ಉಡುಪಿಯಲ್ಲಿ ಸಾವರ್ಕರ್‌ಗೆ ಪುಷ್ಪಾರ್ಚನೆ ಮಾಡಿದ ಗಾಂಧೀಜಿ !: ಹಿಂದುಗಳಿಂದಲೇ ಬ್ಯಾನರ್‌ ತೆರವು - Vistara News

ಉಡುಪಿ

ಉಡುಪಿಯಲ್ಲಿ ಸಾವರ್ಕರ್‌ಗೆ ಪುಷ್ಪಾರ್ಚನೆ ಮಾಡಿದ ಗಾಂಧೀಜಿ !: ಹಿಂದುಗಳಿಂದಲೇ ಬ್ಯಾನರ್‌ ತೆರವು

ಉಡುಪಿಯಲ್ಲಿ ಕೃಷ್ಣಾಷ್ಟಮಿ ಸಂಭ್ರಮದ ನಡುವೆ ಪೊಲೀಸರಿಗೆ ಹೆಚ್ಚಿನ ಹೊರೆ ಆಗಬಾರದು ಎಂಬ ಕಾರಣಕ್ಕೆ ಹಿಂದು ಸಂಘಟನೆ ಕಾರ್ಯಕರ್ತರೇ ಸಾವರ್ಕರ್‌ ಫ್ಲೆಕ್ಸ್‌ ತೆರವುಗೊಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ರಾಜ್ಯದ ವಿವಿಧೆಡೆ ಸಾವರ್ಕರ್‌ ಫ್ಲೆಕ್ಸ್‌, ಟಿಪ್ಪು ಫ್ಲೆಕ್ಸ್‌ ವಿವಾದ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಉಡುಪಿಯಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರೇ ಸಾವರ್ಕರ್‌ ಫ್ಲೆಕ್ಸ್‌ ತೆರವು ಮಾಡಿದ್ದಾರೆ.

75ನೇ ಸ್ವಾತಂತ್ರ್ಯ ಸಂಭ್ರಮದ ನಿಮಿತ್ತ ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಬೃಹತ್‌ ಗಾತ್ರದ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಸಾವರ್ಕರ್‌ ಜತೆಗೆ ಸುಭಾಷ್‌ಚಂದ್ರ ಬೋಸ್‌ ಭಾವಚಿತ್ರವಿದ್ದ ಫ್ಲೆಕ್ಸ್ ಅನ್ನು 15 ದಿನ ಅಳವಡಿಸಲು ಪೊಲೀಸರಿಂದ ಅನುಮತಿಯನ್ನೂ ಪಡೆಯಲಾಗಿತ್ತು.

ಆದರೆ ಉಡುಪಿಯಲ್ಲಿ ಅಷ್ಠಮಿ ಸಂಭ್ರಮ ನಡೆಯುತ್ತಿದೆ. ಈ ಸಮಯದಲ್ಲಿ ಪೊಲೀಸರಿಗೆ ಈ ಪೋಸ್ಟರ್‌ ಕಾಯುವ ಕಾರ್ಯವೂ ಹೊರೆಯಾಗುತ್ತದೆ. ಪೊಲೀಸರಿಗೆ ಸಹಕಾರ ನೀಡುವ ಉದ್ದೇಶದಿಂದ ಹಿಂದು ಮಹಾಸಭಾ, ಹಿಂದು ಜಾಗರಣ ವೇದಿಕೆ ಸೇರಿ ಅನೇಖ ಸಂಘಟನೆಗಳ ಮುಖಂಡರು ಆಗಮಿಸಿ ಫ್ಲೆಕ್ಸ್‌ ತೆರವುಗೊಳಿಸಿದ್ದಾರೆ.

ಸಾವರ್ಕರ್‌ ಫ್ಲೆಕ್ಸ್‌ ಉಡುಪಿ
ಫ್ಲೆಕ್ಸ್‌ ತೆರವುಗೊಳಿಸುವ ಮುನ್ನ ಪುಷ್ಪಾರ್ಚನೆ.

ಫ್ಲೆಕ್ಸ್‌ಗೆ ಪ್ರಾರಂಭದಲ್ಲಿ ಹೂಗಳಿಂದ ಅರ್ಚನೆ ಮಾಡಲಾಯಿತು. ಗಾಂಧೀಜಿ ವೇಷಧಾರಿಯೊಬ್ಬರೂ ಇದರಲ್ಲಿ ಭಾಗವಹಿಸಿ, ಸಾವರ್ಕರ್‌ ಭಾವಚಿತ್ರಕ್ಕೆ ಪುಷ್ಪಾರಚನೆ ಮಾಡಿದರು. ನಂತರ ಚಂಡೆ ಮೆರವಣಿಗೆಯಲ್ಲಿ ಬ್ರಹ್ಮಗಿರಿ ವೃತ್ತದಿಂದ ಹುತಾತ್ಮ ಸ್ಮಾರಕದವರೆಗೆ ಫ್ಲೆಕ್ಸ್‌ ಅನ್ನು ಕೊಂಡೊಯ್ದು ಸಮಾಪ್ತಿಗೊಳಿಸಲಾಯಿತು.

ಪೊಲೀಸರಿಗೆ ಸಹಕಾರ ನೀಡಲು ಈ ಕಾರ್ಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವೃತ್ತದಲ್ಲಿ ಸಾವರ್ಕರ್‌ ಪ್ರತಿಮೆ ಸ್ಥಾಪನೆ ಮಾಡಲು ಜಿಲ್ಲಾಡಳಿತಕ್ಕೆ ಮನವಿ ಮಾಡಲಿದ್ದೇವೆ ಎಂದು ಸಂಘಟನೆಗಳ ಮುಖಂಡರು ತಿಳಿಸಿದರು.

ಇದನ್ನೂ ಓದಿ | Flex Controversy | ತುಮಕೂರಿನಲ್ಲಿ ಮತ್ತೆ ಸಾವರ್ಕರ್‌ ಚಿತ್ರವಿರುವ ಫ್ಲೆಕ್ಸ್‌ ಅಳವಡಿಸಿದ ಹಿಂದೂ ಕಾರ್ಯಕರ್ತರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ದಕ್ಷಿಣ ಒಳನಾಡಲ್ಲಿ ಮಂಕಾದ; ಮಲೆನಾಡು, ಉತ್ತರ ಒಳನಾಡಲ್ಲಿ ಮಳೆ ಸದ್ದು

Rain New : ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವರುಣ ಮಂಕಾಗಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡಿನಲ್ಲಿ ಸಕ್ರಿಯನಾಗಿದ್ದಾನೆ. ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಕೆಲವೆಡೆ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (rain news) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಚದುರಿದಂತೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ. ಬದಲಿಗೆ ಶುಷ್ಕ ವಾತಾವರಣ ಇರಲಿದೆ. ಬೆಂಗಳೂರಿನ ವಾತಾವರಣದಲ್ಲಿ ಯಾವುದೇ ಗಮರ್ನಾಹ ಬದಲಾವಣೆ ಇಲ್ಲ.

ಇದನ್ನೂ ಓದಿ: Hardik Pandya : ಪಾಂಡ್ಯ ಫಿಟ್ ಆಗಿಲ್ಲ, ಸುಮ್ಮನೆ ನಾಟಕ ಮಾಡುತ್ತಿದ್ದಾರೆ ಎಂದ ಆ್ಯಡಂ ಗಿಲ್​ಕ್ರಿಸ್ಟ್​​​

ತಾಪಮಾನ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ. ಕೆಲವೊಮ್ಮೆ ತಾಪಮಾನದಲ್ಲೂ ಏರಿತ ಉಂಟಾಗಲಿದ್ದು, ಬಿಸಿಲ ಧಗೆ ಹೆಚ್ಚಾಗಿ ಇರಲಿದೆ.

ಗಾಳಿ ವೇಗದ ಎಚ್ಚರಿಕೆ

ಏಪ್ರಿಲ್ 18 ಮತ್ತು 19 ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಮೇಲ್ಮೈ ಗಾಳಿ 30-40 ಕಿ.ಮೀ ತಲುಪುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಕಲಬುರಗಿ ತತ್ತರ; ನಾಳೆಯೂ ಹಲವೆಡೆ ವರುಣನ ಅಬ್ಬರ

Rain News : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ವರುಣ ಮತ್ತೆ ಸಕ್ರಿಯಗೊಂಡಿದ್ದಾನೆ. ನಾಳೆ (ಏ.16) ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಬಿರುಗಾಳಿ ಮಳೆಗೆ ಕಲಬುರಗಿಯಲ್ಲಿ ನೆಲಕ್ಕುರುಳಿದ ಬಾಳೆ ತೋಟ
Koo

ಬೆಂಗಳೂರು: ರಾಜ್ಯದಲ್ಲಿ ಭಾನುವಾರದಂದು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಲಬುರಗಿ ಹಾಗೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39.2 ಡಿ.ಸೆ ದಾಖಲಾಗಿತ್ತು. ಮುಂದಿನ 24 ಗಂಟೆಯಲ್ಲಿ ಹಲವೆಡೆ ಮಳೆಯಾಗುವ (rain news) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

ಏ.16ರಿಂದ ಮಲೆನಾಡಿನಾದ್ಯಂತ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನ ಮೈಸೂರು, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಉಷ್ಣಾಂಶ 36 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ತಾಪಮಾನ ಮುನ್ಸೂಚನೆ

ಮಳೆ ಮುನ್ಸೂಚನೆ ನಡುವೆಯೂ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ. ಏಪ್ರಿಲ್‌ 18-19ರಂದು ರಾಜ್ಯದ ಒಂದೆರಡು ಕಡೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರಲಿದೆ.

ಕಲಬುರಗಿಯಲ್ಲಿ ಬಿರುಗಾಳಿ ಮಳೆ

ಬಿಸಿಲ‌ನಗರಿ‌ ಕಲಬುರಗಿಯಲ್ಲಿ ಸೋಮವಾರ ಭಾರಿ ಬಿರುಗಾಳಿ ಮಳೆಯಾಗಿದೆ. ಗಾಳಿ ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಷ್ಟವಾಗಿದೆ. ಅಫಜಲಪುರ‌ ತಾಲೂಕಿನ ಸುತ್ತಮುತ್ತ ಗುಡುಗು ಸಿಡಿಲು ಸಹಿತರಾತ್ರಿ ಭಾರಿ ಮಳೆಯಾಗಿದೆ. ಬಳೂರ್ಗಿ ಗ್ರಾಮದಲ್ಲಿ ಬಾಳೆ ತೋಟ ನೆಲಸಮವಾಗಿದೆ. ಮಹ್ಮದ ರಫಿ ಗೌರ್ಕರ್ ಅವರ ತೋಟದಲ್ಲಿ ಬೆಳೆದ‌ ಸುಮಾರು ಮೂರು ಎಕರೆ ಪ್ರದೇಶದ ಬಾಳೆ ತೋಟ ನಾಶವಾಗಿದೆ. ಬರಗಾಲದಲ್ಲೂ ಅಲ್ಪಸ್ವಲ್ಪ ಬಾಳೆ ಬೆಳೆ ಬೆಳಯಲಾಗಿತ್ತು. 3 ಲಕ್ಷ ರೂಪಾಯಿ ಬಂಡವಾಳ ಹಾಕಿ ಟ್ಯಾಂಕರ್‌ ಮೂಲಕ ನೀರುಹಾಯಿಸಿ ಬಾಳೆ ಬೆಳೆಸಿದ್ದರು.

ಇದನ್ನೂ ಓದಿ: Borewell Tragedy : ಕೊಳವೆ ಬಾವಿಯಿಂದ ಬದುಕಿ ಬಂದ ಸಾತ್ವಿಕ್‌ನನ್ನು ತೊಟ್ಟಿಲಿಗೆ ಹಾಕಿ ಹರಕೆ ತೀರಿಸಿದ ಕಲ್ಲಿನಾಥ ಸ್ವಾಮೀಜಿ

ಬೇಸಿಗೆಯಲ್ಲಿ ಕೂದಲನ್ನು ನಯವಾಗಿರಿಸಲು ಕಷ್ಟವಾಗುತ್ತಿದೆಯೆ? ಈ ಸಲಹೆಗಳನ್ನು ಪಾಲಿಸಿ

ಬೇಸಿಗೆಯ ಹೊಡೆತಕ್ಕೆ ಸಿಲುಕಿ ನಲುಗದಂತೆ ನಮ್ಮ ಕೂದಲನ್ನು ಕಾಪಾಡಿಕೊಳ್ಳುವುದು ಹೇಗೆ? ಬೆವರಿನಿಂದ ತಲೆಯ ಚರ್ಮ ಪದೇಪದೆ ಕೊಳಕಾಗಿ, ಅಂಟಾಗಿ, ನವೆಯುಂಟಾಗಿ, ಹೊಟ್ಟಾಗಿ ತೊಂದರೆ ಕೊಡುತ್ತದೆ. ಉರಿಯುತ್ತಿರುವ ಗೋಳದಂಥ ಸೂರ್ಯನ ಅತಿನೇರಳೆ ಕಿರಣಗಳಿಂದ ಕೂದಲಿಗೆ ಹಾನಿಯಾಗಬಹುದು, ಒಣಗಿ ತುಂಡಾಗಬಹುದು. ಬೇಸಿಗೆಯಲ್ಲಿ ಪೋಷಕಾಂಶಗಳ ಕೊರತೆಯಾಗಿ ಕೂದಲು ಸಿಕ್ಕಾಪಟ್ಟೆ ಉದುರಲೂಬಹುದು. ಇಂಥ ಸಂದರ್ಭದಲ್ಲಿ (summer hair care) ಏನು ಮಾಡಬಹುದು?

head bath

ತಲೆಸ್ನಾನ

ಬೆವರಿನಿಂದ ಕೂದಲು ಒದ್ದೆಯಾಗುತ್ತಿರುವಾಗ ಪದೇಪದೆ ತಲೆಸ್ನಾನ ಮಾಡಬೇಕೆನ್ನಿಸಿದರೆ ಸ್ವಲ್ಪ ತಾಳಿ. ಅತಿಯಾದ ಕ್ಲೋರಿನ್ ಅಂಶವೂ ಕೂದಲಿಗೆ ತೊಂದರೆ ಕೊಡುತ್ತದೆ. ಅಷ್ಟೇ ಅಲ್ಲ, ದಿನದಿನವೂ ತಲೆಸ್ನಾನ ಮಾಡುವುದು ಅರೆತಲೆ ಶೂಲೆಯಂಥ ಸಮಸ್ಯೆಗಳನ್ನು ತರಬಹುದು. ತಲೆ ಸ್ನಾನದ ಹೊತ್ತಿನಲ್ಲಿ ಸೌಮ್ಯವಾದ ಶಾಂಪೂ ಬಳಸಿ, ಕಂಡೀಶನರ್‌ ಉಪಯೋಗಿಸಬಹುದು. ರಾಸಾಯನಿಕ ಕಂಡೀಶನರ್‌ಗಳು ಬೇಡವೆಂದಿದ್ದರೆ ಮದರಂಗಿ, ಭೃಂಗರಾಜವನ್ನು ಬಳಸಬಹುದು.

ಬಿಸಿ ಬೇಡ

ಯಾವುದೋ ಮದುವೆ ಮನೆಗೆಂದು ಅಲಂಕರಿಸಿಕೊಳ್ಳುತ್ತಿದ್ದೀರಾದರೆ, ಸ್ವಲ್ಪ ಜಾಗ್ರತೆ ಮಾಡಿ. ಹೀಟ್‌ ಸ್ಟೈಲಿಂಗ್‌, ಅಂದರೆ ಡ್ರೈಯರ್‌, ಸ್ಟ್ರೇಟ್ನರ್‌, ಕೂದಲು ಸುರುಳಿ ಮಾಡುವುದು ಮುಂತಾದ ಹೀಟೀಂಗ್‌ ಉಪಕರಣಗಳನ್ನು ಬೇಸಿಗೆಯಲ್ಲಿ ಆದಷ್ಟೂ ಬಳಸಬೇಡಿ. ಸಾಮಾನ್ಯ ಜೆಲ್‌ಗಳಿಂದಲೂ ಸುಂದರ ಕೇಶಾಲಂಕಾರ ಸಾಧ್ಯವಿದೆ. ಕೂದಲಿಗೆ ಈ ಬೇಸಿಗೆಯಲ್ಲಿ ಮತ್ತೂ ಬಿಸಿ ಸೋಕಿಸುವುದು ಬೇಡ.

ಮುಚ್ಚಿಕೊಳ್ಳಿ

ತಲೆಗೂದಲಿಗೂ ಪರದೆ ಮುಚ್ಚಿಕೊಳ್ಳಬಹುದು. ಬಿಸಿಲಿಗೆ ಹೋಗುವಾದ ತೆಳುವಾದ ಸ್ಕಾರ್ಫ್‌ ಅಥವಾ ಕ್ಯಾಪ್‌ ಬಳಸುವುದರಿಂದ ಅತಿನೇರಳೆ ಕಿರಣಗಳಿಂದ ಕೂದಲನ್ನು ರಕ್ಷಿಸಿಕೊಳ್ಳಬಹುದು. ಮಾತ್ರವಲ್ಲ, ಕೂದಲು ಒಣಗಿ, ಬಣ್ಣಗೆಟ್ಟು ತುಂಡಾಗುವುದನ್ನೂ ತಪ್ಪಿಸಬಹುದು. ಸಾಮಾನ್ಯವಾಗಿ ಕೂದಲ ತುದಿಗಳು ಸಪೂರಾಗಿ, ಕವಲೊಡೆದು ಹೋಗುವ ಸಂಭವವಿರುತ್ತದೆ. ಇವುಗಳನ್ನು ಕಾಲಕಾಲಕ್ಕೆ ಕತ್ತರಿಸಿ. ಇದರಿಂದ ಕೂದಲು ಸಿಕ್ಕಾಗಿ, ಬಾಚುವಷ್ಟರಲ್ಲಿ ಇನ್ನಷ್ಟು ತುಂಡಾಗಿ, ಉದುರುವುದನ್ನು ತಡೆಯಬಹುದು.

Woman Applying Coconut Oil on Hair Egg Benefits For Hair

ಮಸಾಜ್ ಮತ್ತು ಹೇರ್‌ಪ್ಯಾಕ್

ಕೂದಲ ಬುಡಗಳಿಗೆ ಮಸಾಜ್‌ ಬೇಕೆಬೇಕು. ಶುದ್ಧ ಕೊಬ್ಬರಿ ಎಣ್ಣೆಯೂ ಈ ಕೆಲಸಕ್ಕೆ ಅನುಕೂಲವೇ. ಅದಿಲ್ಲದಿದ್ದರೆ ನಿಮ್ಮಷ್ಟದ ಯಾವುದಾದರೂ ಕೇಶ ತೈಲ ಬಳಸಿ ತಲೆಗೆ ಮಸಾಜ್‌ ಮಾಡಿ. ಇದರಿಂದ ಕೂದಲ ಬುಡಕ್ಕೆ ಚೆನ್ನಾಗಿ ರಕ್ತಸಂಚಾರವಾಗಿ, ಬೆಳವಣಿಗೆ ಹೆಚ್ಚುತ್ತದೆ. ಜೊತೆಗೆ, ಮೆಂತೆ, ಮೊಸರು, ಮೊಟ್ಟೆ ಮುಂತಾದ ವಸ್ತುಗಳಿಂದ ಹೇರ್‌ಪ್ಯಾಕ್‌ ಮಾಡುವುದರಿಂದ ಕೂದಲು ಒಣಗಿ ತುಂಡಾಗುವುದನ್ನು ತಪ್ಪಿಸಬಹುದು.

ಆಹಾರ

ತಿನ್ನುವ ಆಹಾರ ಸಮತೋಲಿತವಾಗಿರಬೇಕು. ಸಾಕಷ್ಟು ಪ್ರೊಟೀನ್‌, ಖನಿಜ ಮತ್ತು ಜೀವಸತ್ವಗಳು ಇಲ್ಲದಿದ್ದರೆ ಕೂದಲುದುರುವುದನ್ನು ತಡೆಯಲು ಸಾಧ್ಯವಿಲ್ಲ. ಆಹಾರದಲ್ಲಿ ಸಾಕಷ್ಟು ಬೀಜಗಳು, ಸೊಪ್ಪು, ಇಡೀ ಧಾನ್ಯಗಳನ್ನು ಸೇರಿಸಿಕೊಳ್ಳಿ. ಕುಡಿಯುವ ನೀರಿನ ಪ್ರಮಾಣ ಕಡಿಮೆಯಾದರೂ ಕೂದಲಿಗೆ ಹಾನಿಯಾಗುತ್ತದೆ. ಬೇಸಿಗೆಯಲ್ಲಿ ಉಂಟಾಗುವ ನಿರ್ಜಲೀಕರಣವಂತೂ ಕೂದಲಿಗೆ ಸಿಕ್ಕಾಪಟ್ಟೆ ತೊಂದರೆ ನೀಡುತ್ತದೆ. ಹಾಗಾಗಿ ನೀರು-ಆಹಾರ ಎರಡೂ ಗಮನಿಸಬೇಕಾದ ಅಂಶಗಳು.

Improved Sleep Health Benefits Of Hot Water Bath

ನಿದ್ದೆ

ದೇಹದ ಯಾವುದೇ ಭಾಗಕ್ಕೆ ಆಗುವ ಹಾನಿಯನ್ನು ರಿಪೇರಿ ಮಾಡುವ ಸಮಯವೆಂದರೆ ನಿದ್ದೆ. ದಿನವಿಡೀ ನಾವು ಮಾಡುವ ಕೆಲಸಗಳಿಂದ ಉಂಟಾಗುವ ಮಾನಸಿಕ, ದೈಹಿಕ ಒತ್ತಡಗಳನ್ನು ನಿವಾರಿಸಿ ದೇಹವನ್ನು ಸಮಸ್ಥಿತಿಗೆ ತರುವಲ್ಲಿ ನಿದ್ದೆ ಮಹತ್ವದ ಪಾತ್ರ ವಹಿಸುತ್ತದೆ. ಇದರಿಂದ ಹಾರ್ಮೋನುಗಳ ಏರುಪೇರನ್ನೂ ಸರಿದೂಗಿಸಬಹುದು. ಹಾಗಾಗಿ ಪ್ರತಿದಿನ ಕಣ್ತುಂಬಾ ನಿದ್ದೆ ಮಾಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಲೆನಾಡಿಗಷ್ಟೇ ಮಳೆ ಅಲರ್ಟ್‌; ಬೆಂಗಳೂರಿನಲ್ಲಿ ಹೇಗೆ?

Dry weather : ರಾಜ್ಯಾದ್ಯಂತ ಎರಡು ದಿನಗಳ ಕಾಲ ಶುಷ್ಕ ವಾತಾವರಣವು ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ ಒಣಹವೆ (Dry weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ. ಏ.16ರಿಂದ ಮಲೆನಾಡಿನಾದ್ಯಂತ ಮಳೆಯಾಗುವ (Rain News) ನಿರೀಕ್ಷೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಆದರೆ ಏಪ್ರಿಲ್ 15 ರಿಂದ 16 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮುಂದುವರಿಯಲಿದೆ. ಹೀಗಾಗಿ ಬಿಸಿ ತಾಪಮಾನ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ.

ಬೆಂಗಳೂರಿನಿಂದ ದೂರ ಉಳಿದ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸದ್ಯಕ್ಕೆ ಹವಾಮಾನ ಇಲಾಖೆ ಪ್ರಕಾರ ಮಳೆಯಾಗುವ ಯಾವುದೇ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶವು 35 ಹಾಗೂ ಕನಿಷ್ಠ ಉಷ್ಣಾಂಶವು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Brain Exercise: ಚುರುಕಾಗಿರಬೇಕೇ? ದೇಹಕ್ಕೆ ವ್ಯಾಯಾಮ ಮಾಡಿದರೆ ಸಾಲದು, ಮೆದುಳಿಗೂ ಮಾಡಿ!

ಏಪ್ರಿಲ್‌ 17 ರಿಂದ ಮತ್ತೆ ಮಳೆ ಶುರು

ಏಪ್ರಿಲ್‌ 17 ರಿಂದ 20ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಇದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರುಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

19ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

20ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಅಬ್ಬರಕ್ಕೆ ಬ್ರೇಕ್‌ ಕೊಟ್ಟ ಮಳೆರಾಯ; ಇನ್ನೆರಡು ದಿನ ಬಿಸಿ ತಾಪ

Rain news : ರಾಜ್ಯಾದ್ಯಂತ ಅಬ್ಬರಿಸುತ್ತಿದ್ದ ಮಳೆ ಪ್ರಮಾಣ ತಗ್ಗಿದೆ. ಏ.15-16ರಂದು ರಾಜ್ಯದಲ್ಲಿ ಒಣ ಹವೆ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಲವು ದಿನಗಳಿಂದ ಉತ್ತರ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಬಿಡುವಿಲ್ಲದೇ ಮಳೆ (Rain News) ಸುರಿಯುತ್ತಿತ್ತು. ಇದೀಗ ಮಳೆ ಅಬ್ಬರಕ್ಕೆ ಬ್ರೇಕ್‌ ಬಿದ್ದಿದೆ. ರಾಜ್ಯಾದ್ಯಂತ ಎರಡು ದಿನಗಳು ಒಣ ಹವೆ (Dry Weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏಪ್ರಿಲ್ 15 ಮತ್ತು 16 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮುಂದುವರಿಯಲಿದೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಯಾವುದೇ ಮಳೆ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶವು 35 ಹಾಗೂ ಕನಿಷ್ಠ ಉಷ್ಣಾಂಶವು 22 ಡಿ.ಸೆ ಇರಲಿದೆ.

ಏಪ್ರಿಲ್‌ 15 ರಂದು ರಾಜ್ಯಾದ್ಯಂತ ಶುಷ್ಕ ವಾತಾವರಣ ಇರಲಿದೆ. ಆದರೆ ಏಪ್ರಿಲ್‌ 16ರಂದು ಮಲೆನಾಡು ಭಾಗದಲ್ಲಿ ಮಳೆಯ ಸಿಂಚನವಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಕರಾವಳಿ, ಉತ್ತರ ಒಳನಾಡು , ದಕ್ಷಿಣ ಒಳನಾಡು ಭಾಗದಲ್ಲಿ ಒಣ ಹವೆ ಇರಲಿದೆ.

ಇದನ್ನೂ ಓದಿ: Attempt To Murder : ಯುವಕನ ಅಟ್ಟಾಡಿಸಿ ನೆಲಕ್ಕುರುಳಿಸಿ ಚಾಕುವಿನಿಂದ ಇರಿದ ದುಷ್ಟ

ಭಾನುವಾರ ಸಂಜೆಗೆ ಹೆಚ್ಚಲಿದೆ ಗಾಳಿ ರಭಸ

ಭಾನುವಾರ ಸಂಜೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ. ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಭಾರಿ ಬಿರುಗಾಳಿಗೆ ನೆಲಕ್ಕುರುಳಿದ ವೀಳ್ಯದೆಲೆ ಬಳ್ಳಿ

ಭಾರಿ ಬಿರುಗಾಳಿಗೆ ವೀಳ್ಯದೆಲೆ ಬಳ್ಳಿಯು ನೆಲಕ್ಕುರುಳಿದ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕಿನ ತುಗ್ಗಲಡೋಣಿಯಲ್ಲಿ ನಡೆದಿದೆ. ತುಗ್ಗಲಡೋಣಿಯ ದ್ಯಾಮಣ್ಣ ಭಾವಂಜಿ ಎಂಬುವವರಿಗೆ ಸೇರಿ ವೀಳ್ಯದೆಲೆ ತೋಟವು ಕಟಾವು ಮಾಡುವ ಹಂತದಲ್ಲಿತ್ತು. ಆದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದ ವೀಳ್ಯದೆಲೆ ತೋಟ ಬಿರುಗಾಳಿಗೆ ನಾಶವಾಗಿದೆ ಎಂದು ರೈತ ಕಣ್ಣೀರು ಇಟ್ಟರು. ಸರ್ಕಾರ ಪರಿಹಾರ ನೀಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಶನಿವಾರ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂ.ಮೀ ಹಾಗೂ ಕೊಪ್ಪಳದ ತಾವರಗೇರಾದಲ್ಲಿ 7 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಜಯಪುರ, ಎನ್‌ಆರ್ ಪುರದಲ್ಲಿ ತಲಾ 4 ಸೆಂ.ಮೀ, ಧಾರವಾಡ ಪಿಟಿಒ, ಬೇವೂರು, ಇಂಡಿ ಹಾಗೂ ಶಿವಮೊಗ್ಗ ಪಿಟಿಒ, ಲಿಂಗನಮಕ್ಕಿ, ಆನವಟ್ಟಿ ತಲಾ 3 ಸೆಂ.ಮೀ ಮಳೆಯಾಗಿದೆ.

ಔರಾದ್ 2, ದೇವರಹಿಪ್ಪರಗಿ 2, ರೋಣಾ 2, ಯಡ್ರಾಮಿ, ಕಲಬುರ್ಗಿ 2, ಕಲಘಟಗಿ, ತ್ಯಾಗರ್ತಿ, ಕಳಸ, ಹರಪನಹಳ್ಳಿ, ಕುಡತಿನಿ, ಕೊಪ್ಪ, ತರೀಕೆರೆ, ಶೃಂಗೇರಿ ಚಿಕ್ಕಮಗಳೂರಲ್ಲಿ ತಲಾ 2 ಸೆಂ. ಮೀ ಮಳೆಯಾಗಿದೆ. ಸಿದ್ದಾಪುರ, ಸಿಂಧನೂರು, ಕುಕನೂರು, ಹಿರೇಕೆರೂರು, ಲಕ್ಷೇಶ್ವರ, ಬೆಳ್ಳಟ್ಟಿ, ಕುಂದಗೋಳ, ಧಾರವಾಡ, ಅಣ್ಣಿಗೆರೆ ಅರ್ಸ್, ಸವಣೂರು, ಕಮ್ಮರಡಿ, ಕೊಣನೂರು, ತಾಳಗುಪ್ಪ, ಹುಂಚದಕಟ್ಟೆ ತಲಾ 1 ಸೆಂ. ಮೀ ಮಳೆಯಾಗಿರುವ ವರದಿ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 2024 Dr Manjunath joins PM Narendra Modi team Ashwathnarayan reveals BJP vision
Lok Sabha Election 202419 mins ago

Lok Sabha Election 2024: ಮೋದಿ ಟೀಂಗೆ ಡಾ.ಮಂಜುನಾಥ್ ಸೇರ್ಪಡೆ; ಬಿಜೆಪಿ ವಿಷನ್‌ ಬಿಚ್ಚಿಟ್ಟ ಅಶ್ವತ್ಥನಾರಾಯಣ್

Star Saree Fashion
ಫ್ಯಾಷನ್20 mins ago

Star Saree Fashion: ಮಹಿಳೆಯರನ್ನು ಆಕರ್ಷಿಸಿದ ನಟಿ ಅಮೂಲ್ಯ‌ ಹಸಿರು ಸೀರೆಯ ಸೀಕ್ರೆಟ್ ಇದು!

t20 World Cup
ಕ್ರೀಡೆ26 mins ago

T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

Donuru Ananya Reddy
ದೇಶ29 mins ago

UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

Lok Sabha Election 2024:
ಕರ್ನಾಟಕ29 mins ago

Lok Sabha Election 2024: ಹಾವೇರಿ, ಬಾಗಲಕೋಟೆ ಸೇರಿ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 87 ಲಕ್ಷ ರೂ. ಜಪ್ತಿ

IPL 2024
ಕ್ರೀಡೆ41 mins ago

IPL 2024: ಮುಂಬೈ ಪಂದ್ಯದ ಟಾಸ್​ ಕಳ್ಳಾಟ ಬಿಚ್ಚಿಟ್ಟ ಆರ್​ಸಿಬಿ ನಾಯಕ; ವಿಡಿಯೊ ವೈರಲ್​

Lok Sabha Election 2024
Lok Sabha Election 202441 mins ago

Lok Sabha Election 2024: ರಾಮ ನವಮಿ ಆಚರಣೆ; ಪಶ್ವಿಮ ಬಂಗಾಳದಲ್ಲಿ ಬಿಜೆಪಿ – ಟಿಎಂಸಿ ಮಧ್ಯೆ ವಾಗ್ವಾದ

IPL 2024
ಪ್ರಮುಖ ಸುದ್ದಿ50 mins ago

IPL 2024 : ನಾವು ಪುಟಿದೆದ್ದು ತಿರುಗೇಟು ನೀಡ್ತೇವೆ; ಆರ್​ಸಿಬಿ ಕೋಚ್​ ಭರವಸೆಯ ನುಡಿ

Road Rage in Bengaluru
ಬೆಂಗಳೂರು53 mins ago

Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

Lok Sabha Election 2024 Farmer farm set on fire in support of CN Manjunath
Lok Sabha Election 20241 hour ago

Lok Sabha Election 2024: ಡಾ. ಮಂಜುನಾಥ್‌ ಬೆಂಬಲಿಸಿದ ರೈತನ ಜಮೀನಿಗೆ ಬೆಂಕಿ; ಇದು ಕೈ ಕಾರ್ಯಕರ್ತರ ಕೃತ್ಯ ಎಂದ ಬಿಜೆಪಿ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ12 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌