Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ - Vistara News

ಉಡುಪಿ

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

Tornado Effect : ಉಡುಪಿಯಲ್ಲಿ (Udupi News) ದಿಢೀರ್‌ ಸುಂಟರಗಾಳಿ ಎದ್ದಿದ್ದು, ಗ್ರಾಮಸ್ಥರು ಕಂಗಲಾಗಿದ್ದಾರೆ. ಸುಂಟರಗಾಳಿಗೆ ಅಪಾರ ಪ್ರಮಾಣದ ಮರಗಳು ಕತ್ತರಿಸಿದಂತೆ ನೆಲಕ್ಕುರುಳಿವೆ. ರಟ್ಟಾಡಿ ವ್ಯಾಪ್ತಿಯ ಹಲವು ಮನೆಗಳಿಗೂ ಸುಂಟರಗಾಳಿಯಿಂದ ಹಾನಿಯಾಗಿದೆ.

VISTARANEWS.COM


on

Tornado Effect in Udupi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಒಂದು ಕಡೆ ಮಳೆಯು (Karnataka Rain) ಅಬ್ಬರಿಸುತ್ತದ್ದರೆ ಮತ್ತೊಂದು ಕಡೆ ಸುಂಟರಗಾಳಿ (Tornado Effect) ಹವಾ ಜೋರಾಗಿದೆ. ಉಡುಪಿಯ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಸುಂಟರಗಾಳಿ ಕಾಣಿಸಿಕೊಂಡಿದೆ. ಭಾರೀ ಸುಂಟರಗಾಳಿಗೆ ರಟ್ಟಾಡಿ ಗ್ರಾಮದ ಕೃಷಿಕರು ಕಂಗಾಲಾಗಿದ್ದಾರೆ.

ಅಪಾರ ಪ್ರಮಾಣದ ಮರ, ಮನೆಗಳಿಗೆ ಹಾನಿಯಾಗಿದೆ. ಭಾರಿ ಶಬ್ದದೊಂದಿಗೆ ಸುಂಟರಗಾಳಿ ಅಪ್ಪಳಿಸಿದೆ. ಕೆಲವು ಹೊತ್ತು ಚಂಡಮಾರುತದಂತೆ ಸುಂಟರಗಾಳಿ ಭಾಸವಾಗಿದೆ. ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಟ್ಟಾಡಿಯಲ್ಲಿ ಏಕಾಏಕಿ ಸುಂಟರಗಾಳಿ ಕಾಣಿಸಿಕೊಂಡಿದೆ.

ರಟ್ಟಾಡಿಯಲ್ಲಿ ಭೀಕರ ಸುಂಟರಗಾಳಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯತ್‌ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡ್ರೋನ್‌ ಕ್ಯಾಮೆರಾ ಮೂಲಕ ಮರ, ಮನೆಗಳ ಹಾನಿ ಕುರಿತು ಅಂದಾಜು ಲೆಕ್ಕಚಾರ ನಡೆಸಿದ್ದಾರೆ.

ಇನ್ನೂ ರಟ್ಟಾಡಿ ವ್ಯಾಪ್ತಿಯಲ್ಲಿರುವ ಸಾವಿರಾರು ಮರಗಳು ಧರಶಾಹಿಯಾಗಿವೆ. 5 ಸಾವಿರಕ್ಕೂ ಅಧಿಕ ಅಡಿಕೆ ಮರ, 2 ಸಾವಿರದಷ್ಟು ರಬ್ಬರ್‌ ಮರ ಹಾಗೂ ತೆಂಗಿಗೂ ಹಾನಿಯಾಗಿದೆ. ಅಪಾರ ಪ್ರಮಾಣದ ಮರಗಳು ಕತ್ತರಿಸಿದಂತೆ ನೆಲಕ್ಕುರುಳಿದೆ. ರಟ್ಟಾಡಿ ವ್ಯಾಪ್ತಿಯ ಹಲವು ಮನೆಗಳಿಗೂ ಸುಂಟರಗಾಳಿಯಿಂದ ಹಾನಿಯಾಗಿದೆ.

ಅಮಾಸೆಬೈಲು ರಟ್ಟಾಡಿಯಲ್ಲಿ ಕಾಣಿಸಿಕೊಂಡ ಭೀಕರ ಸುಂಟರಗಾಳಿಯ ಎಫೆಕ್ಟ್‌ನಿಂದಾಗಿ ರಟ್ಟಾಡಿ ನಂಜಿನ ಹಾಡಿ ಕತ್ಗೋಡು ಎಂಬಲ್ಲಿ ಮನೆಯ ಮೇಲೆ ಮರ ಬಿದ್ದಿದೆ. ಸುಂಟರಗಾಳಿಯ ಆರ್ಭಟಕ್ಕೆ ಮನೆಯ ಪಕ್ಕದಲ್ಲಿದ್ದ ಮರ ಉರಳಿ ಬಿದ್ದಿದೆ. ಮನೆ ಮೇಲೆ ಮರ ಬಿದ್ದ ಪರಿಣಾಮ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಕಡು ಬಡತನದಲ್ಲಿ ಜೀವನ ನಡೆಸುತ್ತಿದ್ದ ಕುಟುಂಬ ಸುಂಟರಗಾಳಿಯಿಂದ ಅತಂತ್ರಕ್ಕೆ ಸಿಲುಕಿದೆ. ದಿಢೀರನೆ ಕಾಣಿಸಿಕೊಂಡಿದ್ದ ಸುಂಟರಗಾಳಿಯಿಂದ ರಟ್ಟಾಡಿ ಗ್ರಾಮ ಅಲ್ಲೋಲಕಲ್ಲೋಲವೇ ಎದ್ದಿದೆ. ದುರ್ಗಿ ಅವರ ಕುಟುಂಬ ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

Tornado Effect in udupi

ಇದನ್ನೂ ಓದಿ: Murder case : ಹಾಸನದಲ್ಲಿ ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ

ಕಮಲಶಿಲೆ ದೇವಾಲಯದಲ್ಲಿ ನೈಸರ್ಗಿಕ ಪುಣ್ಯಸ್ನಾನ

ಉಡುಪಿಯ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದೊಳಗೆ ಕುಬ್ಜ ನದಿ ನೀರು ಹರಿದಿದೆ. ಬೆಳಗಿನ ಜಾವ ಮೂರುವರೆ ಸುಮಾರಿಗೆ ದೇವಿಯ ಚರಣವನ್ನು ಕುಬ್ಜಾ ನದಿ ನೀರು ಸ್ಪರ್ಶ ಮಾಡಿದೆ. ಈ ಮೂಲಕ ದೇವಸ್ಥಾನದಲ್ಲಿ ನೈಸರ್ಗಿಕ ಪುಣ್ಯಸ್ನಾನ ನಡೆದಿದೆ.

ಗರ್ಭಗುಡಿಗೆ ನೀರು ಬರುತ್ತಿದ್ದಂತೆ ಅರ್ಚಕರು ಮಂಗಳಾರತಿ ಮಾಡಿದ್ದಾರೆ. ವರ್ಷಂಪ್ರತಿ ಒಂದು ಬಾರಿ ಗರ್ಭಗುಡಿಗೆ ಕುಬ್ಜಾ ನದಿ ನೀರು ಬರುತ್ತದೆ. ಈ ನೈಸರ್ಗಿಕ ಪುಣ್ಯಸ್ನಾನಕ್ಕೆ ಭಕ್ತರು ಕಾತರದಿಂದ ಕಾಯುತ್ತಾರೆ. ಸದ್ಯ ನೀರು ಇಳಿಮುಖವಾಗಿ ದೇವಾಲಯದಿಂದ ತೆರವು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Dr HS Shetty : ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಇಂತಹ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನಾವು ಇದುವರೆಗೆ ಯಾರಿಂದಲೂ ಒಂದು ರೂಪಾಯಿ ಚಂದಾ ಸ್ವೀಕರಿಸಿಲ್ಲ. ಶಾಲಾ ಕಟ್ಟಡ ನಿರ್ಮಾಣ, ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳ ವಿತರಣೆ, ಶಿಕ್ಷಕರ ನೇಮಕ ಸೇರಿದಂತೆ ಶೈಕ್ಷಣಿಕ ವಲಯದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತಿದ್ದೇವೆ ಎಂದು ನುಡಿದರು.

VISTARANEWS.COM


on

Dr HS Shetty: Rs 7 crore spent on charity; Businessman Dr. HS Shetty
Koo

ಕುಂದಾಪುರ: ಕಳೆದ ಒಂದು ವರ್ಷದಲ್ಲಿ ದಾನ, ಧರ್ಮಗಳಿಗಾಗಿ 7 ಕೋಟಿ ರೂಪಾಯಿ ವಿನಿಯೋಗ ಮಾಡಲಾಗಿದ್ದು, ನಾವು ಬೆಳೆದು ಬಂದ ಸಮಾಜಕ್ಕೆ ನೆರವಾಗುವುದು ನಮ್ಮ ಉದ್ದೇಶ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​ನ ಅಧ್ಯಕ್ಷರಾದ ಡಾ. ಹೆಚ್.ಎಸ್.ಶೆಟ್ಟಿ (Dr HS Shetty) ಹೇಳಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ನೋಂದಾಯಿತ) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 350 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ 41,000 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೈಂದೂರಿನ ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್‌ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಮವಸ್ತ್ರಗಳ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಿದ ಬಳಿಕ ಅವರು ಮಾತನಾಡಿ, ನಮ್ಮ ದುಡಿಮೆಯಲ್ಲಿ ನಮಗೆ ಬೇಕಾದಷ್ಟು ಬಳಸಿಕೊಂಡು ಉಳಿದದನ್ನು ಸಮಾಜಕ್ಕೆ ವಿನಿಯೋಗ ಮಾಡುವುದೇ ಜೀವನ. ನಾನು ನನ್ನ ಜೀವನದಲ್ಲಿ ದುಡಿದ ಹಣದಲ್ಲಿಯೇ ಸಮಾಜ ಮುಖಿ ಕಾರ್ಯ ಮಾಡುತ್ತಿದ್ದೇನೆ ಎಂದು ಹೇಳಿದರು.

ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಇಂತಹ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನಾವು ಇದುವರೆಗೆ ಯಾರಿಂದಲೂ ಒಂದು ರೂಪಾಯಿ ಚಂದಾ ಸ್ವೀಕರಿಸಿಲ್ಲ. ಶಾಲಾ ಕಟ್ಟಡ ನಿರ್ಮಾಣ, ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳ ವಿತರಣೆ, ಶಿಕ್ಷಕರ ನೇಮಕ ಸೇರಿದಂತೆ ಶೈಕ್ಷಣಿಕ ವಲಯದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತಿದ್ದೇವೆ ಎಂದು ನುಡಿದರು.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೈಂದೂರು ನನಗೆ ಈ ಹಿಂದುನಿಂದಲೂ ಚಿರಪರಿಚಿತ ಸ್ಥಳ. ನಾನು ವಿದ್ಯಾರ್ಥಿ ನಾಯಕನಾಗಿದ್ದ ದೆಸೆಯಿಂದಲೇ ಬೈಂದೂರಿನೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದೆ.. ಇಂದು ಬೈಂದೂರಿನಲ್ಲಿ ಡಾಕ್ಟರ್ ಎಚ್ಎಸ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ನನಗೆ ಸಂತಸ ತಂದಿದೆ. ನಿಜವಾದ ದೇಶಪ್ರೇಮಿ ಯಾರು ಎಂದರೆ ಶೈಕ್ಷಣಿಕವಾಗಿ ಸಹಾಯ ನೀಡುತ್ತಿರುವ ಡಾಕ್ಟರ್ ಎಚ್ಎಸ್ ಶೆಟ್ಟಿ ಅವರು ಎಂದು ಕೊಂಡಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರಧಾನ

ಕಾರ್ಯಕ್ರಮದಲ್ಲಿ ‘ಹೆಗ್ಗು೦ಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್‌ ಪ್ರಶಸ್ತಿ’ ಪ್ರಧಾನ ಸಮಾರಂಭ ನಡೆಯಿತು. ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಈ ಬಾರಿ ಪ್ರಶಸ್ತಿ ಪ್ರದಾನವಾಯಿತು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​​ನ ಅಧ್ಯಕ್ಷರಾದ ಎಚ್​. ಎಸ್. ಶೆಟ್ಟಿ ,ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಡಾ. ಸುಮನಾ ಶೆಟ್ಟಿ ಈ ಸಮಾಜಸೇವೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ ಬೆಂಗಳೂರು, ಮೈಸೂರು ಗ್ರೀನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮೈಸೂರು ಸೈನ್ಸ್ & ಟಿಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಯಕ್ರಮದ ಪೋಷಕ ಸಂಸ್ಥೆಗಳಾಗಿವೆ.

ಸಮಾಜ ಸೇವೆಯ ರೂವಾರಿ ಡಾ.ಎಚ್​​ ಎಸ್​ ಶೆಟ್ಟಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಡಾ.ಎಚ್‌.ಎಸ್‌.ಶೆಟ್ಟಿ ಅವರು ಹೋಟೆಲ್‌ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಜತೆಗೆ ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ವಿದ್ಯುತ್‌ ಉತ್ಪಾದನೆ ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ.
ಮೈಸೂರು ಮರ್ಕೆಂಟೈಲ್‌ ಕಂಪನಿ ಲಿಮಿಟೆಡ್‌ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್‌ ಎಕ್ಸ್‌ಪೋರ್ಟ್‌ ಅವಾರ್ಡ್‌ ಲಭಿಸಿದೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿ, ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಡಾ. ಎಚ್‌.ಎಸ್‌. ಶೆಟ್ಟಿ (Dr HS Shetty) ಅವರಿಗೆ ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು.

Continue Reading

ಮಳೆ

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Karnataka Weather Forecast: ಮುಂಗಾರು ಅಬ್ಬರಕ್ಕೆ ಜನರು ವಿಲವಿಲ ಅಂತ ಒದ್ದಾಡುವಂತೆ ಮಾಡಿದೆ. ಮಳೆ ಬಂದರೂ (Heavy rain Effect) ಕಷ್ಟ ಬಾರದೆ ಇದ್ದರೂ ಸಂಕಷ್ಟ ಎಂಬಂತಾಗಿದೆ. ಈಗಾಗಲೇ ಭಾರಿ ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳಲ್ಲಿ (Trekking) ಚಾರಣಕ್ಕೆ ನಿಷೇಧ ಹೇರಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಮಂಗಳೂರು: ವ್ಯಾಪಕ ಮಳೆಯಿಂದಾಗಿ (Karnataka Weather Forecast) ಕರಾವಳಿಯ ಹಲವೆಡೆ ಪ್ರವಾಸಿಗರಿಗೆ ನಿಷೇಧ ಹಾಕಲಾಗಿದೆ. ಗಿರಿಶಿಖರಗಳಲ್ಲಿ ಚಾರಣಕ್ಕೆ ಹೋಗಬೇಕಾದರೆ ಮಳೆಗಾಲ (Heavy rain) ಮುಗಿಯುವವರೆಗೂ ಕಾಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತ , ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿವೆ. ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿ ಶಿಖರಗಳಿಗೆ ಚಾರಣಕ್ಕೆ ಹೋಗುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹಾಕಲಾಗಿದೆ. ಇವೆಲ್ಲದರ ಜತೆಗೆ ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಅಲ್ಲೂ ನದಿ ಹಾಗು ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ ಚಟುವಟಿಕೆಗಳಿಗೂ ಬ್ರೇಕ್‌ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿಷೇಧ ಆದೇಶವನ್ನು ಹೊರಡಿಸಿದ್ದಾರೆ.

ಇಲ್ಲೆಲ್ಲ ಮಳೆ ಅಬ್ಬರ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ 17 ಸೆಂ.ಮೀ ಮಳೆಯಾದರೆ, ಹೊನ್ನಾವರದಲ್ಲಿ 16 ಹಾಗೂ ಉಡುಪಿಯಲ್ಲಿ 15, ಅಂಕೋಲಾದಲ್ಲಿ 13 ಸೆಂ.ಮೀ ಮಳೆಯಾಗಿದೆ.

ಜು.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗಾಳಿ ವೇಗವು 30-40ಕಿ.ಮೀ ಇರಲಿದ್ದು, ಜತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗಾಳಿ ವೇಗವು 30 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ,ಕೊಡಗು, ಮೈಸೂರು, ರಾಮನಗರ ಸೇರಿದಂತೆ ದಾವಣಗೆರೆ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನು ಹಿಡಿಯುವ ಸಾಹಸ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಳೆ ಪ್ರಮಾಣದಿಂದಾಗಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟದಲ್ಲಿಯೂ ನಿರಂತರವಾಗಿ ಮಳೆ ಹೆಚ್ಚಿದ್ದು, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ತೀರ ಪ್ರದೇಶದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪ್ರವಾಹದ ಭೀತಿ ಇರುವುದರಿಂದ ನೇತ್ರಾವತಿ ನದಿ ತೀರದವರಿಗೆ, ದ್ವೀಪ ಪ್ರದೇಶ ಜನರಿಗೂ ಸೂಚನೆ ನೀಡಲಾಗಿದೆ. ನದಿಯಲ್ಲಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದರೂ, ಸ್ಥಳೀಯರು ದೋಣಿ ಮೂಲಕ ಮೀನು ಹಿಡಿಯುತ್ತಿರುವುದು ಕಂಡು ಬಂದಿದೆ.

ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ

ದಾವಣಗೆರೆಯ ಹರಿಹರದ ಬಳಿಯ ರಾಜನಹಳ್ಳಿ ಜಾಕ್ ವೆಲ್ ಬಳಿ ನೀರು ನಾಯಿಗಳ ಹಿಂಡು ಹಿಂಡಾಗಿ ಪ್ರತ್ಯಕ್ಷವಾಗಿದೆ. ನೀರು ನಾಯಿಗಳು ಜನರ ಕಣ್ಣಿಗೆ ಕಾಣುವುದು ಅಪರೂಪ. ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ದಡದಲ್ಲಿ ನೀರು ನಾಯಿಗಳು ಆಟವಾಡುತ್ತಿರುವುದು ಕಂಡು ಬಂದಿದೆ. ನೀರು ನಾಯಿ ಕಂಡರೆ ಸಮೃದ್ಧಿ ಮಳೆ ಬೆಳೆ ಆಗುತ್ತೆ ಎಂಬ ನಂಬಿಕೆ ಇದೆ.

ಅಬ್ಬಿ ಜಲಪಾತಕ್ಕೆ ಸಾಕು ನಾಯಿ ಜತೆಗೆ ಬಂದ ಪ್ರವಾಸಿಗರು!

ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಸಾಕು ನಾಯಿ ಹಿಡಿದು ಪ್ರವಾಸಿತಾಣವಾದ ಮಡಿಕೇರಿ ಸಮೀಪದ ಅಬ್ಬಿ ಜಲಪಾತಕ್ಕೆ ಬಂದಿದ್ದಾರೆ. ಶ್ವಾನವನ್ನು ಒಳಗೆ ತರಬೇಡಿ ಎಂದರು ಹೇಳಿದರೆ ಪ್ರವಾಸಿಗರು ಪೊಲೀಸರೊಟ್ಟಿಗೆ ಕೂಗಾಟ ಶುರು ಮಾಡುತ್ತಿದ್ದಾರೆ.

ಇತ್ತ ಪ್ರವಾಸಿಗರನ್ನು ಕಂಡು ಶ್ವಾನಗಳು ಕಚ್ಚಲು ಎಳೆದಾಡುತ್ತಿದ್ದ ದೃಶ್ಯ ಕಂಡು ಬಂತು. ಮಕ್ಕಳು ಸೇರಿದಂತೆ ನೂರಾರು ಪ್ರವಾಸಿಗರು ಇರುವ ಸ್ಥಳದಲ್ಲಿ ಜರ್ಮನ್ ಶೆಫರ್ಡ್, ಎರಡು ಲ್ಯಾಬ್ ಸೇರಿದಂತೆ ಶ್ವಾನವನ್ನು ಹಿಡಿದು ಒಳಗೆ ಬಂದಿದ್ದಾರೆ. ಬಳಿಕ ಬಲವಂತವಾಗಿ ಪೊಲೀಸರು ಹೊರಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Karnataka Rain : ಬಿರುಗಾಳಿ ಸಹಿತ ಭಾರಿ ಮಳೆಗೆ ಆಕಾಶದೆತ್ತರಕ್ಕೆ ಅಂಗಡಿಯ ತಗಡು ಹಾರಿ ಹೋಗಿದೆ. ಮತ್ತೊಂದು ಕಡೆ ರಸ್ತೆಗೆ ಮರವೊಂದು ಉರುಳಿದ ಪರಿಣಾಮ ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್‌ ಆಗಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು/ಮಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರಕ್ಕೆ (Karnataka Rain) ಬೃಹತ್‌ ಮರವೊಂದು ರಸ್ತೆಗುರುಳಿದೆ. ಪರಿಣಾಮ ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್ ಆಗಿದೆ. ಎನ್ಆರ್‌ ಪುರ ತಾಲೂಕಿನಿಂದ ಕಳಸ ತಾಲೂಕಿಗೆ ಈ ಮಾರ್ಗ ಸಂಪರ್ಕ ಕಲ್ಪಿಸಲಿದೆ. ಮರ ಬಿದ್ದ ಪರಿಣಾಮ ಶನಿವಾರ ಬೆಳ್ಳಂಬೆಳಗ್ಗೆಯೇ ಬಾಳೆಹೊನ್ನೂರು-ಕಳಸ ರಸ್ತೆ, ಹೊರನಾಡಿಗೆ ಹೋಗಿ-ಬರುವ ಮಾರ್ಗವೂ ಬಂದ್ ಆಗಿತ್ತು. ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿದ್ದರಿಂದ ಸ್ಥಳೀಯರೇ ಮರ ತೆರವು ಮಾಡಿದರು.

ಚಾರ್ಮಾಡಿಯಲ್ಲಿ ಮತ್ತೆ ಆತಂಕ ಮೂಡಿಸಿದ ರಸ್ತೆ ಬಿರುಕು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಹೆದ್ದಾರಿಯಲ್ಲಿ ಮತ್ತೆ ರಸ್ತೆ ಬಿರುಕು ಬಿಡುವ ಆತಂಕ ಹೆಚ್ಚಿದೆ. ರಸ್ತೆ ಬಿರುಕು ಕಾಣಿಸಿಕೊಳ್ಳದಂತೆ ಮರೆಮಾಚಲು ಅಧಿಕಾರಿಗಳ ಯತ್ನಿಸುತ್ತಿದ್ದಾರೆ. ಹೆದ್ದಾರಿಯ ಹಲವು ತಿರುವುಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಕ್ರೀಟ್ ಮೂಲಕ ತೇಪೆ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಡೆದಿರುವ ಕೋಟಿ ವೆಚ್ಚದ ಕಾಮಗಾರಿಯು, ಮಳೆಯಿಂದ ಹಾನಿಯಾಗಿದೆ.

ಉಕ್ಕಿ ಹರಿದ ತುಂಗಾಭದ್ರಾ ನದಿ; ಅಂಗಡಿಗಳು ಮುಳುಗಡೆ

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾಭದ್ರಾ ನದಿ ಪಾತ್ರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ದಾವಣಗೆರೆ ಜಿಲ್ಲೆಯ ಉಕ್ಕಡಗಾತ್ರಿ ಸಮೀಪ ತುಂಗಾಭದ್ರಾ ನದಿ ಉಕ್ಕಿ ಹರಿದಿದೆ. ಉಕ್ಕಡಗಾತ್ರಿ ಸಮೀಪದ ಸ್ನಾನಘಟ್ಟದವರೆಗು ನೀರು ನುಗ್ಗಿದ್ದು, ಹತ್ತಾರು ಪೂಜಾಸಾಮಾಗ್ರಿ ಅಂಗಡಿಗಳು ಮುಳುಗಡೆಯಾಗಿವೆ. ಉಕ್ಕಡಗಾತ್ರಿ ಆಗಮಿಸುವ ಭಕ್ತರಿಗೆ ದೇವಸ್ಥಾನದ ಟ್ರಸ್ಟ್‌ನಿಂದ ತುಂಗಾಭದ್ರಾ ನದಿ ಪಾತ್ರಕ್ಕೆ ಸ್ನಾನ ಸೇರಿದಂತೆ ಇತರೇ ಕಾರಣಗಳಿಗೆ ನೀರಿಗೆ ಇಳಿಯದಂತೆ ಸೂಚನೆ ನೀಡಿದೆ.

ಮಳೆಯಿಂದಾಗಿ ಸೋರುತ್ತಿರುವ ಸರ್ಕಾರಿ ಆಸ್ಪತ್ರೆ

ವಿಜಯನಗರ ಜಿಲ್ಲೆಯಲ್ಲಿ ರಾತ್ರಿಯಿಡಿ ಜಿಟಿ ಜಿಟಿ ಮಳೆಯಿಂದಾಗಿ ಸರ್ಕಾರಿ ಆಸ್ಪತ್ರೆ ರೋಗಿಗಳು ರಾತ್ರಿಯಿಡಿ ಜಾಗರಣೆ ಮಾಡಬೇಕಾಯಿತು. ಮಳೆಯಿಂದಾಗಿ ಕೊಟ್ಟೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಸೋರುತ್ತಿದೆ. ಜನ ಸ್ಪಂದನ ಕಾರ್ಯಕ್ರಮ ಮಾಡಿದ್ದ ಡಿಸಿ ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಬಹುದು ಎಂದು ಸಿಬ್ಬಂದಿ ಸ್ವಚ್ಚತೆ ಮಾಡಿದ್ದರು. ಆದರೆ ರಾತ್ರಿಯಿಡಿ ಜಿಟಿಜಿಟಿ ಮಳೆಯಿಂದ ರೋಗಿಗಳು ಮಲಗುವ ಬೆಡ್ ಮೇಲೆ ನೀರು ಸೋರಿದೆ. ಇದರ ಮಧ್ಯೆ ರಾತ್ರಿಯಿಡೀ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಪರದಾಡಬೇಕಾಯಿತು. ಆಸ್ಪತ್ರೆಯ ಶೌಚಾಲಯ ಕೂಡಾ ಬ್ಲಾಕ್ ಆಗಿದೆ ಎಂದು ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸದ ಇಲಾಖೆಯ ವಿರುದ್ಧ ರೋಗಿಗಳು ಹಿಡಿಶಾಪ ಹಾಕಿದರು.

ಮೂರು ಸಂಪರ್ಕ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತ ಮನವಿ ಮಾಡಿದೆ.

ಭಾರೀ ಮಳೆಗೆ ಕುಸಿದ ಸೇತುವೆ ಬದಿ ಮಣ್ಣು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡದ ಬೇಳೂರು ಗ್ರಾಮದ ಸಂಪರ್ಕ ಸೇತುವೆ ಬದಿಯ ಮಣ್ಣು ಕುಸಿದಿದೆ. ಇನ್ನೂ ಉದ್ಘಾಟನೆಯಾಗಬೇಕಿದ್ದ ನೂತನ ಸೇತುವೆ ಧಾರಾಕಾರ ಮಳೆಗೆ ಸೇತುವೆಯ ಎರಡೂ ಭಾಗದ ಮಣ್ಣು, ಕಾಂಕ್ರೀಟ್ ಕುಸಿದಿದೆ. ಸುಮಾರು 40 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಿರುಸೇತುವೆ ನಿರ್ಮಾಣವಾಗಿತ್ತು. ಆದರೆ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಗೆ ಸೇತುವ ಪಕ್ಷದ ಗುಡ್ಡದಲ್ಲಿ ಹೆಚ್ಚು ನೀರು ಹರಿದು ಗುಡ್ಡ ಕುಸಿದಿದ್ದು, ಗುಡ್ಡದ ಮಣ್ಣು ಸೇತುವೆ ಭಾಗಕ್ಕೆ ಬಿದ್ದಿದೆ. ಪರಿಣಾಮ ಸೇತುವೆಯ ಎರಡೂ ಭಾಗದ ಸಂಪರ್ಕಕ್ಕೆ ಹಾಕಿದ್ದ ಮಣ್ಣು ಹಾಗೂ ಕಾಂಕ್ರೀಟ್ ಕಿತ್ತುಹೋಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿದ್ದು ಗ್ರಾಮಸ್ಥರು ಆತಂಕಗೊಳ್ಳುವಂತಾಗಿದೆ.

ಮಳೆ ನಿಂತರೂ ಮತ್ತೆ ಭೂ ಕುಸಿತದ ಆತಂಕ!

ಮಳೆ ನಿಂತರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂ ಕುಸಿತದ ಆತಂಕ ಕಡಿಮೆ ಆಗಿಲ್ಲ. ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಸಮೀಪದಲ್ಲೇ ಭಾರೀ ಗುಡ್ಡ ಕುಸಿತ ಉಂಟಾಗಿದೆ. ಮಂಗಳೂರಿನ ವಾಮಂಜೂರು ಕೆತ್ತಿಕಲ್ ಬಳಿ ಭೂ ಕುಸಿತದ ಭೀತಿ ಎದುರಾಗಿದೆ. ಚತುಷ್ಪಥ‌ ಹೆದ್ದಾರಿ ಕಾಮಗಾರಿಗಾಗಿ ಗುಡ್ಡ ಕೊರೆದ ಪರಿಣಾಮ ಹೆದ್ದಾರಿಗೆ ತಾಗಿಕೊಂಡೇ ಇರೋ ಗುಡ್ಡದಲ್ಲಿ ಆಗಾಗ್ಗೆ ಮಣ್ಣು ಕುಸಿಯುತ್ತಿದೆ. ಗುಡ್ಡದ ತುದಿ ಭಾಗದಲ್ಲಿ ಭಾರೀ ಗಾತ್ರದ ಬಂಡೆಗಳು ಉರುಳಿ ಬೀಳುವ ಆತಂಕ ಇದೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪ ಗಾಳಿ ಸಹಿತ ಮಳೆಯಾಗಿದೆ. ಏಕಾಎಕಿ ಬಂದ ಗಾಳಿಗೆ ಅಂಗಡಿಯ ಶಿಟ್‌ಗಳು ಹಾರಿ ಹೋಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ವಾರಾಂತ್ಯದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯಲ್ಲಿ ನಾನ್‌ ಸ್ಟಾಪ್‌ ಮಳೆಯಾಗಲಿದ್ದು, ಮಲೆನಾಡಿನಲ್ಲೂ ಅಬ್ಬರಿಸಲಿದೆ. ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಮಳೆ ಇರಲಿದೆ.

ಮಲೆನಾಡಿನ ಹಾಸನ, ಕೊಡಗು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಆರೆಂಜ್‌-ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Champions Trophy 2025:
ಪ್ರಮುಖ ಸುದ್ದಿ2 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ2 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ3 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ4 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ4 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ4 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ4 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest4 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ5 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest5 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ10 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ11 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು13 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ15 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ20 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ2 days ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌