೆ ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಇದಕ್ಕೆ ನೂತನವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ವೆಬ್‌ಕಾಸ್ಟಿಂಗ್‌ ಮೂಲಕ ಪರೀಕ್ಷೆ ನಡೆಸಿದ್ದೇ ಕಾರಣ ಎಂದು ಶಿಕ್ಷಣ ಇಲಾಖೆ ಒಪ್ಪಿಕೊಂಡಿದೆ. ಈ ಕಾರಣದಿಂದಾಗಿಯೇ ಗ್ರೇಸ್‌ ಮಾರ್ಕ್ಸ್‌ ಕೊಡುವ ಪ್ರಮೇಯ ಬಂದಿದೆ ಎಂಬುದನ್ನು ಸೂಚ್ಯವಾಗಿ ಹೇಳಿದೆ.

2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಹಾಗಾದರೆ, ಈ ಫಲಿತಾಂಶವು ಏಕಾಏಕಿ ಕುಸಿತ ಕಾಣಲು ಏನು ಎಂಬುದನ್ನು ನೋಡಲು ಹೊರಟರೆ ಶಿಕ್ಷಣ ಇಲಾಖೆಯ ಕಠಿಣ ಕ್ರಮ ಎಂಬುದು ತಿಳಿಯುತ್ತದೆ. ಪ್ರತಿ ವರ್ಷ ಕೆಲವು ಕಡೆ ನಕಲು ಮಾಡಿದ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ತೆಗೆದುಕೊಂಡ ಕ್ರಮವೇ ಇದಕ್ಕೆ ಕಾರಣ ಎಂಬ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಿದೆ.

ಹೀಗಾಗಿ ಈ ಬಾರಿ ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರಿಂದಾಗಿ ಪರೀಕ್ಷಾ ಮೇಲ್ವಿಚಾರಕರು ಸಹ ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸಿದ್ದರು. ಇದರ ಪರಿಣಾಮವಾಗಿ ಒಟ್ಟಾರೆ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ.

ಒಪ್ಪಿಕೊಂಡಿರುವ ಶಿಕ್ಷಣ ಇಲಾಖೆ

ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಗ್ರೇಸ್‌ ಮಾರ್ಕ್ಸ್‌ ನಿರ್ಧಾರವನ್ನು ಕೈಗೊಂಡಿದ್ದಾಗಿ ಶಿಕ್ಷಣ ಇಲಾಖೆ ಹೇಳಿದೆ. ಅಂದರೆ, ನಕಲು ಮಾಡಲು ಸಾಧ್ಯವಾಗದ ಕಾರಣ ಹೆಚ್ಚಿನ ಕಡೆ ಫಲಿತಾಂಶ ಕುಸಿದಿದೆ ಎಂಬುದನ್ನು ಶಿಕ್ಷಣ ಇಲಾಖೆ ಪರೋಕ್ಷವಾಗಿ ಒಪ್ಪಿಕೊಂಡಂತೆ ಆಗಿದೆ. ಇನ್ನು ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

SSLC Result 2024: 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಹಾಗಾದರೆ, ಈ ಫಲಿತಾಂಶವು ಏಕಾಏಕಿ ಕುಸಿತ ಕಾಣಲು ಏನು ಎಂಬುದನ್ನು ನೋಡಲು ಹೊರಟರೆ ಶಿಕ್ಷಣ ಇಲಾಖೆಯ ಕಠಿಣ ಕ್ರಮ ಎಂಬುದು ತಿಳಿಯುತ್ತದೆ.

VISTARANEWS.COM


on

SSLC Result 2024 what is the reason for most of the students fail in SSLC
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಇದಕ್ಕೆ ನೂತನವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ವೆಬ್‌ಕಾಸ್ಟಿಂಗ್‌ ಮೂಲಕ ಪರೀಕ್ಷೆ ನಡೆಸಿದ್ದೇ ಕಾರಣ ಎಂದು ಶಿಕ್ಷಣ ಇಲಾಖೆ ಒಪ್ಪಿಕೊಂಡಿದೆ. ಈ ಕಾರಣದಿಂದಾಗಿಯೇ ಗ್ರೇಸ್‌ ಮಾರ್ಕ್ಸ್‌ ಕೊಡುವ ಪ್ರಮೇಯ ಬಂದಿದೆ ಎಂಬುದನ್ನು ಸೂಚ್ಯವಾಗಿ ಹೇಳಿದೆ.

2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಹಾಗಾದರೆ, ಈ ಫಲಿತಾಂಶವು ಏಕಾಏಕಿ ಕುಸಿತ ಕಾಣಲು ಏನು ಎಂಬುದನ್ನು ನೋಡಲು ಹೊರಟರೆ ಶಿಕ್ಷಣ ಇಲಾಖೆಯ ಕಠಿಣ ಕ್ರಮ ಎಂಬುದು ತಿಳಿಯುತ್ತದೆ. ಪ್ರತಿ ವರ್ಷ ಕೆಲವು ಕಡೆ ನಕಲು ಮಾಡಿದ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ತೆಗೆದುಕೊಂಡ ಕ್ರಮವೇ ಇದಕ್ಕೆ ಕಾರಣ ಎಂಬ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಿದೆ.

ಹೀಗಾಗಿ ಈ ಬಾರಿ ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರಿಂದಾಗಿ ಪರೀಕ್ಷಾ ಮೇಲ್ವಿಚಾರಕರು ಸಹ ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸಿದ್ದರು. ಇದರ ಪರಿಣಾಮವಾಗಿ ಒಟ್ಟಾರೆ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ.

ಒಪ್ಪಿಕೊಂಡಿರುವ ಶಿಕ್ಷಣ ಇಲಾಖೆ

ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಗ್ರೇಸ್‌ ಮಾರ್ಕ್ಸ್‌ ನಿರ್ಧಾರವನ್ನು ಕೈಗೊಂಡಿದ್ದಾಗಿ ಶಿಕ್ಷಣ ಇಲಾಖೆ ಹೇಳಿದೆ. ಅಂದರೆ, ನಕಲು ಮಾಡಲು ಸಾಧ್ಯವಾಗದ ಕಾರಣ ಹೆಚ್ಚಿನ ಕಡೆ ಫಲಿತಾಂಶ ಕುಸಿದಿದೆ ಎಂಬುದನ್ನು ಶಿಕ್ಷಣ ಇಲಾಖೆ ಪರೋಕ್ಷವಾಗಿ ಒಪ್ಪಿಕೊಂಡಂತೆ ಆಗಿದೆ. ಇನ್ನು ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading
Advertisement
Basavanna jayanti
ಧಾರ್ಮಿಕ26 mins ago

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Akshaya Tritiya 2024
ಪ್ರಮುಖ ಸುದ್ದಿ56 mins ago

Akshaya Tritiya 2024: ಸಕಲ ಸಮೃದ್ಧಿಗಳು ಕ್ಷಯಿಸದಂತೆ ಕಾಪಾಡುವ ಅಕ್ಷಯ ತೃತೀಯ

Dina Bhavishya
ಭವಿಷ್ಯ56 mins ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Mureder Case
ಪ್ರಮುಖ ಸುದ್ದಿ4 hours ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು5 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ6 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ7 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ8 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ8 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ56 mins ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ8 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ9 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ10 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ16 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ17 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ17 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು17 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ18 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು19 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌