Site icon Vistara News

Road Accident: ಚಳ್ಳಕೆರೆಯಲ್ಲಿ ಆಟೋ-ಖಾಸಗಿ ಬಸ್‌ ಡಿಕ್ಕಿಯಾಗಿ ಇಬ್ಬರ ದುರ್ಮರಣ

Road accident in challakere

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿಯ ಮೊರಾರ್ಜಿ ಶಾಲೆಯ ಬಳಿ ಭಾನುವಾರ ಭೀಕರ ಅಪಘಾತ ನಡೆದಿದೆ. ಆಟೋ ಮತ್ತು ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಳ್ಳಕೆರೆ ಕಡೆಯಿಂದ ಹೊರಟಿದ್ದ ಆಟೋ, ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಬಸ್‌ಗೆ ಆಟೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೃತರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಕೆಎಸ್‌ಆರ್‌ಟಿಸಿ‌ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗೌರಿಬಿದನೂರು ತಾಲೂಕಿನ ಬಿಸಲಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರ ಹೆಸರು, ವಿಳಾಸದ ಮಾಹಿತಿ ತಿಳಿದುಬಂದಿಲ್ಲ.

ಇದನ್ನೂ ಓದಿ | Chaitra Kundapura : ಚೈತ್ರಾ ಕಟ್ಟಿದ್ದಳು ಫೇಕ್ ಸರ್ವೆ ಕಥೆ! ಮತ್ತೊಂದು ಆಡಿಯೊ ಔಟ್

ಯುವಕ ನದಿಯಲ್ಲಿ ‌ಮುಳುಗಿ ಸಾವು

ಬಾಗಲಕೋಟೆ: ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ. ಯಂಕಪ್ಪ ಭೀಮಪ್ಪ ಬಾರ್ಕಿ (22) ಮೃತ ಯುವಕ. ಶನಿವಾರ ಮಧ್ಯಾಹ್ನ ಆಡುಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಭಾನುವಾರ ಮಧ್ಯಾಹ್ನ ನದಿ ದಡದಲ್ಲಿ ಯುವಕನ ಶವ ಪತ್ತೆಯಾಗಿದೆ.

Exit mobile version