Site icon Vistara News

Accident | ಬಸ್‌ ಡಿಕ್ಕಿ, ಪಾದಚಾರಿ ಛಿದ್ರ ಛಿದ್ರ

Accident news

ಉಡುಪಿ: ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಯೊಬ್ಬರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ವ್ಯಕ್ತಿಯ ದೇಹ ಛಿದ್ರಛಿದ್ರವಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರದ ನಡುವೆ ಸಾಗಿಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕುಂದಾಪುರದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ ವೇಗವಾಗಿ ಬಂದು ಢಿಕ್ಕಿ ಹೊಡೆಯಿತು. ಪಾದಚಾರಿ ಶೇಖರ್ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಢಿಕ್ಕಿಯ ಬಳಿಕ ದೇಹದ ಮೇಲೆ ಬಸ್ಸಿನ ಚಕ್ರಗಳು ಸಾಗಿಹೋದುದರಿಂದ ದೇಹದ ಭಾಗಗಳು ಹೆದ್ದಾರಿಯಲ್ಲಿ ಛಿದ್ರವಾಗಿ ಬಿದ್ದಿದ್ದವು. ಈ ಜಾಗದಲ್ಲಿ ಸಮರ್ಪಕ ದಾರಿದೀಪವಿಲ್ಲದ ಹಿನ್ನಲೆಯಲ್ಲಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು, ಅಪಘಾತದ ಬಳಿಕ ದಾರಿದೀಪದ ದುರವಸ್ಥೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | ಧಾರವಾಡದಲ್ಲಿ ಅಪಘಾತ, ಐವರಿಗೆ ಗಂಭೀರ ಗಾಯ

Exit mobile version