Site icon Vistara News

Drowned in Sea: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು

Gangolli Musab and Nazan who drowned in sea

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿರುವ (Drowned in Sea) ಘಟನೆ ಜಿಲ್ಲೆಯ ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆ ಬಳಿ ನಡೆದಿದೆ.

ಗಂಗೊಳ್ಳಿ ಮುಸಾಬ್ (22) ಮತ್ತು ನಝಾನ್ (24) ಕಾಣೆಯಾದ ಯುವಕರು. ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆ ಬಳಿ ಸಮುದ್ರದಲ್ಲಿ ನಾಲ್ವರು ಮೀನು ಹಿಡಿಯುತ್ತಿದ್ದರು. ಸಮುದ್ರದಲ್ಲಿ ಬಲೆ ಬೀಸುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದು ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಉಳಿದ ಇಬ್ಬರು ಮೀನುಗಾರರು ಕಾಣೆಯಾದವರ ಶೋಧ ನಡೆಸಿ, ನಂತರ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ನಾಪತ್ತೆಯಾದವರಿಗಾಗಿ ಸಮುದ್ರದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ, 2.6 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

ಮಂಗಳೂರು: ಸುರತ್ಕಲ್ ಸಮೀಪದ ತಂಡಬೈಲ್ ಎಂಬಲ್ಲಿ ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 2.6 ಲಕ್ಷ ಮೌಲ್ಯದ ಎಂಡಿಎಂಎ, ಕಾರು ಸಹಿತ ಒಟ್ಟು 7. 83 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | Gadag News: ಸೂರ್ಯಕಾಂತಿ ಕಟಾವು ಮಾಡಿದ ಹೊಲದಲ್ಲಿ ಮೇಯ್ದು 200 ಕುರಿಗಳ ಸಾವು

ಶಾಕೀಬ್ ಅಲಿಯಾಸ್ ಶಬ್ಬು (33), ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು‌ (34) ಬಂಧಿತರು. ಶಾಕೀಬ್ ಈ ಹಿಂದೆ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಪ್ರಕರಣಗಳು ದಾಖಲಾಗಿವೆ. ನಿಸಾರ್ ಹುಸೈನ್ 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತ ಕೊಲೆ ಯತ್ನ ಸೇರಿ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ. ಮಾದಕ ವಸ್ತು ಸಾಗಣೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲು ಗೋಡೆ ಹಾರಿ ಎಸ್ಕೇಪ್ ಆದ ಅತ್ಯಾಚಾರ ಆರೋಪಿ!

ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿ (Rape Accused) ಜೈಲಿನಿಂದ ಪರಾರಿಯಾದ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ (Davanagere Jail) ಶನಿವಾರ ನಡೆದಿದೆ. ಪರಾರಿಯಾದ ಆರೋಪಿಯನ್ನು 23 ವರ್ಷದ ವಸಂತ್ ಎಂದು ಗುರುತಿಸಲಾಗಿದೆ. ಈತ ಕಾರಾಗೃಹದ ಗೋಡೆಯನ್ನು ಹಾರಿ ಎಸ್ಕೇಪ್ ಆಗಿದ್ದಾನೆ(Escape from Jail).

ಪರಾರಿಯಾಗಿರುವ ವಸಂತ್ ದಾವಣಗೆರೆ ನಗರದ ಹೊರವಲಯದ ಕೂರರ್ ಪ್ರದೇಶದ ನಿವಾಸಿಯಾಗಿದ್ದಾನೆ. ಈ ಆಟೋ ಚಾಲಕನಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಈತನ ವಿರುದ್ಧ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ವಸಂತ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು ಮಹಿಳಾ ಪೊಲೀಸ್ ಠಾಣೆ ಪೊಲೀಸರು. ಆದರೆ, ದಾವಣಗೆರೆ ಉಪ ಕಾರಾಗೃಹದಲ್ಲಿದ್ದ ಆರೋಪಿ ನಿನ್ನೆ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ. ಈ ವೇಳೆ, ಆತನ ಕಾಲಿಗೆ ಪೆಟ್ಟಾಗಿದ್ದರೂ ಲೆಕ್ಕಿಸದೇ ತಪ್ಪಿಸಿಕೊಂಡಿದ್ದಾನೆ.

ಇದನ್ನೂ ಓದಿ | ಕಾರು ಡಿಕ್ಕಿ ಪೌರಕಾರ್ಮಿಕನ ಕಾಲು ಕಟ್‌!; ಕುರಿಗಾಹಿಗೆ ಡಿಕ್ಕಿ ಹೊಡೆದ ಮಾಜಿ ಶಾಸಕನ ಅಳಿಯನ ಕಾರು!

ಆರೋಪಿ ಪರಾರಿಯಾದ ಕೆಲವು ಗಂಟೆಗಳ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಜೈಲು ಸಿಬ್ಬಂದಿ ಬಸವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸ್ಕೇಪ್ ಆಗಿರುವ ಅತ್ಯಾಚಾರ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ.

Exit mobile version