ಸಿದ್ದರಾಮಯ್ಯ- ಈಶ್ವರಪ್ಪ ಬಣಗಳ ನಡುವೆ ಮಾತಿನ ಚಕಮಕಿ - Vistara News

ತುಮಕೂರು

ಸಿದ್ದರಾಮಯ್ಯ- ಈಶ್ವರಪ್ಪ ಬಣಗಳ ನಡುವೆ ಮಾತಿನ ಚಕಮಕಿ

ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಯಿತು ಈ ವೇಳೆ ಸಿದ್ದರಾಮಯ್ಯ ಹಾಗೂ ಈಶ್ವರಪ್ಪ ನಾಯಕರ ಬಣಗಳ ನಡುವೆ ವಾಗ್ದಾಳಿ ನಡೆಯಿತು. ಎರಡು ಬಣಗಳು ನಡುವೆ ಡ್ರಾಮಾ ನಡೆಯಿತು.

VISTARANEWS.COM


on

sidramaya and ishwarappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಶನಿವಾರ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆದ ಸಂದರ್ಭ, ಸಿದ್ದರಾಮಯ್ಯ ಹಾಗೂ ಈಶ್ವರಪ್ಪ ಪರ ಬಣಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಒಂದೇ ಬಣದ ಕೆಲವು ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದಕ್ಕೆ ಎರಡು ಬಣಗಳ ನಡುವೆ ಕಿತ್ತಾಟ ಉಂಟಾಯಿತು. ಈಶ್ವರಪ್ಪನವರನ್ನು ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಆಹ್ವಾನಿಸಲಾಗಿದೆ, ಈಶ್ವರಪ್ಪ ಅವರನ್ನು ಉಪೇಕ್ಷೆ ಮಾಡಲಾಗಿದೆ ಎಂದು ಈಶ್ವರಪ್ಪ ಬಣ ಆರೋಪಿಸಿತು. ಸುದ್ದಿಗೋಷ್ಠಿ ಬಳಿಕ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಕೈ ಕೈ ಮಿಲಾಯಿಕೊಳ್ಳುವ ಹಂತಕ್ಕೆ ಹೋಯಿತು.

ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ, ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರೆಯುತ್ತೇವೆ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದರು.

ರಾಮಚಂದ್ರಪ್ಪರ ಹೇಳಿಕೆಯಿಂದ ಇನ್ನಷ್ಟು ಕೆರಳಿದ ಪಂಗಡ ನಾಯಕರು ಹೋಟೆಲ್‌ನ ಮುಂಭಾಗದಲ್ಲಿ ನಡುರಸ್ತೆಯಲ್ಲಿ ಜಗಳಕ್ಕೆ ನಿಂತರು. ಆಗ ಎರಡು ಬಣಗಳ ನಡುವೆ ಕಿತ್ತಾಟದ ಹೈಡ್ರಾಮಾ ನಡೆಯಿತು.

ಇದನ್ನೂ ಓದಿ| ಇವತ್ತು ಹೆಡ್ಗೆವಾರ್‌ ಪಠ್ಯ, ನಾಳೆ ಗೋಡ್ಸೆ ಪಠ್ಯ: ಸಿದ್ದರಾಮಯ್ಯ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

SSLC Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಶಿರಾ ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಶಿರಾ ತಾಲೂಕು ಘಟಕ ಹಾಗೂ ಶಿರಾದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

felicitation programme for SSLC student Harshita D M who got 2nd place in the state
Koo

ಶಿರಾ: ಪರೀಕ್ಷೆಯಲ್ಲಿ (SSLC Result 2024) ಹೆಚ್ಚು ಅಂಕ ಪಡೆದು ಶಾಲೆಗೆ ಮತ್ತು ಪಾಲಕರಿಗೆ ಕೀರ್ತಿ ತರುವುದು ಹೆಮ್ಮೆಯ ಸಂಗತಿ. ಜತೆಗೆ ವಿದ್ಯಾರ್ಥಿಗಳ ಯಶಸ್ಸಿಗೆ ಶ್ರಮಿಸಿದ ಶಿಕ್ಷಕ ವೃಂದ ಹಾಗೂ ಪಾಲಕರ ಕಾರ್ಯವೂ ಶ್ಲಾಘನೀಯವಾದುದು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಘಟಕದ ಅಧ್ಯಕ್ಷ ದೊಡ್ಡ ಸಿದ್ದಪ್ಪ ತಿಳಿಸಿದರು.

ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಸನ್ಮಾನಿಸಿ, ಬಳಿಕ ಅವರು ಮಾತನಾಡಿದರು.

ದೃಢ ನಿರ್ಧಾರ ಮತ್ತು ಅಚಲವಾದ ನಂಬಿಕೆ ಯಶಸ್ಸಿನ ಮೆಟ್ಟಿಲುಗಳಾಗಿವೆ. ಜೀವನದಲ್ಲಿ ದೃಢ ನಿರ್ಧಾರ ತಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಶ್ರೀ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮೇಶ್ ಬಾಬು ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಜತೆಗೆ ಶಾಲೆಗೆ ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಶಿಕ್ಷಕರು ಪ್ರಸಕ್ತ ವರ್ಷದಲ್ಲಿಯೂ ಉತ್ತಮ ಫಲಿತಾಂಶ ನೀಡುವ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಕಾರ್ಯದರ್ಶಿ ಕೋಟೆ ಚಂದ್ರಶೇಖರ್, ಖಜಾಂಚಿ ಮಂಜುಶ್ರೀ ಮಹಾಲಿಂಗಪ್ಪ, ವಾಸವಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸುರೇಶ್ ಬಾಬು, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಖಜಾಂಚಿ ಚಂದ್ರಶೇಖರ್ ಬಾಬು, ನಿರ್ದೇಶಕರುಗಳಾದ ರಚಿತಾ ನಾಗಾರ್ಜುನ್, ಶ್ರೀಕಾಂತ್, ರಾಧಾಕೃಷ್ಣ, ವಿಜಯ್, ಜಗದೀಶ್, ಯಶೋದ ಸುರೇಶ್, ನಾಗಲಕ್ಷ್ಮಿ, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಜಯನಾರಾಯಣ, ಮಂಜುನಾಥ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕ್ರೈಂ

Dead Body Found : ಡ್ಯಾಂನಲ್ಲಿ ಬಿದ್ದಿತ್ತು ವ್ಯಕ್ತಿ ಶವ; ರೈಲು ಬೋಗಿ ಒಳಗೆ ಕೊಳೆಯುತ್ತಿತ್ತು ಮಹಿಳೆಯ ಡೆಡ್‌ಬಾಡಿ

Dead Body Found : ಪ್ರತ್ಯೇಕ ಕಡೆಗಳಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ತುಮಕೂರಿನಲ್ಲಿ ಬೋರನಕಣಿವೆ ಡ್ಯಾಂನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾದರೆ, ವಿಜಯನಗರದಲ್ಲಿ ರೈಲು ಬೋಗಿಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Dead Body Found
Koo

ತುಮಕೂರು/ವಿಜಯನಗರ : ಬೋರನಕಣಿವೆ ಡ್ಯಾಂನಲ್ಲಿ ವ್ಯಕ್ತಿಯ ಮೃತದೇಹ (Dead Body Found) ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಡ್ಯಾಂನಲ್ಲಿ ಘಟನೆ ನಡೆದಿದೆ. ಸುಮಾರು 45 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದ್ದು, ಗುರುತು ಪತ್ತೆಯಾಗಿಲ್ಲ.

ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Dead Body Found

ಇತ್ತ ದುರಸ್ತಿಗಾಗಿ ಬಿಟ್ಟಿದ್ದ ರೈಲು ಬೋಗಿ ಒಳಗೆ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ವಿಜಯನಗರದ ಹೊಸಪೇಟೆ ರೈಲು ನಿಲ್ದಾಣದ ಬಳಿ ಕಂಡಮ್ಡ್ ಕೋಚ್‌ನಲ್ಲಿ ಶವ ಪತ್ತೆಯಾಗಿದೆ. ಒಂದು ವಾರದ ಹಿಂದೆ ರೈಲು ಬೋಗಿಯಲ್ಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ರೈಲು ಬೋಗಿಯಲ್ಲಿ ಕೆಟ್ಟ ವಾಸನೆ ಬಂದ ಬಳಿಕ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರೈಲ್ವೆ ಪೊಲೀಸರು ಇದು ಕೊಲೆ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ತನಿಖೆ‌ ಕೈಗೊಂಡಿದ್ದಾರೆ. ಬಳ್ಳಾರಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Dead Body Found

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

ಬೆಂಗಳೂರು: ನಟ ಶೇಖರ್ ಸುಮನ್ (Shekhar Suman) ಅವರು ಲೈಂಗಿಕ ಕಾರ್ಯಕರ್ತರು ಮತ್ತು ವೇಶ್ಯೆಯರ ನಡುವಿನ ವ್ಯತ್ಯಾಸದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇವರ ಸಮಾಜದ ಉತ್ಪನ್ನಗಳು ಮತ್ತು ಅವರನ್ನು ಒಟ್ಟಿಗೆ ವರ್ಗೀಕರಿಸಬಾರದು ಎಂದು ಸಂದರ್ಶನದಲ್ಲಿ ಹೇಳಿದರು. ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.

“ವೇಶ್ಯೆಯರನ್ನು ಈ ರೀತಿ ಲೈಂಗಿಕ ಕಾರ್ಯಕರ್ತೆಯರೆಂದು ತೋರಿಸುವಂತೆ ಮಾಡಿದ್ದು ಸಮಾಜವೇ. ಯಾವುದೇ ಮಹಿಳೆ ಆಯ್ಕೆಯಿಂದ ವೇಶ್ಯೆಯಾಗುವುದಿಲ್ಲ. ಆದರೆ ಸಂದರ್ಭಗಳು ಹೆಚ್ಚಾಗಿ ಮಹಿಳೆಯನ್ನು ಲೈಂಗಿಕ ಕಾರ್ಯಕರ್ತೆಯಾಗುವಂತೆ ಮಾಡುತ್ತವೆ. ಈ ಎಲ್ಲದರ ಹೊರತಾಗಿಯೂ, ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ಪುರುಷರ ಲೈಂಗಿಕ ಹಸಿವನ್ನು ಲೈಂಗಿಕ ಕಾರ್ಯಕರ್ತರಿಂದ ನೀಗಿಸಿಕೊಳ್ಳುತ್ತಿದ್ದಾರೆʼʼಎಂದರು.

ಶೇಖರ್ ಸುಮನ್ ಮಾತನಾಡಿ ʻʻಹೀರಾಮಂಡಿಯಲ್ಲಿ ಜನರು ಕಲೆ ಮತ್ತು ಸಂಗೀತದಂತಹ ವಿವಿಧ ಕೌಶಲ್ಯಗಳನ್ನು ಕಲಿಯಲು ಹೋದ ಸ್ಥಳವಾಗಿತ್ತು. ಮಕ್ಕಳನ್ನು ಅಲ್ಲಿಗೆ ಕಳುಹಿಸಲಾಗುತ್ತಿತ್ತು. ನವಾಬರು ಅವರಿಂದ ಅನೇಕ ವಿಚಾರಗಳನ್ನು ಕಲಿಯುತ್ತಿದ್ದರು. ಹೀರಾಮಂಡಿಯವರ ಕೊಡುಗೆ ಅಪಾರವಾಗಿತ್ತು, ಅದೊಂದು ಸಂಸ್ಥೆಯಾಗಿತ್ತು, ಆದರೆ ನಾವು ಯಾವಾಗಲೂ ವೇಶ್ಯೆಯರನ್ನು ವಿಭಿನ್ನ ಅರ್ಥದಲ್ಲಿ ನೋಡುತ್ತಿದ್ದೇವು. ಹೀರಾಮಂಡಿಯಲ್ಲಿ, ಸ್ವಾತಂತ್ರ್ಯ ಚಳವಳಿಗೆ ವೇಶ್ಯೆಯರ ಕೊಡುಗೆಯನ್ನು ಸಹ ತೋರಿಸಲಾಗಿದೆʼʼಎಂದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಶೇಖರ್ ಸುಮನ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಟ ಶೇಖರ್‌ ಸುಮನ್‌(Shekhar Suman) ಕೆಲವು ದಿನಗಳ ಹಿಂದೆ ಬಿಜೆಪಿ(BJP). ಸೇರ್ಪಡೆಗೊಂಡಿದ್ದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶೇಖರ್‌ ಸುಮನ್‌ ಮತ್ತು ರಾಧಿಕಾರನ್ನು ಬಿಜೆಪಿ ಪ್ರಧಾನ ಕಾರ್ಯಕದರ್ಶಿ ವಿನೋದ್‌ ತಾವ್ಡೆ ಸ್ವಾಗತಿಸಿದ್ದರು.

ಈ ವೇಳೆ ಶೇಖರ್‌ ಸುಮನ್‌ ಮಾತನಾಡಿದ್ದು, ನಿನ್ನೆಯವರೆಗೆ ನಾನು ಇಲ್ಲಿ ಬಂದು ಕೂರುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ. ಜೀವನದಲ್ಲಿ ನಡೆದ ಅನೇಕ ಘಟನೆಗಳಿಂದಾಗಿ ನಾನು ಇಂದು ಇಲ್ಲಿ ಬಂದಿದ್ದೇನೆ. ಬಹಳ ಧನಾತ್ಮಕ ಚಿಂತನೆಯೊಂದಿಗೆ ನಾನು ಇಲ್ಲಿ ಬಂದಿದ್ದೇನೆ. ಇಲ್ಲಿ ಬರಲು ಪ್ರೇರೇಪಿಸಿದ ದೇವರಿಗೆ ನಾನು ಆಭಾರಿ ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
ದೇಶ9 mins ago

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

POK Explainer in Kannada
ರಾಜಕೀಯ9 mins ago

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

Vijay Surya changes his name on mothers day
ಕಿರುತೆರೆ13 mins ago

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

gold rate today 34
ಚಿನ್ನದ ದರ34 mins ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Shilpa Shetty sister Shamita visit Kedarnath with their mother
ಬಾಲಿವುಡ್38 mins ago

Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

Drowned in water
ಮೈಸೂರು46 mins ago

Drowned in Water : ತಲಕಾಡು ಪ್ರವಾಸಕ್ಕೆ ಹೋದ ಯುವತಿ ‌ನೀರಿನಲ್ಲಿ ಮುಳುಗಿ ಸಾವು

Murder case Hacked to death with sickle for stepping into a field with an injection order
ಕರ್ನಾಟಕ48 mins ago

Murder case: ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

Narendra Modi
ದೇಶ54 mins ago

Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

CBSE 12th results 2024
ಪ್ರಮುಖ ಸುದ್ದಿ1 hour ago

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ವಿದೇಶ2 hours ago

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ7 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ8 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ19 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ20 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌