Site icon Vistara News

Drowned | ಕ್ವಾರೆ ಗುಂಡಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರ ಸಾವು, ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಮೃತ್ಯು

teen death

ಕೊಪ್ಪಳ/ಮಂಡ್ಯ: ಕೊಪ್ಪಳದಲ್ಲಿ ಕಲ್ಲು ಕೋರೆಯ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಪ್ರಾಣ ಕಳೆದುಕೊಂಡರೆ, ಮಂಡ್ಯದಲ್ಲಿ ಕೆರೆಯಲ್ಲಿ ಈಜಲು ಹೋದ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾರೆ.

ಇಬ್ಬರು ಬಾಲಕರು ನೀರುಪಾಲು
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ರಾಂಪುರದಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿದರೆ ಇನ್ನಿಬ್ಬರನ್ನು ರಕ್ಷಿಸಲಾಗಿದೆ. ಮಹಾಂತೇಶ ಮಾದರ(9) , ವಿಜಯ ಮಾದರ (9) ಮೃತಪಟ್ಟ ಬಾಲಕರು. ರಕ್ಷಿಸಲ್ಪಟ್ಟ ಬಾಲಕರನ್ನು ಬಾದಾಮಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ವಕ್ಕನದುರ್ಗಾ ರಸ್ತೆಯಲ್ಲಿ ಕಲ್ಲು ಗಣಿಗಾರಿಕೆಯಿಂದ ನಿರ್ಮಾಣವಾದ ಗುಂಡಿಗಳಿವೆ. ಮಳೆಯಿಂದಾಗಿ ಇವುಗಳಲ್ಲಿ ನೀರು ತುಂಬಿದೆ. ಮಕ್ಕಳಿಗೆ ರಜೆ ಇರುವುದರಿಂದ ಅವರು ಆಟವಾಡಲೆಂದು ಅಲ್ಲಿಗೆ ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಹನುಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಲ್ಲೇ ಪ್ರಕರಣ ದಾಖಲಾಗಿದೆ.

ಈಜಲು ತೆರಳಿದ್ದ ಯುವಕ ಸಾವು
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಕೆರೆಯಲ್ಲಿ ಈಜಲೆಂದು ನೀರಿಗಿಳಿದ ಹರ್ಷ ಕೆ.ಎಂ.(18) ಎಂಬವರು ಮೃತಪಟ್ಟಿದ್ದಾರೆ. ಕಾರಸವಾಡಿ ಗ್ರಾಮದ ಹರ್ಷ ಅವರು ತನ್ನ ಮೂವರು ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ತೆರಳಿದ್ದರು. ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ | Drowned | ಬಟ್ಟೆ ತೊಳೆಯಲು ಕಾಲುವೆಗೆ ಹೋಗಿದ್ದ ಯುವಕ ಕಾಲು ಜಾರಿ ನೀರುಪಾಲು

Exit mobile version