Site icon Vistara News

Road Accident: ಸಾರಿಗೆ ಬಸ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Road Accident

ಚಿಕ್ಕಬಳ್ಳಾಫುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವುದು (Road Accident) ಜಿಲ್ಲೆಯ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಬಳಿ ನಡೆದಿದೆ. ಬೈಕ್ ಸವಾರ ಶಂಕರ್ (28), ಹಿಂಬದಿ ಸವಾರೆ ಶಂಕರಮ್ಮ ಮೃತರು. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೊಳ್ಳೇಗಾಲದಲ್ಲಿ ಭತ್ತ ಕಟಾವು ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ; ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಚಾಮರಾಜನಗರ: ಭತ್ತ ಕಟಾವು ಮಾಡುವ ಯಂತ್ರದ ಲಾರಿ ಹಾಗೂ ಬೈಕ್ ನಡುವೆ ಅಪಘಾತ (Road Accident) ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜಿನಕನಹಳ್ಳಿ ಬಳಿ ಭೀಕರ ಅಪಘಾತ (Kolegala Accident) ನಡೆದಿದೆ. ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಲಕ ಗಾಯಗೊಂಡಿದ್ದ. ಸಂತೋಷ್(32), ಸೌಮ್ಯ (27), ನಿತ್ಯಸಾಕ್ಷಿ (4) ಮೃತ ದುರ್ದೈವಿಗಳು. ಗಾಯಾಳು ಅಭಿ (9) ಚಿಕಿತ್ಸೆಗೆ ಕೊಳ್ಳೇಗಾಲದ ಸಿಮ್ಸ್ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಆತನೂ ಮಾರ್ಗ ಮಧ್ಯೆ ಅಸುನೀಗಿದ್ದಾನೆ.

ಮೃತಪಟ್ಟವರೆಲ್ಲ ಕೊಳ್ಳೇಗಾಲದ ಪಾಳ್ಯ ಗ್ರಾಮದವರು ಎನ್ನಲಾಗಿದೆ. ಒಂದೇ ಕುಟುಂಬದ ನಾಲ್ವರು ಬೈಕ್‌ನಲ್ಲಿ ಬರುವಾಗ ನಿಯಂತ್ರಣ ತಪ್ಪಿ ಎದುರು ಬಂದ ಲಾರಿಗೆ ಡಿಕ್ಕಿಯಾಗಿದೆ. ಬೈಕ್‌ನಿಂದ ಬಿದ್ದ ರಭಸಕ್ಕೆ ಸಂತೋಷ್‌, ಸೌಮ್ಯ ದಂಪತಿ ಹಾಗೂ ಮಗಳು ನಿತ್ಯಸಾಕ್ಷಿ ಮೂವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗ ಅಭಿ ಗಂಭೀರ ಗಾಯಗೊಂಡಿದ್ದ, ಇದೀಗ ಆತನೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Hanagal Case : ಗ್ಯಾಂಗ್‌ ರೇಪ್‌ ಸಂತ್ರಸ್ತೆಗೆ ಜೀವಭಯ; ಒಂಟಿಯಾಗಿ ಬಿಟ್ಟು ಹೋದ ಪೊಲೀಸ್

ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸಲಿದ್ದಾರೆ.

ಮಧ್ಯರಾತ್ರಿ ನಿಯಂತ್ರಣ ತಪ್ಪಿ ಓಡಿದ ಕಾರು; ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ನಿಯಂತ್ರಣ ತಪ್ಪಿ ಓಡಿದ ಕಾರು ಸರಣಿ ಅಪಘಾತದಿಂದಾಗಿ (Road accident) ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭಾನುವಾರ ಮಧ್ಯರಾತ್ರಿ (Car Hits tree and driver dead) ಈ ಘಟನೆ ನಡೆದಿದೆ. ಬಾಣಸವಾಡಿ ಸಮೀಪದ ಸಿಎಂಆರ್ ರೋಡ್ ನಲ್ಲಿ ರಾತ್ರಿ 2.30ರ ಸುಮಾರಿಗೆ ನಡೆದ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮೆಲ್ವಿನ್ ಜೋಸ್ವಾ(25) ಎಂದು ಗುರುತಿಸಲಾಗಿದೆ (Bangalore News).

ಜೋಸ್ವಾ ಮೊದಲು ಮಧ್ಯರಾತ್ರಿ ಚಲಾಯಿಸಿಕೊಂಡು ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿತ್ತು. ಬಳಿಕ ಮರದ ಕೆಳಗೆ ನಿಂತಿದ್ದ ಕಾರು ಹಾಗೂ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಈ ಹಂತದಲ್ಲಿ ತೀವ್ರ ಗಾಯಗೊಂಡು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Chikkaballapur News : ಗಂಡ ಚೆನ್ನಾಗಿ ನೋಡಿಕೊಳ್ಳಲ್ಲ ಎಂದು ಕೆರೆಗೆ ಹಾರಿ ಕಾಲು ಮುರಿದುಕೊಂಡಳು

ಅಪಘಾತ ಸಂಭವಿಸಲು ಕಾರಣವೇನು? ಕುಡಿತದ ಮತ್ತಿನಲ್ಲಿದ್ದರೇ? ನಿದ್ದೆಯ ಮಂಪರೇ? ಅಥವಾ ವಾಹನದಲ್ಲಿ ಏನಾದರೂ ಸಮಸ್ಯೆ ಆಯಿತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version