Udupi Toilet Case : ಮಕ್ಕಳಾಟ ಪರಮೇಶ್ವರ್‌ ಮಗಂದು; ಉಡುಪಿ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಯಶ್ಪಾಲ್‌ ಸುವರ್ಣ ಆಕ್ರೋಶ Vistara News
Connect with us

ಉಡುಪಿ

Udupi Toilet Case : ಮಕ್ಕಳಾಟ ಪರಮೇಶ್ವರ್‌ ಮಗಂದು; ಉಡುಪಿ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಯಶ್ಪಾಲ್‌ ಸುವರ್ಣ ಆಕ್ರೋಶ

Udupi Toilet Case : ಉಡುಪಿಯ ಕಾಲೇಜಿನಲ್ಲಿ ನಡೆದ ವಿಡಿಯೊ ಚಿತ್ರೀಕರಣ ಪ್ರಕರಣದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್‌ ಸುವರ್ಣ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

VISTARANEWS.COM


on

Yashpal suvarna statement
ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಮೆರವಣಿಗೆ. ಒಳ ಚಿತ್ರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಯಶ್‌ಪಾಲ್‌ ಸುವರ್ಣ
Koo

ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ (Nethrajyothi Paramedical College) ನಡೆದ ಘಟನೆಯನ್ನು ಮಕ್ಕಳಾಟ ಎಂದು ನಿರ್ಲಕ್ಷ್ಯದಿಂದ ಪ್ರತಿಕ್ರಿಯಿಸಿದ ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ವಿರುದ್ಧ ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣ (Udupi MLA Yashpal Suvarna) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳಾಟ ಉಡುಪಿಯಲ್ಲಿ ನಡೆದಿದ್ದಲ್ಲ, ಪರಮೇಶ್ವರ್‌ ಮಗಂದು (Son of Parameshwar) ಎಂದಿದ್ದಾರೆ.

ಉಡುಪಿ ಕಾಲೇಜಿನಲ್ಲಿ ನಡೆದ ವಿದ್ಯಮಾನದ ಸಂಪೂರ್ಣ ತನಿಖೆಗೆ ಆಗ್ರಹಿಸಿದ ಬಿಜೆಪಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಮೆರವಣಿಗೆಯ (BJP Protest in Udupi) ಸಂದರ್ಭದಲ್ಲಿ ಅವರು ಮಾತನಾಡಿದರು.

ಕಡಿಯಾಳಿ ಬಿಜೆಪಿ ಕಚೇರಿಯಿಂದ ಆರಂಭವಾದ ಪಾದಯಾತ್ರೆ ಉಡುಪಿ ಎಸ್‌ಪಿ ಕಚೇರಿಯವರೆಗೆ ನಡೆದಿದ್ದು, ಸಾವಿರಾರು ಮಂದಿ ಇದರಲ್ಲಿ ಭಾಗವಹಿಸಿದ್ದರು. ಶಾಸಕರಾದ ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ ಮತ್ತು ಗುರುರಾಜ್‌ ಗಂಟಿಹೊಳೆ ಅವರು ಎಸ್‌ಪಿ ಕಚೇರಿಯ ಎದುರು ನಡೆದ ಹಕ್ಕೊತ್ತಾಯ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು.

BJP Protest at Udupi

ಉಡುಪಿಯ ಈ ಪ್ರಕರಣ ಅತ್ಯಂತ ಗಂಭೀರವಾಗಿದೆ. ಇದರ ಬಗ್ಗೆ ಲಘುವಾಗಿ ಮಾತನಾಡಬಾರದು. ಈ ಪ್ರಕರಣವನ್ನು ಗೃಹ ಸಚಿವ ಜಿ. ಪರಮೇಶ್ವರ್ ಮಕ್ಕಳಾಟ ಅಂತಾ ಹೇಳಿದರು. ಇದು ಮಕ್ಕಳಾಟವಲ್ಲ. ಮಕ್ಕಳಾಟ ಯಾವುದು ಅಂದರೆ ಅವರ ಮಗ ಲಿಂಗ ಬದಲಾಯಿಸಿರುವುದು ಮಕ್ಕಳಾಟ ಎಂದು ಯಶ್‌ಪಾಲ್‌ ಸುವರ್ಣ ಹೇಳಿದರು. ಸಚಿವ ಜಿ. ಪರಮೇಶ್ವರ್‌ ಅವರ ಪುತ್ರ ಲಿಂಗ ಪರಿವರ್ತನೆ ಮಾಡಿಕೊಂಡು ಹೆಣ್ಣಾಗಿದ್ದಾರೆ.

ʻʻಶೌಚಾಲಯದಲ್ಲಿ ಕ್ಯಾಮೆರಾ ಇಟ್ಟವರು ನಾಳೆ ಬಾಂಬ್ ಇಡುವುದಕ್ಕೂ ಹಿಂಜರಿಯುವುದಿಲ್ಲʼʼ ಎಂದು ಹೇಳಿದ ಅವರು, ಮೊಬೈಲ್ ವಿಡಿಯೋ ಮಾಡಿದರಿಗೆ ಸಹಕಾರ ನೀಡಿದವರ ತನಿಖೆ ಆಗಬೇಕು ಎಂದರು.

ʻʻಪಿಎಫ್ಐ ಬ್ಯಾನ್ ಆಗಿದ್ದ ಸಂದರ್ಭದಲ್ಲಿ ಕೆಲವರ ತನಿಖೆಯಾಗಿಲ್ಲ. ಅವರು ಈ ಪ್ರಕರಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಅವರ ಮೇಲೆಯೂ ಪೊಲೀಸ್ ತನಿಖೆ ಆಗಬೇಕುʼʼ ಎಂದು ಯಶ್‌ಪಾಲ್‌ ಸುವರ್ಣ ಹೇಳಿದರು.

ಖುಷ್ಬೂ ಅಕ್ಕನಿಗೆ ಸ್ವಲ್ಪ ಗಡಿಬಿಡಿಯಾಗಿದೆ ಎಂದ ಗುರುರಾಜ್‌ ಗಂಟಿಹೊಳೆ

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿರುವ ಖುಷ್ಬೂ ಸುಂದರ್‌ ಅವರಿಗೆ ಸ್ವಲ್ಪ ಗಡಿಬಿಡಿಯಾಗಿದೆ. ಅವರು ಟಾಯ್ಲೆಟ್‌ನಲ್ಲಿ ಹಿಡನ್‌ ಕ್ಯಾಮೆರಾ ಇಟ್ಟಿರಲಿಲ್ಲ ಎಂದು ಹೇಳಿದ್ದಾರೆ. ನಾವೂ ಹಿಡನ್ ಕ್ಯಾಮೆರಾ ಇತ್ತು ಅಂತಾ ಹೇಳಿಲ್ಲ. ಅವರಿಗೆ ಮಾಹಿತಿ ನೀಡಿದವರು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ʻʻಹಿಂದೂ ಸಂಘಟನೆಗಳು 25 ವರ್ಷಗಳಿಂದ ಜಿಹಾದಿ ನೆಟ್ ವರ್ಕ್ ಬಗ್ಗೆ ಹೇಳುತ್ತಿವೆ. ಈಗ ನಾವು ಹೇಳಿದ ಮಾತುಗಳೆಲ್ಲಾ ನಿಜವಾಗಿದೆʼʼ ಎಂದು ಹೇಳಿದ ಅವರು, ಉಡುಪಿ ಮೊಬೈಲ್ ಚಿತ್ರೀಕರಣ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಬೇಕು. ಎನ್ಐಎ ಈ ಪ್ರಕರಣದ ಸತ್ಯ ಬಯಲಿಗೆಳೆಯಲಿದೆʼʼ ಎಂದು ಹೇಳಿದರು.

ಇದನ್ನೂ ಓದಿ : Udupi Toilet Case : ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್‌ ; ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ

Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Edited by

Girls standing in road with rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್‌ (Weather report) ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ

ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.

ಮಲೆನಾಡಲ್ಲೂ ಸಣ್ಣ ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ‌ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ

ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?

Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

Edited by

Girl standing in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಲ್ಕು ಜಿಲ್ಲೆಗಳಿಗೆ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಒಳನಾಡಲ್ಲಿ ಹಗುರ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ.

VISTARANEWS.COM


on

Edited by

Women Enjoying Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.

ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್‌ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Kantara Effect : ಕಣ್ಮರೆಯಾಗಿದ್ದಯುವಕ 8 ದಿನಗಳ ಬಳಿಕ ನಾಯಿ ಜತೆ ಪ್ರತ್ಯಕ್ಷ; ಅವನ ಹಿಂದೆ ಇದೆ ಕಾಂತಾರ ಪವಾಡ ಕಥೆ!

Kantara Effect : ಕುಂದಾಪುರ ತೊಂಬಟ್ಟಿನ ಒಬ್ಬ ಯುವಕ ದಿಢೀರ್‌ ನಾಪತ್ತೆಯಾಗುತ್ತಾನೆ. ಎಲ್ಲಿ ಹುಡುಕಿದರೂ ಇಲ್ಲ. ಎಂಟು ದಿನದ ಬಳಿಕ ಒಂದು ನಾಯಿ ಜತೆ ಆತ ಪ್ರತ್ಯಕ್ಷನಾಗುತ್ತಾನೆ. ಇದರ ಹಿಂದೆ ಕಾಂತಾರದಂಥಹುದೇ ಕಥೆ ಇದೆ.. ಏನಿದು ಅಚ್ಚರಿ?

VISTARANEWS.COM


on

Edited by

Disappeared man reaapears, people connect to Kantara
Koo

ಅಶ್ವತ್ಥ್‌ ಆಚಾರ್ಯ, ವಿಸ್ತಾರ ನ್ಯೂಸ್‌ ಉಡುಪಿ

ಕಾಂತಾರ (Kantara Movie) ಒಂದು ಸಿನಿಮಾ ಅಲ್ಲ, ಅದೊಂದು ಅನುಭವ ಎಂದು ಹಲವು ಹೇಳುತ್ತಾರೆ. ಹಲವರಿಗೆ ಇಂಥ ಅತೀಂದ್ರಿಯ ಅನುಭವ (Unnatural Experience) ಆಗಿರುವುದರಿಂದಲೇ ಅದು ನಮ್ಮೆಲ್ಲರ ಕಥೆ ಅನಿಸುವುದು. ಅಂಥಹುದೇ ಒಂದು ಅನುಭವ ಈಗ ಕುಂದಾಪುರ ತಾಲೂಕಿನ (Kundapura taluk) ಮಚ್ಚಟ್ಟು ಗ್ರಾಮದ ತೊಂಬಟ್ಟಿನ ಜನತೆಗೆ ಆಗಿದೆ. ಮನೆಯಿಂದ ದಿಢೀರ್‌ ಕಣ್ಮರೆಯಾಗಿದ್ದ ಒಬ್ಬ ಯುವಕ (Young man dissapears) ಎಲ್ಲಿ ಹುಡುಕಿದರೂ ಸಿಗುವುದಿಲ್ಲ. ಆದರೆ, ದೈವದ ನುಡಿಯಲ್ಲಿ ಕೇಳಿದಾಗ ಅವನು ಇಲ್ಲೇ ಇದ್ದಾನೆ ಎನ್ನುತ್ತದೆ. ಎಂಟು ದಿನಗಳ ಬಳಿಕ ಆತ ದಿಢೀರ್‌ ಪ್ರತ್ಯಕ್ಷನಾಗುತ್ತಾನೆ (Young man Reappears). ಅವನನ್ನು ಕರೆದುಕೊಂಡು ಬರುವುದು ಒಂದು ನಾಯಿ! ಎಲ್ಲಿ ಹೋಗಿದ್ದೆ ಎನ್ನುವುದು ಅವನಿಗೇ ಗೊತ್ತಿಲ್ಲ! ಹಾಗಿದ್ದರೆ ಮರಳಿ ಬಂದಿದ್ದು ಹೇಗೆ? ದೈವವೇ ಕರೆದುಕೊಂಡುಬಂದಿದೆ ಎನ್ನುತ್ತಾರೆ (Kantara Effect) ತೊಂಬಟ್ಟಿನ ಜನ.

ಹಾಗಿದ್ದರೆ ನಿಜಕ್ಕೂ ಆಗಿದ್ದೇನು? ಇಲ್ಲದೆ ಕಂಪ್ಲೀಟ್‌ ರಿಪೋರ್ಟ್‌

ಆ ಯುವಕನ ಹೆಸರು ವಿವೇಕಾನಂದ. ಕುಂದಾಪುರ ತಾಲೂಕು ಅಮವಾಸೆ ಬೈಲು ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುವ ಮಚ್ಚಟ್ಟು ಗ್ರಾಮದ ತೊಂಬಟ್ಟುವಿನ ಇರ್ಕಿಗದ್ದೆ ನಿವಾಸಿ ಶೀನ ನಾಯ್ಕರ ಮಗ. ವಯಸ್ಸು 28. ಕಳೆದ ಸೆಪ್ಟೆಂಬರ್‌ 16ರಂದು ವಿವೇಕಾನಂದ ಇದ್ದಕ್ಕಿದ್ದಂತೆಯೇ ನಾಪತ್ತೆಯಾಗಿದ್ದ. ಜತೆಗೆ ಮನೆಯ ನಾಯಿಯೂ ಕಣ್ಮರೆಯಾಗಿತ್ತು.

Kantara vivekananda missing
ಇವನೇ ನೋಡಿ ವಿವೇಕಾನಂದ

ಈ ಭಾಗದಲ್ಲಿ ಚಿರತೆಗಳ ಕಾಟ ವಿಪರೀತ. ಹೀಗಾಗಿ ಮೊದಲ ಸಂಶಯ ಬಂದಿದ್ದು ಚಿರತೆಗಳೇನಾದರೂ…! ಅಂತ. ಇಲ್ಲಿ ಯಾವುದೇ ದನ, ನಾಯಿ ಕಣ್ಮರೆಯಾದರೂ ಜನ ಗುಂಪಾಗಿ ಹುಡುಕಾಟ ಮಾಡುವುದು ರೂಢಿ. ಹೀಗಾಗಿ ವಿವೇಕಾನಂದ ನಾಪತ್ತೆಯಾದಾಗಲೂ ಹುಡುಕಾಟ ನಡೆಸಿದರು. ಅರಣ್ಯ ಇಲಾಖೆಗೂ ದೂರು ನೀಡಿದರು. ಅವರೂ ಬಂದು ಬಂದು ಹುಡುಕಾಟ ನಡೆಸಿದರು. ಅದು ದಟ್ಟವಾದ ಕಾಡಿನ ಪ್ರದೇಶ. ಹೀಗಾಗಿ ಎಷ್ಟು ದಿನ ಹುಡುಕಿದರೂ ಸಿಗಲಿಲ್ಲ. ಕೊನೆಗೆ ಮೃತದೇಹವಾಗಲೀ, ಸಾವಿನ ಯಾವುದೇ ಕುರುಹುಗಳಾಗಲೀ ಸಿಗಲಿಲ್ಲ. ಹೀಗಾಗಿ ಜನ ಆತನನ್ನು ಚಿರತೆ ಹೊತ್ತುಕೊಂಡು ಹೋಗಿರಲಾರದು ಅಂದುಕೊಂಡರು.

ಶೀನ ನಾಯ್ಕ ಮತ್ತು ಮನೆಯವರು ಇದ್ದ ದೈವ ದೇವರಿಗೆಲ್ಲ ಹರಕೆ ಹೊತ್ತರು. ಕೊರಗಜ್ಜಾ ಹುಡುಕಿಕೊಡು ಎಂದರು. ಸಾಮಾನ್ಯವಾಗಿ ಈ ಭಾಗದಲ್ಲಿ ಮನುಷ್ಯರು, ಪ್ರಾಣಿಗಳು ನಾಪತ್ತೆಯಾದಾಗ ʻನಿಮಿತ್ತ ಕೇಳುವುದುʼ ರೂಢಿ. ಅಂದರೆ ದೈವದಲ್ಲಿ, ದೇವರಲ್ಲಿ, ಜೋಯಿಸರಲ್ಲಿ ಪ್ರಶ್ನೆ ಕೇಳುವುದು. ವೀಳ್ಯದೆಲೆ, ಕವಡೆ ಕಾಯಿಯ ಮೂಲಕ ಅವರು ಪ್ರಶ್ನೆ ಹೇಳುತ್ತಾರೆ.

ಹಾಗೆ ಶೀನ ನಾಯ್ಕರೂ ನಿಮಿತ್ತ ಕೇಳಿದರು. ಕೇಳಿಬಂದ ಸಂತಸದ ಸಂಗತಿ ಏನೆಂದರೆ: ವಿವೇಕಾನಂದ ಈಸ್‌ ಸೇಫ್!.‌ ಯಾವುದೋ ಒಂದು ನಿರ್ದಿಷ್ಟ ದಿಕ್ಕು ಹೇಳಿದರು. ಎಷ್ಟೋ ದೂರ ಅಂದರು. ಮರಳಿ ಬರುತ್ತಾನೆ ಅಂದರು. ಇದನ್ನು ಕೇಳಿದ ಕುಟುಂಬ ಮತ್ತು ಊರಿನವರು ಅಲ್ಲೆಲ್ಲ ಹುಡುಕಿದರು.

ಇದಾದ ಬಳಿಕ ಸಂಭವಿಸಿದ್ದೇ ಅಚ್ಚರಿ. ಸರಿಯಾಗಿ 8 ದಿನಗಳ ಬಳಿಕ ವಿವೇಕಾನಂದ ನಿಧಾನವಾಗಿ ನಡೆದುಕೊಂಡು ಬರುತ್ತಿದ್ದ. ಆತನ ಮುಂದೆ ನಾಯಿ ದಾರಿ ತೋರಿಸುತ್ತಾ ಬರುತ್ತಿತ್ತು. ಹಾಗಂತ ವಿವೇಕಾನಂದ ಬಂದಿದ್ದು ತನ್ನ ಮನೆಗಲ್ಲ. ತೊಂಬಟ್ಟಿನಿಂದ ಸುಮಾರು ಏಳೆಂಟು ಕಿ.ಮೀ. ದೂರದ ಕಬ್ಬಿನಾಲೆಯ ಸಮೀಪದ ಮನೆಯೊಂದರ ಸಮೀಪ ಬಂದಿದ್ದಾನೆ. ವಿವೇಕಾನಂದ ಮತ್ತು ನಾಯಿ ಎರಡನ್ನೂ ಗಮನಿಸಿದ ಮನೆಯವರು ಶೀನ ನಾಯ್ಕರಿಗೆ ಸುದ್ದಿ ಮುಟ್ಟಿಸಿದರು. ಈಗ ವಿವೇಕಾನಂದನನ್ನು ಮನೆಗೆ ಕರೆತರಲಾಗಿದೆ. ಆಹಾರ ಸೇವಿಸದೆ ಬರಿ ನೀರಿನಲ್ಲೇ ಬದುಕಿದಂತಿರುವ ವಿವೇಕಾನಂದ ನಿತ್ರಾಣನಾಗಿದ್ದಾನೆ. ಆದರೆ, ಮರಳಿಬಂದನಲ್ಲ ಎಂದು ಜನರು ದೈವ ದೇವರ ಮಹಿಮೆಯನ್ನು ಕೊಂಡಾಡುತ್ತಿದ್ದಾರೆ. ಈಗ ವಿವೇಕಾನಂದ ನಾಯಿ, ಮನೆಯವರು ಎಲ್ಲರೂ ಖುಷಿಯಾಗಿದ್ದಾರೆ. ಎಂಬಲ್ಲಿಗೆ ಕಥೆ ಮುಗಿಯುವುದಿಲ್ಲ!

Kantara man missing story
ವಿವೇಕಾನಂದನನ್ನು ಕರೆ ತಂದ ನಾಯಿ

ನಿಜವಾದ ಕಥೆ ಶುರುವಾಗುವುದು ಇಲ್ಲಿಂದಲೇ!

ವಿವೇಕಾನಂದ ಎಂಬ ಸ್ವಲ್ಪ ಬುದ್ಧಿಮಾಂದ್ಯತೆ ಹೊಂದಿರುವ ಯುವಕ ನಾಪತ್ತೆಯಾಗಿ ಎಷ್ಟು ದಿನ ಹುಡುಕಿದರೂ ಸಿಗದೆ ಕೊನೆಗೆ ಎಂಟು ದಿನಗಳ ಬಳಿಕ ಮನೆಗೆ ಬರುವ ಈ ಕಥೆಗೆ ಸಂಬಂಧಿಸಿ ಮತ್ತೊಂದು ಮಗ್ಗುಲೂ ಇದೆ. ನೀವು ಕಾಂತಾರಕ್ಕೂ ಈ ಘಟನೆಗೂ ಏನು ಸಂಬಂಧ ಎಂದು ಯೋಜಿಸುತ್ತಿದ್ದೀರಲ್ಲಾ.. ಅದುವೇ ಈ ಕಥೆ. ಈ ಘಟನೆಗೆ ಸಂಬಂಧಿಸಿ ನಡೆದಿದೆ ಎನ್ನಲಾದ ವಿದ್ಯಮಾನವನ್ನು ರವೀಶ್‌ ಎಂಬವರು ಬರೆದಿದ್ದಾರೆ. ಅವರು ಹೇಳುವ ಕುತೂಹಲಕಾರಿ ವಿಚಾರವನ್ನು ಅವರ ಬರವಣಿಗೆಯಲ್ಲೇ ಓದಿ. ಮುಂದಿನದು ರವೀಶ್‌ ಅವರು ಹೇಳಿದ ಕಥೆ.

ಕಾಂತಾರದಲ್ಲಿ ದೈವ ನರ್ತಕ ಮಾಯವಾಗುವ ಕಥೆಗೂ ಇದಕ್ಕೂ ಸಂಬಂಧ

ಕಾಂತಾರ ಸಿನಿಮಾಮಾದಲ್ಲಿ ದೈವ ನರ್ತಕರು ಕಾಡಿನಲ್ಲಿ ಮಾಯವಾಗುವ ದೃಶ್ಯವಿದೆ. ಅದು ನಿಜವಾ ? ಕಲ್ಪನೆಯಾ? ಎನ್ನುವ ಒಂದು ಚರ್ಚೆ ಹುಟ್ಟು ಹಾಕಿತ್ತು. ಅದು ನಿಜವಾ? ಸುಳ್ಳಾ ಗೊತ್ತಿಲ್ಲ. ಅಂತಹದ್ದೆ ಒಂದು ಘಟನೆ ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟಿನಲ್ಲಿ ನಡೆದಿದೆ.

ಇಂದಿಗೆ ಸುಮಾರು ಹತ್ತು ದಿನ‌ ಮೊದಲು ಊರಿನ ಯುವಕನೊಬ್ಬ ತನ್ನ ಮನೆಯ ಎರಡು ನಾಯಿಗಳೊಂದಿಗೆ ಕಾಣೆಯಾಗುತ್ತಾನೆ. ಮನೆಯವರು ಹುಡುಕಲು ಆರಂಭಿಸುತ್ತಾರೆ ಎಲ್ಲಿ ಹುಡುಕಿದರೂ ಸುಳಿವು ಸಿಗುವುದಿಲ್ಲ. ಮನೆಯವರು,‌ ಊರವರು, ಪೊಲೀಸರು, ಸಿಕ್ಕ ಸಿಕ್ಕವರೆಲ್ಲ ದಟ್ಟ ಕಾಡಿನಲ್ಲಿ ಬಿಟ್ಟು ಬಿಡದೆ ಹುಡುಕುತ್ತಾರೆ ಒಂದೆರಡು ದಿನದಲ್ಲಿ‌ ಒಂದು ನಾಯಿ‌ ಮನೆಗೆ ವಾಪಸ್‌ ಬರುತ್ತದೆ. ಅಲ್ಲಿಗೆ ಊರವರು ಅನಾಹುತವನ್ನು ಗ್ರಹಿಸುತ್ತಾರೆ ಆದರೆ ಹುಡುಕುವುದು ನಿಲ್ಲುವುದಿಲ್ಲ.

ಸಿಗದೆ ಹೋದಾಗ ದೈವ, ದೇವರುಗಳ ಮೊರೆ ಹೋಗುತ್ತಾರೆ . ಕೊರಗಜ್ಜನ ಸನ್ನಿದಿಯಲ್ಲಿ ಕೇಳಿದಾಗ ಬದುಕಿದ್ದಾನೆ ಎಂಬ ಆಶ್ವಾಸನೆ ಸಿಗುತ್ತದೆ. ಅದಾಗಲೇ ಒಂದು ವಾರ ಕಳೆದುಹೋಗುತ್ತದೆ ಯುವಕನ ಸುಳಿವಿಲ್ಲ. ಮನೆಯವರು ಜ್ಯೋತಿಷಿಗಳ‌ ಮೊರೆ ಹೋಗುತ್ತಾರೆ. ಅದರಲ್ಲಿ ಒಂದು ಆಡಿಯೋ ಮಾತ್ರ ದಿಗ್ಬ್ರಮೆಗೊಳಿಸುತ್ತದೆ.

Kantara Movie

ಅದೊಂದು ಫೋನ್ ಕಾಲ್ ಸಂಭಾಷಣೆ. ಒಂದು ಕಡೆ ಒಬ್ಬ ಹೆಂಗಸು: ಮಾಂತ್ರಿಕರೊ, ತಾಂತ್ರಿಕರೊ ಇರಬಹುದು ಇನ್ನೊಂದು ಕಡೆ ಈ ಯುವಕನ ಸಂಬಂಧಿಕರು ಇದ್ದಂತಿದೆ.

ಆ ಮಹಿಳೆ ಹೇಳುತ್ತಾರೆ: “ಹುಡುಗ ಬದುಕಿದ್ದಾನೆ. ಅವರ ಮನೆಯ ಗದ್ದೆಯಲ್ಲಿ ಒಂದು ಕಲ್ಲಿದೆ. ನೋಡಲು ಅದೊಂದು ಸಾಧಾರಣ ಕಲ್ಲು. ಆ ಕಲ್ಲಿನಲ್ಲಿ ದೇವಿ ಇದ್ದಾಳೆ. ಆ ಕಲ್ಲಿನ ಮೇಲೆ ಈತ ಆವಾಗಾವಾಗ ಕೂರುತಿದ್ದ. ಈಗ ಆ ಕಲ್ಲನ್ನು ಗದ್ದೆಯ ಪಕ್ಕದಲ್ಲಿ ಎಸೆದಿದ್ದಾರೆ. ನನಗೆ ಸ್ಪಷ್ಟವಾಗಿ ಕಾಣುತ್ತಿದೆ ಆ ದೇವಿಯ ಕೈಯಲ್ಲಿ ಕತ್ತಿ ಇದೆ. ಅವಳೇ ಅವನನ್ನು ಅಡಗಿಸಿ ಇಟ್ಟಿದ್ದಾಳೆ. ಈಗ ಮನೆಯವರು ಆ ಕಲ್ಲನ್ನು ಹುಡುಕಬೇಕು, ಸಂಜೆ ಆರು ಘಂಟೆಯ ನಂತರ ಕಲ್ಲಿಗೆ ಪೂಜೆ ಮಾಡಿ ಒಂದು ರೂಪಾಯಿ ನಾಣ್ಯವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಎಕ್ಕದ ಮರಕ್ಕೆ‌ ಕಟ್ಟಿ ಪ್ರಾರ್ಥಿಸಿಕೊಳ್ಳಬೇಕು ಹುಡುಗ ಮನೆಗೆ ಬರುತ್ತಾನೆ ” ಎಂದು ಹೇಳುತ್ತಿರುವ ಆಡಿಯೋ ಅದು.

ದಿನ ಬೆಳಗಾದರೆ ಇಂತಹ ಅದೆಷ್ಟೊ ಜ್ಯೋತಿಷಿಗಳು ಹೊಟ್ಟೆ ಪಾಡಿಗೆ ಏನೇನೊ ಹೇಳುತ್ತಿರುತ್ತಾರೆ. ಎಂಟು ದಿನ ಊಟ ವಿಲ್ಲದೆ ಸುರಿವ ಮಳೆಯಲ್ಲಿ ಕ್ರೂರ ಪ್ರಾಣಿಗಳಿರುವ ಕಾಡಿನಲ್ಲಿ ಆ ಯುವಕ ಬದುಕವ ಸಾದ್ಯತೆ ತೀರಾ ಕಡಿಮೆ‌ ಅನಿಸದಿರದು.

Kantara Movie
Kantara Movie scene

ಆದರೆ, ಮನೆಯವರು ಆ ಕಲ್ಲನ್ನು ಹುಡುಕಿದರು. ಆ ಕಲ್ಲಿಗೆ ಪೂಜೆ ಮಾಡಿ ದೀಪವಿಟ್ಟು ಬೇಡಿಕೊಂಡರು. ಆ ರಾತ್ರಿ ಹಾಗೆ ಮುಗಿಯಿತು. ಮರುದಿನ ಆ ಯುವಕ ತನಗೇನೂ ಆಗಿಲ್ಲ ಎಂಬಂತೆ ತನ್ನ ಇನ್ನೊಂದು ನಾಯಿ ಜೊತೆ ನಡೆದುಕೊಂಡು ಬರುತ್ತಿರುವುದನ್ನು ಊರವರು ನೋಡಿ ಅವರ ಮನೆಯಲ್ಲಿರಿಸಿ ಊಟಕ್ಕೆ ಹಾಕಿ ಮನೆಯವರಿಗೆ ಸುದ್ದಿ ಮುಟ್ಟಿಸುತ್ತಾರೆ.

ಈಗ ಸುತ್ತಮುತ್ತ ಎಲ್ಲ ಕಡೆ ಇದೇ ಸುದ್ದಿ. ಆ ಕಲ್ಲು, ಈ ಮಾಂತ್ರಿಕ ಮಹಿಳೆ, ಅವರು ಹೇಳಿದ ದೇವಿ. ಊಟವಿಲ್ಲದ ಎಂಟು ದಿನ ಬದುಕಿದ ಯುವಕ ಅವನನ್ನು ಬಿಟ್ಟು ಬಾರದ ನಾಯಿ. ಅದೇ ಕಾಂತಾರದ ಕಾಡು. ಅಲ್ಲಿ ಮಾಯವಾದವರು ಮತ್ತೆ ಬರಲಿಲ್ಲ. ಇಲ್ಲಿ ಈ ಯುವಕ ಬಂದಿದ್ದಾನೆ.

Kantara  Movie and vivekananda missing

ಈ ವಿಜ್ಞಾನದ ಯುಗದಲ್ಲಿ ಹೀಗೂ ನಡೆಯುತ್ತದಾ ಎನ್ನುವ ಪ್ರಶ್ನೆಗಳಿಗೆ ಉತ್ತರ ಹೌದು ಮತ್ತು ಇಲ್ಲ. ನಂಬಿದವರಿಗೆ ಹೌದು. ನಾನು ಇದೆ ಊರಿನಲ್ಲಿ ಹುಟ್ಟಿ ಬೆಳೆದಿರುವುದರಿಂದ ನಾನದನ್ನು ಬಲವಾಗಿ ನಂಬುತ್ತೇನೆ. ನಂಬದವರಿಗೆ ಒಂದು ಅವಕಾಶವಿದೆ ಇದು ಕಥೆಯಲ್ಲ ನಿಜ ಘಟನೆ ಈಗಷ್ಟೆ ನಡೆದಿದೆ ನೀವು ಇದರ ಹಿಂದೆ‌ ಬೀಳಬಹುದು.
-ಇದಿಷ್ಟು ರವೀಶ್‌ ಅವರು ಹೇಳುವ ಕಥೆ. ಈ ಜಗತ್ತಿನಲ್ಲಿ ಅತಿಮಾನುಷವಾದ ದೈವಿಕ ಶಕ್ತಿಯೊಂದಿದೆ. ಅದುವೇ ಜಗತ್ತನ್ನು ನಿಯಂತ್ರಿಸುತ್ತದೆ ಎನ್ನುವುದನ್ನು ಸಾರವಾಗಿ ಹೇಳುತ್ತದೆ ಕತೆ.

ಇದನ್ನೂ ಓದಿ ; Rishab Shetty : ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಕಾಂತಾರ 2! ಶೂಟಿಂಗ್‌ ಯಾವಾಗ?

ವಿವೇಕಾನಂದನ ಕರೆ ತಂದ ನಾಯಿಗಿದೆ ಸನ್ಮಾನ

ವಿವೇಕಾನಂದ ಬದುಕಿದ್ದಾನೆ ಎಂಬುದನ್ನು ಸಾರಿ ಸಾರಿ ಹೇಳಿದ್ದರು ಹೆಬ್ರಿ ಸಮೀಪದ ಗುಡಿಯೊಂದರ ಕೊರಗಜ್ಜ. ಹೀಗಾಗಿ ಮನೆಯವರೆಲ್ಲ ಸೋಮವಾರ ಸಂಜೆ ಆ ಗುಡಿಗೆ ಹೋಗಲಿದ್ದಾರೆ. ಇತ್ತ ವಿವೇಕಾನಂದನ ಪ್ರಾಣ ಉಳಿಸಿದ್ದು, ಮರಳಿ ಮನೆಗೆ ಕರೆತಂದಿದ್ದು ನಾಯಿ ಎಂಬುದು ನಂಬಿಕೆ. ಇಂಥ ವಿಶ್ವಾಸಾರ್ಹ ಪ್ರಾಣಿಯನ್ನು ಸನ್ಮಾನಿಸುವ ಕಾರ್ಯಕ್ರಮವೂ ಸೋಮವಾರ ಸಂಜೆ ನಡೆಯಲಿದೆ. ಅಂದ ಹಾಗೆ, ಈ ಎಲ್ಲ ವಿದ್ಯಮಾನಗಳನ್ನು ಅಚ್ಚರಿಯ ಕಣ್ಣುಗಳಿಂದ ನೋಡುತ್ತಿರುವವರು ಪೊಲೀಸರು. ವಿವೇಕಾನಂದ ಬದುಕಿದ್ದಾನೆ, ಮರಳಿ ಬಂದಿದ್ದಾನೆ ಎಂದು ಮನೆಯವರು ಹೇಳಿದಾಗ, ನಾವು ಅಷ್ಟು ಹುಡುಕಿದರೂ ಸಿಗದಿದ್ದವನು ಎಲ್ಲಿದ್ದ ಎಂಬ ಅಚ್ಚರಿಯೊಂದಿಗೆ, ಅವನನ್ನು ಒಮ್ಮೆ ಠಾಣೆಗೆ ಕರೆದುಕೊಂಡು ಬನ್ನಿ. ಅವನು ಬದುಕಿದ್ದಾನೆ ಎಂದು ರುಜುವಾತು ಮಾಡಿ ನಾಪತ್ತೆ ಕೇಸು ಕ್ಲೋಸ್‌ ಮಾಡಿಬಿಡುವ ಎಂದಿದ್ದಾರಂತೆ.

ಇದನ್ನೂ ಓದಿ: ಪತ್ನಿ, ಮಕ್ಕಳೊಂದಿಗೆ ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ; ದೇವರ ದರ್ಶನ, ಖಾವಂದರ ಆಶೀರ್ವಾದ ಪಡೆದ ಕಾಂತಾರ ಹೀರೋ

ಇದಿಷ್ಟು ಕಾಂತಾರ ಕಥೆ. ಜನಜೀವನದಲ್ಲಿ ನಡೆಯುವ ಹಲವು ಅಚ್ಚರಿಗಳಲ್ಲಿ ಇದೂ ಒಂದು. ನೀವು ದೈವ ದೇವರುಗಳನ್ನು ನಂಬುವವರೇ ಆದರೆ ದೈವವೇ ಆ ಯುವಕನನ್ನು ಮರಳಿ ತಂದು ಮನೆ ಸೇರಿಸಿದೆ ಎಂದು ನಂಬಬಹುದು. ಇಲ್ಲಾ ಈಗೆಲ್ಲ ಅದು ಸಾಧ್ಯವಾ ಎನ್ನುವ ಯೋಚನೆ ನಿಮ್ಮದಾಗಿದ್ದರೆ ನಾಯಿಯೇ ಅವನನ್ನು ಕೈಹಿಡಿದಿದೆ ಎಂದೂ ಒಪ್ಪಬಹುದು. ಅಂತೂ ಅಚ್ಚರಿಯ ವಿದ್ಯಮಾನವೊಂದು ಇಲ್ಲಿ ನಡೆದಿರುವುದು ಮಾತ್ರ ನಿಜ.

Continue Reading
Advertisement
MLA BY Vijayendra
ಕರ್ನಾಟಕ4 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ4 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ4 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ5 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ5 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್6 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ6 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ6 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ7 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ7 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌