Site icon Vistara News

Accident | ಅಪರಿಚಿತ ವಾಹನ ಡಿಕ್ಕಿ, ಬೈಕ್‌ ಸವಾರ ಮೃತ್ಯು

tumkur accident

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಾಳು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಶಾಂತನಹಳ್ಳಿ ಗ್ರಾಮದ ಸದಾಶಿವಯ್ಯ (62) ಎಂದು ಗುರುತಿಸಲಾಗಿದೆ. ಅವರು ಕೆಲಸದಿಂದ ಮನೆಗೆ ಹಿಂತಿರುಗುವಾಗ ನಡೆದ ಘಟನೆ ಇದಾಗಿದೆ. ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ನೊಣವಿನಕರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿ ಹೊಡೆದ ವಾಹನದ ಚೆಹರೆ ತಿಳಿದುಬಂದಿಲ್ಲ.

ಇದನ್ನೂ ಓದಿ | Sultanpuri Death Case | ಅಪಘಾತಕ್ಕೆ ಬಲಿಯಾದ ಅಂಜಲಿ ಸಿಂಗ್‌ ಮನೆಯಲ್ಲಿ ಕಳವು, ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದ ಕುಟುಂಬಸ್ಥರು

Exit mobile version