Suspicious Death : ಮನೆಯೊಳಗೆ ನೇತಾಡುತ್ತಿತ್ತು ಗ್ರಾಪಂ ಸದಸ್ಯೆ ಶವ; ಕೊಲೆಯೋ? ಆತ್ಮಹತ್ಯೆಯೋ? - Vistara News

ಕರ್ನಾಟಕ

Suspicious Death : ಮನೆಯೊಳಗೆ ನೇತಾಡುತ್ತಿತ್ತು ಗ್ರಾಪಂ ಸದಸ್ಯೆ ಶವ; ಕೊಲೆಯೋ? ಆತ್ಮಹತ್ಯೆಯೋ?

Suspicious Death: ತುಮಕೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾ.ಪಂ ಸದಸ್ಯೆ ಮೃತದೇಹವು ಪತ್ತೆಯಾಗಿದ್ದು, ಕುಟುಂಬಸ್ಥರು ಸಾವಿನ ಕುರಿತು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Hirehalli gram panchayat member found dead under mysterious circumstances
ಮೃತ ಭಾಗ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಅನುಮಾನಾಸ್ಪದವಾಗಿ ಗ್ರಾಮ ಪಂಚಾಯತ್‌ನ ಸದಸ್ಯೆ (Suspicious Death) ಮೃತಪಟ್ಟಿದ್ದಾರೆ. ತುಮಕೂರು ತಾಲೂಕಿನ ಸಂಗಾಪುರದ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಭಾಗ್ಯ (30) ಮೃತ ದುರ್ದೈವಿ.

ಭಾಗ್ಯ ಹಿರೇಹಳ್ಳಿ ಗ್ರಾಮ ಪಂ‌ಚಾಯತ್‌ನ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದರು. ಕಳೆದ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಭಾಗ್ಯಳ ಶವ ಪತ್ತೆಯಾಗಿದೆ. ಆದರೆ ಭಾಗ್ಯಳ ಸಂಬಂಧಿಕರು ಈ ಸಾವಿನ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ದುರ್ಬಲವಾಗಿರಲಿಲ್ಲ ಎಂದಿದ್ದಾರೆ.

ಸದ್ಯ ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಗ್ಯಳ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತಿಳಿಯಲು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Namma Metro : ಹಳದಿ ಲೈನ್‌ ಮೆಟ್ರೋ ಕಾರ್ಯಾರಂಭ ಮತ್ತೆ ವಿಳಂಬ; ಕಾರಣ ಚೀನಾ!

ಕಾಮುಕ ಅಣ್ಣನಿಂದಲೇ ಅತ್ಯಾಚಾರ; ಮಗುವಿಗೆ ಜನ್ಮ ನೀಡಿದ 15ರ ಬಾಲಕಿ

ಕಲಬುರಗಿ: 10ನೇ ತರಗತಿಯಲ್ಲಿ ಕಲಿಯುತ್ತಿರುವ 15 ವರ್ಷದ ಬಾಲಕಿಯೊಬ್ಬಳು (15 Year old girl) ಗಂಡು ಮಗುವಿಗೆ ಜನ್ಮ (Girl gives birth to boy child) ನೀಡಿದ ಘಟನೆ ಕಲಬುರಗಿ ಜಿಲ್ಲೆಯ (Kalaburagi News) ಅಳಂದದಲ್ಲಿ ಸಂಭವಿಸಿದೆ. ಆಕೆ ಅತ್ಯಾಚಾರಕ್ಕೆ ಒಳಗಾಗಿ (Physical Abuse) ಈ ಸಮಸ್ಯೆ ಎದುರಿಸಿದ್ದಾಳೆ. ದುರಂತವೆಂದರೆ ಆಕೆಯನ್ನು ಹಾಗೆ ಬಳಸಿಕೊಂಡದ್ದು ಬೇರೆ ಯಾರೂ ಅಲ್ಲ.. ಅವಳ ಅಣ್ಣನೇ ಈ ಕಾಮುಕ!

ಆಳಂದ ತಾಲೂಕಿನ ವಾಸಿಯಾಗಿರುವ ಈ ಯುವತಿ ಗರ್ಭ ಧರಿಸಲು ಆಕೆಯ ಅಣ್ಣನೇ ಕಾರಣ ಎಂದು ಹೇಳಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಅಣ್ಣ ಎಂದರೆ ಅವರು ಒಡಹುಟ್ಟಿದವನೇನೂ ಅಲ್ಲ. ಬದಲಾಗಿ ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದ ದೊಡ್ಡಪ್ಪನ ಮಗನೇ ಆಕೆಯನ್ನು ಈ ರೀತಿಯಾಗಿ ಬಳಸಿಕೊಂಡು ಗರ್ಭಿಣಿಯಾಗಿ ಮಾಡಿದ್ದು.

ಈ ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯಲ್ಲಿ ವಾಸವಾಗಿದ್ದು ಓದು ಮುಂದುವರಿಸಿದ್ದಳು. ಶಾಲೆಗೆ ರಜೆ ಇದ್ದಾಗ ಮಾತ್ರ ಮನೆಗೆ ಬರುತ್ತಿದ್ದಳು. ಅವರದು ಕೂಡು ಕುಟುಂಬ. ಆಕೆ ಮನೆಗೆ ಬಂದಾಗಲೆಲ್ಲ ಆಕೆಯ ಅಣ್ಣನ ಮಗ ಆಕೆಯನ್ನು ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ.

ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ ಮೇಲೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಕಳೆದ ಏಪ್ರಿಲ್‌ ತಿಂಗಳಲ್ಲಿ ಆಕೆ ರಜೆಯಲ್ಲಿ ಮನೆಗೆ ಬಂದಿದ್ದಾಗ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಆಕೆ ಯಾರಿಗೂ ಈ ವಿಚಾರವನ್ನು ಹೇಳಿರಲಿಲ್ಲ.

ಇದನ್ನೂ ಓದಿ : Hanagal Case: ಹಾನಗಲ್‌ ಅತ್ಯಾಚಾರ ಕೇಸ್‌ ಮುಚ್ಚಿ ಹಾಕಲು ಲೈಸೆನ್ಸ್‌ ಕೊಟ್ಟ ಸಿದ್ದರಾಮಯ್ಯ; ಬೊಮ್ಮಾಯಿ ಕಿಡಿ

ಗರ್ಭಿಣಿಯಾದರೂ ಯಾರಿಗೂ ಗೊತ್ತಾಗಿರಲಿಲ್ಲ!

ಈ ನಡುವೆ ಆಕೆ ಗರ್ಭಿಣಿಯಾಗಿದ್ದಳು. ಆದರೆ ಆಕೆ ಗರ್ಭಿಣಿಯಾಗಿದ್ದು ಯಾರಿಗೂ ಗೊತ್ತಾಗಿರಲಿಲ್ಲ. ಡಿಸೆಂಬರ್‌ 24ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು‌ ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ‌ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು. ಚಿಕಿತ್ಸೆಗೆ ದಾಖಲು ಮಾಡುತ್ತಿದ್ದಂತೆಯೇ ಆಕೆ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾಳೆ.

ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್‌ ಆಗಿದ್ದಾರೆ. ಯಾಕೆಂದರೆ ಅವರ‍್ಯಾರಿಗೂ ಅದರ ಸುಳಿವೇ ಇರಲಿಲ್ಲ. ಯುವತಿ ಮೊದಲೇ ಸ್ವಲ್ಪ ದಪ್ಪ ಇದ್ದಿದ್ದರಿಂದ ಆಕೆಯ ಹೊಟ್ಟೆ ದಪ್ಪ ಆಗಿದ್ದು ಯಾರ ಅರಿವಿಗೂ ಬಂದಿರಲಿಲ್ಲ. ಆಕೆ ಮನೆಯಲ್ಲಿ ಇಲ್ಲದೆ ಹಾಸ್ಟೆಲ್‌ನಲ್ಲಿ ಇದ್ದಿದ್ದರಿಂದ ಮಾಸಿಕ ಋತುಸ್ರಾವ ಆಕೆಗಿದೆಯೇ ಇಲ್ಲವೇ ಎನ್ನುವುದು ಕೂಡಾ ಅವರ ಅವರಿಗೆ ಬಂದಿರಲಿಲ್ಲ. ಹಾಸ್ಟೆಲ್‌ನಲ್ಲಿ ಅದನ್ನೆಲ್ಲ ಯಾರೂ ಸೂಕ್ಷ್ಮವಾಗಿ ಗಮನಿಸಿರಲಿಲ್ಲ.

ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ವಿಷಯವನ್ನು ತಿಳಿಸಿದ್ದು, ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದಾಗ ಅಣ್ಣನಿಂದಲೇ ಆಕೆ ಅತ್ಯಾಚಾರಕ್ಕೆ ಒಳಗಾಗಿದ್ದು ಬಯಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

Karnataka Rain News: ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

VISTARANEWS.COM


on

shiradi ghat train karnataka rian news
Koo

ಹಾಸನ: ಹಾಸನ ಜಿಲ್ಲೆಯ (Hassan news) ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ (Karnataka Rain News) ಮುಂದುವರಿದಿದ್ದು, ಶಿರಾಡಿ ಘಾಟಿಯ (Shiradi Ghat) ರೈಲ್ವೆ ಹಳಿಯ (Railway Track) ಮೇಲೆ ಮಣ್ಣು ಕುಸಿತ (landslide) ಆಗಿದೆ. ಸಕಲೇಶಪುರ (Sakaleshpur) ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದು, ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್ (Trains cancelled) ಮಾಡಲಾಗಿದೆ. ಜೊತೆಗೆ ಶಾಂತಿಗ್ರಾಮ ಬಳಿ ಚಲಿಸುತ್ತಿರುವ ರೈಲಿನ ಮೇಲೆಯೇ ಮಣ್ಣು ಕುಸಿತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರಿ ಅಪಾಯ ತಪ್ಪಿದೆ.

ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

ನಿನ್ನೆ ಸಂಜೆಯಿಂದ ಹಳಿ ದುರಸ್ತಿ ಹಾಗು ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರು ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗು ಗೂಡ್ಸ್ ರೈಲು ಸಂಚಾರ ರದ್ದುಪಡಿಸಲಾಗಿದ್ದು, ರೈಲ್ವೆ ಇಲಾಖೆ ನಿನ್ನೆ ರೈಲಿನಲ್ಲಿ ಸಿಲುಕಿದ್ದವರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಹಿನ್ನೆಲೆಯಲ್ಲಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.

ಶಿರಾಡಿಘಾಟ್ ಬಳಿಕ ಶಾಂತಿಗ್ರಾಮ ಬಳಿಯೂ ರೈಲ್ವೆ ಟ್ರ್ಯಾಕ್ ಮೇಲೆ ಗುಡ್ಡ ಕುಸಿದಿದೆ. ಗೂಡ್ಸ್ ರೈಲು ಚಲಿಸುವಾಗಲೇ ಗುಡ್ಡ ಕುಸಿತವಾಗಿದ್ದು, ರೈಲಿನ ಬೋಗಿ ಹಳಿ ತಪ್ಪಿದೆ. ಇಂದು ಮುಂಜಾನೆ 5.45ರ ಸುಮಾರಿಗೆ ಹಳಿ ಮೇಲೆ ಮಣ್ಣು ಕುಸಿದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು ತೆರವುಗೊಳಿಸಿದ ಸಿಬ್ಬಂದಿ ರೈಲು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಹಾಸನ- ಬೆಂಗಳೂರು, ಬೆಂಗಳೂರು- ಹಾಸನ ರೈಲುಗಳ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಮಣ್ಣು ತೆರವು ಬಳಿಕ ಹಾಸನ ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಪುನಾರಂಭವಾಗಲಿದೆ.

ಸಕಲೇಶಪುರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ಜನ, ವಾಹನಗಳು ಪರದಾಡಿದ್ದಾರೆ. ಸಕಲೇಶಪುರ ತಾಲೂಕಿನ‌ ಹಾನುಬಾಳು ಹೋಬಳಿಯ ಹಾನುಬಾಳು- ವೆಂಕಟಹಳ್ಳಿ- ರಾಗಿಗುಂಡಿ- ಅಗ್ನಿ ರಸ್ತೆ ಸಂಪರ್ಕ ಕಡಿತವಾಗಿದೆ. ರಸ್ತೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡಿದರು. ಇಲ್ಲಿಗೆ ಸೇತುವೆ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರು ಹಿಂದಿನಿಂದಲೂ ಆಗ್ರಹಿಸುತ್ತಿದ್ದಾರೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Continue Reading

ಬೆಂಗಳೂರು

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

UGCET 2024 ; ಮೊದಲೇ ಸುತ್ತಿನ ಸೀಟು ಹಂಚಿಕೆ ಚಟುವಟಿಕೆ ಶುರುವಾಗಿದ್ದು, ಯುಜಿಸಿಇಟಿ- 2024ರ ಆಪ್ಶನ್ ಎಂಟ್ರಿ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

VISTARANEWS.COM


on

By

UGCET 2024 seat allotment process begins Only a few days left for the option to enter
Koo

ಬೆಂಗಳೂರು: ಯುಜಿಸಿಇಟಿ-24ರ (UGCET 2024) ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಳು ದಿನ ಅವಕಾಶ ನೀಡಿತ್ತು. ಅದರಲ್ಲಿ ಐದು ದಿನಗಳು ಈಗಾಗಲೇ ಮುಗಿದಿದ್ದು, ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಜುಲೈ 23ರಿಂದ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಇಚ್ಛೆಗಳನ್ನು ದಾಖಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದರು.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿತ್ತು. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದಾಗಿದೆ.

ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಯ್ಕೆ/ಇಚ್ಛೆಗಳ ದಾಖಲೆಗೆ ನಿಗದಿಪಡಿಸಿದ ಕೊನೆ ದಿನದ ನಂತರ ಮೂರು ದಿನಗಳ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ‌ ನೀಡಲಾಗುತ್ತದೆ. ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಇಂದಿಗೆ ಐದು ದಿನಗಳು ಮುಗಿದಿದ್ದು, ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ವೈದ್ಯಕೀಯ ಕೋರ್ಸುಗಳು:

ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಶನ್‌ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಆನ್‌ಲೈನ್‌ ವೆರಿಫಿಕೇಶನ್‌

ಯುಜಿಸಿಇಟಿ-2024ಕ್ಕೆ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್‌ ಮೂಲಕ ಪರಿಶೀಲನೆ ಮಾಡಿ, ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಪರಿಶೀಲಿಸಿಕೊಳ್ಳಲು ಜು.29ರಂದು ಅಭ್ಯರ್ಥಿಗಳಿಗೆ ಸೂಚಿಸಲಾಗಿತ್ತು. ಜತೆಗೆ ಅರ್ಜಿಯಲ್ಲಿನ ವಿವರಗಳು ತಪ್ಪಾಗಿದ್ದಲ್ಲಿ ಸರಿಪಡಿಸಿಕೊಳ್ಳಲು ಅಂತಿಮ ಅವಕಾಶ ನೀಡಿ ಆಫ್‌ಲೈನ್‌ ದಾಖಲೆಗಳ ಪರಿಶೀಲನೆಗೆ ಕಳೆದ ಜು.4ರಿಂದ 6ವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಜು.18ರಂದು ವೆರಿಫಿಕೇಶನ್‌ ಸ್ಲಿಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್‌ ನೀಡಲಾಗಿತ್ತು. ಇದನ್ನೂ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇಂದೇ ಕೊನೆ ದಿನ

ಡಿಸಿಇಟಿ-2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಅಛಿ ಆಯ್ಕೆಗೆ, ಚಲನ್ ಡೌನ್‌ಲೋಡ್, ಶುಲ್ಕ ಪಾವತಿ ಮತ್ತು ಕಾಲೇಜಿನಲ್ಲಿ ಪ್ರವೇಶ ಪಡೆಯಲು ದಿನಾಂಕವನ್ನು ವಿಸ್ತರಿಸಲಾಗಿತ್ತು. ಜತೆಗೆ ದಿನಾಂಕಗಳನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿತ್ತು.

ಅದರಂತೆ ಅಛಿ ಗಳನ್ನು ಆಯ್ಕೆ ಮಾಡಲು ನಿನ್ನೆ 26ರ ಮಧ್ಯಾಹ್ನ 1ರ ವರೆಗೆ ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಳ್ಳಲು 2 ರವರೆಗೆ, ಶುಲ್ಕ ಪಾವತಿ ಮಾಡಲು ಸಂಜೆ 4 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ದಿನ ಅಂದರೆ 27ರ ಮಧ್ಯಾಹ್ನ 1ರ ವರೆಗೆ ಅಛಿ-1 ಆಯ್ಕೆ ಮಾಡಿ, ಶುಲ್ಕ ಪಾವತಿಸಿ ಮತ್ತು ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಂಜೆ 4.30 ರವರೆಗೆ ಅವಕಾಶವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Illicit Relationship: ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು.

VISTARANEWS.COM


on

illicit relationship raichur siravara
ದೂರು ನೀಡಿದ ಪ್ಯಾರಿ ಬೇಗಂ, ಆರೋಪಿಗಳಾದ ರಾಜ್‌ ಮೊಹಮ್ಮದ್‌, ಸರಳಾ
Koo

ರಾಯಚೂರು: ವಿಚ್ಛೇದಿತ ನರ್ಸ್‌ ಒಬ್ಬಾಕೆಯೊಂದಿಗೆ ಲವ್ವಿ ಡವ್ವಿ (Illicit Relationship) ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ (Police constable) ಒಬ್ಬಾತನಿಗೆ ಆತನ ಪತ್ನಿ ಕಾನೂನು ಅಸ್ತ್ರದ ಮೂಲಕ ಪಾಠ ಕಲಿಸಲು ಮುಂದಾಗಿದ್ದಾರೆ. ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. ರಾಜ್ ಮಹಮ್ಮದ್ ಮತ್ತು ಪ್ಯಾರಿ‌ ಬೇಗಂ ಪ್ರೀತಿಸಿ ಮದುವೆಯಾದವರು. ಆದರೆ ಇತ್ತೀಚೆಗೆ ರಾಜ್‌ ಮಹಮ್ಮದ್‌ ಇನ್ನೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ.

ಕವಿತಾ ಆಸ್ಪತ್ರೆ ನರ್ಸ್ ಸರಳ ಎಂಬಾಕೆಯ ಜೊತೆ ಸುಮಾರು 4-5 ವರ್ಷಗಳಿಂದ ವಿವಾಹೇತರ ಸಂಬಂಧ ನಡೆಸಿದ್ದ. ಇವರಿಬ್ಬರನ್ನೂ ಮನೆಯೊಂದರಲ್ಲಿ ರೆಡ್ ಹ್ಯಾಂಡ್ ಆಗಿ ಪ್ಯಾರಿ ಬೇಗಂ ಹಿಡಿದಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿ ಪತಿ ವಿರುದ್ಧವೇ ಎಸ್ಪಿಗೆ ದೂರು ನೀಡಿದ್ದಾರೆ. ಎಸ್‌ಪಿಯನ್ನು ಭೇಟಿ ಮಾಡಿ, ‌ಬಳಿಕ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ ಮಹಮ್ಮದ್, ರಿಜಿಯಾ ಬೇಗಂ, ಮೈಬೂಬ್ ಮತ್ತು ಸ್ಟಾಫ್ ನರ್ಸ್ ಸರಳ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗರ್ಭಪಾತ, ವರದಕ್ಷಿಣೆ ಕಿರುಕುಳ (Dowry harassment), ಕೊಲೆ ಯತ್ನ (Murder attempt) ಸೇರಿದಂತೆ ಹಲವು ಆರೋಪಗಳನ್ನು ಗಂಡನ ವಿರುದ್ಧ ಪ್ಯಾರಿ ಬೇಗಂ ನೀಡಿದ್ದಾರೆ.

ವಿದ್ಯಾರ್ಥಿಗಳ ಬಾರ್‌ ನೈಟ್‌ ಆಯೋಜಿಸಿದ್ದ ಬಾರ್‌ ಮಾಲೀಕನ ಮೇಲೆ ಕ್ರಮ

ಮಂಗಳೂರು: ವಿದ್ಯಾರ್ಥಿಗಳು ಕುಡಿದು ಕುಣಿದ ಕುಪ್ಪಳಿಸಲು ಬಾರ್‌ ನೈಟ್‌ (Students Night) ಕಾರ್ಯಕ್ರಮ ಆಯೋಜಿಸಿದ್ದ ಬಾರ್‌ ಮಾಲೀಕರ ಕಾರ್ಯಕ್ರಮವನ್ನು ಪೊಲೀಸರು (Mangalore police) ಬಂದ್‌ ಮಾಡಿಸಿದ್ದಾರೆ. ಇದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಸಂಜೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ ಮದ್ಯ ಸಹಿತ ಪಾರ್ಟಿ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು ಬಂದರೆ ಅವರಿಗೆ ಫ್ರೀ ಶೂಟರ್ಸ್ ಸ್ಪೆಷಲ್ ಆಫರ್ ನೀಡುವ ಭರವಸೆಯನ್ನು ನೀಡಲಾಗಿತ್ತು.

ಕೊಂಚಾಡಿಯ ಬಾರ್‌ನಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾವೂರು ಪೊಲೀಸರು ಕಾರ್ಯಕ್ರಮವನ್ನೇ ರದ್ದುಮಾಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಮಾತ್ರವಲ್ಲದೆ ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ ಬಾರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Continue Reading

ಕ್ರೈಂ

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Murder in PG: ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

VISTARANEWS.COM


on

Murder in PG Case
Koo

ಬೆಂಗಳೂರು: ರಾಜಧಾನಿಯ ಕೋರಮಂಗಲ ಪಿಜಿಯೊಂದರಲ್ಲಿ (Murder in PG) ಕೃತಿ ಕುಮಾರಿ ಎಂಬ ಯುವತಿಯನ್ನು ಹತ್ಯೆ (Krithi Kumari Murder) ಮಾಡಿದ ಪಾತಕಿ ಅಭಿಷೇಕ್‌ನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು (Bangalore police) ಮಧ್ಯಪ್ರದೇಶಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಫೂಟೇಜ್‌ಗಳು, ಪ್ರತ್ಯಕ್ಷದರ್ಶಿಗಳು ಹಾಗೂ ಆರೋಪಿಯ ಪ್ರೇಯಸಿಯ ಹೇಳಿಕೆಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ಏನಿದು ಪ್ರಕರಣ?

ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ (Murder in PG) ಹೋದ ಕೃತಿ ಕುಮಾರಿ ಮರ್ಡರ್ (Krithi Kumari Murder) ಪ್ರಕರಣದಲ್ಲಿ ಪಾತಕಿಯ ಬರ್ಬರತೆಯ ಬಗ್ಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಮರ್ಡರ್‌ (Murder Case) ಆಗಿದ್ದಾಳೆ.

ಆರೋಪಿ ಅಭಿಷೇಕ್‌ ತಾನು ಪ್ರೀತಿಸಿದವಳನ್ನು ಗೃಹ ಬಂಧನದಲ್ಲಿಟ್ಟಿದ್ದ. ಆಕೆಯನ್ನು ಕಾಪಾಡಿದ ಆಕೆಯ ಗೆಳತಿಯೇ ಜೀವ ಕಳೆದುಕೊಂಡಿದ್ದಾಳೆ. ಅಭಿಷೇಕ್‌ ಯುವತಿಯೊಬ್ಬಳೊಂದಿಗೆ ಪ್ರೀತಿಯಲ್ಲಿದ್ದ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ರೂಮ್‌ನಲ್ಲಿ ಇರಿಸಿಕೊಂಡಿದ್ದ. ಕೊಲೆಗೂ ಮೂರು ದಿನದ ಹಿಂದೆ ಬಾಡಿಗೆ ರೂಮ್ ಮಾಡಿ, ಆಕೆಯನ್ನು ಕರೆದೊಯ್ದು ಬಲವಂತವಾಗಿ ರೂಮ್‌ನಲ್ಲಿಟ್ಟುಕೊಂಡಿದ್ದ.

ಆದರೆ ಪ್ರೇಯಸಿ ರೂಮ್‌ನಲ್ಲಿ ಇರಲಾಗದೆ ಒದ್ದಾಡಿದ್ದಳು. ರೂಮ್‌ಮೇಟ್ ಪಿಜಿಗೆ ಬರಲಿಲ್ಲ ಏಕೆಂದು ವಿಚಾರಿಸಿದಾಗ ಕೃತಿ ಕುಮಾರಿ, ಆರೋಪಿ ಆಕೆಯನ್ನು ಕೂಡಿ ಹಾಕಿದ್ದರ ಮಾಹಿತಿಯನ್ನು ಪಡೆದುಕೊಂಡಿದ್ದಳು. ನಂತರ ಸಮಯ ನೋಡಿ ಗೆಳತಿಯನ್ನು ರೂಮ್‌ನಿಂದ ಕರೆತರಲು ಪ್ಲ್ಯಾನ್ ಮಾಡಿದ್ದು, ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ಪಿಜಿಗೆ ಕರೆತಂದಿದ್ದಳು. ಕೊಲೆ‌ ನಡೆದ ಹಿಂದಿನ ದಿನ ಗೃಹಬಂಧನದಲ್ಲಿದ್ದ ಗೆಳತಿಯನ್ನು ಕೃತಿ ಪಾರುಮಾಡಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

ಈ ವಿಚಾರ ಗೊತ್ತಾಗಿದ್ದೇ ತಡ ಕೃತಿ ಮೇಲೆ ಆರೋಪಿ ಅಭಿಷೇಕ್‌ ತೀವ್ರವಾಗಿ ಕೋಪಗೊಂಡಿದ್ದ. ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಕೋಪಗೊಂಡು ಮಂಗಳವಾರ ರಾತ್ರಿ‌ 11.10ರ ಸುಮಾರಿಗೆ ಏಕಾಏಕಿ ಪಿಜಿಗೆ ಹೋಗಿದ್ದ. ಒಳ ಹೋದವನೇ ಸೀದಾ ಕೃತಿ ಕುಮಾರಿಗೆ ಚಾಕುವಿನಿಂದ ಯದ್ವಾತದ್ವಾ ಇರಿದು ಎಸ್ಕೇಪ್ ಆಗಿದ್ದಾನೆ.

ಘಟನೆ ನಡೆದದ್ದು ಹೀಗೆ

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Continue Reading
Advertisement
PARIS OLYMPICS
ಕ್ರೀಡೆ17 mins ago

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Viral Video
ವೈರಲ್ ನ್ಯೂಸ್17 mins ago

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Ajith Kumar Neel not collaborating for a film
ಕಾಲಿವುಡ್18 mins ago

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

shiradi ghat train karnataka rian news
ಪ್ರಮುಖ ಸುದ್ದಿ39 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು44 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ58 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ1 hour ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ1 hour ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ2 hours ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌