Site icon Vistara News

ಸುಟ್ಟು ಹೋದ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ವತ್ತನೆಣೆಯ ಕಾಡು ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ದೇಹ ಸಂಪೂರ್ಣ ಸುಟ್ಟಿದ್ದು, ಅಸ್ತಿ ಪಂಜರದ ಅವಶೇಷಗಳು ಮಾತ್ರ ಉಳಿದುಕೊಂಡಿವೆ. ಇದೊಂದು ಆತ್ಮಹತ್ಯೆ ಪ್ರಕರಣವೇ ಅಥವಾ ಕೊಲೆಗೈಯ್ಯಲಾಗಿದೆಯೇ ಎಂಬ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ.

ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಮತ್ತು ಪಿಎಸ್‌ಐ ಪವನ್ ನಾಯಕ್ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿ ಸುಟ್ಟಿರುವ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಚಾಲನೆ ನೀಡಿದ್ದಾರೆ.

ಇದನ್ನೂ ಓದಿ| ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ; ಪತಿ ವಿರುದ್ಧ ಕೊಲೆ ಆರೋಪ

Exit mobile version