Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ Vistara News

ತುಮಕೂರು

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

Tumkur News: ಗುಬ್ಬಿ ತಾಲೂಕಿನ ಸಾವಯವ ಕೃಷಿಕ ಮಹೇಶ್ ರವರ ಮಣ್ಣಿನ ಮನೆಯಲ್ಲಿ ಶುಕ್ರವಾರ ನೇಗಿಲು ಕಾವ್ಯ ಅಭಿಯಾನ ಕಾರ್ಯಕ್ರಮ ಜರುಗಿತು.

VISTARANEWS.COM


on

Neegilu Kavya Abhiyan programme at gubbi
ಗುಬ್ಬಿ ತಾಲೂಕಿನ ಸಾವಯವ ಕೃಷಿಕ ಮಹೇಶ್ ರವರ ಮಣ್ಣಿನ ಮನೆಯಲ್ಲಿ ಶುಕ್ರವಾರ ನೇಗಿಲು ಕಾವ್ಯ ಅಭಿಯಾನ ಕಾರ್ಯಕ್ರಮ ಜರುಗಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುಬ್ಬಿ: ಕನ್ನಡ ಸಾಹಿತ್ಯವನ್ನು (Kannada Literature) ಶ್ರೀಮಂತಗೊಳಿಸುವ ಜತೆಗೆ ರೈತರಲ್ಲಿ (Farmers) ಹಾಗೂ ಜನಸಾಮಾನ್ಯರಲ್ಲಿ ಪರಿಸರ (Environment) ಕಾಳಜಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಸ್ಯಯಜ್ಞ ತಂಡವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಾಹಿತಿ ಸಂತೋಷ್ ಮಡೆನೂರು ತಿಳಿಸಿದರು.

ತಾಲೂಕಿನ ಸಾವಯವ ಕೃಷಿಕ ಮಹೇಶ್ ಅವರ ಮಣ್ಣಿನ ಮನೆಯಲ್ಲಿ ಶುಕ್ರವಾರ ನೇಗಿಲು ಕಾವ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೆಚ್ಚುತ್ತಿರುವ ಪ್ರಾಕೃತಿಕ ವಿಕೋಪ ಹಾಗೂ ಪರಿಸರ ವಿನಾಶದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ರಚನೆಯ ಮೂಲಕ ಪ್ರಯತ್ನ ಮಾಡಲಾಗುತ್ತಿದೆ. ಸಸ್ಯಯಜ್ಞ ತಂಡದ ವತಿಯಿಂದ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರಿಸರ ಜಾಗೃತಿಯನ್ನು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ಯಾವುದೇ ಫಲಾಪೇಕ್ಷೆ ಇಲ್ಲದೆ ಕೇವಲ ಜಾಗೃತಿ ಮೂಡಿಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಕೇವಲ ಮಾತನಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎನ್ನುವುದನ್ನು ಅರಿತಿರುವ ನಾವು ನಿರಂತರವಾಗಿ ಜನರ ಒಡನಾಟದೊಂದಿಗೆ ಉತ್ತಮ ಕೆಲಸಗಳನ್ನು ಮಾಡುವ ಉದ್ದೇಶವನ್ನು ಹೊಂದಿದ್ದೇವೆ. ಉತ್ತಮ ಸಾಹಿತ್ಯ ರಚನೆಯ ಮೂಲಕ ಪರಿಸರ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕೃಷಿಕ ಮಹೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುತ್ತಿತ್ತುವುದರಿಂದ ಅವರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಪ್ರಸ್ತುತ ಸಂದರ್ಭದಲ್ಲಿ ಸಾವಯವ ಪದ್ಧತಿ ಕೃಷಿಯನ್ನು ಆಯ್ಕೆ ಮಾಡಿಕೊಳ್ಳುವುದು ರೈತರಿಗೆ ಅನಿವಾರ್ಯವಾಗಿದೆ ಎಂದರು.

ಬರಹಗಾರರು ಕನ್ನಡ ಸಾಹಿತ್ಯದ ಜತೆಯಲ್ಲಿಯೇ ಕೃಷಿ ಸಾಹಿತ್ಯ ರಚನೆಯತ್ತಲೂ ಗಮನ ಹರಿಸಿದರೆ ರೈತರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುವುದು ಎಂದರು .

ರೈತರು ಪ್ರಕೃತಿದತ್ತವಾಗಿ ಬೆಳೆಗಳನ್ನು ಬೆಳೆಯುವುದನ್ನು ರೂಢಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ನೇಗಿಲು ಕಾವ್ಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು ಹಾಗೂ ಕೃಷಿಕ ಮಹೇಶ್ ರವರನ್ನು ಗೌರವಿಸಲಾಯಿತು.

ಇದನ್ನೂ ಓದಿ: Vijayanagara News: ಕನ್ನಡ ಮಾಧ್ಯಮದಲ್ಲಿ ಓದಿದರೆ ವಿಜ್ಞಾನಿಗಳಾಗುವುದಕ್ಕೆ ಅಡ್ಡಿ ಇಲ್ಲ: ಇಸ್ರೋ ವಿಜ್ಞಾನಿ ಡಾ.ಬಿ.ಎಚ್‌.ಎಂ ದಾರುಕೇಶ್‌

ಈ ಸಂದರ್ಭದಲ್ಲಿ ಸಸ್ಯ ಯಜ್ಞ ತಂಡದ ಪ್ರಭುಸ್ವಾಮಿ, ರೈತರಾದ ಮೋಹನ್ ಕುಮಾರ್, ಶಿವನಂಜಪ್ಪ,ರಾಜಣ್ಣ,ಕಂಬಯ್ಯ, ಮಲ್ಲಿಕಾರ್ಜುನ, ಪರಶುರಾಮ್, ಹಾಗೂ ಹಲವಾರು ಗ್ರಾಮಸ್ಥರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮಾಯವಾಗಿದ್ದು, ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಸೂರ್ಯ ಮರೆಯಾಗಿ, ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ಥಂಡಿ ಗಾಳಿಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಸೂರ್ಯನ ದರ್ಶನ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

ಇಲ್ಲೆಲ್ಲ ಚದುರಿದ ಮಳೆ

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದಂತೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ (karnataka Weather Forecast) ಸಿಂಚನವಾದರೆ, ಕರಾವಳಿಯಲ್ಲಿ ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ಮುಂದಿನ 24 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Acid attack: ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಆ್ಯಸಿಡ್‌ ಎರಚಿದ ದುರುಳ

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇನ್ನು ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಬೆಳಗಿನ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದಂದು ಬಿಸಿಲಿನಿಂದ ಕೂಡಿರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಸೋಮವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕೋಲಾರದ ರಾಯಲ್ಪಾಡಲ್ಲಿ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶವು ವಿಜಯಪುರದಲ್ಲಿ 17.0 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ತುಮಕೂರು

Tumkur News: ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿ ಉದ್ಘಾಟನೆ

Tumkur News: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ವತಿಯಿಂದ ಹುಳಿಯಾರಿನಲ್ಲಿ ನೂತನವಾಗಿ ಆರಂಭಿಸಲಾದ ಚಿಕ್ಕನಾಯಕನಹಳ್ಳಿ-2 ಯೋಜನಾ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.

VISTARANEWS.COM


on

Chikkanayakanahalli 2 project office inaugurated at Huliyar
ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ನೂತನ ಯೋಜನಾ ಕಛೇರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್. ಮಂಜುನಾಥ್ ಉದ್ಘಾಟಿಸಿದರು.
Koo

ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ (Rural) ಭಾಗದಲ್ಲಿ ದುರ್ಬಲರನ್ನು ಹಾಗೂ ಮಹಿಳೆಯರನ್ನು ಸಂಘಟಿಸಿ ಅವರಿಗೆ ಉತ್ತಮ ಜೀವನ ನಡೆಸಲು ಸಹಕಾರ ನೀಡಲಾಗುತ್ತಿದೆ. ದುರ್ಬಲ ವರ್ಗದ ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಿ ಆರ್ಥಿಕವಾಗಿ ಸಬಲೀಕರಣರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಸಂಘದಿಂದ ಯಶಸ್ವಿಯಾಗಿ ಸಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಹುಳಿಯಾರಿನಲ್ಲಿ ನೂತನವಾಗಿ ಆರಂಭಿಸಲಾದ “ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿಯ” ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸ್ವಸಹಾಯ ಸಂಘಗಳ ಮೂಲಕ ಸರ್ಕಾರದ ಹಾಗೂ ಬ್ಯಾಂಕಿನ ಸಹಭಾಗಿತ್ವದೊಂದಿಗೆ ಹತ್ತು ಹಲವಾರು ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ವಹಿಸುತ್ತಿದೆ ಎಂದರು.

ಇದನ್ನೂ ಓದಿ: Viral News: ಹಸಿವಿನಿಂದ ಭಿಕ್ಷುಕ ಸಾವು; ಆತನ ಬಳಿ ಇತ್ತು 1 ಲಕ್ಷ ರೂ!

ನಮ್ಮೂರು ನಮ್ಮ ಕೆರೆ ಯೋಜನೆ ಇಡೀ ತುಮಕೂರು ಜಿಲ್ಲೆಯಲ್ಲಿ 49 ಕೆರೆಗಳನ್ನು ಸರಿಸುಮಾರು ಆರು ಕೋಟಿ ವೆಚ್ಚದಡಿ ಅಭಿವೃದ್ಧಿ ಪಡಿಸಲಾಗಿದೆ, ಶುದ್ಧ ನೀರು ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 75 ಶುದ್ಧಗಂಗಾ ಘಟಕಗಳನ್ನು ಸ್ಥಾಪಿಸಲಾಗಿದೆ, ಜಿಲ್ಲೆಯ 15 ರುದ್ರ ಭೂಮಿಗಳಿಗೆ 17.5 ಲಕ್ಷ ಅನುದಾನ ನೀಡಲಾಗಿದೆ, ಧಾರ್ಮಿಕ ಕ್ಷೇತ್ರದ ಪುನಶ್ಚೇತನಕ್ಕೆ ಜಿಲ್ಲೆಯಲ್ಲಿ 12 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯ 4,245 ಸದಸ್ಯರಿಗೆ ಉದ್ಯೋಗ ತರಬೇತಿ ನೀಡಲಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾರ್ಷಿಕ 22 ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಯುತ್ತಿದ್ದು ನಿತ್ಯ 100 ಕೋಟಿ ರೂಪಾಯಿಗೂ ಮೀರಿ ವ್ಯವಹಾರ ನಡೆಯುತ್ತಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ನೊಂದವರಿಗೆ ದಾರಿದೀಪವಾಗಿರುವ ಧರ್ಮಸ್ಥಳ ಸಂಘವು ಮಹಿಳೆಯರಿಗೆ ಉದ್ಯೋಗ ಹಾಗೂ ಆರ್ಥಿಕ ಸಹಾಯ ನೀಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದ್ದು, ಜಾತಿ ಮತ ಭೇದವಿಲ್ಲದೆ ಎಲ್ಲರನ್ನೂಳಗೊಂಡು ಅಭಿವೃದ್ಧಿ ಕೆಲಸಗಳು ಧರ್ಮಸ್ಥಳ ಸಂಘದಿಂದ ನಡೆಯುತ್ತಿದೆ ಎಂದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೇಶ್, ಆಂಜನೇಯ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಡಗಿ ರಾಮಣ್ಣ ಮಾತನಾಡಿದರು.

ಇದನ್ನೂ ಓದಿ: Byju’s Debt: ಸಿಬ್ಬಂದಿ ಸಂಬಳಕ್ಕಾಗಿ ಮನೆ ಅಡವಿಟ್ಟ ಬೈಜೂಸ್ ಕಂಪನಿ ಮಾಲಿಕ!

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್, ಮುಖಂಡರಾದ ಶೀನಪ್ಪ, ಸೌಜನ್ಯ, ಬಡಗೀರಾಜು, ಚಂದ್ರಶೇಖರ್, ಶಿವಕುಮಾರ್, ನಂದಿಹಳ್ಳಿ ಶಿವಣ್ಣ ಹಾಗೂ ಪ್ರೇಮಾನಂದ್, ರಾಮಚಂದ್ರ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಇತರರು ಪಾಲ್ಗೊಂಡಿದ್ದರು.

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Government Job Vistara Exclusive and CM Siddaramaiah
ಉದ್ಯೋಗ41 seconds ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ18 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ31 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್32 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ46 mins ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್1 hour ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್1 hour ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

pranab mukherjee and rahul gandhi
ದೇಶ1 hour ago

ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

Murder case in kopal
ಕರ್ನಾಟಕ1 hour ago

Murder Case : ನಿದ್ರೆಗೆ ಜಾರಿದಾಗ ವ್ಯಕ್ತಿಯ ಕತ್ತು ಕೊಯ್ದ ಹಂತಕರು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ41 seconds ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ16 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌