Udupi Election Results: ಕೃಷ್ಣನ ನಾಡು ಉಡುಪಿಯಲ್ಲಿ ಯಶ ಕಂಡ ಯಶಪಾಲ್‌ ಸುವರ್ಣ Vistara News

ಉಡುಪಿ

Udupi Election Results: ಕೃಷ್ಣನ ನಾಡು ಉಡುಪಿಯಲ್ಲಿ ಯಶ ಕಂಡ ಯಶಪಾಲ್‌ ಸುವರ್ಣ

Karnataka Election 2023: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷದ ಯಶಪಾಲ್‌ ಸುವರ್ಣ ಜಯಗಳಿಸಿದ್ದಾರೆ.

VISTARANEWS.COM


on

Udupi Karnataka Election results winner Yashpal suvarna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರವೂ ಎಲ್ಲರ ಗಮನ ಸೆಳೆದಿತ್ತು. ಬಿಜೆಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಇಲ್ಲಿನ ಫಲಿತಾಂಶದ ಮೇಲೆ ಎಲ್ಲರ ಕಣ್ಣೂ ಇತ್ತು. ಇದೀಗ ಫಲಿತಾಂಶ (Udupi Election Results) ಹೊರಬಿದ್ದಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಅವರು ಜಯ ಸಾಧಿಸಿದ್ದಾರೆ.

ಸ್ಥಾನ ಉಳಿಸಿಕೊಂಡ ಬಿಜೆಪಿ

ಉಡುಪಿ ವಿಧಾನಸಭೆ ಕ್ಷೇತ್ರವನ್ನು ಪರಿಗಣಿಸಿದರೆ ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲಿನಿಂದಲೂ ಬಿಜೆಪಿ ಹಾಲಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ನೀಡುತ್ತದೆ ಎನ್ನುವ ನಿರೀಕ್ಷೆಯಿತ್ತು. ಆದರೆ ಕೊನೆಯ ಕ್ಷಣದಲ್ಲಿ ರಘುಪತಿ ಭಟ್ ಬದಲಿಗೆ ಕಾರ್ಯಕರ್ತ, ಮೊಗವೀರ ಸಮುದಾಯದ ಯಶ್ ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡುವ ಮೂಲಕ ಆಕಾಂಕ್ಷಿಗಳ ಜತೆಗೆ ಮತದಾರರನ್ನು ಕೂಡ ಆಶ್ಚರ್ಯಕ್ಕೀಡಾಗುವಂತೆ ಮಾಡಿತ್ತು. ಪ್ರಾರಂಭದಲ್ಲಿ ರಘುಪತಿ ಭಟ್, ಪಕ್ಷದ ಈ ಅಚಾನಕ್ ನಿರ್ಧಾರದಿಂದ ಬೇಸರಗೊಂಡರೂ ಬಳಿಕ ಅಭ್ಯರ್ಥಿಯ ಜತೆ ಕಣದಲ್ಲಿ ತಮ್ಮದೇ ಚುನಾವಣೆ ಎನ್ನುವಂತೆ ಪ್ರಚಾರವನ್ನು ನಡೆಸಿದ್ದರು. ಹೀಗಾಗಿ ಬಿಜೆಪಿಗೆ ಸಾಂಪ್ರದಾಯಿಕ ಮತ ಸೇರಿದಂತೆ ಕಾರ್ಯಕರ್ತರೊಬ್ಬರಿಗೆ ಟಿಕೆಟ್‌ ಕೊಟ್ಟಿರುವುದೂ ಇಲ್ಲಿ ವರ್ಕೌಟ್‌ ಆಗಿದೆ. ಅಲ್ಲದೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗಿದ್ದೂ ಮತ್ತೊಂದು ಪ್ಲಸ್‌.

Udupi Election Results
ಉಡುಪಿ ಚುನಾವಣಾ ಫಲಿತಾಂಶ

ಕಾಂಗ್ರೆಸ್‌ಗೆ ಪ್ರಮೋದ್‌ ಮಧ್ವರಾಜ್‌ ಏಟು!

ಕಾಂಗ್ರೆಸ್ ಪಾಳಯದಲ್ಲಿ ಕಳೆದ ಬಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಸಂದರ್ಭದಲ್ಲಿ ಒಂದಿಷ್ಟು ಆಕಾಂಕ್ಷಿಗಳು ಪಟ್ಟಿಯಲ್ಲಿದ್ದರೂ ಕೊನೆಯ ಕ್ಷಣದಲ್ಲಿ ಮೊಗವೀರ ಸಮುದಾಯದ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್‌ ನೀಡಿತ್ತು. ಇದರಿಂದ ಒಂದಿಷ್ಟು ಗೊಂದಲ, ಬಂಡಾಯದಂತಹ ಬೆಳವಣಿಗೆಗಳಾದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಅದನ್ನು ಶಮನ ಮಾಡಲಾಗಿತ್ತು. ಹೀಗಾಗಿ ಪ್ರಸಾದ್‌ ರಾಜ್‌ ಭರ್ಜರಿ ಪ್ರಚಾರ ನಡೆಸಿದರಾದರೂ ಗೆಲುವು ಅವರ ಕೈ ಹಿಡಿಯಲಿಲ್ಲ.

ಪ್ರಭಾವ ಬೀರಿದ ಅಂಶಗಳೇನು?

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಮೊಗವೀರ ವರ್ಸಸ್ ಮೊಗವೀರ ಸ್ಪರ್ಧೆ ಏರ್ಟಟ್ಟಿದ್ದಂತೂ ಸತ್ಯ. ಹೆಚ್ಚಾಗಿ ಜನರ ಮಧ್ಯೆ ಇರುವ ಯಶ್ ಪಾಲ್ ಸುವರ್ಣ ಅವರಿಗೆ ಕ್ಷೇತ್ರದಲ್ಲಿ ಹಿಡಿತ ಹೆಚ್ಚಿತ್ತು. ಹೀಗಾಗಿ ಬಿಜೆಪಿಯ ಪ್ರಭಾವ, ಹಿಜಾಬ್ ಪ್ರಕರಣದ ಕುರಿತದಾದ ಎರಡೂ ಪಕ್ಷಗಳ ನಿಲುವು, ರಾಜ್ಯ ಮತ್ತು ರಾಷ್ಟ್ರ ನಾಯಕರ ಹೇಳಿಕೆಗಳು ಮತ್ತು ಅಭಿವೃದ್ಧಿ ವಿಚಾರವು ಈ ಚುನಾವಣೆಯಲ್ಲಿ ಪ್ರಭಾವ ಬೀರಿದೆ.

ಇದನ್ನೂ ಓದಿ: Karnataka Election Results Live Updates: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಬೆಳವಣಿಗೆ

ಕಳೆದ ಚುನಾವಣೆ ಫಲಿತಾಂಶ
ರಘುಪತಿ ಭಟ್ (ಬಿಜೆಪಿ): 84,946 | ಪ್ರಮೋದ್ ಮಧ್ವರಾಜ್ (ಕಾಂಗ್ರೆಸ್) 72,902 | ಗೆಲುವಿನ ಅಂತರ- 12,044

ಈ ಬಾರಿಯ ಚುನಾವಣಾ ಫಲಿತಾಂಶ
ಯಶ್‌ಪಾಲ್‌ ಸುವರ್ಣ (ಬಿಜೆಪಿ): 97079 | ಪ್ರಸಾದ್ ರಾಜ್ ಕಾಂಚನ್ (ಕಾಂಗ್ರೆಸ್‌) 64303 | ಗೆಲುವಿನ ಅಂತರ: 32776 | ನೋಟಾ: 1316

ಕರ್ನಾಟಕ ಚುನಾವಣೆಯ ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ನಾಳೆ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ!

Rain News : ಡಿ.10ರಂದು ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ (Karnataka weather Forecast) ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗುವ (Rain News) ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರದಿಂದ ಮಳೆ ಇರಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cyber Crime: ಪಾರ್ಟ್‌ ಟೈಂ ಜಾಬ್‌ ಆಮಿಷ; ಲಿಂಕ್‌ ಕ್ಲಿಕ್ಕಿಸಿ ಕಾಸು ಲೂಟಿ, ಹೋಯಿತು ಕೋಟಿ ಕೋಟಿ!

ಕರಾವಳಿ- ಮಲೆನಾಡಲ್ಲಿ ಉತ್ತಮ ಮಳೆ

ರಾಜ್ಯದಲ್ಲಿ ಶುಕ್ರವಾರದಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಜಯಪುರ (ಚಿಕ್ಕಮಗಳೂರು ಜಿಲ್ಲೆ) 6, ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ), ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ) ತಲಾ 5 ಸೆಂ.ಮೀ ಮಳೆಯಾಗಿದೆ.

ಹೊಸದುರ್ಗ (ಚಿತ್ರದುರ್ಗ ಜಿಲ್ಲೆ), ಕಡೂರು (ಚಿಕ್ಕಮಗಳೂರು ಜಿಲ್ಲೆ) ತಲಾ 4 ಸೆಂ.ಮೀ ಹಾಗೂ ಕೊಟ್ಟಿಗೆಹಾರ, ಎನ್.ಆರ್.ಪುರ, ತರೀಕೆರೆ, ಯಗಟಿ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ), ಮೂರ್ನಾಡು (ಕೊಡಗು ಜಿಲ್ಲೆ) ತಲಾ 3 ಸೆಂ.ಮೀ ಮಳೆಯಾಗಿದೆ. ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) 2 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ವೈ.ಎನ್.ಹೊಸಕೋಟೆ, ಸಿರಾ (ಎರಡೂ ತುಮಕೂರು ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1 ಸೆಂ. ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 14.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Mooru Muttugalu Nataka: ಮೂರು ಮುತ್ತುಗಳು ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ಇನ್ನಿಲ್ಲ

Mooru Muttugalu Nataka: ಮೂರು ಮುತ್ತುಗಳು ನಾಟಕ ಕಳೆದ 26 ವರ್ಷಗಳಿಂದ ಸುಮಾರು 1900 ಪ್ರದರ್ಶನ ಕಂಡಿದ್ದು, ಪ್ರತಿವರ್ಷ 50-60 ಪ್ರದರ್ಶನ ಕಾಣುತ್ತಿತ್ತು. ಅದರಲ್ಲಿಯೂ ಅಶೋಕ್ ಶಾನಭಾಗ್ ಅವರ ಕಾಮಿಡಿಯಂತೂ ನೋಡುಗರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿತ್ತು.

VISTARANEWS.COM


on

moorumuthu fame drama artist ashok shanbag passes away
Koo

ಬೆಂಗಳೂರು: ರೂಪಕಲಾ ನಾಟಕ ತಂಡದ ʻಮೂರು ಮುತ್ತುಗಳುʼ ನಾಟಕ (Mooru Muttugalu Nataka) ಖ್ಯಾತಿಯ ಅಶೋಕ್ ಶಾನಭಾಗ್ (ashok shanbhag) ವಿಧಿವಶರಾಗಿದ್ದಾರೆ. ಕೆಲವು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಶೋಕ್ ಶಾನಭಾಗ್ ಅವರು, ಡಿ.8ರಂದು ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂರು ಮುತ್ತು ನಾಟಕ ಮಾತ್ರವಲ್ಲದೇ ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಲ್ಲಿ ಅಶೋಕ್ ಶಾನಭಾಗ್ ನಟಿಸಿದ್ದರು.

ಮೂರು ಮುತ್ತುಗಳು ನಾಟಕ ಕಳೆದ 26 ವರ್ಷಗಳಿಂದ ಸುಮಾರು 1900 ಪ್ರದರ್ಶನ ಕಂಡಿದ್ದು, ಪ್ರತಿವರ್ಷ 50-60 ಪ್ರದರ್ಶನ ಕಾಣುತ್ತಿತ್ತು. ಅದರಲ್ಲಿಯೂ ಅಶೋಕ್ ಶಾನಭಾಗ್ ಅವರ ಕಾಮಿಡಿಯಂತೂ ನೋಡುಗರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿತ್ತು. ಸೃಜನ್‌ ಲೋಕೇಶ್‌ ನಡೆಸಿಕೊಡುತ್ತಿದ್ದ `ಮಜಾ ಟಾಕೀಸ್‌’ನಲ್ಲೂ ಅಶೋಕ್ ಶಾನಭಾಗ್ ಭಾಗವಹಿಸಿದ್ದರು. ಕುಂದಾಪುರದ `ಕಾಮಿಡಿ ಕಿಂಗ್‌’ ಎಂದೇ ಪ್ರಸಿದ್ಧಿ ಪಡೆದ ಅಶೋಕ್ ಶಾನಭಾಗ್ ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: Yash19 Title Reveal: ಯಶ್‌ ಹೊಸ ಸಿನಿಮಾದ ಟೈಟಲ್‌ ಅನೌನ್ಸ್‌! ವಿಡಿಯೊ ನೋಡಿ!

Mooru Muttugalu Nataka

ಅಶೋಕ್ ಶಾನಭಾಗ್ ಅವರ ಅಂತ್ಯಕ್ರಿಯೆ ಇಂದು(ಡಿಸೆಂಬರ್‌ 09) ಶನಿವಾರ ಕುಂದಾಪುರದಲ್ಲಿ ನಡೆಯಲಿ ಎಂದು ಮೂಲಗಳು ತಿಳಿಸಿವೆ. ಮೂರು ಮುತ್ತುಗಳು ನಾಟಕದಲ್ಲಿ ಕೆಲವು ಬದಲಾವಣೆಗಳನ್ನೂ ತಂದಿದ್ದರೂ ಸಹ, ಎಲ್ಲಿಯೂ ತನ್ನ ಬೇಡಿಕೆಯನ್ನು ಕಳೆದುಕೊಂಡಿರಲಿಲ್ಲ. ಇತ್ತೀಚೆಗೆ ಅಶೋಕ್‌ ಅವರು ಯುಟ್ಯೂಬ್‌ನಲ್ಲಿ ಹಲವು ವಿಡಿಯೊಗಳನ್ನು ಹಂಚಿಕೊಂಡಿದ್ದರು.

Continue Reading

ಉಡುಪಿ

Swamy Koragajja : ಕೇಳಿದ್ದನ್ನು ಕೊಟ್ಟ ಕೊರಗಜ್ಜನಿಗೆ 1002 ಬಾಟಲಿ ಮದ್ಯ ಅರ್ಪಿಸಿದ ಭಕ್ತ!

Swami Koragajja : ಕೊರಗಜ್ಜನನ್ನು ನಂಬಿದವರಿಗೆ ಅವರ ಇಷ್ಟಾರ್ಥ ಈಡೇರುತ್ತದೆ ಎಂಬ ಪವಾಡ ಸದೃಶ ನಂಬಿಕೆ ಕರಾವಳಿಯಲ್ಲಿದೆ. ಹೀಗೆ ಅಪೂರ್ವವಾದ ಬಯಕೆ ಈಡೇರಿದ ಖುಷಿಯಲ್ಲಿ ವ್ಯಕ್ತಿಯೊಬ್ಬರು 1002 ಬಾಟಲಿ ಮದ್ಯ ಸಮರ್ಪಣೆ ಮಾಡಿದ್ದಾರೆ.

VISTARANEWS.COM


on

1002 bottles of alcohol offered to koragajja in Udupi
ಕಟಪಾಡಿ ಪೇಟೆಬೆಟ್ಟು ಕೊರಗಜ್ಜ ಸನ್ನಿಧಿಯಲ್ಲಿ ಸಮರ್ಪಣೆಯಾದ ಮದ್ಯದ ಬಾಟಲಿಗಳು
Koo

ಉಡುಪಿ: ತುಳುನಾಡಿನಲ್ಲಿ ಕೊರಗಜ್ಜ (Swamy koragajja) ಎಂದರೆ ಎಲ್ಲರ ಪ್ರೀತಿಯ ದೈವ. ಯಾರೇ ಕಷ್ಟದಲ್ಲಿದ್ದರೂ, ನೋವಿನಲ್ಲಿದ್ದರೂ, ದಿಕ್ಕೆಟ್ಟು ನಿಂತರೂ ಒಂದೇ ಭಕ್ತಿಯ ಮನವಿಗೆ ಓಗೊಡುವ ಶಕ್ತಿ ಎನ್ನುವುದು ಜನರ ನಂಬಿಕೆ. ಅಂಥ ಕೊರಗಜ್ಜನಿಗೆ ಭಕ್ತರೊಬ್ಬರು 1002 ಬಾಟಲಿ ಮದ್ಯ (1002 Bottles of Alcohol) ಅರ್ಪಿಸಿದ್ದಾರೆ. ಅಜ್ಜ ಕೇಳಿದ್ದನ್ನು ಕೊಟ್ಟಿದ್ದಾರೆ ಎಂದು ಪ್ರೀತಿಯಿಂದ ಹರಕೆ ತೀರಿಸಿದ್ದಾರೆ ಆ ಭಕ್ತ (Offering by devotee).

1002 bottles of alcohol offered to koragajja in Udupi

ಕೊರಗಜ್ಜನಿಗೆ ಮದ್ಯ ಸಮಾರಾಧನೆ ಹೊಸತಲ್ಲ. ತಾವು ಅಂದುಕೊಂಡಿದ್ದನ್ನು ಈಡೇರಿಸಿದಾಗ, ಕಳೆದುಕೊಂಡಿದ್ದು ಸಿಕ್ಕಿದಾಗ ಜನರು ಭಕ್ತಿಯ ಸಮರ್ಪಣೆ ಮಾಡುವುದು ಇಲ್ಲಿನ ವಾಡಿಕೆ. ಅಜ್ಜನಿಗೆ ಮದ್ಯ, ಚಕ್ಕುಲಿ ಮತ್ತು ಎಲೆ ಅಡಿಕೆ ಬೀಡಾ ಅಂದರೆ ತುಂಬ ಇಷ್ಟ. ಸಾಮಾನ್ಯವಾಗಿ ಅಜ್ಜನಿಗೆ ಒಬ್ಬರು ಒಂದು ಬಾಟಲಿ ಮದ್ಯವನ್ನು ನೀಡುವುದು ವಾಡಿಕೆ. ಆದರೆ, ಇಷ್ಟೊಂದು ಪ್ರಮಾಣದಲ್ಲಿ ಮದ್ಯ ಒಪ್ಪಿಸಿರುವುದು ಇದೇ ಮೊದಲು.

1002 bottles of alcohol offered to koragajja in Udupi

ಅಂದ ಹಾಗೆ ಈ ಭಕ್ತಿಯ ಸಮರ್ಪಣೆ ನಡೆದಿರುವುದು ಉಡುಪಿ ಜಿಲ್ಲೆ ಕಟಪಾಡಿ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಮತ್ತು ಶ್ರೀ ಸ್ವಾಮಿಕೊರಗಜ್ಜ ಸನ್ನಿಧಿಯಲ್ಲಿ. ಇಲ್ಲಿ ಬಂದು ಹರಕೆ ಹೊತ್ತವರಿಗೆ ಒಳ್ಳೆಯದಾಗಿದೆ, ಅಭೀಷ್ಟಗಳು ಈಡೇರಿವೆ ಎನ್ನುವ ನಂಬಿಕೆ ಬಲವಾಗಿದೆ.

ಈ ಪ್ರಕರಣದಲ್ಲಿ 1002 ಬಾಟಲಿ ಮದ್ಯ ಸಮರ್ಪಣೆ ಮಾಡಿದವರು ಉಡುಪಿಯ ಜಿಲ್ಲೆಯ ಸಾಲಿಗ್ರಾಮದ ರವಿಚಂದ್ರ ಅವರು. ಅವರು ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಬಂದು ಈ ಸೇವೆ ನೀಡಿದ್ದಾರೆ.

ರವಿಚಂದ್ರ ದಂಪತಿಗೆ ಮದುವೆಯಾಗಿ ಹಲವು ವರ್ಷಗಳ ಕಾಲ ಮಕ್ಕಳಾಗಿರಲಿಲ್ಲ. ಹೀಗಾಗಿ ಯಾರದೋ ಸಲಹೆಯಂತೆ ಅವರು ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ಮತ್ತು ಕೊರಗಜ್ಜ ದೈವಸ್ಥಾನಕ್ಕೆ ಬಂದು ಕೊರಗಜ್ಜ ಗುಡಿಯ ಮುಂದೆ ಸಂತಾನ ಪ್ರಾಪ್ತಿಗಾಗಿ ಕಣ್ಣೀರಿನ ಮನವಿ ಸಲ್ಲಿಸಿದ್ದರು. ಮಕ್ಕಳಾದರೆ 1002 ಬಾಟಲಿ ಮದ್ಯ ಒಪ್ಪಿಸುವುದಾಗಿ ದಂಪತಿ ಹರಕೆ ಹೊತ್ತುಕೊಂಡಿದ್ದರು.

1002 bottles of alcohol offered to koragajja in Udupi

ಇದೆಲ್ಲವೂ ಆಗಿ ಒಂದು ವರ್ಷವೇ ಕಳೆದಿದೆ. ರವಿಚಂದ್ರ ದಂಪತಿ ಬದುಕಿನಲ್ಲಿ ಈಗೊಂದು ಪುಟ್ಟ ಮಗು ಬಂದಿದೆ. ಕೊರಗಜ್ಜ ಕೊಟ್ಟ ಭಿಕ್ಷೆ ಇದು ಎಂದು ಅವರು ನಂಬಿದ್ದಾರೆ. ಮಗು ಹುಟ್ಟಿದ ಕೂಡಲೇ ಹರಕೆ ತೀರಿಸಬೇಕು ಎಂದು ರವಿಚಂದ್ರ ದಂಪತಿ ಬಯಸಿದ್ದರು. ಆದರೆ, ಇದ್ದ ಹಣ ಖರ್ಚಾಗಿತ್ತು. ಹೀಗಾಗಿ ಹೊಸದಾಗಿ ಹಣ ಹೊಂದಾಣಿಕೆ ಮಾಡಲು ಸ್ವಲ್ಪ ಸಮಯ ಹಿಡಿಯಿತಂತೆ. ಇದೆಲ್ಲವೂ ಕೊರಗಜ್ಜನಿಗೆ ಗೊತ್ತಾಗುತ್ತದೆ ಎನ್ನುವುದು ಅವರ ನಂಬಿಕೆ.

1002 bottles of alcohol offered to koragajja in Udupi
ಕೊರಗಜ್ಜನ ಗುಡಿಯಲ್ಲಿ ಮದ್ಯ ಸಮರ್ಪಿಸಿದ ರವಿಚಂದ್ರ ದಂಪತಿ

ಅವರೀಗ ಕುಟುಂಬ ಸಮೇತರಾಗಿ ಬಂದು 1002 ಮದ್ಯದ ಬಾಟಲಿಗಳನ್ನು ತಂದು ಹರಕೆ ಕಟ್ಟೆ ಮುಂದೆ ಜೋಡಿಸಿ ನಮಿಸಿದ್ದಾರೆ. ಅಂದ ಹಾಗೆ ಈ ಕೊರಗಜ್ಜ ಸನ್ನಿಧಿಯಲ್ಲಿ ಇಷ್ಟೊಂದು ಪ್ರಮಾಣದ ಮದ್ಯದ ಹರಕೆ ಸಂದಾಯವಾಗಿರಲಿಲ್ಲವಂತೆ.

ಇಷ್ಟೊಂದು ಮದ್ಯ ಏನು ಮಾಡುತ್ತಾರೆ?

1002 bottles of alcohol offered to koragajja in Udupi

ಕೊರಗಜ್ಜನಿಗೆ ಸಾಮಾನ್ಯವಾಗಿ ಶೇಂದಿ (ಕಳ್ಳು), ಬೀಡಾ, ಚಕ್ಕುಲಿ, ಮದ್ಯವನ್ನು ಹರಕೆಯಾಗಿ ನೀಡಲಾಗುತ್ತದೆ. ಸಾಮಾನ್ಯವಾಗಿ ಇದು ದೊಡ್ಡ ಪ್ರಮಾಣದಲ್ಲಿ ಇರುವುದಿಲ್ಲ. ಹೀಗಾಗಿ ಬಂದ ಹರಕೆಯನ್ನು ಮದ್ಯ ಕುಡಿಯುವ ಅಭ್ಯಾಸವಿರುವ ಭಕ್ತರಿಗೆ ನೀಡಲಾಗುತ್ತದೆ. ಇದನ್ನು ಜನರು ಭಕ್ತಿಯಿಂದ ಸ್ವೀಕರಿಸಿ ದೇವರ ಪ್ರಸಾದ ಎಂದು ನಂಬುತ್ತಾರೆ. ಆದರೆ, ಇದೇ ಮೊದಲ ಬಾರಿಗೆ ಇಷ್ಟೊಂದು ಬಾಟಲಿಗಳು ಬಂದಿರುವುದರಿಂದ ಅದನ್ನು ಏನು ಮಾಡಬೇಕು ಎನ್ನುವ ತೀರ್ಮಾನ ಆಗಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: Koragajjana pawada : ಮತ್ತೊಮ್ಮೆ ಕೊರಗಜ್ಜನ ಪವಾಡ; ನಿದ್ದೆಗಣ್ಣಲ್ಲಿ ನಡೆದುಬಂದ ಮಗುವನ್ನು ರಕ್ಷಿಸಿದ ಚಾಲಕ

ಕರಾವಳಿಯ ಕೊರಗಜ್ಜನಿಗೆ ದೇಶಾದ್ಯಂತ ಭಕ್ತರು

ಕರಾವಳಿಯಲ್ಲಿ ಹಲವಾರು ಕೊರಗಜ್ಜ ಸಾನಿಧ್ಯಗಳಿದ್ದು, ಪ್ರತಿಯೊಂದು ಗುಡಿಯೂ ತನ್ನದೇ ಆದ ಪವಾಡ ಸದೃಶ ನಂಬಿಕೆಗಳಿಂದ ಜನಪ್ರಿಯತೆ ಪಡೆದಿವೆ. ಒಂದು ಕಾಲದಲ್ಲಿ ಮಾರ್ಗದ ಬದಿಯಲ್ಲಿ ಕೇವಲ ಪುಟ್ಟ ಗುಡಿಗಳಾಗಿ ನೆಲೆಗೊಂಡಿದ್ದ ಕೊರಗಜ್ಜ ಸ್ಥಾನಗಳು ಈಗ ಎಲ್ಲರ ಮನಸಿಗೆ ಹತ್ತಿರವಾಗಿದ್ದು, ದೊಡ್ಡ ಕ್ಷೇತ್ರಗಳಾಗಿ ಗಮನ ಸೆಳೆಯುತ್ತಿವೆ. ಕರಾವಳಿ ಮಾತ್ರವಲ್ಲ, ದೇಶದ, ರಾಜ್ಯದ ಹಲವು ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಚಿತ್ರನಟರು, ರಾಜಕಾರಣಿಗಳು ಕೂಡಾ ಈಗ ಕೊರಗಜ್ಜನ ಭಕ್ತರಾಗಿದ್ದಾರೆ.

Continue Reading

ಉಡುಪಿ

Karnataka Weather : ವೀಕೆಂಡ್‌ಗೆ ಮಳೆ ಅಡ್ಡಿ! ಯಾವ್ಯಾವ ಜಿಲ್ಲೆಗೆ ಅಲರ್ಟ್‌

Rain News : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ಮಳೆ ಸೂಚನೆ (rain News) ಇದ್ದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ (Karnataka weather Forecast) ಸುರಿಯಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದ ಅಲ್ಲಲ್ಲಿ ಚದುರಿದಂತೆ ಮಳೆಯಾಗಹುದು.

ಸಾಧಾರಣ ಮಳೆ!

ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Funky Pant Suit Fashion: ಮೆನ್ಸ್ ಕ್ಲಾಸಿ ಪ್ಯಾಂಟ್‌ ಸೂಟ್‌ಗೂ ಸಿಕ್ತು ಫ್ಯಾನ್ಸಿ ಫಂಕಿ ಲುಕ್‌!

ಉತ್ತರ ಕನ್ನಡ, ಉಡುಪಿಗಿಲ್ಲ ಮಳೆ ಸೂಚನೆ

ಮಲೆನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಆಗಾಗ ಮರೆಯಾಗುವ ಸೂರ್ಯ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರ ಮಳೆಯಾಗಹುದು. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Dina Bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ6 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ7 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Houses without infrastructure are not completed PMAY houses
ದೇಶ7 hours ago

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

UP Yoddhas vs Telugu Titans
ಕ್ರೀಡೆ7 hours ago

Pro Kabaddi: ಯೋಧಾಸ್​ ಆರ್ಭಟಕ್ಕೆ ಮುಳುಗಿದ ತೆಲುಗು ಟೈಟಾನ್ಸ್‌

Central government bars onion export to curb inflation
ದೇಶ8 hours ago

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

Nat Sciver-Brunt celebrates dismissing Harmanpreet Kaur
ಕ್ರಿಕೆಟ್8 hours ago

INDW vs ENGW: ಹೀನಾಯವಾಗಿ ಸೋತು ಸರಣಿ ಕಳೆದುಕೊಂಡ ಭಾರತ ಮಹಿಳಾ ತಂಡ

Farmers Protest
ಕರ್ನಾಟಕ8 hours ago

Farmers Protest: ಸ್ವಾಮೀಜಿಗಳ ಸಂಧಾನ ಯಶಸ್ವಿ; ಕಿತ್ತೂರಲ್ಲಿ ಪ್ರತಿಭಟನೆ ಹಿಂಪಡೆದ 9 ಹಳ್ಳಿ ರೈತರು

Muslim woman beaten up for voting bjp
ದೇಶ8 hours ago

ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಗೆ ಮನೆಯವರಿಂದಲೇ ಹಲ್ಲೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema1 day ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ2 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌