ಕರ್ನಾಟಕ
Moral policing: ಜತೆಗೆ ಚಾಟ್ಸ್ ತಿಂದ ಹಿಂದು ಯುವಕ, ಮುಸ್ಲಿಂ ಯುವತಿಗೆ ಹಲ್ಲೆ; ಇಬ್ಬರು ಸೆರೆ
Chikkaballapura news: ಚಿಕ್ಕಬಳ್ಳಾಪುರದಲ್ಲಿ ಹಿಂದು ಹುಡುಗ- ಮುಸ್ಲಿಂ ಹುಡುಗಿಯ ಮೇಲೆ ಹಲ್ಲೆ ನಡೆಸುವ ಮೂಲಕ ನೈತಿಕ ಪೊಲೀಸ್ಗಿರಿ ಮೆರೆದ ಇಬ್ಬರು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ (Chikkaballapura news) ಗೋಪಿಕಾ ಚಾಟ್ಸ್ಗೆ ಹಿಂದು ಹುಡುಗ ಮತ್ತು ಮುಸ್ಲಿಂ ಹುಡುಗಿ ಜತೆಯಾಗಿ ಬಂದಿದ್ದರು ಎಂಬ ಕಾರಣಕ್ಕೆ ನೈತಿಕ ಪೊಲೀಸ್ಗಿರಿ (Moral Policing) ನಡೆಸಿ ಅವರಿಬ್ಬರ ಮೇಲೆ ಹಲ್ಲೆ ನಡೆಸಿದವರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ನಕ್ಕಲಕುಂಟೆ ನಿವಾಸಿಗಳಾದ ವಾಯಿದ್ (20) ಹಾಗೂ ಸದ್ದಾಂ (21) ಬಂಧಿತ ಆರೋಪಿಗಳು. ಇವರ ಜತೆಗಿದ್ದ ಇನ್ನೊಬ್ಬ ಆರೋಪಿ ಇಮ್ರಾನ್ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಎರಡು ದಿನಗಳ ಹಿಂದೆ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಅಲ್ಲಿನ ಹೋಟೆಲ್ ಒಂದಕ್ಕೆ ಬಂದಿದ್ದರು. ಆಕೆ ಬುರ್ಕಾ ಮತ್ತು ಹಿಜಾಬ್ ಧರಿಸಿಯೇ ಅಲ್ಲಿಗೆ ಆಗಮಿಸಿದ್ದಳು. ಇದನ್ನು ಅಲ್ಲಿನ ಸ್ಥಳೀಯ ಮುಸ್ಲಿಂ ಯುವಕರು ನೋಡಿದ್ದಾರೆ. ಮುಸ್ಲಿಂ ಯುವತಿಯ ಜತೆ ಬಂದಿರುವ ಹುಡುಗ ಹಿಂದೂನಾ ಮುಸ್ಲಿಮನಾ ಎಂದು ಅಲ್ಲಿದ್ದವರಿಗೆ ಕುತೂಹಲ ಮೂಡಿದೆ. ಅವರಿಬ್ಬರೂ ಒಳಗೆ ಹೋಗುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲೇ ಅವರ ಆಸುಪಾಸಿನಲ್ಲಿ ಠಳಾಯಿಸಿದ್ದಾರೆ. ಅವರಿಬ್ಬರೂ ಒಂದು ಟೇಬಲ್ಗೆ ಹೋಗಿ ಕುಳಿತಾಗ ಇಬ್ಬರು ಹುಡುಗರು ಬಂದು ಹುಡುಗಿಯ ಜತೆಗೆ ಇರುವವನು ಯಾವ ಧರ್ಮ ಎಂದು ದೃಢಪಡಿಸಿಕೊಂಡಿದ್ದ.
ಹುಡುಗ ಹಿಂದು ಎಂದು ತಿಳಿಯುತ್ತಿದ್ದಂತೆಯೇ ಆತ ಆಸುಪಾಸಿನಲ್ಲಿದ್ದ ಅವನ ಟೀಮ್ಗೆ ವಿಷಯ ಮುಟ್ಟಿಸಿದ್ದು, ತಕ್ಷಣವೆ ಕೆಲವು ಮಂದಿ ಅಲ್ಲಿ ಸೇರಿಸಿದ್ದರು. ಮುಸ್ಲಿಂ ಹುಡುಗರು ಯುವಕನನ್ನು ಪ್ರಶ್ನಿಸುವುದರ ಜತೆ ಹಲ್ಲೆಗೆ ಯತ್ನಿಸಿದ್ದಾರೆ. ಒಂದು ಹಂತದಲ್ಲಿ ಯುವತಿ ಅವನು ನನ್ನ ಪರಿಚಿತ, ಅವನ ಜತೆಗೆ ಹೋಟೆಲ್ಗೆ ಬಂದರೆ ತಪ್ಪೇನು ಎಂದು ಪ್ರಶ್ನಿಸಿ ಕೋಪ ತೋರಿಸುತ್ತಾಳೆ. ಯುವತಿ ಹಿಂದೂ ಯುವಕನ ಪರ ವಹಿಸಿ ಮಾತನಾಡಿದ್ದರಿಂದ ಯುವಕರು ಆಕ್ರೋಶಗೊಂಡು ಆಕೆಯನ್ನೂ ಅವಮಾನಿಸಲು ಯತ್ನಿಸಿದರು. ಕೊನೆಗೆ ಯುವತಿಯ ಬಾಯಲ್ಲಿ ಈ ರೀತಿ ಬೇರೆ ಧರ್ಮದವರ ಜತೆಗೆ ಹೋಟೆಲ್ಗೆ ಹೋಗಿದ್ದ ತಪ್ಪಾಯಿತು, ಇದನ್ನು ನಾನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ ಎಂದು ಹುಡುಗಿಯ ಬಾಯಲ್ಲಿ ಹೇಳಿಸುವಲ್ಲಿ ನೈತಿಕ ಪೊಲೀಸ್ಗಿರಿ ನಡೆಸಿದ ಯುವಕರು ಯಶಸ್ವಿಯಾದರು.
ಇದಾದ ಬಳಿಕ ಯುವತಿಯ ಕಡೆಯವರು ಚಿಕ್ಕಬಳ್ಳಾಫುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಧೀಶರ ಗೃಹ ಕಚೇರಿಗೆ ಆರೋಪಿಗಳನ್ನು ಹಾಜರುಪಡಿಸಿದರು.
ನ್ಯಾ. ಬಾಲಪ್ಪ ಅಪ್ಪಣ್ಣ ಜರಗು ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು. ಪೊಲೀಸರು IPC ಸೇಕ್ಷನ್ 354 A and D, 341, 323 , 153A , 504, 506 ಸೆಕ್ಷನ್ ಗಳಡಿ ಕೇಸು ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ನಡೆಸಲಿದ್ದಾರೆ.
ಇದನ್ನೂ ಓದಿ: ಪುತ್ತೂರಿನಲ್ಲಿ ನೈತಿಕ ಪೊಲೀಸ್ಗಿರಿ; ಹಿಂದು ಯುವತಿ ಜತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ
ಕರ್ನಾಟಕ
Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ
Ramalinga Reddy: ರಾಜ್ಯ ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಲಾಗಿದೆ.
ಬೆಂಗಳೂರು: ಸಾರಿಗೆ ಇಲಾಖೆಯ 4 ಸಾರಿಗೆ ನಿಗಮಗಳಿಗೆ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕವಾಗಿದ್ದಾರೆ. ಸಾರಿಗೆ ಇಲಾಖೆ ಅಧೀನದಲ್ಲಿರುವ ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಿ ಸಾರಿಗೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
ಸಾಮಾನ್ಯವಾಗಿ ನಾಲ್ಕು ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕವಾಗುತ್ತಿತ್ತು. ಆದರೆ, ಈ ಬಾರಿ ಪ್ರತ್ಯೇಕವಾಗಿ ಅಧ್ಯಕ್ಷರನ್ನು ನೇಮಿಸದೆ ಸಚಿವ ರಾಮಲಿಂಗಾರೆಡ್ಡಿ ಅವರಿಗೇ ನಾಲ್ಕೂ ನಿಗಮಗಳ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ
Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
Hosakerehalli Lake: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೊಸಕೆರೆಹಳ್ಳಿ ಕೆರೆಯ (Hosakerehalli Lake) ಮಧ್ಯೆ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ರಮ ಕೈಗೊಳ್ಳಲು ಸೂಚಿಸಿದ ಬೆನ್ನಲ್ಲೇ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಕೆ.ಲಕ್ಷ್ಮೀಸಾಗರ್ ಆದೇಶ ಹೊರಡಿಸಿದ್ದಾರೆ.
ಘನತ್ಯಾಜ್ಯ ವಿಭಾಗದ ಇಇ ಎಚ್.ಎಸ್.ಮೇಘ ಹಾಗೂ ಎಇ ಶಿಲ್ಪ ಅಮಾನತುಗೊಂಡ ಅಧಿಕಾರಿಗಳು. ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರಾದ ಅಧಿಕಾರಿಗಳು, ಎಂಜಿನಿಯರ್ಗಳನ್ನು ಸೋಮವಾರ (ಜೂನ್ 5) ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ | ಗ್ಲೋಬಲ್ ಬೆಂಗಳೂರು ಮಾಡಲು ಸಲಹಾ ಸಮಿತಿ; ಇದು ಡಿಕೆಶಿ ಮಾಸ್ಟರ್ ಪ್ಲ್ಯಾನ್!
ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸೋಮವಾರ ಮಧ್ಯಾಹ್ನ ಸಭೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಪ್ರಶ್ನಿಸಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.
ಕರ್ನಾಟಕ
Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Koppal News: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಕೊಪ್ಪಳ: ರಾಯಚೂರು ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಜಿಲ್ಲೆಯಲ್ಲಿ (Koppal News) ನಡೆದಿದೆ. ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದಾರೆ. ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಿದ ಆರೋಪ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಟಯರ್ ಸಿಡಿದು ಪಲ್ಟಿ ಹೊಡೆದ ಕಾರು; ಐವರಿಗೆ ಗಾಯ
ಮಂಡ್ಯ: ಟಯರ್ ಸಿಡಿದು ಕಾರು ಪಲ್ಟಿಯಾಗಿದ್ದರಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಚಿಕ್ಕಮಂಡ್ಯ ಬಳಿ ಸೋಮವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಮೂಲದ ಅರ್ಜುನ್, ಮಂಜುನಾಥ್ ಜಿ.ಅಡಿಗ, ಶ್ರೀಕಾಂತ್, ಕೃಷ್ಣ, ಮೂರ್ತಿ ಗಾಯಗೊಂಡವರು.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಚಿಕ್ಕಮಂಡ್ಯ ಸಮೀಪಿಸುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕರ್ನಾಟಕ
World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್ಎಸ್ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.
ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.
ಆರ್ಎಸ್ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.
-
ಕರ್ನಾಟಕ20 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ15 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ11 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ16 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ಕರ್ನಾಟಕ8 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
-
ದೇಶ19 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಕರ್ನಾಟಕ9 hours ago
Free Bus: ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿತು ಅನುಮೋದನೆ; ಏಳು ಕಂಡೀಷನ್ನೊಂದಿಗೆ ಚಾಲನೆ!