Site icon Vistara News

ಡಿವೈಡರ್‌ಗೆ ಬೈಕ್‌ ಡಿಕ್ಕಿ, ಸವಾರ ಸಾವು

divider

ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು ನಗರದ ಶೆಟ್ಟಿಹಳ್ಳಿ ಬಳಿ ಅಪಘಾತ ನಡೆದಿದೆ. ಹೋಂಡಾ ಆ್ಯಕ್ಟಿವಾ ಸ್ಕೂಟರ್‌ ಚಲಾಯಿಸುತ್ತಿದ್ದ ಚಿಕ್ಕನಾಯಕನಹಳ್ಳಿ ತಾಲೂಕಿನ ಶಿಡ್ಲಕಟ್ಟೆಯ ರಂಗಸ್ವಾಮಿ ಎಂಬವರು, ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಘಟನೆ ನಡೆದಿದೆ. ಇವರು ತುಮಕೂರಿನ ಒಂದು ಪೆಟ್ರೋಲ್ ಬಂಕ್‌ನಲ್ಲಿ ‌ಕೆಲಸ ನಿರ್ವಹಿಸುತ್ತಿದ್ದರು. ತುಮಕೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version