Site icon Vistara News

Mundaragi Accident: ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ; ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Road Accident

ಗದಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆ ಮು‌ಡರಗಿ ತಾಲೂಕಿನ (Mundaragi Accident) ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. ಬಸ್‌ನಲ್ಲಿದ್ದ ಮಹಿಳಾ ಪ್ರಯಾಣಕಿ, ಲಾರಿ ಚಾಲಕ ಮೃತಪಟ್ಟಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆ ಹಾಗೂ ಕೊಪ್ಪಳ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | pitbull dog Attack: ನಾಲ್ಕು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಡೇಂಜರಸ್‌ ಪಿಟ್‌ಬುಲ್‌ ನಾಯಿ

ಬಾಗಲಕೋಟೆಯಲ್ಲಿ ಟಂಟಂ-ಕಾರು ಡಿಕ್ಕಿ; ಮೂವರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ಬಾಗಲಕೋಟೆ: ಟಂಟಂ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ (Road Accident) 2 ವರ್ಷದ ಮಗು ಸೇರಿ ಮೂವರು ದುರ್ಮರಣ ಹೊಂದಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದು ತಾಲೂಕಿನ ಛಬ್ಬಿ ಕ್ರಾಸ್ ಬಳಿ ಬುಧವಾರ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಂಕ್ರಪ್ಪ ಮೆಳ್ಳಿಗೇರಿ (65), ವಿಜಯ್ ತೇಲಿ (65),ಗೌರಿ ಚವ್ಹಾನ(2) ಮೃತರು. ಕಲಾದಗಿ ಮೂಲದ ಗೌರಿ ಚೌಹಾನ್ (2) , ಗದ್ದನಕೇರಿಯ ವಿಜಯ್ ತೇಲಿ, ತುಳಸಿಗೇರಿ ಗ್ರಾಮದ ಶಂಕ್ರಪ್ಪ ಮೆಳ್ಳಿಗೇರಿ ಗಾಯಾಳುಗಳು. ಇವರಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ‌ ದಾಖಲಿಸಲಾಗಿದೆ.

ಅಪಘಾತದಿಂದ ಟಂಟಂನಲ್ಲಿದ್ದ ಐವರಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಗದ್ದನಕೇರಿ ಕ್ರಾಸ್‌ನಿಂದ ಕಲಾದಗಿಯತ್ತ ಹೊರಟಿದ್ದ ಟಂಟಂ ಹಾಗೂ ಕಲಾದಗಿಯಿಂದ ಬಾಗಲಕೋಟೆಗೆ ಹೊರಟಿದ್ದ ಮಾರುತಿ ಬ್ರೇಜಾ ಕಾರಿನ ನಡುವೆ ಅಪಘಾತವಾಗಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder Case : ಬೆಂಗಳೂರಿನಲ್ಲಿ ರೌಡಿ ಶೀಟರ್‌ ಕೊಲೆ; ಮನೆ ಹೊರಗಡೆ ಮಲಗಿದಲ್ಲೇ ಮರ್ಡರ್‌

ಲಾರಿ ಕೆಳಗೆ ಸಿಲುಕಿ ಬೈಕ್‌ ಸವಾರ ಸಾವು

ಚಿಕ್ಕಬಳ್ಳಾಪುರ: ಚಲಿಸುವ ಬಸ್ ಹಾಗೂ ಲಾರಿ ಮಧ್ಯೆ ಸಿಲುಕಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಸೇಟ್ ದಿನ್ನೆ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಗೊಳ್ಳಚಿಕ್ಕನಹಳ್ಳಿ ಗ್ರಾಮದ ಸುಭಾಷ್ (24) ಮೃತರು. ಎರಡು ವಾಹನಗಳ ಮಧ್ಯೆ ಓವರ್ ಟೇಕ್ ಮಾಡಲು ಹೋದ ವೇಳೆ, ಲಾರಿ ಕೆಳಗೆ ಸಿಲುಕಿ ಸವಾರ ಮೃತಪಟ್ಟಿದ್ದಾನೆ.

Exit mobile version