Site icon Vistara News

Road Accident: ಶಿರಾದಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರ ದಾರುಣ ಸಾವು

Road Accident

ತುಮಕೂರು: ಬೈಕ್‌ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಭೀಕರ ಅಪಘಾತ (Road Accident) ನಡೆದಿದ್ದು, ಹಿಂಬದಿಯಿಂದ ಕಾರು ಗುದ್ದಿದ್ದರಿಂದ ಬೈಕ್‌ ಸವಾರರು ಕೊನೆಯುಸಿರೆಳೆದಿದ್ದಾರೆ.

ಜೋಗಿಹಳ್ಳಿಯ ಶ್ರೀಧರ್ (28), ಮುನಿರಾಜು (25) ಮೃತ ಯುವಕರು. ಅನಾರೋಗ್ಯದಿಂದ ಬಳಲುತ್ತಿದ್ದ ಮುನಿರಾಜುನನ್ನು ಚಿಕಿತ್ಸೆಗೆಂದು ಬೈಕ್‌ನಲ್ಲಿ ಕರೆದುಕೊಂಡು ಹೋಗುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರು ಬೈಕ್‌ಗೆ ಗುದ್ದಿದ ಬಳಿಕ ಸುಮಾರು 200 ಮೀ. ದೂರ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತ ನಡೆದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.

ಇದನ್ನೂ ಓದಿ | Sandalwood Smuggling: ಶ್ರೀಗಂಧದ ತುಂಡು ಕಳ್ಳ ಸಾಗಣೆ; ಮೂವರ ಬಂಧನ

ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ

ವಿಜಯಪುರ: ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆ ಬಬಲೇಶ್ವರ ತಾಲೂಕಿನ ಎಚ್.ಎಚ್. ಸಂಗಾಪುರ ಕ್ರಾಸ್ ಬಳಿ ನಡೆದಿದೆ. ಮೃತ ಬೈಕ್ ಸವಾರರು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದವರಾಗಿದ್ದು, ಅವರ ಹೆಸರು, ವಿಳಾಸ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗನಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಅರಣ್ಯದ ಕಣಿವೆಯಲ್ಲಿ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದಿದ್ದರಿಂದ ತಂದೆ-ಮಗನಿಗೆ ಗಂಭೀರ ಗಾಯಗಳಾಗಿವೆ. ರಮೇಶ್ ಹಾಗೂ ಪುತ್ರ ಗಾಯಾಳುಗಳು. ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಅರಣ್ಯ ಪ್ರದೇಶದಲ್ಲಿ ಅಪಘಾತ ನಡೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ತಂದೆ-ಮಗ ಪಾರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version