Udupi Murder : ಅವಳು ಮಾತುಬಿಟ್ಟಿದ್ದನ್ನು ಸಹಿಸಲಾಗದೆ ಕೊಂದೇಬಿಟ್ಟ; ಗಗನಸಖಿ ಹತ್ಯೆ Inside story - Vistara News

ಉಡುಪಿ

Udupi Murder : ಅವಳು ಮಾತುಬಿಟ್ಟಿದ್ದನ್ನು ಸಹಿಸಲಾಗದೆ ಕೊಂದೇಬಿಟ್ಟ; ಗಗನಸಖಿ ಹತ್ಯೆ Inside story

Udupi Murder : ಉಡುಪಿಯಲ್ಲಿ ಗಗನಸಖಿ ಅಯ್ನಾಜ್‌ ಮತ್ತು ಕುಟುಂಬದ ಹತ್ಯಾಕಾಂಡದ ನಿಜ ಕಾರಣ ಬಯಲಾಗಿದೆ. ಹಂತಕನ ಓವರ್‌ ಪೊಸೆಸಿವ್‌ನೆಸ್‌ ಕೊಲೆಗೆ ಪ್ರಧಾನ ಕಾರಣ.

VISTARANEWS.COM


on

Udupi Murder Praveen chougule and Aynaz
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು (Four of Family murdered) ಅತ್ಯಂತ ಬರ್ಬರವಾಗಿ ಚೂರಿಯಿಂದ ಇರಿದು ಕೊಲೆ (Udupi Murder) ಮಾಡಿದ ಘಟನೆಯ ಹಿಂದಿನ ನಿಗೂಢತೆ ಈಗ ಬಯಲಾಗಿದೆ. ಗಗನಸಖಿಯಾಗಿ ಜತೆಗೆ ಕೆಲಸ ಮಾಡುತ್ತಿದ್ದ ಅಯ್ನಾಜ್‌ ಬಗ್ಗೆ ವಿಪರೀತ ಪೊಸೆಸಿವ್‌ನೆಸ್‌ (Possessiveneness) ಹೊಂದಿದ್ದ ಪ್ರವೀಣ್‌ ಅರುಣ್‌ ಚೌಗುಲೆ (Praveen Arun Chougule) ಆಕೆ ಯಾವುದೋ ಕಾರಣಕ್ಕೆ ಮಾತು ಬಿಟ್ಟಿದ್ದನ್ನು ಸಹಿಸಲಾಗದೆ ಪ್ರಾಣವನ್ನೇ ತೆಗೆದಿದ್ದಾನೆ. ಈ ವಿಚಾರವನ್ನು ಉಡುಪಿ ಜಿಲ್ಲಾ ಎಸ್‌ಪಿ ಡಾ. ಅರುಣ್‌ ಕೆ. (Udupi SP Arun K) ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ನವೆಂಬರ್‌ 12ರಂದು ಭಾನುವಾರ ಮುಂಜಾನೆ ಪ್ರವೀಣ್‌ ಅರುಣ್‌ ಚೌಗುಲೆ ನೇಜಾರಿನ ತೃಪ್ತಿ ನಗರದಲ್ಲಿರುವ ನೂರ್‌ ಮಹಮ್ಮದ್‌ ಅವರ ಮನೆಗೆ ನುಗ್ಗಿ ನೂರ್‌ ಮಹಮದ್‌ ಅವರ ಪತ್ನಿ ಹಸೀನಾ (45), ಪುತ್ರಿಯರಾದ ಅಫ್ನಾನ್‌ (23), ಅಯ್ನಾಜ್‌ (21) ಮತ್ತು ಮಗ ಅಸೀಮ್‌ (14)ನನ್ನು ಕೊಂದು ಹಾಕಿದ್ದ. ಕೊಲೆಯಾದವರ ಪೈಕಿ ಅಫ್ನಾನ್‌ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರೆ, ಅಯ್ನಾಜ್‌ ಏರ್‌ ಹೋಸ್ಟೆಸ್‌ ಆಗಿ ಕೆಲಸ ಮಾಡುತ್ತಿದ್ದಳು. ಅಸೀಂ ಏಳನೇ ತರಗತಿಯಲ್ಲಿ ಓದುತ್ತಿದ್ದ. ಹಂತಕ ಪ್ರವೀಣ್‌ ಅರುಣ ಚೌಗುಲೆಯನ್ನು ಮೂರು ದಿನಗಳ ಬಳಿಕ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿ ಕರೆತರಲಾಗಿತ್ತು. ಕೋರ್ಟ್‌ ಚೌಗುಲೆಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತ್ತು. ಆತನ ಪೊಲೀಸ್‌ ಕಸ್ಟಡಿಗೆ ನವೆಂಬರ್‌ 25ಕ್ಕೆ ಮುಕ್ತಾಯವಾಗಲಿದೆ. ಈ ನಡುವೆ, ಪೊಲೀಸ್‌ ವಿಚಾರಣೆ ಬೇಗನೆ ಸಂಪೂರ್ಣವಾದ ಹಿನ್ನೆಲೆಯಲ್ಲಿ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಎಸ್‌ಪಿ ಡಾ. ಅರುಣ್‌ ಕೆ. ಹೇಳಿದ್ದಾರೆ. ಜತೆಗೆ ವಿಚಾರಣೆ ವೇಳೆ ಪ್ರವೀಣ್‌ ಅರುಣ್‌ ಚೌಗುಲೆ ಮಾಡಿದ್ದಕ್ಕೆ ಕಾರಣವನ್ನು ಬಾಯಿ ಬಿಟ್ಟಿದ್ದಾನೆ.

Udupi murder killer praveen arrested

ವಿಪರೀತ ಪೊಸೆಸಿವ್‌ನೆಸ್‌ ಕೊಲೆಗೆ ಕಾರಣ

ಪ್ರವೀಣ್‌ ಚೌಗುಲೆಗೆ ಕೊಲೆ ಮಾಡುವ ಉದ್ದೇಶ ಇದ್ದಿದ್ದು ಗಗನಸಖಿಯಾಗಿದ್ದ ಅಯ್ನಾಝ್‌ಳನ್ನು. ಆದರೆ, ಮನೆಗೇ ಹೋಗಿ ಕೊಲೆ ಮಾಡಿದ್ದರಿಂದ ಉಳಿದ ಮೂವರು ಕೂಡಾ ಪ್ರಾಣ ಕಳೆದುಕೊಳ್ಳುವಂತಾಯಿತು. ಅಯ್ನಾಜ್‌ ಮೇಲಿನ ವಿಪರೀತ ಪೊಸೆಸಿವ್‌ನೆಸ್‌ ಈ ಕೊಲೆಗೆ ಪ್ರಮುಖ ಕಾರಣ ಎಂದು ಎಸ್‌ಪಿ ತಿಳಿಸಿದ್ದಾರೆ.

ಕೊಲೆಗಾರ ಪ್ರವೀಣ್ ಚೌಗುಲೆ ಮತ್ತು ಅಯ್ನಾಜ್‌ ಪರಸ್ಪರ ಪರಿಚಯ ಆಗಿದ್ದು ಕೇವಲ ಎಂಟು ತಿಂಗಳ ಹಿಂದೆ ಅಷ್ಟೆ. ಪ್ರವೀಣ್ ಮತ್ತು ಅಯ್ನಾಸ್ ಒಂದೇ ಟೀಮ್‌ನಲ್ಲಿ ಇದ್ದರು. ಅಯ್ನಾಜ್‌ ಗಗನಸಖಿಯಾಗಿದ್ದರೆ ಈತ ವಿಮಾನದಲ್ಲಿ ಸಹಾಯಕನಾಗಿದ್ದ. ಸೀಟು ಬೆಲ್ಟ್‌ಗಳನ್ನು ಹಾಕಿಕೊಳ್ಳುವುದು ಮೊದಲಾದ ಸೂಚನೆ ನೀಡುವ ಕೆಲಸ ಇವನದಾಗಿತ್ತು.

ಅಯ್ನಾಜ್‌ ಕೆಲಸಕ್ಕೆ ಸೇರಿದ ದಿನದಿಂದಲೂ ಪ್ರವೀಣ್‌ ಆಕೆಗೆ ಸಹಾಯ ಮಾಡುತ್ತಿದ್ದ. ಒಂದು ಕಚೇರಿಯಲ್ಲಿ ಹೊಸದಾಗಿ ಕೆಲಸಕ್ಕೆ ಸೇರಿದಾಗ ಸೀನಿಯರ್ಸ್‌ ಹೇಗೆ ಸಹಾಯ ಮಾಡುತ್ತಾರೋ ಹಾಗೆ ನಡೆದುಕೊಂಡಿದ್ದ. ಆಕೆಗೆ ಮಂಗಳೂರಲ್ಲಿ ಬಾಡಿಗೆ ಮನೆ ಹುಡುಕಲು ಸಹಾಯ ಮಾಡಿದ್ದ. ಕೆಲವೊಂದು ಸಂದರ್ಭದಲ್ಲಿ ಆಕೆ ಅವನ ವಾಹನವನ್ನೂ ಬಳಸುತ್ತಿದ್ದಳು.

ಈ ನಡುವೆ ಆತ ಸ್ವಲ್ಪ ಅತಿಯಾಗಿ ಆಡುತ್ತಿದ್ದ ಎಂಬ ಕಾರಣಕ್ಕಾಗಿಯೋ ಏನೋ ಅಯ್ನಾಜ್‌ ಆತನ ಜತೆಗೆ ಮಾತು ಬಿಟ್ಟಿದ್ದಳು. ವಿಪರೀತವಾಗಿ ಹತ್ತಿರವಾದರೆ ನೋಡುವವರಿಗೆ ಚೆನ್ನಾಗಿರುವುದಿಲ್ಲ ಎನ್ನುವುದು ಅವಳ ಅಭಿಪ್ರಾಯವಾಗಿರುವ ಸಾಧ್ಯತೆ ಇದೆ. ಆತ ಅವಳು ನನ್ನವಳು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಿದ್ದುದು ಕೂಡಾ ಅವಳಿಗೆ ಅಷ್ಟಾಗಿ ಹಿಡಿಸಿರಲಿಲ್ಲ.

ಹೀಗಾಗಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ಕಳೆದ ಒಂದು ತಿಂಗಳಿನಿಂದ ಮಾತುಕತೆ ನಿಲ್ಲಿಸಿದ್ದಳು. ಆದರೆ, ಕೆಲವು ಸಮಯದಿಂದ ಅಷ್ಟು ಹತ್ತಿರವಾಗಿದ್ದಳು ಈಗ ಏಕಾಏಕಿ ದೂರವಾಗಿದ್ದು, ಮಾತು ಬಿಟ್ಟಿದ್ದು ಅವನಿಗೆ ಸಹಿಸಲು ಆಗಿರಲಿಲ್ಲ. ಹೀಗಾಗಿ ಅತಿಯಾದ ಪೊಸೆಸಿವ್‌ನೆಸ್‌ನಿಂದ ಕೊಲೆ ಮಾಡಲು ನಿರ್ಧರಿಸಿದ್ದ!

Murder Case in Udupi

ಹೆಜಮಾಡಿಯಲ್ಲಿ ವಾಹನ ಪಾರ್ಕ್‌ ಮಾಡಿ ಬಂದಿದ್ದ

ನವೆಂಬರ್‌ 12ರಂದು ಕೊಲೆ ಮಾಡಿದ ಆತ ಅದಕ್ಕಿಂತ ಮೊದಲು ಹಲವಾರು ತಂತ್ರಗಳನ್ನು ಬಳಸಿದ್ದ. ಕೊಲೆ ಮಾಡಿದ ಬಳಿಕ ಸಿಕ್ಕಿ ಹಾಕಿಕೊಳ್ಳಬಾರದು ಎನ್ನುವ ಜಾಣ್ಮೆ ಪ್ರಯೋಗ ಮಾಡಿದ್ದ. ಅಂದರೆ ಆತ ಮಂಗಳೂರಿನಿಂದ ಹೊರಟು ಹೆಜಮಾಡಿ ಟೋಲ್ ಗೇಟ್ ವರೆಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ.

ಟೋಲ್ ಗೇಟ್‌ನ ಸಿಸಿ ಕ್ಯಾಮೆರಾಕ್ಕೆ ಗೊತ್ತಾಗದಂತೆ ದೂರದಲ್ಲಿ ಎಲ್ಲೋ ವಾಹನ ಪಾರ್ಕ್‌ ಮಾಡಿ ಬೇರೆ ದಾರಿಯಲ್ಲಿ ಗೇಟ್‌ ದಾಟಿದ್ದ. ಅಲ್ಲಿಂದ ಉಡುಪಿಗೆ ಬಂದು ತೃಪ್ತಿ ನಗರಕ್ಕೆ ಬಂದಿದ್ದ.

ತೃಪ್ತಿ ನಗರದ ಮನೆಗೆ ಬಂದವನೇ ಮೊದಲು ಅಯ್ನಾಜ್‌ಗೆ ಚಾಕುವಿನಿಂದ ಇರಿದಿದ್ದಾನೆ. ಅಯ್ನಾಜ್‌ ಕೂಗು ಕೇಳಿ ಬಂದ ತಾಯಿಗೆ ಮತ್ತು ಅಕ್ಕ, ಅಫ್ನಾನ್‌ಗೆ ಚೂರಿಯಿಂದ ಇರಿದಿದ್ದ. ಬಳಿಕ ಮನೆಗೆ ಬಂದ ಅಸೀಮ್‌ಗೆ ಚೂರಿ ಹಾಕಿದ್ದಾನೆ. ಅಲ್ಲಿಂದ ಬೇರೆ ಬೇರೆ ಮಾರ್ಗವಾಗಿ ಮರಳಿ ಮನೆಗೆ ಹೋಗಿದ್ದ.

ಕೊಲೆಯ ಸಂದರ್ಭ ಧರಿಸಿದ್ದ ಬಟ್ಟೆಯನ್ನು ದಾರಿ ಮಧ್ಯೆ ಎಲ್ಲೋ ಸುಟ್ಟು ಹಾಕಿದ್ದ ಆತ ಕೃತ್ಯಕ್ಕೆ ಬಳಸಿದ್ದ ಮನೆಯ ಕಿಚನ್ ಚೂರಿಯನ್ನು ಮರಳಿ ಅಲ್ಲಿಯೇ ತಂದು ಇಟ್ಟಿದ್ದ! ಕೊಲೆಯ ಸಂದರ್ಭದಲ್ಲಿ ಅವನಿಗೂ ಗಾಯವಾಗಿತ್ತು. ಗಾಯದ ಕುರಿತು ಪತ್ನಿ ವಿಚಾರಿಸಿದಾಗ ಬೇರೆ ಸಬೂಬು ಹೇಳಿದ್ದ. ಮನೆಯಿಂದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಪೊಲೀಸರಿಗೆ ಆರಂಭದಲ್ಲೇ ಆತನ ಮೇಲೆ ಸಂಶಯ ಬಂದಿತ್ತು. ಹೀಗಾಗಿ ಆತನ ಮೊಬೈಲ್‌ ಲೊಕೇಶನ್‌ ಬೆನ್ನು ಹತ್ತಿ ಬೆಳಗಾವಿಯಲ್ಲಿ ಬಂಧಿಸಿದರು.

ನಿಜವೆಂದರೆ ಪ್ರವೀಣ್‌ ಚೌಗುಲೆಗೆ ಕೊಲೆಗೆ ಮೊದಲು ಕ್ರಿಮಿನಲ್‌ ಹಿನ್ನೆಲೆ ಇರಲಿಲ್ಲ. ಪೂನಾ ಸಿಟಿ ಪೊಲೀಸ್ ನಲ್ಲಿ 3 ತಿಂಗಳು ಟ್ರೈನಿಂಗ್ ಪಡೆದಿದ್ದ ಅವನಿಗೆ ಅದರ ಆಧಾರದಲ್ಲಿ ವಿಮಾನದ ಕ್ರೂ ಆಗಿ ಕೆಲಸ ಸಿಕ್ಕಿದೆ ಎಂದು ಎಸ್‌ಪಿ ತಿಳಿಸಿದರು.

ಕುಡಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆಯನ್ನೂ ಮಾಡಲಾಗಿದೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯಲು ಅವಕಾಶವಿದೆ. ಗಂಭೀರ ಪ್ರಕರಣ ಆಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಡಾ. ಅರುಣ್‌ ಹೇಳಿದರು. ಜೈಲಿನಲ್ಲಿ ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ ಎಂದರು.

ಫಾಸ್ಟ್‌ ಟ್ರ್ಯಾಕ್‌ ವಿಚಾರಣೆಗೆ ಅಯ್ನಾಜ್‌ ಕುಟುಂಬ ಮನವಿ

ಪ್ರಕರಣದ ತನಿಖೆಯಲ್ಲಿ ನೂರ್‌ ಮಹಮದ್‌ ಅವರ ಕುಟುಂಬ ಎಲ್ಲ ರೀತಿಯಲ್ಲೂ ಸಹಕರಿಸಿದೆ. ಕುಟುಂಬ ನೋವಲ್ಲಿದ್ದರೂ ಎಲ್ಲ ಮಾಹಿತಿಯನ್ನು ಕೊಟ್ಟಿದ್ದಾರೆ. ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಮೂಲಕ ತ್ವರಿತ ನ್ಯಾಯದಾನಕ್ಕೆ ಅಯ್ನಾಜ್‌ ಮನೆಯವರು ಮನವಿ ಮಾಡಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಜಿಲ್ಲಾ ಎಸ್ಪಿ ಅರುಣ್‌ ಕೆ ಹೇಳಿದರು.

ಇದನ್ನೂ ಓದಿ: Udupi Murder : ಮಹಜರಿನ ವೇಳೆ ಮುತ್ತಿಗೆ; ಹಂತಕನನ್ನು 30 ಸೆಕೆಂಡ್‌ ನಮ್ಮ ಕೈಗೆ ಕೊಡಿ ಎಂದ ಜನ

11 ತಂಡ, 50ಕ್ಕೂ ಅಧಿಕ ಪೊಲೀಸರು

ಈ ಪ್ರಕರಣವನ್ನು ಬೇಧಿಸುವುದು ತುಂಬ ಸವಾಲಿನ ಕೆಲಸವಾಗಿತ್ತು. ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಎಲ್ಲರೂ ಕುತೂಹಲ ಹೊಂದಿದ್ದರು. ಹೀಗಾಗಿ ಪ್ರತಿ ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕಾಗಿತ್ತು ಎಂದು ಹೇಳಿದ ಎಸ್‌ಪಿ ಅರುಣ್‌, ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಸುಮಾರು 50 ಪೊಲೀಸರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನೂರ್‌ ಮಹಮದ್‌ ಅವರ ಹಸೀನಾಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದನ್ನೂ ಪರಿಶೀಲನೆ ಮಾಡಿದ್ದೇವೆ ಎಂದರು ಅರುಣ್‌.

ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳನ್ನು ಸಂಗ್ರಹ ಮಾಡುತ್ತಿದ್ದೇವೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಇಲಾಖೆಗೆ 1.50 ಲಕ್ಷ ಬಹುಮಾನ ಕೊಡುವ ಬಗ್ಗೆ ಶಿಫಾರಸು ಮಾಡಿರುವುದಾಗಿ ಉಡುಪಿ ಎಸ್ ಪಿ ಡಾ. ಅರುಣ್ ಕೆ ಮಾಹಿತಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕೋಲಾರದಲ್ಲಿ ಅಬ್ಬರಿಸಿದ ವರುಣ; ಒಳನಾಡಿನಲ್ಲಿ ತಾಪಮಾನ ಇಳಿಕೆ

Karnataka Weather Forecast : ರಾಜ್ಯದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕೋಲಾರದಲ್ಲಿ ಮಳೆಗೆ ಬೆಳೆ ಹಾನಿಯಾದರೆ, ಬೆಂಗಳೂರಲ್ಲಿ ದಿಢೀರ್‌ ವರ್ಷಾಧಾರೆಗೆ ವಾಹನ ಸವಾರರು ಪರದಾಡಬೇಕಾಯಿತು. ಮುಂದಿನ 48 ಗಂಟೆಯಲ್ಲಿ ಮಳೆಯು ಅಬ್ಬರಿಸಿದರೆ, ತಾಪಮಾನ ಇಳಿಕೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಕೋಲಾರ/ಬೆಂಗಳೂರು: ಭಾನುವಾರ ಕೋಲಾರ ಜಿಲ್ಲೆಯ ಹಲವು ಕಡೆ ಗುಡುಗು ಸಹಿತ (rain News) ಮಳೆಯಾಗಿದೆ. ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆಗೆ (Karnataka Weather Forecast) ಜನಜೀವನ ಅಸ್ತವ್ಯಸ್ತಗೊಂಡಿತ್ತು. ಬಿಟ್ಟುಬಿಡದೆ ಸುರಿದ ಮಳೆಗೆ ಕೃಷಿ ಚಟುವಟಿಕೆಗಳು ಸ್ಥಗಿತವಾಗಿದ್ದವು. ಮುಳಬಾಗಲು, ಕೋಲಾರದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ತೋಟದ ಬೆಳೆಗಳಿಗೆ ಹಾನಿಯಾಗಿತ್ತು. ಮಳೆಯಿಂದ ಮಾವು, ಟೊಮೊಟೊ ಬೆಳೆಗಾರರಿಗೆ ಸಂಕಷ್ಟ ಎದುರಾಯಿತು.

ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗಿದೆ. ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭ ನಗರ ಸುತ್ತಮುತ್ತ ಮಳೆಯಾಗಿದ್ದರಿಂದ ವಾಹನ ಸವಾರರಿಗೆ ಅನಾನುಕೂಲ ಉಂಟಾಯಿತು. ದಿಢೀರ್‌ ಮಳೆಗೆ ಜನರು ಬಸ್‌ ನಿಲ್ದಾಣ, ಅಂಗಡಿಗಳನ್ನು ಆಶ್ರಯಿಸಿದರು.

ಇನ್ನೂ ಶನಿವಾರ ದಕ್ಷಿಣ ಒಳನಾಡು ಹಾಗೂ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿರುವ ವರದಿ ಆಗಿದೆ. ಮಂಡ್ಯದ ಹೊನಕೆರೆಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 40.3 ಡಿ.ಸೆ ದಾಖಲಾಗಿದೆ.

ಇದನ್ನೂ ಓದಿ: Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಬೆಂಗಳೂರು ಸೇರಿ ದಕ್ಷಿಣ ಒಳನಾಡು ಆವರಿಸಿದ ಮುಂಗಾರು

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗದಗ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ದಾವಣಗೆರೆ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ , ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Udupi Pocso case: ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

VISTARANEWS.COM


on

Udupi Pocso case
Koo

ಉಡುಪಿ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು (Physical Abuse) ಬೆಳಕಿಗೆ ಬಂದಿದೆ. ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಸೊ ಪ್ರಕರಣ (Udupi Pocso case) ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೇ 18 ರಂದು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಆರೋಪಿ ಶ್ರೇಯಸ್‌ ಟಾರ್ಗೆಟ್ ಆಗಿದ್ದು, 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಆರೋಪಿ ಸೆರೆಹಿಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರು, ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್‌ಟಾಪ್‌ನಲ್ಲಿ ಆಸಾಮಿ ಇರಿಸಿಕೊಳ್ಳುತ್ತಿದ್ದ.

ಶಾಲೆ, ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ಈ ವಿಕೃತ ಕಾಮಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ನಂತರ ಯುವತಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ.

ಇದನ್ನೂ ಓದಿ | Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

ಆರೋಪಿಯ ಲ್ಯಾಪ್‌ಟಾಪ್‌ ವಶಕ್ಕೆ ಪಡೆದ ಸೈಬರ್ ಪೊಲೀಸ್

ಆರೋಪಿ ಶ್ರೇಯಸ್‌ ಲ್ಯಾಪ್‌ಟಾಪ್‌ ಅನ್ನು ಸೈಬರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲ್ಯಾಪ್‌ಟಾಪ್‌ಗೆ ಆರೋಪಿ ಪಾಸ್ ವರ್ಡ್ ಇಟ್ಟಿದ್ದು, ಸುಮಾರು 50ಕ್ಕೂ ಅಧಿಕ ವಿಡಿಯೊಗಳು ಇರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಮನೆಯಿಂದ ಲ್ಯಾಪ್‌ಟಾಪ್‌ ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ಶಾಲಾ, ಕಾಲೇಜಿನ 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಶಂಕೆ ವ್ಯಕ್ತವಾಗಿದ್ದು, ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಶ್ರೇಯಸ್ ನಾಯ್ಕ ಬಂಧನಕ್ಕೆ ದಲಿತ ಸಂಘಟನೆಗಳ ಒತ್ತಾಯ

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ ಬೆಳಿಕಿಗೆ ಬಂದ ಹಿನ್ನೆಲೆಯಲ್ಲಿ ಆರೋಪಿ ಶ್ರೇಯಸ್ ನಾಯ್ಕ (25) ಬಂಧನಕ್ಕೆ ದಲಿತ ಸಂಘಟನೆಗಳು ಒತ್ತಾಯ ಮಾಡಿವೆ. ಆರೋಪಿ ಪ್ರಭಾವಿ ಕುಟುಂಬದಿಂದ ಬಂದಿದ್ದು, ಪೊಲೀಸರ ತನಿಖೆ ಬಗ್ಗೆ ದಲಿತ ಸಂಘಟನೆಗಳು ಅಸಮಾಧಾನ ಹೊರಹಾಕಿವೆ.

ಶ್ರೇಯಸ್ ಕುಟುಂಬಸ್ಥರು ಇಲಾಖೆಯಲ್ಲಿದ್ದಾರೆ, ಈ ಕಾರಣದಿಂದ ಆತನ ರಕ್ಷಣೆ ನಡೆಯುತ್ತಿದೆ ಎಂದು ಆರೋಪಿಸಿರುವ ದಲಿತ ಸಂಘಟನೆಗಳು, ಶ್ರೇಯಸ್ ನಾಯ್ಕ ಬಗ್ಗೆ‌ ಸ್ಥಳೀಯವಾಗಿ ಹಲವು ಆರೋಪಗಳು ಇತ್ತು. ಹೀಗಾಗಿ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿವೆ.

Continue Reading

ಮಳೆ

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Karnataka rain : ವಾರದವರೆಗೂ ಬಿಡುವು ನೀಡಿದ್ದ ವರುಣ ನಿನ್ನೆ ಶನಿವಾರದಿಂದ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Rain news) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾದರೆ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ, ವಿಜಯನಗರ ಮತ್ತು ಹಾವೇರಿಯ ಬಹುತೇಕ ಕಡೆಗಳಲ್ಲಿ ಮಳೆಯು ಅಬ್ಬರಿಸಲಿದೆ.

ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ರಾಜಧಾನಿಯಲ್ಲಿ ಅಬ್ಬರದ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲಿನಿಂದ ಕಂಗೆಟ್ಟ ಸಿಟಿ ಮಂದಿಗೆ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ವಾತಾವರಣವೂ ಕೂಲ್‌ ಆಗಿದೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

ಮೈಸೂರಿನಲ್ಲಿ ಗಾಳಿ-ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆ

ಮೈಸೂರಿನಲ್ಲಿ ವಿವಿಧೆಡೆ ಭಾರಿ ಮಳೆ ಗಾಳಿಗೆ ಬಾಳೆ ಬೆಳೆ ನೆಲಕ್ಕುರುಳಿದೆ. ಮಳೆ, ಗಾಳಿಯು ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಮಾಡಿದೆ. ಶನಿವಾರ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರವೇ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳಿ ಗಿಡ ನೆಲಕ್ಕುರುಳಿದ್ದು ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ವ್ಯಾಪ್ತಿಯಲ್ಲಿ ಮಳೆಗೆ ಅಪಾರ ಪ್ರಮಾಣದ ತಂಬಾಕು ಹಾಗೂ ಶುಂಠಿ ಬೆಳೆ ನಾಶವಾಗಿದೆ. ಪೆಂಜಹಳ್ಳಿ, ಹರಳಹಳ್ಳಿ, ಕಿರಂಗೂರು, ಹಿಂಡಗೂಡ್ಲು ಸುತ್ತ ಮುತ್ತ ಸಾಕಷ್ಟು ಮಳೆ ಅವಾಂತರವೇ ಸೃಷ್ಟಿಯಾಗಿತ್ತು. ತಂಬಾಕು ಸಸಿ ನಾಟಿ ಮಾಡಿ ಗೊಬ್ಬರ ಹಾಕಿದ್ದ ಜಮೀನಿನಲ್ಲಿ ಮಳೆಯ ನೀರು ನಿಂತು ಬೆಳೆ ಹಾನಿಯಾಗಿತ್ತು. ಹರಳಹಳ್ಳಿ ಮಾದಳ್ಳಿಕಟ್ಟೆ, ಹುಲಿಕೆರೆ, ಆದ್ವಾಳಕೆರೆ, ಸೇರಿದಂತೆ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿವೆ.

ಕೆಜಿಎಫ್‌ನಲ್ಲಿ ಭರ್ಜರಿ ಮಳೆ

ಕೋಲಾರ ಜಿಲ್ಲೆಯ ವಿವಿಧಡೆ ತಡರಾತ್ರಿ ಗುಡುಗು ಸಿಡಿಲ ಧಾರಾಕಾರ ಮಳೆಯಾಗಿದೆ. ಕೆಜಿಎಫ್‌ನಲ್ಲಿ 6.4 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಬಂಗಾರಪೇಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಜಿಎಫ್‌ನ ಬೆಮಲ್ ಬಡಾವಣೆಯಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರಲಿದೆ. ತಡರಾತ್ರಿ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಗಂಭೀರ

ಇನ್ನೂ ವಿಜಯನಗರದ ನಿವಾಸಿ ಬೈಕ್‌ನಲ್ಲಿ ಬರುವಾಗ ಗಾಳಿ ಮಳೆಗೆ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಇಮ್ಯುನಿಯಲ್ ಎಂಬಾತ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಜಿಎಫ್ ನ ಮಾರಿಕೊಪ್ಪ ಮತ್ತು ಆಂಧ್ರದ ಕುಪ್ಪಂ ರಾಮಕುಪ್ಪಂ ಬಂಗಾರಪೇಟೆ ಮಾಲೂರು ಕಡೆ ಬಿರುಸಿನ ಮಳೆಯಾಗಿದೆ .ಹಳ್ಳ ಕೊಳ್ಳಗಳು ತುಂಬಿ ನೀರು ಹರಿದಿದೆ. ಇನ್ನು ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ವಿಜಯಪುರದಲ್ಲಿ ಗಾಳಿ ರಭಸ

ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಭಾಗದಲ್ಲಿ ಭಾರಿ ಮಳೆ ಸುರಿದಿದೆ. ಭೀಕರ ಬರಗಾಲದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಭಸವಾಗಿ ಸುರಿದ ಮಳೆಯಿಂದಾಗಿ ಕೆರೆ ಹಾಗೂ ರಸ್ತೆಗಳು ತುಂಬಿ ಹರಿದಿದ್ದವು. ಭಾರಿ ಗಾಳಿ ಸಮೇತವಾಗಿ ಸತತ ಮೂರು ಗಂಟೆ ಸುರಿದ ಮಳೆಗೆ ಮರಗಳು‌ ಹಾಗೂ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Rain News : ರಾಜ್ಯಾದ್ಯಂತ ಗುಡುಗು ಸಹಿತ ಮಧ್ಯಮ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ವ್ಯಾಪಕ ಲಘುದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Amul Milk
ದೇಶ4 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ6 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ6 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ7 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ7 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20247 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ7 hours ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ8 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ8 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ8 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌