Site icon Vistara News

Road Accident : ಬೈಕ್‌ನಲ್ಲಿ ತ್ರಿಬಲ್‌ ರೈಡಿಂಗ್‌ ಎಡವಟ್ಟು; ಹಾರಿಹೋಯ್ತು ಸವಾರ ಪ್ರಾಣ

The bike collided with a tipper lorry Rider death

ತುಮಕೂರು: ತ್ರಿಬಲ್‌ ರೈಡಿಂಗ್‌ನಿಂದಾಗಿ ಸವಾರನೊಬ್ಬ (road Accident) ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಹೊಣಗೆರೆ ಗೇಟ್ ಬಳಿ ಅಪಘಾತ ನಡೆದಿದೆ.

ರಂಗಸ್ವಾಮಿ (40) ಮೃತ ದುರ್ದೈವಿ. ರಂಗಸ್ವಾಮಿ ಹಾಗೂ ಅವರ ಮತ್ತಿಬ್ಬರು ಸಹಪಾಠಿಗಳ ಜತೆಗೆ ಒಂದೇ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಸವಾರನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ರಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಸ್ಥಳೀಯರು ಗಾಯಾಳುಗಳನ್ನು ತುರುವೇಕೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Inhuman Behaviour : ಬಾಯ್‌ ಫ್ರೆಂಡ್‌ ಜತೆ ಸೇರಿ ಹೆತ್ತ ಮಗುವಿನ ಮರ್ಮಾಂಗ ಕಚ್ಚಿದಳು ರಾಕ್ಷಸಿ!

ಬೈಕ್‌ – ಟ್ಯಾಂಕರ್‌ ನಡುವೆ ಭೀಕರ ಅಪಘಾತ; ದಂಪತಿ ದಾರುಣ ಮರಣ

ಮೈಸೂರು: ಮೈಸೂರು ಜಿಲ್ಲೆಯ (Mysore News) ಹುಣಸೂರಿನಲ್ಲಿ ಸಂಭವಿಸಿದ ಬೈಕ್‌ ಮತ್ತು ಕ್ಯಾಂಟರ್‌ (Bike-Canter accident) ನಡುವಿನ ಭೀಕರ ಅಪಘಾತದಲ್ಲಿ (Road Accident) ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ (Road accident couple dead). ದಂಪತಿ ಬೈಕ್‌ನಲ್ಲಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಹುಣಸೂರು ಕನಕ ಭವನ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರನ್ನು ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಮತ್ತು ಅವರ ಪತ್ನಿ ಸುನಂದಾ (55) ಎಂದು ಗುರುತಿಸಲಾಗಿದೆ.

ಮಂಜುನಾಥ್‌ ಅವರು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಣಸೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಗೂಡ್ಸ್ ವಾಹನ ಬೈಕ್‌ಗೆ ಬಡಿದಿದೆ. ಅಪಘಾತ ನಡೆಸಿ ವಾಹನ ನಿಲ್ಲಿಸದೆಯೇ ಗೂಡ್ಸ್‌ ಚಾಲಕ ಪರಾರಿಯಾಗಿದ್ದಾನೆ. ಬಳಿಕ ಸಾರ್ವಜನಿಕರೇ ಬೆನ್ನಟ್ಟಿ ವಾಹನವನ್ನು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road accident : ಚಲಿಸುತ್ತಿರುವ ಟಿಪ್ಪರ್ ಲಾರಿ ಕೆಳಗೆ ಬಿದ್ದು ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಜೂಲಪಾಳ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ಗೋಪಾಲಯ್ಯ ಎಂಬವರು ಚಲಿಸುತ್ತಿರುವ ಟಿಪ್ಪರ್‌ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗೋಪಾಲಯ್ಯ ಅವರು ಟಿಪ್ಪರ್‌ನಲ್ಲಿ ಸಾಗುತ್ತಿದ್ದರು. ಆಗ ದುರಂತ ನಡೆದಿದೆ. ಸ್ಥಳಕ್ಕೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೇಟಿ ನೀಡಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್- ಕಾರಿನ ನಡುವೆ ಭೀಕರ ಅಪಘಾತ

ಕೋಲಾರ : ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರೊಂದು ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶಿವಪುರ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಳುಗಳು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರಿನಲ್ಲಿದ್ದವರು ಶ್ರೀನಿವಾಸಪುರ ತಾಲ್ಲೂಕಿನ ರೋಜೊರನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಆಂಧ್ರ ಪ್ರದೇಶದ ಕದರಿಗೆ ಹೋಗಿ ವಾಪಸ್‌ ಸ್ವಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version