Site icon Vistara News

Suicide Case | ಕೌಟುಂಬಿಕ ಕಲಹ, ಮಗನೊಂದಿಗೆ ಕೆರೆಗೆ ಹಾರಿದ ತಾಯಿ; ಬಾಲಕ ಸಾವು

Suicide Case

ತುಮಕೂರು: ಕೌಟುಂಬಿಕ ಕಲಹಕ್ಕೆ ಮನನೊಂದು ೫ ವರ್ಷದ ಮಗನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ (Suicide Case) ಮಾಡಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದು, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಶಿವಕುಮಾರ್(5) ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ. ಕುಣಿಗಲ್ ತಾಲೂಕಿನ ಮಾಗಡಿಪಾಳ್ಯದ ನಿವಾಸಿ ವಿಜಯಲಕ್ಷ್ಮಿ ಪ್ರಾಣಾಪಾಯದಿಂದ ಪಾರಾದ ಮಹಿಳೆ. ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆ ತನ್ನ ಮಗನೊಂದಿಗೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಕೆರೆಗೆ ಬುಧವಾರ ಹಾರಿದ್ದಾಳೆ. ಕೆರೆಯಲ್ಲಿ ಬಿದ್ದು ಇಬ್ಬರೂ ಒದ್ದಾಡುತ್ತಿದ್ದಾಗ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ಇದಕ್ಕೂ ಮೊದಲೇ ಬಾಲಕ ನೀರಿನಲ್ಲಿ ಮುಳುಗಿದ್ದರಿಂದ ಮೃತಪಟ್ಟಿದ್ದಾನೆ.

ಮಹಿಳೆಯನ್ನು ರಕ್ಷಿಸಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Road accident | ತುಮಕೂರಿನಲ್ಲಿ ಅಪಘಾತಗಳ ಸರಮಾಲೆ: 24 ಗಂಟೆ ಅವಧಿಯಲ್ಲಿ ಒಂಬತ್ತು ಮಂದಿ ಬಲಿ

Exit mobile version