Tumkur News: ಮೂಲ ಸೌಕರ್ಯ ಕಲ್ಪಿಸಲು ಶಿರಾದ ಕೇಶವ ನಗರ ನಿವಾಸಿಗಳ ಒತ್ತಾಯ - Vistara News

ಕರ್ನಾಟಕ

Tumkur News: ಮೂಲ ಸೌಕರ್ಯ ಕಲ್ಪಿಸಲು ಶಿರಾದ ಕೇಶವ ನಗರ ನಿವಾಸಿಗಳ ಒತ್ತಾಯ

Tumkur News: ಮೂಲಸೌಕರ್ಯಗಳಿಲ್ಲದೇ ಶಿರಾ ನಗರಸಭೆಯ 30ನೇ ವಾರ್ಡ್ ವ್ಯಾಪ್ತಿಯ ಕೇಶವ ನಗರದ ನಿವಾಸಿಗಳು ನಿತ್ಯವೂ ತೀವ್ರ ತೊಂದರೆ ಅನುಭವಿಸುವಂತಾಗಿದೆ.

VISTARANEWS.COM


on

Drainage water not flowing properly in Keshav Nagar
ಶಿರಾದ ಕೇಶವ ನಗರದಲ್ಲಿ ಚರಂಡಿ ನೀರು ಮುಂದೆ ಹರಿದು ಹೋಗದೇ ತ್ಯಾಜ್ಯ ತುಂಬಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಾ: ಮೂಲ ಸೌಕರ್ಯಗಳಿಲ್ಲದೇ (infrastructure) ಶಿರಾ (Shira) ನಗರಸಭೆಯ 30ನೇ ವಾರ್ಡ್ ವ್ಯಾಪ್ತಿಯ ಕೇಶವ ನಗರದ (Keshav Nagar) ನಿವಾಸಿಗಳು ನಿತ್ಯವೂ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಖಾಲಿ ನಿವೇಶನಗಳಲ್ಲಿ ಚರಂಡಿ ನೀರು ಸಂಗ್ರಹ

ಚರಂಡಿ ನೀರು ಸರಿಯಾಗಿ ಹರಿಯಲು ಸೂಕ್ತ ವ್ಯವಸ್ಥೆಯಿಲ್ಲದ ಹಿನ್ನಲೆಯಲ್ಲಿ ಸುತ್ತಮುತ್ತಲಿನ ಖಾಲಿ ನಿವೇಶನಗಳಲ್ಲಿ ಕೊಳಕು ನೀರು ಸಂಗ್ರಹವಾಗುತ್ತಿರುವುದರಿಂದ ದುರ್ವಾಸನೆ ಹೆಚ್ಚಿದೆ, ಇದರ ಜತೆಗೆ ಸೊಳ್ಳೆಗಳ ಕಾಟ ವಿಪರೀತವಾಗಿದ್ದು, ಸಂಜೆಯಾದ ಕೂಡಲೇ ಸೊಳ್ಳೆಗಳು ಮನೆಯೊಳಗೆ ನುಗ್ಗುತ್ತವೆ ಇದರಿಂದ ರೋಗಗಳು ಹರಡುವ ಭೀತಿಯಿದೆ ಎಂದು ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಇನ್ನು ನಗರದಲ್ಲಿ ಸಂಗ್ರಹವಾಗುವ ಕಸದ ವಿಲೇವಾರಿಯು ಆಗದಿರುವ ಹಿನ್ನಲೆಯಲ್ಲಿ ಸ್ವಚ್ಛತೆ ಎಂಬುದೇ ಮಾಯವಾಗಿದೆ. ಎಲ್ಲೆಂದರಲ್ಲಿ ಮನೆಗಳ ತ್ಯಾಜ್ಯವೇ ನಗರದಲ್ಲಿ ಕಂಡುಬರುತ್ತಿದೆ.

ಇದನ್ನೂ ಓದಿ: Gruha jyothi Scheme : ಇನ್ನೂ ಫ್ರೀ ಕರೆಂಟ್ ಮಾಡ್ಕೊಂಡಿಲ್ವಾ? ಎರಡೇ ನಿಮಿಷದಲ್ಲಿ ಅಪ್ಲೈ ಮಾಡಿ

ಘನತ್ಯಾಜ್ಯ ಸಂಗ್ರಹಿಸಲು, ಚರಂಡಿ ಹೂಳು ತೆಗೆಯಲು ಮತ್ತು ರಸ್ತೆ ಸ್ವಚ್ಛತೆಗೆ ಅಗತ್ಯವಿರುವ ಕಾಂಪ್ಯಾಕ್ಟರ್‌ಗಳು, ಟ್ರ್ಯಾಕ್ಟರ್, ಸಕ್ಕಿಂಗ್ ವಾಹನಗಳು, ಮತ್ತಿತರ ವಿಶೇಷ ಯಂತ್ರಗಳು ಅಷ್ಟೇ ಅಲ್ಲ ಬಡಾವಣೆಗಳಿಂದ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸಲು ಕೆಲವು ಪ್ರದೇಶಗಳಿಗೆ ಮಾತ್ರ ನಗರಸಭೆ ಸೀಮಿತವಾಗಿದೆ.

ತಗ್ಗು ಗುಂಡಿಗಳಿಂದ ಕೂಡಿದ ರಸ್ತೆಗಳು

ಇನ್ನು ನಗರದಲ್ಲಿರುವ ರಸ್ತೆಗಳು ತಗ್ಗು-ಗುಂಡಿಗಳಿಂದ ಕೂಡಿದ್ದು, ದಿನನಿತ್ಯ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ, ಅಲ್ಲದೇ ಮಳೆ ಬಂದರೆ ವಾಹನ ಸಂಚಾರವಿರಲಿ, ನಡೆದಾಡುವುದು ಕಷ್ಟವಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದು ಸ್ಥಳೀಯ ನಿವಾಸಿಗಳ ಆರೋಪವಾಗಿದೆ.

ನಗರದಲ್ಲಿ ಹಂದಿ, ಬೀದಿನಾಯಿಗಳ ಹಾವಳಿ ಮಿತಿ ಮೀರಿದೆ, ಇದರಿಂದ ಹಂದಿ, ಮತ್ತು ಬೀದಿ ನಾಯಿಗಳ ಆವಾಸಸ್ಥಾನವಾಗಿ ರೂಪಗೊಂಡಿದೆ.

ಶಿರಾದ ಕೇಶವ ನಗರದಲ್ಲಿ ಹಂದಿಗಳ ಕಾಟ ವಿಪರೀತವಾಗಿರುವುದು.

ಇದನ್ನೂ ಓದಿ: Koppala News: ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ: 7 ಜನ ಆರೋಪಿಗಳ ಬಂಧನ; 15.31 ಲಕ್ಷ ವಶ

ಕೇಶವ ನಗರಕ್ಕೆ ಕೂಡಲೇ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ, ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಸ್ಥಳೀಯ ನಿವಾಸಿಗಳಾದ ಹಮಾನಾಯ್ಕ್, ಶೋಭಾ ಹಾಗೂ ಇತರರು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

Bank fraud: ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ತಿಳಿದುಬಂದಿದೆ.

VISTARANEWS.COM


on

Bank fraud Scam in Urban Co operative Bank of Karwar
Koo

ಕಾರವಾರ: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಸೇರಿದಂತೆ ಹಲವಾರು ಕಡೆ ಸಹಕಾರಿ ಬ್ಯಾಂಕ್‌ಗಳ ಹಗರಣ (Bank fraud) ನಡೆದು ಗ್ರಾಹಕರು ಪರದಾಡುತ್ತಿರುವ ಹೊತ್ತಿನಲ್ಲಿಯೇ ಈಗ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ (Karwar Urban Co operative Bank) ಅವ್ಯವಹಾರ ನಡೆದಿದೆ ಎಂಬ ಸಂಗತಿ ಗೊತ್ತಾಗಿದೆ. ಆದರೆ, ಗ್ರಾಹಕರು ಯಾವುದೇ ರೀತಿಯಲ್ಲಿ ಭಯ ಪಡುವುದು ಬೇಡ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಬ್ಯಾಂಕ್ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ಗೊತ್ತಾಗಿದೆ.

54 ಕೋಟಿ ರೂಪಾಯಿ ಅವ್ಯವಹಾರ

ಸುಮಾರು 54 ಕೋಟಿ ರೂಪಾಯಿ ಅವ್ಯವಹಾರವನ್ನು ಈ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಮಾಡಿದ್ದಾರೆನ್ನಲಾಗಿದೆ. ವರ್ಷದ ಹಿಂದೆ ಇವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮ್ಮ ಸಂಬಂಧಿ ಹಾಗೂ ಪರಿಚಯಸ್ಥರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ ಎಂದು ಈಗ ತಿಳಿದುಬಂದಿದೆ.

ಪ್ರತಿ ವರ್ಷ ‌ಆಡಿಟ್‌ನಲ್ಲೂ ಗುರುದಾಸ್ ವ‌ಂಚನೆ ಮಾಡಿದ್ದರು. ಈಗ ಮ್ಯಾನೇಜರ್ ಮೃತಪಟ್ಟಿದ್ದರಿಂದ ಆಡಳಿತ ಮಂಡಳಿಗೆ ದೊಡ್ಡ ತಲೆನೋವಾಗಿದೆ. ಆಡಿಟ್ ಮಾಡಿಸುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕಾರವಾರ ನಗರ ಠಾಣೆಯಲ್ಲಿ ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿ ದೂರು ನೀಡಿದೆ.

ಬ್ಯಾಂಕ್‌ ದಿವಾಳಿ ಆಗಿಲ್ಲವೆಂದ ಆಡಳಿತ ಮಂಡಳಿ

ಈ ನಡುವೆ ಅವ್ಯವಹಾರದ ಸುದ್ದಿ ಎಲ್ಲೆಡೆ ಹರಡಿದ್ದರಿಂದ ಗ್ರಾಹಕರು ಆತಂಕಗೊಂಡಿದ್ದಾರೆ. ಬ್ಯಾಂಕ್ ದಿವಾಳಿಯಾಗಿದೆ ಎಂದು ತಮ್ಮ ಖಾತೆಯಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆಯಬೇಕು ಎಂದು ಗ್ರಾಹಕರು ಮುಗಿಬಿದ್ದಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಆಡಳಿತ ಮಂಡಳಿಯು, ಗ್ರಾಹಕರ ಹಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಕಳೆದ ಏಪ್ರಿಲ್‌ 25ರಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದರು. ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದ್ದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಶಿಕ್ಷಣ

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

COMEDK UGET Result 2024 : ಯುಜಿ ಪ್ರವೇಶಕ್ಕಾಗಿ ಮೇ 12ರಂದು ನಡೆದಿದ್ದ ಕಾಮೆಡ್ ಕೆ ಫಲಿತಾಂಶ ಮೇ 24ರಂದು ಪ್ರಕಟಗೊಂಡಿದೆ. ಮೊದಲ ನಾಲ್ಕು ಸ್ಥಾನದಲ್ಲಿ ಕರ್ನಾಟಕದವರೇ ಇದ್ದು, ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕಾಮೆಡ್‌ ಕೆ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

VISTARANEWS.COM


on

By

COMEDK UGET Result 2024 Out
ಫಸ್ಟ್‌ ರ‍್ಯಾಂಕ್‌ ಪಡೆದ ಬಾಲಸತ್ಯ ಸರವಣನ್ ಹಾಗೂ ಎರಡನೇ ರ‍್ಯಾಂಕ್‌ ದೇವಾಂಶ್ ತ್ರಿಪಾಠಿ
Koo

ಬೆಂಗಳೂರು: ಕಾಮೆಡ್‌ ಕೆ ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರ ಶುಕ್ರವಾರ ಮಧ್ಯಾಹ್ನ ಪ್ರಕಟಗೊಂಡಿದೆ. ಬೆಂಗಳೂರಿನ ಬಾಲಸತ್ಯ ಸರವಣನ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕಾಮೆಡ್‌ಕೆ www.comedk.org ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ರ‍್ಯಾಂಕ್‌ ಮತ್ತು ಸ್ಕೋರ್ ಕಾರ್ಡ್‌ಗಳನ್ನು 24ರ ಮಧ್ಯಾಹ್ನ 3 ಗಂಟೆಯಿಂದ ಅಭ್ಯರ್ಥಿಗಳಿಗೆ ಲಭ್ಯವಿರುತ್ತವೆ. ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ.

ಕರ್ನಾಟಕದ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

2024ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 12 ರಂದು ಪರೀಕ್ಷೆ ನಡೆದಿತ್ತು. ಕಾಮೆಡ್‌ ಕೆ ಕೀ ಉತ್ತರಗಳನ್ನು ಮೇ 21ರಂದು ಬಿಡುಗಡೆ ಮಾಡಿತ್ತು. ದೇಶಾದ್ಯಾಂತ 191 ನಗರಗಳಲ್ಲಿರುವ 264 ಪರೀಕ್ಷಾ ಕೇಂದ್ರಗಳಲ್ಲಿ ಮೂರು ಸೆಷನ್‌ಗಳಲ್ಲಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎಂಜಿನಿಯರಿಂಗ್ ಯುಜಿ ಸೀಟುಗಳನ್ನು ಕೋರಿ 1,18,005 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಸುಮಾರು 1,03,799 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 35,124 ಮಂದಿ ಕರ್ನಾಟಕದವರು ಮತ್ತು 68,675 ಕರ್ನಾಟಕೇತರ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

COMEDK UGET Result 2024

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ಇಂದಿನಿಂದಲೇ ಕೌನ್ಸೆಲಿಂಗ್‌ ನೋಂದಣಿ ಆರಂಭ

ಕೌನ್ಸೆಲಿಂಗ್ ನೋಂದಣಿ ಮತ್ತು ಡಾಕ್ಯುಮೆಂಟ್ ಅಪ್ಲೋಡ್ ಮೇ 24 ರ ಸಂಜೆ 4 ರಿಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳ ಶೇಕಡವಾರು ಅಂಕ ಹಾಗೂ ರ‍್ಯಾಂಕ್‌ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಕೌನ್ಸಿಲಿಂಗ್‌ ನಡೆಸುವುದಾಗಿ ಕಾಮೆಡ್‌ಕೆ ತಿಳಿಸಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಟಾಪ್‌ 10 ರ‍್ಯಾಂಕ್‌ ಪಡೆದವರು

1) ಬಾಲಸತ್ಯ ಸರವಣನ್- ಕರ್ನಾಟಕ
2) ದೇವಾಂಶ್ ತ್ರಿಪಾಠಿ – ಕರ್ನಾಟಕ
3) ಸನಾ ತಬಸ್ಸುಮ್ – ಕರ್ನಾಟಕ
4) ಪ್ರಕೇತ್ ಗೋಯೆಲ್- ಕರ್ನಾಟಕ
5)ಮಾನಸ್ ಸಿಂಗ್ ರಜಪೂತ- ಹಿಮಾಚಲ ಪ್ರದೇಶ
6)ಗಾನಿಪಿಸೆಟ್ಟಿ ನಿಸ್ಚಲ್- ಆಂಧ್ರಪ್ರದೇಶ
7)ನಿಕೇತ್ ಪ್ರಕಾಶ್ ಅಚಂತಾ- ಕರ್ನಾಟಕ
8) ನೇಹಾ ಪ್ರಭು -ಕರ್ನಾಟಕ
9)ಜಗದೀಶ್ ರೆಡ್ಡಿ ಮಾರ್ಲ -ಕರ್ನಾಟಕ
10) ಈಶ್ವರ್ ಚಂದ್ರ ರೆಡ್ಡಿ ಮುಲ್ಕಾ- ಕರ್ನಾಟಕ

COMEDK UGET Result 2024 Comed K on May 24  Published Result

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Rotary June Run : ಮ್ಯಾರಥಾನ್​ನಲ್ಲಿ ಸುಮಾರು 2 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು ಸಾವಿರ ಮಂದಿ ಆಸಕ್ತಿ ತೋರಿದ್ದಾರೆ. ಕ್ಯೂಆರ್​​ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 10 ಕಿಲೋ ಮೀಟರ್​, 5 ಕಿಲೋ ಮೀಟರ್​, 3 ಕಿಲೋ ಮೀಟರ್​ ಹಾಗೂ 1 ಕಿಲೋಮೀಟರ್ ವಿಭಾಗದಲ್ಲಿ ಓಟ ನಡೆಯಲಿದೆ.

VISTARANEWS.COM


on

Rotary June Run
Koo

ಬೆಂಗಳೂರು: ರೋಟರಿ ಜಿಲ್ಲೆ 3192ರ ವತಿಯಿಂದ ಜೂನ್​ 9ರಂದು (ಭಾನುವಾರ) ಬೆಳಗ್ಗೆ 5 ಗಂಟೆಗೆ ನಗರದ ವಿಜ್ಞಾನ ಮತ್ತು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ಆವರಣದಲ್ಲಿ ‘ರೋಟರಿ ಜೂನ್​ ರನ್’​ (Rotary June Run) ಮ್ಯಾರಥಾನ್​ ಆಯೋಜಿಸಲಾಗಿದೆ. ‘ವಿಸ್ತಾರ ನ್ಯೂಸ್​’ ಈ ಮ್ಯಾರಥಾನ್​ಗೆ ಮಾಧ್ಯಮ ಸಹಯೋಗ ನೀಡುತ್ತಿದೆ. ಸಮಾಜಮುಖಿ ಕಾರ್ಯಗಳಿಗೆ ನಿಧಿ ಸಂಗ್ರಹ ಮಾಡುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಲಾಗಿದ್ದು, ಸಾವಿರಾರು ಓಟದ ಆಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮ್ಯಾರಥಾನ್​ನಲ್ಲಿ ಸುಮಾರು 2 ಸಾವಿರ ಓಟದ ಆಸಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು, ಸುಮಾರು ಒಂದು ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಕ್ಯೂಆರ್​​ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 10 ಕಿಲೋ ಮೀಟರ್​, 5 ಕಿಲೋ ಮೀಟರ್​, 3 ಕಿಲೋ ಮೀಟರ್​ ಹಾಗೂ 1 ಕಿಲೋಮೀಟರ್ ವಿಭಾಗದಲ್ಲಿ ಓಟದ ಸ್ಪರ್ಧೆ ನಡೆಯಲಿದೆ.

ಕಾರ್ಯಕ್ರಮದ ಅತಿಥಿಗಳಾಗಿ ವಿಸ್ತಾರ ನ್ಯೂಸ್​​ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿರಣ್​ ಕುಮಾರ್ ಡಿ. ಕೆ ಮತ್ತು ಸಹಾಯಕ ಸಂಪಾದಕ ಚಂದನ್ ಶರ್ಮಾ ಅವರು ಪಾಲ್ಗೊಳ್ಳಲಿದ್ದಾರೆ. ಇವರು ಬೆಳಗ್ಗೆ 5 ಗಂಟೆಗೆ ಓಟಕ್ಕೆ ಚಾಲನೆ ನೀಡಲಿದ್ದಾರೆ. 10 ವರ್ಷಗಳಿಂದ ರೋಟರಿ ಸಂಸ್ಥೆಯು ಈ ಓಟವನ್ನು ಆಯೋಜಿಸಿಕೊಂಡು ಬರುತ್ತಿದೆ. ಕೊರೊನಾ ಕಾಲದಲ್ಲಿ ಮ್ಯಾರಥಾನ್​ಗೆ ಅಡಚಣೆಯಾಗಿರುವುದು ಬಿಟ್ಟರೆ ನಿರಂತರವಾಗಿ ಸಮಾಜ ಮುಖಿ ಕಾರ್ಯಗಳ ಉದ್ದೇಶವನ್ನು ಇಟ್ಟುಕೊಂಡು ಓಟ ಆಯೋಜಿಸಿಕೊಂಡು ಬರಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಓಟದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ವೆಬ್​ಸೈಟ್​ ಅಥವಾ ಕ್ಯೂಆರ್ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಓಟದ ಆಸಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.

ಸಾಮಾಜಿಕ ಕಾರ್ಯಕ್ಕಾಗಿ ನಿಧಿ ಸಂಗ್ರಹ

ಮ್ಯಾರಥಾನ್​ ವೇಳೆ ಸಂಗ್ರಹವಾಗುವ ನಿಧಿಯನ್ನು ಪರಿಸರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಯೋಜನೆಗಳು ಸೇರಿದಂತೆ ಸಮಾಜಮುಖಿ ಕಾರ್ಯಗಳಿಗಾಗಿ ವಿನಿಯೋಗಿಸಲಾಗುವುದು. ಪರಿಸರಕ್ಕೆ ಸಂಬಂದಿಸಿದಂತೆ ಚಿತ್ರದುರ್ಗ
ಜಿಲ್ಲೆಯ ಚಳ್ಳಕೆರೆ ಸಮೀಪದ ಸುಮಾರು 1200 ಎಕರೆ ಬರಡು ಭೂಮಿಯಲ್ಲಿ
ಸಸಿಗಳನ್ನು ನೆಡಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ‘ಹ್ಯಾಪಿ ಸ್ಕೂಲ್’ ಯೋಜನೆಯಡಿ ಸರ್ಕಾರಿ ಶಾಲೆಗಳ
ಉನ್ನತೀಕರಣ, ಸೈಕಲ್ ವಿತರಣೆ, ಇ ಕಿಟ್ ವಿತರಣೆ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಮಕ್ಕಳಿಗೆ ಆಟದ ಪ್ರದೇಶ ನಿರ್ಮಾಣ ನೀಡಲಾಗುವುದು. ಅದೇ ರೀತಿ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಿಸಲಾಗುವುದು. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಡವರಿಗೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ, ಮುಟ್ಟಿನ ನೈರ್ಮಲ್ಯ ಇತರೆ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ರೋಟರಿ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಟಿ ನಿರಂಜನ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

ಚಿತ್ರದುರ್ಗದಲ್ಲಿ 1200 ಎಕರೆ ಬರಡು ಭೂಮಿಯನ್ನು ದತ್ತು ತೆಗೆದುಕೊಳ್ಳಲಾಗಿದೆ. 400 ಎಕರೆ ಪ್ರದೇಶದಲ್ಲಿ ಗಿಡಗಳನ್ನು ನೆಡಲಾಗಿದೆ. ಇನ್ನೂ 800 ಎಕರೆ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕಾಗಿದೆ. ಓಟದಲ್ಲಿ ಸಂಗ್ರಹಗೊಂಡಿರುವ ಮೊತ್ತವನ್ನು ಅಲ್ಲಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ನಡೆದ ಗುರುದತ್ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸಂಗ್ರಹಿಸಿದ ಹಣದಲ್ಲಿ ರೋಟರಿ 119ನೇ ವರ್ಷಾಚರಣೆಯ ಸಂದರ್ಭದಲ್ಲಿ 119 ರೋಗಿಗಳ ಹೃದಯ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆಡೆಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

Murder Case : ಪ್ರಬುದ್ಧಳ ಕೊಲೆ ಮಾಡಿದ್ದು ತಮ್ಮನ ಸ್ನೇಹಿತನೇ; ಕನ್ನಡಕದ ಹಿಂದಿನ ರಹಸ್ಯ ರಿವೀಲ್‌

Suspicious Case : ಬೆಂಗಳೂರಿನಲ್ಲಿ ಕಾಲೇಜು ಹುಡುಗಿಯೊಬ್ಬಳ ಮೃತದೇಹವು ಕುತ್ತಿಗೆ ಹಾಗೂ ಎಡಗೈ ಕೊಯ್ದ ಸ್ಥಿತಿಯಲ್ಲಿ ಮನೆಯ ಬಾತ್‌ ರೂಮಿನಲ್ಲಿ ಪತ್ತೆಯಾಗಿತ್ತು. ಮೊದಮೊದಲು ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿತ್ತು. ಇದೀಗ ತನಿಖೆ ವೇಳೆ ಯುವತಿಯ ಸಾವಿನ ಸೀಕ್ರೇಟ್‌ ರಿವೇಲ್‌ ಆಗಿದ್ದು, ತಮ್ಮನ ಸ್ನೇಹಿತ ಕೊಲೆಗಾರ (Murder case) ಎಂದು ತಿಳಿದು ಬಂದಿದೆ.

VISTARANEWS.COM


on

By

Murder Case in Bengaluru
Koo

ಬೆಂಗಳೂರು: ಬೆಂಗಳೂರಿನ (Bengaluru News) ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ (Suspicious Case) ಪ್ರಬುದ್ಧ (21) ಎಂಬಾಕೆ (prabuddha murder case) ಮೃತಪಟ್ಟಿದ್ದಳು. ತನಿಖೆಗಿಳಿದ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು (Murder Case) ಸಾಬೀತಾಗಿತ್ತು. ಆದರೆ ಕೊಲೆಗಾರರು ಯಾರು? ಯಾಕಾಗಿ ಕೊಲೆ ನಡೆಯಿತು ಎಂಬುದು ತಿಳಿದಿರಲಿಲ್ಲ. ಇದೀಗ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಅಪ್ರಾಪ್ತನೊಬ್ಬ ಸ್ನೇಹಿತನ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದು ಹೋಗಿದೆ.

ಪ್ರಬುದ್ಧಳ ತಮ್ಮ ಹಾಗೂ ಹತ್ಯೆ ಮಾಡಿದ ಆರೋಪಿ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ತನ್ನ ಸ್ನೇಹಿತನ ಕನ್ನಡಕವನ್ನು ಡ್ಯಾಮೇಜ್ ಮಾಡಿದ್ದ. ಇದನ್ನು ರಿಪೇರಿ‌ ಮಾಡಿಸಿ ಕೊಡು ಎಂದು ಸ್ನೇಹಿತ ಪಟ್ಟು ಹಿಡಿದಿದ್ದ. ಆದರೆ ರಿಪೇರಿಗೆ ಕಾಸಿಲ್ಲದೇ ಅಪ್ರಾಪ್ತ ಆರೋಪಿ ಸುಮ್ಮನಾಗಿದ್ದ.

ಕೊಲೆಯಾದ ದಿನ ಪ್ರಬುದ್ಧ ಮನೆಗೆ ಬಂದಿದ್ದ ಆರೋಪಿ, ಪರ್ಸ್‌ನಲ್ಲಿದ್ದ ಎರಡು ಸಾವಿರ ರೂಪಾಯಿ ಕದ್ದಿದ್ದ. ಆರೋಪಿ ಕದಿಯುವುದನ್ನು ಕಂಡ ಪ್ರಬುದ್ಧ ಪ್ರಶ್ನೆ ಮಾಡಿದ್ದಳು. ಇದರಿಂದ ಗಾಬರಿಗೊಂಡ ಆರೋಪಿ ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದ.

ಈ ಗಲಿಬಿಲಿಯಲ್ಲಿ ಆರೋಪಿ ಕಾಲು ಹಿಡಿದಾಗ ಪ್ರಬುದ್ಧ ಆಯ ತಪ್ಪಿ ಬಿದ್ದಿದ್ದಳು. ಈ ವೇಳೆ ತಲೆಗೆ ಪೆಟ್ಟು ಬಿದ್ದಾಗ, ಪ್ರಜ್ಞೆ ತಪ್ಪಿದ್ದಳು. ಇದರಿಂದ ಆತಂಕಗೊಂಡ ಆರೋಪಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಕೈ ಹಾಗೂ ಕುತ್ತಿಗೆಯನ್ನು ಕೊಯ್ದು ಅಲ್ಲಿಂದ ಪರಾರಿ ಆಗಿದ್ದ. ಪ್ರಜ್ಞೆ ತಪ್ಪಿದ್ದ ಪ್ರಬುದ್ಧ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಳು.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಏನಿದು ಘಟನೆ?

ಮೇ 15ರ ಮಧ್ಯಾಹ್ನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಬುದ್ಧ ಎಂಬಾಕೆ ಮನೆಯ ಬಾತ್‌ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕುತ್ತಿಗೆ ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.

ಆ ದಿನ ಪ್ರಬುದ್ಧ ತಾಯಿ ಸೌಮ್ಯಗೆ ಕರೆ ಮಾಡಿ ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮನೆಯ ಮುಂದಿನ ಡೋರ್‌ ಲಾಕ್‌ ಆಗಿತ್ತು. ಆದರೆ ಹಿಂದಿನ ಡೋರ್‌ ಓಪನ್‌ ಆಗಿತ್ತು ಎಂದು ಸೌಮ್ಯ ಘಟನೆ ವಿವರ ನೀಡಿದ್ದರು. ಮಗಳ ಫೋನ್‌ ಸೋಫ್‌ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್‌ ಕೂಡ ಕಳ್ಳತನ ಆಗಿತ್ತು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಕಾರಣವನ್ನು ಭೇದಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
lok sabha election 2024 supreme court
ಪ್ರಮುಖ ಸುದ್ದಿ2 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ8 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ20 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ27 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ56 mins ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Flight Turbulence
ವಿದೇಶ2 hours ago

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

Murder Case in Bengaluru
ಬೆಂಗಳೂರು3 hours ago

Murder Case : ಪ್ರಬುದ್ಧಳ ಕೊಲೆ ಮಾಡಿದ್ದು ತಮ್ಮನ ಸ್ನೇಹಿತನೇ; ಕನ್ನಡಕದ ಹಿಂದಿನ ರಹಸ್ಯ ರಿವೀಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌