Site icon Vistara News

ಮಂಗಳೂರು ಸ್ಫೋಟ | ಬ್ರಹ್ಮಾವರದ ವಾರಂಬಳ್ಳಿಯಲ್ಲಿ ಶಂಕಿತ ವಿದ್ಯಾರ್ಥಿ ರಿಹಾನ್‌ ಶೇಖ್‌ ಮನೆಯ ಮಹಜರು

Mangalore blast cooker

ಉಡುಪಿ: ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಗಳ ಜತೆಗೆ ಸಂಪರ್ಕ ಹೊಂದಿದ್ದ ಶಂಕೆಯ ಹಿನ್ನೆಲೆಯಲ್ಲಿ ಕೊಣಾಜೆ ನಡುಪದವಿನ ಪಿಎ ಎಂಜಿನಿಯರಿಂಗ್ ಕಾಲೇಜಿಗೆ ಗುರುವಾರ ಎನ್‌ಐಎ ತಂಡ ದಾಳಿ ನಡೆಸಿತ್ತು. ಹಾಗೂ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ರಿಹಾನ್‌ ಶೇಖ್‌ನನ್ನು (ಮಂಗಳೂರು ಸ್ಫೋಟ) ವಶಕ್ಕೆ ಪಡೆದುಕೊಂಡಿತ್ತು. ಇದೀಗ ರಿಹಾನ್‌ ಶೇಖ್‌ನ ಮನೆಯ ಮಹಜರನ್ನು ನಡೆಸಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯಲ್ಲಿ ಬೆಂಗಳೂರಿನ ಎನ್ ಐ ಎ ಅಧಿಕಾರಿಗಳಿಂದ ಫ್ಲ್ಯಾಟ್‌ನಲ್ಲಿ ಮಹಜರು ಕಾರ್ಯ ನಡೆಯಿತು. ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ರಿಹಾನ್ ಕುಟುಂಬಸ್ಥರ ವಿಚಾರಣೆ ನಡೆಸಲಾಯಿತು. ಶಂಕಿತ ಯುವಕನನ್ನು ಬೆಂಗಳೂರಿಗೆ ಎನ್ ಐ ಎ ತಂಡ ಕರೆದೊಯ್ಯಲಿದ್ದು, ಹೆಚ್ಚಿನ ತನಿಖೆ ನಡೆಸುವ ನಿರೀಕ್ಷೆ ಇದೆ.

Exit mobile version