Tumkur News: ಹಂಚಿಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ - Vistara News

ತುಮಕೂರು

Tumkur News: ಹಂಚಿಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

Tumkur News: ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮದಲ್ಲಿ ಚಿರತೆಯು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

VISTARANEWS.COM


on

leopard fell into a cage in Hanchihalli village
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊರಟಗೆರೆ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯು (Leopard) ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮದಲ್ಲಿ ಮಂಗಳವಾರ (Tumkur News) ನಡೆದಿದೆ.

ಹಂಚಿಹಳ್ಳಿ ಗ್ರಾಮದಲ್ಲಿ ಕಳೆದ 25 ದಿನಗಳ ಹಿಂದೆಯೂ ಸಹ ಚಿರತೆಯೊಂದು ಬೋನಿಗೆ ಬಿದ್ದಿತ್ತು. ನಂತರ ಮತ್ತೆ ಅದೇ ಭಾಗದಲ್ಲಿ ಕಾಣಿಸಿಕೊಂಡಿದ್ದ ಚಿರತೆಗಳು, ಮೇಕೆ ಸೇರಿದಂತೆ ಅನೇಕ ಪ್ರಾಣಿಗಳನ್ನು ಬಲಿತೆಗೆದುಕೊಂಡಿದ್ದವು. ಗ್ರಾಮಸ್ಥರು ಈ ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಸ್ಥಳ ಪರಿಶೀಲಿಸಿ ಸೂಕ್ತ ಸ್ಥಳದಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ಇದನ್ನೂ ಓದಿ: Heart Attack : ಜಮೀನು ಕೆಲಸ ಮಾಡುತ್ತಿದ್ದ ನರೇಗಾ ಕಾರ್ಮಿಕ ಹೃದಯಾಘಾತದಿಂದ ಸಾವು

ಹಂಚಿಹಳ್ಳಿ ಗ್ರಾಮದ ಬೆಟ್ಟದಲ್ಲಿ ಇನ್ನೆರಡು ಚಿರತೆಗಳು ಇವೆ ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದ್ದು, ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಕೂಡಲೆ ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಂಚಿಹಳ್ಳಿ ಗ್ರಾ.ಪಂ. ಸದಸ್ಯ ಶ್ರೀನಿವಾಸ್ ಮಾತನಾಡಿ, ಹಂಚಿಹಳ್ಳಿ ಗ್ರಾಮದಲ್ಲಿ ಪದೇ ಪದೇ ಚಿರತೆಗಳ ಹಾವಳಿ ಹೆಚ್ಚಾಗುತ್ತಿದೆ. ಮೂಕ ಪ್ರಾಣಿಗಳನ್ನು ಪ್ರತಿದಿನ ಬಲಿ ಪಡೆಯುತ್ತಿವೆ. ಗ್ರಾಮದಲ್ಲಿ ರಾತ್ರಿಯಾದರೆ ಹೊರಗೆ ಬರಲು ಕಷ್ಟಕರವಾಗಿದೆ. ಮಕ್ಕಳು, ಮಹಿಳೆಯರು, ರೈತರು, ವಯಸ್ಸಾದ ಹಿರಿಯರು, ಭಯ-ಭೀತಿಯಲ್ಲಿ ಓಡಾಡುವಂತಾಗಿದೆ. ಈಗಾಗಲೇ ಒಂದು ತಿಂಗಳ ಹಿಂದೆ ಒಂದು ಚಿರತೆ ಬೊನಿಗೆ ಬಿದ್ದಿದ್ದು, ನಮ್ಮ ಗ್ರಾಮದ ಬಳಿ ಇರುವ ಬೆಟ್ಟದಲ್ಲಿ ಸುಮಾರು ನಾಲ್ಕರಿಂದ ಐದು ಚಿರತೆಗಳು ಕಾಣಿಸಿಕೊಂಡಿವೆ. ಅದರಲ್ಲಿ ಎರಡು ಚಿರತೆಗಳನ್ನು ಈಗ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿವೆ. ಆದಷ್ಟು ಬೇಗ ಉಳಿದ ಚಿರತೆಗಳನ್ನು ಹಿಡಿದು ಗ್ರಾಮಸ್ಥರು ನೆಮ್ಮದಿಯಿಂದ ತಮ್ಮ ಜಮೀನುಗಳಿಗೆ ಓಡಾಡಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ಇದನ್ನೂ ಓದಿ: Mukesh Ambani: ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಅದಾನಿಯನ್ನು ಹಿಂದಿಕ್ಕಿದ ಅಂಬಾನಿ; ಉಳಿದ ಸಿರಿವಂತರು ಯಾರು?

ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಬಿದ್ದಿದ್ದ ಬೋನನ್ನು ತಮ್ಮ ವಶಕ್ಕೆ ಪಡೆದು, ಆದಷ್ಟು ಬೇಗ ಉಳಿದ ಚಿರತೆಗಳನ್ನು ಸೆರೆ ಹಿಡಿಯುವುದಾಗಿ ಭರವಸೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024: ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ. ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

VISTARANEWS.COM


on

SSLC Result 2024 SSLC students get 20 percent grace marks but result is very poor
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟಗೊಂಡಿದ್ದು, ಕಳೆದ ವರ್ಷ ಹಿಂದಿದ್ದ ಉಡುಪಿ ಜಿಲ್ಲೆ ಫಿನಿಕ್ಸ್‌ನಂತೆ ಎದ್ದು ಬಂದರೆ, ಯಾದಗಿರಿ ಜಿಲ್ಲೆ ಕೊನೆ ಸ್ಥಾನವನ್ನು ಪಡೆದು ಕುಳಿತಲ್ಲೇ ಕುಳಿತಿದೆ.

VISTARANEWS.COM


on

By

SSLC Exam Result 2024 Announce
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

2023ರ ಜಿಲ್ಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೀಗಿತ್ತು

ಚಿತ್ರದುರ್ಗ -96.8%.
ಮಂಡ್ಯ-96.74%.
ಹಾಸನ-96.68%.
ಬೆಂಗಳೂರು ಗ್ರಾಮಾಂತರ-96.48%.
ಚಿಕ್ಕಬಳ್ಳಾಪುರ-96.15%.
ಕೋಲಾರ-94.6%.
ಚಾಮರಾಜನಗರ -94.32%.
ಮಧುಗಿರಿ- 93.23%.
ಕೊಡಗು-93.19%.
ವಿಜಯನಗರ- 91.41%.
ವಿಜಯಪುರ- 91.23%.
ಚಿಕ್ಕೋಡಿ – 91.07%.
ಉತ್ತರಕನ್ನಡ – 90.53%.
ದಾವಣಗೆರೆ- 90.43%.
ಕೊಪ್ಪಳ- 90.27%.
ಮೈಸೂರು ಜಿಲ್ಲೆ- 89.75%.
ಚಿಕ್ಕಮಗಳೂರು-89.69%.
ಉಡುಪಿ- 89.49%.
ದಕ್ಷಿಣ ಕನ್ನಡ- 89.47%.
ತುಮಕೂರು- 89.43%.
ರಾಮನಗರ- 89.42%.
ಹಾವೇರಿ – 89.11%.
ಶಿರಸಿ- 87.39%.
ಧಾರವಾಡ-86.55%.
ಗದಗ-86.51%.
ಬೆಳಗಾವಿ-85.85%.
ಬಾಗಲಕೋಟೆ-85.14%.
ಕಲಬುರಗಿ-84.51%.
ಶಿವಮೊಗ್ಗ-84.04%.
ರಾಯಚೂರು- 84.02%.
ಬಳ್ಳಾರಿ- 81.54%.
ಬೆಂಗಳೂರು ಉತ್ತರ – 80.93%.
ಬೆಂಗಳೂರು ದಕ್ಷಿಣ – 78.95%.
ಬೀದರ್ – 78.73%.
ಯಾದಗಿರಿ- 75.49%.

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Heavy Rain: ಶಿರಾ ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಭಾರೀ ಗಾಳಿ-ಮಳೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಗಡಿನ ಶೀಟಿನ ಚಾವಣಿ ಕುಸಿದು ಬಿದ್ದಿರುವ ಘಟನೆ ಜರುಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

Heavy Rain
Koo

ಶಿರಾ: ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ (Heavy Rain) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಗಡಿನ ಶೀಟಿನ ಚಾವಣಿ ಕುಸಿದು ಬಿದ್ದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಇದನ್ನೂ ಓದಿ: Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

2022-23ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ತಗಡಿನ ಚಾವಣಿ ಹಾಕಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಕುಸಿದು ಬಿದ್ದು ಹಾನಿ ಸಂಭವಿಸಿದೆ ಎಂದು ಎಂದು ಗ್ರಾಮಸ್ಥರು ದೂರಿದ್ದಾರೆ. ಭಾರೀ ಗಾಳಿ ಮಿಶ್ರಿತ ಮಳೆಗೆ ತಗಡಿನ ಚಾವಣಿಗಳು ಹಾರಿ ಶಾಲೆಯ ಆವರಣ ಬಿದ್ದಿವೆ. ಶಾಲೆಗೆ ರಜೆ ಇರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
SSLC Result 2024 SSLC students get 20 percent grace marks but result is very poor
ಶಿಕ್ಷಣ2 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

Andre Russell
ಕ್ರೀಡೆ9 mins ago

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Deepika Padukone pushes away fan camera at airport
ಬಾಲಿವುಡ್9 mins ago

Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

Kendasampige Serial Madhumitha Entry
ಕಿರುತೆರೆ12 mins ago

Kendasampige Serial: `ಕೆಂಡಸಂಪಿಗೆ’ ಧಾರಾವಾಹಿಗೆ ಕಾವ್ಯ ಶೈವ ಗುಡ್‌ ಬೈ; ಬದಲಾದ ಸುಮನಾ ಪಾತ್ರಧಾರಿ ಯಾರು?

What After SSLC ?
ಶಿಕ್ಷಣ24 mins ago

What After SSLC?: ವಿಜ್ಞಾನ, ವಾಣಿಜ್ಯ, ಕಲೆ; ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಓದಬಹುದು?

sslc result 2024 ankita basappa first rank toppers list
ಪ್ರಮುಖ ಸುದ್ದಿ35 mins ago

SSLC Result 2024: ಶೇ.100 ಅಂಕಗಳೊಂದಿಗೆ ಬಾಗಲಕೋಟೆಯ ಅಂಕಿತಾ ಪ್ರಥಮ; ಎಸ್ಸೆಸ್ಸೆಲ್ಸಿ ಟಾಪರ್ಸ್ ಪಟ್ಟಿ ಇಲ್ಲಿದೆ

SSLC Exam Result 2024 Announce
ಬೆಂಗಳೂರು50 mins ago

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

IPL 2024
ಕ್ರೀಡೆ57 mins ago

IPL 2024: 17ನೇ ಆವೃತ್ತಿಯ ಐಪಿಎಲ್​ನಿಂದ ಅಧಿಕೃತವಾಗಿ ಹೊರಬಿದ್ದ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​

Kerala Governor
ದೇಶ60 mins ago

Kerala Governor: ರಾಮಲಲ್ಲಾನಿಗೆ ಶಿರಬಾಗಿ ನಮಸ್ಕರಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌; ವಿಡಿಯೋ ನೋಡಿ

Air India Express
ದೇಶ1 hour ago

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Exam Result 2024 Announce
ಬೆಂಗಳೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಟ್ರೆಂಡಿಂಗ್‌