ಉಡುಪಿ
Floating bridge: ಉದ್ಘಾಟನೆಗೊಂಡ ಮೂರನೇ ದಿನಕ್ಕೇ ಮುರಿದು ಬಿತ್ತು ಮಲ್ಪೆ ತೇಲು ಸೇತುವೆ
ಮಲ್ಪೆಯಲ್ಲಿ ನಿರ್ಮಾಣಗೊಂಡ ರಾಜ್ಯದ ಮೊದಲ ಸಮುದ್ರದ ಮೇಲಿನ ತೇಲು ಸೇತುವೆ ಅಲೆಗಳ ಹೊಡೆತಕ್ಕೆ ಸಿಲುಕಿ ಕಳಚಿಕೊಂಡಿದೆ. ಆದರೆ ಯಾರಿಗೂ ತೊಂದರೆ ಆಗಿಲ್ಲ.
ಮಲ್ಪೆ: ರಾಜ್ಯದ ಮೊದಲ ಸಮುದ್ರದ ಮೇಲಿನ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಲ್ಪೆ ಕಡಲ ತೀರದ ಫ್ಲೋಟಿಂಗ್ ಬ್ರಿಡ್ಜ್ ಉದ್ಘಾಟನೆಯಾದ ಮೂರನೇ ದಿನಕ್ಕೆ ಮುರಿದು ಬಿದ್ದಿದೆ.
ತೀರದಿಂದ ಸುಮಾರು 100 ಮೀಟರ್ ಸಮುದ್ರದೊಳಗೆ ನಿರ್ಮಾಣಗೊಂಡಿರುವ ಈ ತೇಲುವ ಸೇತುವೆಯನ್ನು ಮೇ 6ರಂದು ಶಾಸಕ ರಘುಪತಿ ಭಟ್ ಅವರು ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರ ಸಮ್ಮುಖದಲ್ಲಿ ಉದ್ಘಾಟಿಸಿದ್ದರು. ಇಂಟರ್ ಲಾಕಿಂಗ್ ಪ್ಲೇಟ್ಗಳನ್ನು ಜೋಡಿಸಿ ಕಟ್ಟಿರುವ ದೇಶದ ಎರಡನೇ ಪಾಂಟೂನ್ ಸೇತುವೆ ಇದಾಗಿತ್ತು. ಮೊದಲೇ ಭಾರಿ ಜನಾಕರ್ಷಣೆ ಹೊಂದಿರುವ ಮಲ್ಪೆ ಬೀಚಿನ ಹಿರಿಮೆಗೆ ಇದೊಂದು ಗರಿಯಾಗಿತ್ತು.
ಹದಿನೈದು ದಿನಗಳ ಮಟ್ಟಿಗೆ ಪ್ರಾಯೋಗಿಕ ನೆಲೆಯಲ್ಲಿ ಇದರ ಕಾರ್ಯಾಚರಣೆ ಆರಂಭಗೊಂಡಿತ್ತು. ಮೊದಲೆರಡು ದಿನಗಳಲ್ಲಿ ಆಯ್ದ ಕೆಲವು ಮಂದಿಗೆ ಸಮುದ್ರದ ಮೇಲೆ ಏರಿಳಿಯುವ ಈ ಸೇತುವೆ ಮೇಲೆ ನಡೆಯುವ ರೋಮಾಂಚನದ ಅನುಭವಕ್ಕೆ ಆಹ್ವಾನವಿತ್ತು.
ಚದುರಿದ ಚಿತ್ರಗಳು
ಭಾರಿ ಜನಾಕರ್ಷಣೆ ಹೊಂದಿರುವ ಈ ಸೇತುವೆ ಭಾನುವಾರ ರಾತ್ರಿ ಮುರಿದುಬಿದ್ದಿದೆ. ಮಧ್ಯಭಾಗದಲ್ಲೇ ಅದು ಎರಡು ಭಾಗಗಳಾಗಿ ಚದುರಿದೆ. ಇಂಟರ್ ಲಾಕಿಂಗ್ ಪ್ಲೇಟ್ ಅಲೆಗಳ ಹೊಡೆತಕ್ಕೆ ಒಳಗಾಗಿ ಕೊಂಡಿ ಕಳಚಿಕೊಂಡು ಬೇರಾಗಿದ್ದರಿಂದ ಸೇತುವೆ ಮುರಿದಿದೆ ಎನ್ನಲಾಗಿದೆ. ಕಳಚಿಕೊಂಡ ಇಂಟರ್ ಲಾಕ್ ಪ್ಲೇಟ್ಗಳು ಸಮುದ್ರ ತೀರದಲ್ಲಿ ಅಲ್ಲಲ್ಲಿ ಬಿದ್ದುಕೊಂಡಿರುವುದು ಬೆಳಗ್ಗೆ ಕಂಡುಬಂತು. ಈ ಘಟನೆ ಒಂದು ಕಡೆ ನಿರಾಸೆಯನ್ನು, ಇನ್ನೊಂದು ಕಡೆ ಆತಂಕವನ್ನು ಸೃಷ್ಟಿಸಿದೆ.
ದೇಶದ ಎರಡನೇ ತೇಲು ಸೇತುವೆ ಈ ರೀತಿ ಆಗಿರುವುದು ಜನರಿಗೆ ಬೇಸರ ಮೂಡಿಸಿದರೆ, ಒಂದೊಮ್ಮೆ ಹದಿನೈದು ದಿನಗಳ ಪ್ರಾಯೋಗಿಕ ಪರೀಕ್ಷೆಯ ಬಳಿಕ, ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ನಡೆದಾಡುವ ವೇಳೆ ಮುರಿದಿದ್ದರೆ ಆಗಬಹುದಾದ ಅನಾಹುತವನ್ನು ಯೋಚಿಸಿಯೇ ಜನರು ಆತಂಕಪಡುತ್ತಿದ್ದಾರೆ.
ಅಲೆಗಳ ಹೊಡೆತ ಜೋರಿತ್ತು
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಆಸಾನಿ ಚಂಡಮಾರುತದ ಪರಿಣಾಮವಾಗಿ ಪಶ್ಚಿಮ ಕರಾವಳಿಯಲ್ಲೂ ಕಡಲು ಪ್ರಕ್ಷುಬ್ಧಗೊಂಡಿದೆ. ಭಾನುವಾರ ರಾತ್ರಿಯೇ ಎತ್ತರದ ಅಲೆಗಳು ಎದ್ದಿದ್ದವು. ದೊಡ್ಡ ದೊಡ್ಡ ಅಲೆಗಳ ಹೊಡೆತಕ್ಕೆ ಸಿಲುಕಿ ಈ ಸೇತುವೆ ಮುರಿದುಬಿತ್ತು ಎನ್ನಲಾಗಿದೆ.
ಭಾನುವಾರ ಸಂಜೆಯವರೆಗೆ ಕೆಲವು ಆಯ್ದ ತಂಡಗಳಿಗೆ ಈ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಲಾಗಿತ್ತು. ಬಳಿಕ ಅವಕಾಶವಿರಲಿಲ್ಲ. ಒಂದೊಮ್ಮೆ ಸಂಜೆಯ ಹೊತ್ತಿಗೆ ಈ ದುರಂತ ಸಂಭವಿಸಿದ್ದರೆ ತುಂಬ ಅನಾಹುತ ಉಂಟಾಗುವ ಅಪಾಯವಿತ್ತು. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಈ ವೇಳೆ ನಡೆದಾಡಿದ್ದರು.
ರಘುಪತಿ ಭಟ್ ಬಿದ್ದಿದ್ದರು!
ತೇಲು ಸೇತುವೆ ಆಕರ್ಷಕವೇ ಆಗಿದ್ದರೂ ಅಪಾಯದ ಸಾಧ್ಯತೆಗಳ ಬಗ್ಗೆಯೂ ಆರಂಭದಿಂದಲೇ ಚರ್ಚೆ ಇತ್ತು. ಅಲೆಗಳು ಬಂದಾಗ ಎದ್ದು ಬೀಳುವ ಈ ಸೇತುವೆಯಲ್ಲಿ ಜನ ಆಯತಪ್ಪಿ ಬೀಳುವ ಅಪಾಯವಿದೆ ಎನ್ನಲಾಗಿತ್ತು. ಆದರೆ, ಎರಡೂ ಭಾಗದಲ್ಲಿ ರೇಲಿಂಗ್ ಹಾಕಿದ್ದರಿಂದ ತೊಂದರೆ ಇಲ್ಲ ಎನ್ನಲಾಗಿತ್ತು. ಈ ನಡುವೆ, ಶನಿವಾರ ಸಂಜೆ ಗಣ್ಯರೊಂದಿಗೆ ಈ ಮೇಲ್ಸೇತುವೆ ಮೂಲಕ ನಡೆದಾಡಿದ ಉಡುಪಿ ಶಾಸಕ ರಘುಪತಿ ಭಟ್ ಅವರು ಆಯತಪ್ಪಿ ಉರುಳಿದ್ದರು. ಒಮ್ಮೆಗೇ ನೀರಿನ ಅಲೆಗಳು ಎದ್ದುದರಿಂದ ಸೇತುವೆಯ ಒಂದು ಭಾಗ ಎತ್ತರಕ್ಕೆ ಜಿಗಿದಿತ್ತು. ಈ ವೇಳೆ ರಘುಪತಿ ಭಟ್ ಆಯತಪ್ಪಿ ಬಿದ್ದಿದ್ದರು.
ಏನಿದು ತೇಲುವ ಬ್ರಿಜ್
ನೀರಿನ ಮೇಲೆ ನಡೆಯುವ, ತೇಲುವ, ಜೋಕಾಲಿಯಾಡುತ್ತಾ ರುದ್ರ ಮತ್ತು ರಮಣೀಯತೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ ಮಾಡುವ ವಿಶಿಷ್ಟ ವಿನ್ಯಾಸದ ಫ್ಲೋಟಿಂಗ್ ಬ್ರಿಡ್ಜ್ ಇದು. 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವಿರುವ ತೇಲುವ ಸೇತುವೆ ಇದಾಗಿದೆ. ಇದರಲ್ಲಿ ಸಾಗಿ ಸಮುದ್ರ ಮಧ್ಯೆ ನಿಂತು 15 ನಿಮಿಷಗಳ ಕಾಲ ನೀರಿನ ರಮಣೀಯತೆಯನ್ನು ಅನುಭವಿಸಲು ಒಂದು ವೇದಿಕೆಯೂ ಇದೆ. ಕರ್ನಾಟಕವನ್ನು ಹೊರತುಪಡಿಸಿದರೆ ಕೇರಳ ರಾಜ್ಯದ ಬೇಫೂರ್ ಬೀಚಿನಲ್ಲಿ ಈಗಾಗಲೇ ತೇಲುವ ಸೇತುವೆಯನ್ನು ಪ್ರವಾಸಿಗರ ಆಕರ್ಷಣೆಗೋಸ್ಕರ ನಿರ್ಮಿಸಲಾಗಿತ್ತು.
ಇದನ್ನು ಓದಿ | Video | ಮಲ್ಪೆ ಕಡಲ ಅಲೆಗಳ ಮೇಲೆ ತೇಲುವ ಸೇತುವೆ – ವಿಸ್ತಾರ ನ್ಯೂಸ್
ಉಡುಪಿ
Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್ (Weather report) ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಲ್ಕು ಜಿಲ್ಲೆಗಳಿಗೆ ಅಲರ್ಟ್
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಒಳನಾಡಲ್ಲಿ ಹಗುರ ಮಳೆ
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.
ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ
ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Kantara Effect : ಕಣ್ಮರೆಯಾಗಿದ್ದಯುವಕ 8 ದಿನಗಳ ಬಳಿಕ ನಾಯಿ ಜತೆ ಪ್ರತ್ಯಕ್ಷ; ಅವನ ಹಿಂದೆ ಇದೆ ಕಾಂತಾರ ಪವಾಡ ಕಥೆ!
Kantara Effect : ಕುಂದಾಪುರ ತೊಂಬಟ್ಟಿನ ಒಬ್ಬ ಯುವಕ ದಿಢೀರ್ ನಾಪತ್ತೆಯಾಗುತ್ತಾನೆ. ಎಲ್ಲಿ ಹುಡುಕಿದರೂ ಇಲ್ಲ. ಎಂಟು ದಿನದ ಬಳಿಕ ಒಂದು ನಾಯಿ ಜತೆ ಆತ ಪ್ರತ್ಯಕ್ಷನಾಗುತ್ತಾನೆ. ಇದರ ಹಿಂದೆ ಕಾಂತಾರದಂಥಹುದೇ ಕಥೆ ಇದೆ.. ಏನಿದು ಅಚ್ಚರಿ?
ಅಶ್ವತ್ಥ್ ಆಚಾರ್ಯ, ವಿಸ್ತಾರ ನ್ಯೂಸ್ ಉಡುಪಿ
ಕಾಂತಾರ (Kantara Movie) ಒಂದು ಸಿನಿಮಾ ಅಲ್ಲ, ಅದೊಂದು ಅನುಭವ ಎಂದು ಹಲವು ಹೇಳುತ್ತಾರೆ. ಹಲವರಿಗೆ ಇಂಥ ಅತೀಂದ್ರಿಯ ಅನುಭವ (Unnatural Experience) ಆಗಿರುವುದರಿಂದಲೇ ಅದು ನಮ್ಮೆಲ್ಲರ ಕಥೆ ಅನಿಸುವುದು. ಅಂಥಹುದೇ ಒಂದು ಅನುಭವ ಈಗ ಕುಂದಾಪುರ ತಾಲೂಕಿನ (Kundapura taluk) ಮಚ್ಚಟ್ಟು ಗ್ರಾಮದ ತೊಂಬಟ್ಟಿನ ಜನತೆಗೆ ಆಗಿದೆ. ಮನೆಯಿಂದ ದಿಢೀರ್ ಕಣ್ಮರೆಯಾಗಿದ್ದ ಒಬ್ಬ ಯುವಕ (Young man dissapears) ಎಲ್ಲಿ ಹುಡುಕಿದರೂ ಸಿಗುವುದಿಲ್ಲ. ಆದರೆ, ದೈವದ ನುಡಿಯಲ್ಲಿ ಕೇಳಿದಾಗ ಅವನು ಇಲ್ಲೇ ಇದ್ದಾನೆ ಎನ್ನುತ್ತದೆ. ಎಂಟು ದಿನಗಳ ಬಳಿಕ ಆತ ದಿಢೀರ್ ಪ್ರತ್ಯಕ್ಷನಾಗುತ್ತಾನೆ (Young man Reappears). ಅವನನ್ನು ಕರೆದುಕೊಂಡು ಬರುವುದು ಒಂದು ನಾಯಿ! ಎಲ್ಲಿ ಹೋಗಿದ್ದೆ ಎನ್ನುವುದು ಅವನಿಗೇ ಗೊತ್ತಿಲ್ಲ! ಹಾಗಿದ್ದರೆ ಮರಳಿ ಬಂದಿದ್ದು ಹೇಗೆ? ದೈವವೇ ಕರೆದುಕೊಂಡುಬಂದಿದೆ ಎನ್ನುತ್ತಾರೆ (Kantara Effect) ತೊಂಬಟ್ಟಿನ ಜನ.
ಹಾಗಿದ್ದರೆ ನಿಜಕ್ಕೂ ಆಗಿದ್ದೇನು? ಇಲ್ಲದೆ ಕಂಪ್ಲೀಟ್ ರಿಪೋರ್ಟ್
ಆ ಯುವಕನ ಹೆಸರು ವಿವೇಕಾನಂದ. ಕುಂದಾಪುರ ತಾಲೂಕು ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಮಚ್ಚಟ್ಟು ಗ್ರಾಮದ ತೊಂಬಟ್ಟುವಿನ ಇರ್ಕಿಗದ್ದೆ ನಿವಾಸಿ ಶೀನ ನಾಯ್ಕರ ಮಗ. ವಯಸ್ಸು 28. ಕಳೆದ ಸೆಪ್ಟೆಂಬರ್ 16ರಂದು ವಿವೇಕಾನಂದ ಇದ್ದಕ್ಕಿದ್ದಂತೆಯೇ ನಾಪತ್ತೆಯಾಗಿದ್ದ. ಜತೆಗೆ ಮನೆಯ ನಾಯಿಯೂ ಕಣ್ಮರೆಯಾಗಿತ್ತು.
ಈ ಭಾಗದಲ್ಲಿ ಚಿರತೆಗಳ ಕಾಟ ವಿಪರೀತ. ಹೀಗಾಗಿ ಮೊದಲ ಸಂಶಯ ಬಂದಿದ್ದು ಚಿರತೆಗಳೇನಾದರೂ…! ಅಂತ. ಇಲ್ಲಿ ಯಾವುದೇ ದನ, ನಾಯಿ ಕಣ್ಮರೆಯಾದರೂ ಜನ ಗುಂಪಾಗಿ ಹುಡುಕಾಟ ಮಾಡುವುದು ರೂಢಿ. ಹೀಗಾಗಿ ವಿವೇಕಾನಂದ ನಾಪತ್ತೆಯಾದಾಗಲೂ ಹುಡುಕಾಟ ನಡೆಸಿದರು. ಅರಣ್ಯ ಇಲಾಖೆಗೂ ದೂರು ನೀಡಿದರು. ಅವರೂ ಬಂದು ಬಂದು ಹುಡುಕಾಟ ನಡೆಸಿದರು. ಅದು ದಟ್ಟವಾದ ಕಾಡಿನ ಪ್ರದೇಶ. ಹೀಗಾಗಿ ಎಷ್ಟು ದಿನ ಹುಡುಕಿದರೂ ಸಿಗಲಿಲ್ಲ. ಕೊನೆಗೆ ಮೃತದೇಹವಾಗಲೀ, ಸಾವಿನ ಯಾವುದೇ ಕುರುಹುಗಳಾಗಲೀ ಸಿಗಲಿಲ್ಲ. ಹೀಗಾಗಿ ಜನ ಆತನನ್ನು ಚಿರತೆ ಹೊತ್ತುಕೊಂಡು ಹೋಗಿರಲಾರದು ಅಂದುಕೊಂಡರು.
ಶೀನ ನಾಯ್ಕ ಮತ್ತು ಮನೆಯವರು ಇದ್ದ ದೈವ ದೇವರಿಗೆಲ್ಲ ಹರಕೆ ಹೊತ್ತರು. ಕೊರಗಜ್ಜಾ ಹುಡುಕಿಕೊಡು ಎಂದರು. ಸಾಮಾನ್ಯವಾಗಿ ಈ ಭಾಗದಲ್ಲಿ ಮನುಷ್ಯರು, ಪ್ರಾಣಿಗಳು ನಾಪತ್ತೆಯಾದಾಗ ʻನಿಮಿತ್ತ ಕೇಳುವುದುʼ ರೂಢಿ. ಅಂದರೆ ದೈವದಲ್ಲಿ, ದೇವರಲ್ಲಿ, ಜೋಯಿಸರಲ್ಲಿ ಪ್ರಶ್ನೆ ಕೇಳುವುದು. ವೀಳ್ಯದೆಲೆ, ಕವಡೆ ಕಾಯಿಯ ಮೂಲಕ ಅವರು ಪ್ರಶ್ನೆ ಹೇಳುತ್ತಾರೆ.
ಹಾಗೆ ಶೀನ ನಾಯ್ಕರೂ ನಿಮಿತ್ತ ಕೇಳಿದರು. ಕೇಳಿಬಂದ ಸಂತಸದ ಸಂಗತಿ ಏನೆಂದರೆ: ವಿವೇಕಾನಂದ ಈಸ್ ಸೇಫ್!. ಯಾವುದೋ ಒಂದು ನಿರ್ದಿಷ್ಟ ದಿಕ್ಕು ಹೇಳಿದರು. ಎಷ್ಟೋ ದೂರ ಅಂದರು. ಮರಳಿ ಬರುತ್ತಾನೆ ಅಂದರು. ಇದನ್ನು ಕೇಳಿದ ಕುಟುಂಬ ಮತ್ತು ಊರಿನವರು ಅಲ್ಲೆಲ್ಲ ಹುಡುಕಿದರು.
ಇದಾದ ಬಳಿಕ ಸಂಭವಿಸಿದ್ದೇ ಅಚ್ಚರಿ. ಸರಿಯಾಗಿ 8 ದಿನಗಳ ಬಳಿಕ ವಿವೇಕಾನಂದ ನಿಧಾನವಾಗಿ ನಡೆದುಕೊಂಡು ಬರುತ್ತಿದ್ದ. ಆತನ ಮುಂದೆ ನಾಯಿ ದಾರಿ ತೋರಿಸುತ್ತಾ ಬರುತ್ತಿತ್ತು. ಹಾಗಂತ ವಿವೇಕಾನಂದ ಬಂದಿದ್ದು ತನ್ನ ಮನೆಗಲ್ಲ. ತೊಂಬಟ್ಟಿನಿಂದ ಸುಮಾರು ಏಳೆಂಟು ಕಿ.ಮೀ. ದೂರದ ಕಬ್ಬಿನಾಲೆಯ ಸಮೀಪದ ಮನೆಯೊಂದರ ಸಮೀಪ ಬಂದಿದ್ದಾನೆ. ವಿವೇಕಾನಂದ ಮತ್ತು ನಾಯಿ ಎರಡನ್ನೂ ಗಮನಿಸಿದ ಮನೆಯವರು ಶೀನ ನಾಯ್ಕರಿಗೆ ಸುದ್ದಿ ಮುಟ್ಟಿಸಿದರು. ಈಗ ವಿವೇಕಾನಂದನನ್ನು ಮನೆಗೆ ಕರೆತರಲಾಗಿದೆ. ಆಹಾರ ಸೇವಿಸದೆ ಬರಿ ನೀರಿನಲ್ಲೇ ಬದುಕಿದಂತಿರುವ ವಿವೇಕಾನಂದ ನಿತ್ರಾಣನಾಗಿದ್ದಾನೆ. ಆದರೆ, ಮರಳಿಬಂದನಲ್ಲ ಎಂದು ಜನರು ದೈವ ದೇವರ ಮಹಿಮೆಯನ್ನು ಕೊಂಡಾಡುತ್ತಿದ್ದಾರೆ. ಈಗ ವಿವೇಕಾನಂದ ನಾಯಿ, ಮನೆಯವರು ಎಲ್ಲರೂ ಖುಷಿಯಾಗಿದ್ದಾರೆ. ಎಂಬಲ್ಲಿಗೆ ಕಥೆ ಮುಗಿಯುವುದಿಲ್ಲ!
ನಿಜವಾದ ಕಥೆ ಶುರುವಾಗುವುದು ಇಲ್ಲಿಂದಲೇ!
ವಿವೇಕಾನಂದ ಎಂಬ ಸ್ವಲ್ಪ ಬುದ್ಧಿಮಾಂದ್ಯತೆ ಹೊಂದಿರುವ ಯುವಕ ನಾಪತ್ತೆಯಾಗಿ ಎಷ್ಟು ದಿನ ಹುಡುಕಿದರೂ ಸಿಗದೆ ಕೊನೆಗೆ ಎಂಟು ದಿನಗಳ ಬಳಿಕ ಮನೆಗೆ ಬರುವ ಈ ಕಥೆಗೆ ಸಂಬಂಧಿಸಿ ಮತ್ತೊಂದು ಮಗ್ಗುಲೂ ಇದೆ. ನೀವು ಕಾಂತಾರಕ್ಕೂ ಈ ಘಟನೆಗೂ ಏನು ಸಂಬಂಧ ಎಂದು ಯೋಜಿಸುತ್ತಿದ್ದೀರಲ್ಲಾ.. ಅದುವೇ ಈ ಕಥೆ. ಈ ಘಟನೆಗೆ ಸಂಬಂಧಿಸಿ ನಡೆದಿದೆ ಎನ್ನಲಾದ ವಿದ್ಯಮಾನವನ್ನು ರವೀಶ್ ಎಂಬವರು ಬರೆದಿದ್ದಾರೆ. ಅವರು ಹೇಳುವ ಕುತೂಹಲಕಾರಿ ವಿಚಾರವನ್ನು ಅವರ ಬರವಣಿಗೆಯಲ್ಲೇ ಓದಿ. ಮುಂದಿನದು ರವೀಶ್ ಅವರು ಹೇಳಿದ ಕಥೆ.
ಕಾಂತಾರದಲ್ಲಿ ದೈವ ನರ್ತಕ ಮಾಯವಾಗುವ ಕಥೆಗೂ ಇದಕ್ಕೂ ಸಂಬಂಧ
ಕಾಂತಾರ ಸಿನಿಮಾಮಾದಲ್ಲಿ ದೈವ ನರ್ತಕರು ಕಾಡಿನಲ್ಲಿ ಮಾಯವಾಗುವ ದೃಶ್ಯವಿದೆ. ಅದು ನಿಜವಾ ? ಕಲ್ಪನೆಯಾ? ಎನ್ನುವ ಒಂದು ಚರ್ಚೆ ಹುಟ್ಟು ಹಾಕಿತ್ತು. ಅದು ನಿಜವಾ? ಸುಳ್ಳಾ ಗೊತ್ತಿಲ್ಲ. ಅಂತಹದ್ದೆ ಒಂದು ಘಟನೆ ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟಿನಲ್ಲಿ ನಡೆದಿದೆ.
ಇಂದಿಗೆ ಸುಮಾರು ಹತ್ತು ದಿನ ಮೊದಲು ಊರಿನ ಯುವಕನೊಬ್ಬ ತನ್ನ ಮನೆಯ ಎರಡು ನಾಯಿಗಳೊಂದಿಗೆ ಕಾಣೆಯಾಗುತ್ತಾನೆ. ಮನೆಯವರು ಹುಡುಕಲು ಆರಂಭಿಸುತ್ತಾರೆ ಎಲ್ಲಿ ಹುಡುಕಿದರೂ ಸುಳಿವು ಸಿಗುವುದಿಲ್ಲ. ಮನೆಯವರು, ಊರವರು, ಪೊಲೀಸರು, ಸಿಕ್ಕ ಸಿಕ್ಕವರೆಲ್ಲ ದಟ್ಟ ಕಾಡಿನಲ್ಲಿ ಬಿಟ್ಟು ಬಿಡದೆ ಹುಡುಕುತ್ತಾರೆ ಒಂದೆರಡು ದಿನದಲ್ಲಿ ಒಂದು ನಾಯಿ ಮನೆಗೆ ವಾಪಸ್ ಬರುತ್ತದೆ. ಅಲ್ಲಿಗೆ ಊರವರು ಅನಾಹುತವನ್ನು ಗ್ರಹಿಸುತ್ತಾರೆ ಆದರೆ ಹುಡುಕುವುದು ನಿಲ್ಲುವುದಿಲ್ಲ.
ಸಿಗದೆ ಹೋದಾಗ ದೈವ, ದೇವರುಗಳ ಮೊರೆ ಹೋಗುತ್ತಾರೆ . ಕೊರಗಜ್ಜನ ಸನ್ನಿದಿಯಲ್ಲಿ ಕೇಳಿದಾಗ ಬದುಕಿದ್ದಾನೆ ಎಂಬ ಆಶ್ವಾಸನೆ ಸಿಗುತ್ತದೆ. ಅದಾಗಲೇ ಒಂದು ವಾರ ಕಳೆದುಹೋಗುತ್ತದೆ ಯುವಕನ ಸುಳಿವಿಲ್ಲ. ಮನೆಯವರು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಅದರಲ್ಲಿ ಒಂದು ಆಡಿಯೋ ಮಾತ್ರ ದಿಗ್ಬ್ರಮೆಗೊಳಿಸುತ್ತದೆ.
ಅದೊಂದು ಫೋನ್ ಕಾಲ್ ಸಂಭಾಷಣೆ. ಒಂದು ಕಡೆ ಒಬ್ಬ ಹೆಂಗಸು: ಮಾಂತ್ರಿಕರೊ, ತಾಂತ್ರಿಕರೊ ಇರಬಹುದು ಇನ್ನೊಂದು ಕಡೆ ಈ ಯುವಕನ ಸಂಬಂಧಿಕರು ಇದ್ದಂತಿದೆ.
ಆ ಮಹಿಳೆ ಹೇಳುತ್ತಾರೆ: “ಹುಡುಗ ಬದುಕಿದ್ದಾನೆ. ಅವರ ಮನೆಯ ಗದ್ದೆಯಲ್ಲಿ ಒಂದು ಕಲ್ಲಿದೆ. ನೋಡಲು ಅದೊಂದು ಸಾಧಾರಣ ಕಲ್ಲು. ಆ ಕಲ್ಲಿನಲ್ಲಿ ದೇವಿ ಇದ್ದಾಳೆ. ಆ ಕಲ್ಲಿನ ಮೇಲೆ ಈತ ಆವಾಗಾವಾಗ ಕೂರುತಿದ್ದ. ಈಗ ಆ ಕಲ್ಲನ್ನು ಗದ್ದೆಯ ಪಕ್ಕದಲ್ಲಿ ಎಸೆದಿದ್ದಾರೆ. ನನಗೆ ಸ್ಪಷ್ಟವಾಗಿ ಕಾಣುತ್ತಿದೆ ಆ ದೇವಿಯ ಕೈಯಲ್ಲಿ ಕತ್ತಿ ಇದೆ. ಅವಳೇ ಅವನನ್ನು ಅಡಗಿಸಿ ಇಟ್ಟಿದ್ದಾಳೆ. ಈಗ ಮನೆಯವರು ಆ ಕಲ್ಲನ್ನು ಹುಡುಕಬೇಕು, ಸಂಜೆ ಆರು ಘಂಟೆಯ ನಂತರ ಕಲ್ಲಿಗೆ ಪೂಜೆ ಮಾಡಿ ಒಂದು ರೂಪಾಯಿ ನಾಣ್ಯವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಎಕ್ಕದ ಮರಕ್ಕೆ ಕಟ್ಟಿ ಪ್ರಾರ್ಥಿಸಿಕೊಳ್ಳಬೇಕು ಹುಡುಗ ಮನೆಗೆ ಬರುತ್ತಾನೆ ” ಎಂದು ಹೇಳುತ್ತಿರುವ ಆಡಿಯೋ ಅದು.
ದಿನ ಬೆಳಗಾದರೆ ಇಂತಹ ಅದೆಷ್ಟೊ ಜ್ಯೋತಿಷಿಗಳು ಹೊಟ್ಟೆ ಪಾಡಿಗೆ ಏನೇನೊ ಹೇಳುತ್ತಿರುತ್ತಾರೆ. ಎಂಟು ದಿನ ಊಟ ವಿಲ್ಲದೆ ಸುರಿವ ಮಳೆಯಲ್ಲಿ ಕ್ರೂರ ಪ್ರಾಣಿಗಳಿರುವ ಕಾಡಿನಲ್ಲಿ ಆ ಯುವಕ ಬದುಕವ ಸಾದ್ಯತೆ ತೀರಾ ಕಡಿಮೆ ಅನಿಸದಿರದು.
ಆದರೆ, ಮನೆಯವರು ಆ ಕಲ್ಲನ್ನು ಹುಡುಕಿದರು. ಆ ಕಲ್ಲಿಗೆ ಪೂಜೆ ಮಾಡಿ ದೀಪವಿಟ್ಟು ಬೇಡಿಕೊಂಡರು. ಆ ರಾತ್ರಿ ಹಾಗೆ ಮುಗಿಯಿತು. ಮರುದಿನ ಆ ಯುವಕ ತನಗೇನೂ ಆಗಿಲ್ಲ ಎಂಬಂತೆ ತನ್ನ ಇನ್ನೊಂದು ನಾಯಿ ಜೊತೆ ನಡೆದುಕೊಂಡು ಬರುತ್ತಿರುವುದನ್ನು ಊರವರು ನೋಡಿ ಅವರ ಮನೆಯಲ್ಲಿರಿಸಿ ಊಟಕ್ಕೆ ಹಾಕಿ ಮನೆಯವರಿಗೆ ಸುದ್ದಿ ಮುಟ್ಟಿಸುತ್ತಾರೆ.
ಈಗ ಸುತ್ತಮುತ್ತ ಎಲ್ಲ ಕಡೆ ಇದೇ ಸುದ್ದಿ. ಆ ಕಲ್ಲು, ಈ ಮಾಂತ್ರಿಕ ಮಹಿಳೆ, ಅವರು ಹೇಳಿದ ದೇವಿ. ಊಟವಿಲ್ಲದ ಎಂಟು ದಿನ ಬದುಕಿದ ಯುವಕ ಅವನನ್ನು ಬಿಟ್ಟು ಬಾರದ ನಾಯಿ. ಅದೇ ಕಾಂತಾರದ ಕಾಡು. ಅಲ್ಲಿ ಮಾಯವಾದವರು ಮತ್ತೆ ಬರಲಿಲ್ಲ. ಇಲ್ಲಿ ಈ ಯುವಕ ಬಂದಿದ್ದಾನೆ.
ಈ ವಿಜ್ಞಾನದ ಯುಗದಲ್ಲಿ ಹೀಗೂ ನಡೆಯುತ್ತದಾ ಎನ್ನುವ ಪ್ರಶ್ನೆಗಳಿಗೆ ಉತ್ತರ ಹೌದು ಮತ್ತು ಇಲ್ಲ. ನಂಬಿದವರಿಗೆ ಹೌದು. ನಾನು ಇದೆ ಊರಿನಲ್ಲಿ ಹುಟ್ಟಿ ಬೆಳೆದಿರುವುದರಿಂದ ನಾನದನ್ನು ಬಲವಾಗಿ ನಂಬುತ್ತೇನೆ. ನಂಬದವರಿಗೆ ಒಂದು ಅವಕಾಶವಿದೆ ಇದು ಕಥೆಯಲ್ಲ ನಿಜ ಘಟನೆ ಈಗಷ್ಟೆ ನಡೆದಿದೆ ನೀವು ಇದರ ಹಿಂದೆ ಬೀಳಬಹುದು.
-ಇದಿಷ್ಟು ರವೀಶ್ ಅವರು ಹೇಳುವ ಕಥೆ. ಈ ಜಗತ್ತಿನಲ್ಲಿ ಅತಿಮಾನುಷವಾದ ದೈವಿಕ ಶಕ್ತಿಯೊಂದಿದೆ. ಅದುವೇ ಜಗತ್ತನ್ನು ನಿಯಂತ್ರಿಸುತ್ತದೆ ಎನ್ನುವುದನ್ನು ಸಾರವಾಗಿ ಹೇಳುತ್ತದೆ ಕತೆ.
ಇದನ್ನೂ ಓದಿ ; Rishab Shetty : ಭಾರಿ ಬಜೆಟ್ನಲ್ಲಿ ನಿರ್ಮಾಣವಾಗಲಿದೆ ಕಾಂತಾರ 2! ಶೂಟಿಂಗ್ ಯಾವಾಗ?
ವಿವೇಕಾನಂದನ ಕರೆ ತಂದ ನಾಯಿಗಿದೆ ಸನ್ಮಾನ
ವಿವೇಕಾನಂದ ಬದುಕಿದ್ದಾನೆ ಎಂಬುದನ್ನು ಸಾರಿ ಸಾರಿ ಹೇಳಿದ್ದರು ಹೆಬ್ರಿ ಸಮೀಪದ ಗುಡಿಯೊಂದರ ಕೊರಗಜ್ಜ. ಹೀಗಾಗಿ ಮನೆಯವರೆಲ್ಲ ಸೋಮವಾರ ಸಂಜೆ ಆ ಗುಡಿಗೆ ಹೋಗಲಿದ್ದಾರೆ. ಇತ್ತ ವಿವೇಕಾನಂದನ ಪ್ರಾಣ ಉಳಿಸಿದ್ದು, ಮರಳಿ ಮನೆಗೆ ಕರೆತಂದಿದ್ದು ನಾಯಿ ಎಂಬುದು ನಂಬಿಕೆ. ಇಂಥ ವಿಶ್ವಾಸಾರ್ಹ ಪ್ರಾಣಿಯನ್ನು ಸನ್ಮಾನಿಸುವ ಕಾರ್ಯಕ್ರಮವೂ ಸೋಮವಾರ ಸಂಜೆ ನಡೆಯಲಿದೆ. ಅಂದ ಹಾಗೆ, ಈ ಎಲ್ಲ ವಿದ್ಯಮಾನಗಳನ್ನು ಅಚ್ಚರಿಯ ಕಣ್ಣುಗಳಿಂದ ನೋಡುತ್ತಿರುವವರು ಪೊಲೀಸರು. ವಿವೇಕಾನಂದ ಬದುಕಿದ್ದಾನೆ, ಮರಳಿ ಬಂದಿದ್ದಾನೆ ಎಂದು ಮನೆಯವರು ಹೇಳಿದಾಗ, ನಾವು ಅಷ್ಟು ಹುಡುಕಿದರೂ ಸಿಗದಿದ್ದವನು ಎಲ್ಲಿದ್ದ ಎಂಬ ಅಚ್ಚರಿಯೊಂದಿಗೆ, ಅವನನ್ನು ಒಮ್ಮೆ ಠಾಣೆಗೆ ಕರೆದುಕೊಂಡು ಬನ್ನಿ. ಅವನು ಬದುಕಿದ್ದಾನೆ ಎಂದು ರುಜುವಾತು ಮಾಡಿ ನಾಪತ್ತೆ ಕೇಸು ಕ್ಲೋಸ್ ಮಾಡಿಬಿಡುವ ಎಂದಿದ್ದಾರಂತೆ.
ಇದನ್ನೂ ಓದಿ: ಪತ್ನಿ, ಮಕ್ಕಳೊಂದಿಗೆ ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ; ದೇವರ ದರ್ಶನ, ಖಾವಂದರ ಆಶೀರ್ವಾದ ಪಡೆದ ಕಾಂತಾರ ಹೀರೋ
ಇದಿಷ್ಟು ಕಾಂತಾರ ಕಥೆ. ಜನಜೀವನದಲ್ಲಿ ನಡೆಯುವ ಹಲವು ಅಚ್ಚರಿಗಳಲ್ಲಿ ಇದೂ ಒಂದು. ನೀವು ದೈವ ದೇವರುಗಳನ್ನು ನಂಬುವವರೇ ಆದರೆ ದೈವವೇ ಆ ಯುವಕನನ್ನು ಮರಳಿ ತಂದು ಮನೆ ಸೇರಿಸಿದೆ ಎಂದು ನಂಬಬಹುದು. ಇಲ್ಲಾ ಈಗೆಲ್ಲ ಅದು ಸಾಧ್ಯವಾ ಎನ್ನುವ ಯೋಚನೆ ನಿಮ್ಮದಾಗಿದ್ದರೆ ನಾಯಿಯೇ ಅವನನ್ನು ಕೈಹಿಡಿದಿದೆ ಎಂದೂ ಒಪ್ಪಬಹುದು. ಅಂತೂ ಅಚ್ಚರಿಯ ವಿದ್ಯಮಾನವೊಂದು ಇಲ್ಲಿ ನಡೆದಿರುವುದು ಮಾತ್ರ ನಿಜ.
-
Live News16 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ6 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ23 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
South Cinema9 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕ್ರಿಕೆಟ್22 hours ago
Babar Azam: ಆಡಿ ಕಾರ್ ಓವರ್ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!
-
ದೇಶ23 hours ago
MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!
-
ಕರ್ನಾಟಕ9 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಕ್ರಿಕೆಟ್10 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ