Site icon Vistara News

Road accident | ಟಂಟಂಗೆ ಟ್ರ್ಯಾಕ್ಟರ್‌ ಡಿಕ್ಕಿ: ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತ್ಯು, ಐವರಿಗೆ ಗಂಭೀರ ಗಾಯ

yadagiri accident

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಸಿದ್ದಾಪುರ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road accident) ಇಬ್ಬರು ಕ್ರೀಡಾಪಟುಗಳು ಪ್ರಾಣ ಕಳೆದುಕೊಂಡಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವೆಂಕಟೇಶ (21) , ನಾರಾಯಣ (20) ಮೃತಪಟ್ಟಿದ್ದಾರೆ. ಇವರು ಟಂಟಂನಲ್ಲಿ ಪ್ರಯಾಣಿಸುತ್ತಿದ್ದರು.

ವೆಂಕಟೇಶ ಅವರು ದೇವರಗೋನಾಲ ನಿವಾಸಿಯಾಗಿದ್ದು, ನಾರಾಯಣ ಶಿರಸಿ ಮೂಲದವರು. ಇವರು ಸುರಪರದಿಂದ ದೇವರಗೋನಾಲ ಕಡೆ ಟಂಟಂನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರಿಗೆ ಕಲಬುರಗಿ ಆಸ್ಪತ್ರೆಗೆ ರವಾನೆ…ಮಾಡಲಾಗಿದೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ವೆಂಕಟೇಶ ಮತ್ತು ನಾರಾಯಣ ಅವರು ಪ್ರತಿಭಾನ್ವಿತ ಕ್ರೀಡಾಪಟುಗಳಾಗಿದ್ದು, ನಿತ್ಯವೂ ಪ್ರಾಕ್ಟೀಸ್‌ಗೆ ಹೋಗುತ್ತಿದ್ದರು. ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದ ಇವರು ಅದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಇದೀಗ ಅವರ ಕನಸುಗಳು ನುಚ್ಚುನೂರಾದಂತಾಗಿದೆ.

ಇದನ್ನೂ ಓದಿ | Road accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವು‌

Exit mobile version