Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ! - Vistara News

ಉಡುಪಿ

Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಉಡುಪಿಯಲ್ಲಿ ಅಸಾಮಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ಧಕ್ಕೂ (Udupi News) ಎಳೆದೊಯ್ದಿದ್ದಾನೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

udupi News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿಯಲ್ಲೊಂದು (Udupi News) ಅಮಾನವೀಯ ಘಟನೆ ನಡೆದಿದೆ. ಅಸಾಮಿಯೊಬ್ಬ ಸತ್ತು ಹೋದ ನಾಯಿಯ ಕೊರಳಿಗೆ ಸರಪಳಿ ಬಿಗಿದು ದ್ವಿಚಕ್ರ ವಾಹನಕ್ಕೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದಿರುವ ಘಟನೆ ನಡೆದಿದೆ.

ಕಾಪುವಿನ ಕೊಂಬಗುಡ್ಡೆಯ ನಿವಾಸಿ ಖಾದರ್ ಎಂಬಾತ ಸತ್ತಿರುವ ನಾಯಿಯ ಕೊರಳಿಗೆ ಸರಪಳಿ ಬಿಗಿದ್ದಿದ್ದಾನೆ. ಬಳಿಕ ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದ್ದಾನೆ. ಆದರೆ ಯಾಕಾಗಿ ಹೀಗೆ ಮಾಡಿದ್ದು? ನಾಯಿ ಸತ್ತಿದ್ದು ಹೇಗೆ? ಅದು ತಾನೇ ಸಾಕಿದ ಶ್ವಾನವಾ ಅಥವಾ ಬೀದಿ ನಾಯಿನಾ ಎಂಬುದು ತಿಳಿದು ಬಂದಿಲ್ಲ.

ಸದ್ಯ ಸ್ಥಳೀಯರಿಂದ ಈ ವಿಡಿಯೊ ವೈರಲ್ ಆದ ಬೆನ್ನಲ್ಲೆ ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

ಕಾಲು ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದ ವ್ಯಕ್ತಿ

ರಭಸವಾಗಿ ಹರಿಯುತ್ತಿದ್ದ ಕೃಷ್ಣ ನದಿ ದಡಕ್ಕೆ ಕಾಲು ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ಕೃಷ್ಣ ನದಿಯಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ‌ ಸದ್ಯ ವಿಡಿಯೊ ವೈರಲ್ ಆಗುತ್ತಿದೆ.

ತಿಂಥಣಿ ಗ್ರಾಮದ ಕಾಸಿಂಸಾಬ್ ಎಂಬಾತ ಕಾಲು ಜಾರಿ ನದಿಗೆ ಬಿದ್ದವನು. ನೀರಿನ ಸೆಳೆತಕ್ಕೆ ಸಿಲುಕಿ ಕೊಂಚಿಕೊಂಡು ಹೋಗುತ್ತಿದ್ದವನನ್ನು ಕೂಡಲೇ ಕೂಡ್ಲೆ ಗ್ರಾಮದ ಅಂಬಿಗರು ತೆಪ್ಪದ ಮೂಲಕ ತೆರಳಿ ಕಾಸಿಂಸಾಬ್‌ನನ್ನು ರಕ್ಷಣೆ ಮಾಡಿದ್ದಾರೆ. ಅಂಬಿಗರ ಸಾಹಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Karnataka Rain : ಭಾರಿ ಮಳೆ ಎಫೆಕ್ಟ್‌ನಿಂದಾಗಿ ಸಾವು-ನೋವು ಸಂಭವಿಸುತ್ತಿದೆ. ಸದ್ಯ ಗುಡ್ಡ ಕುಸಿತ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಲ್ಲಿ ನೂರಾಕ್ಕೂ ಹೆಚ್ಚು ಅಪಾಯಕಾರಿ ಜಾಗಗಳ ಗುರುತು ಹಾಕಲಾಗಿದೆ. ಇತ್ತ ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌ ಆಗಿರುವುದರಿಂದ ರೈಲು ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

By

karnataka rain
ಸಾಂದರ್ಭಿಕ ಚಿತ್ರ
Koo

ಭಾರಿ ಮಳೆಯಿಂದಾಗಿ (Karnataka Rain) ಅಂಕೋಲಾ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಿಂದ ಹೆದ್ದಾರಿ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಇಲಾಖೆಯು ರೈಲು ವ್ಯವಸ್ಥೆ ಮಾಡಿದೆ. ಗೋವಾಕ್ಕೆ ತೆರಳುವ ಮುಖ್ಯ ಮಾರ್ಗ ಬಂದ್‌ ಆಗಿರುವ ಹಿನ್ನೆಲೆಯಲ್ಲಿ ರೈಲು ಸೇವೆ ಇರಲಿದೆ. ಮಾಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲರಹಿತ ರೈಲು ಓಡಾಡಲಿದೆ. ಜುಲೈ 20, 21, 22 ರಂದು 2 ಕೇಂದ್ರಗಳ ನಡುವೆ ಮೂರು ದಿನಗಳ ಕಾಲ ಸಂಚರಿಸಲಿದೆ. ಬೆಳಗ್ಗೆ ಮಾಡಗಾಂವ್ ಜಂಕ್ಷನ್‌ನಿಂದ 6 ಗಂಟೆಗೆ ಹೊರಡಲಿರುವ ವಿಶೇಷ ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರು ಪ್ರಯಾಣದಲ್ಲಿ ಮಧ್ಯಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು 7 ಗಂಟೆಗೆ ಮಡಗಾಂವ್ ತಲುಪಲಿದೆ . ಕಾಣಕೋಣ, ಕಾರವಾರ, ಹರ್ವಾಡ, ಅಂಕೋಲ ಜೊತೆ ಬಹುತೇಕ ಎಲ್ಲಾ ಸ್ಟೇಷನ್ಗಳಲ್ಲೂ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಚಿಕ್ಕಮಗಳೂರಲ್ಲಿವೆ 158 ‌ಅಪಾಯಕಾರಿ ಜಾಗಗಳು

ಚಿಕ್ಕಮಗಳೂರು: ಮುಂಗಾರು ಮಳೆ ಆರ್ಭಟ (Karnataka rain) ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಕಿಂಗ್ ನ್ಯೂಸ್‌ ನೀಡಿದೆ. ಮಳೆಯಿಂದ ಅಪಾಯ ಸಂಭವಿಸಬಹುದಾದ ಜಾಗಗಳ ಗುರುತು ಮಾಡಿದೆ. ಆಗಸ್ಟ್ ತಿಂಗಳಲ್ಲಿ ಮಳೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಗುಡ್ಡ ಕುಸಿತ ರೀತಿಯ ಅಪಾಯಕಾರಿ ಸ್ಥಳಗಳ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸುತ್ತಮುತ್ತ ಸುಮಾರು 158 ‌ ಸ್ಥಳಗಳು ಅಪಾಯಕಾರಿಯಾಗಿವೆ. ಅದರಲ್ಲಿ ಶೃಂಗೇರಿ ತಾಲೂಕಿನಲ್ಲಿ ಬರೋಬ್ಬರಿ 87, ಎನ್‌ಆರ್‌ ಪುರ ತಾಲೂಕಿನಲ್ಲಿ 21, ಮೂಡಿಗೆರೆ ತಾಲೂಕಿನಲ್ಲಿ 17 ಡೇಂಜರ್ ಸ್ಪಾಟ್‌ಗಳಿವೆ.

ಅಪಾಯಕಾರಿ ಸ್ಥಳಗಳ ಮೇಲೆ ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ತಂಡ ತೀವ್ರ ನಿಗಾವಹಿಸಿದ್ದಾರೆ. ಅಪಾಯ ಸಂಭವಿಸಿದರೆ ಸ್ಥಳಾಂತರಿಸಲು 77 ಸುರಕ್ಷಿತ ಜಾಗಗಳನ್ನು ಸಹ ಗುರುತು ಮಾಡಲಾಗಿದೆ. ಕೊಪ್ಪ ತಾಲೂಕಿನ ಗುಡ್ಡೆ ತೋಟದ 14 ಕುಟುಂಬಗಳ ಮೇಲು ತೀವ್ರ ನಿಗಾವಹಿಸಲಾಗಿದೆ. ಭಾರಿ ಮಳೆ ಸುರಿದರೆ ಕುಟುಂಬಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲಿ ಚಿಕ್ಕಮಗಳೂರಿಗೆ ಕಂಟಕ ಕಾದಿದ್ದು, ಮೊದಲೇ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ನಿರಂತರ ಮಳೆಗೆ ಭೂ ಕುಸಿತ

ಅರಮನೆ ನಗರಿ ಮೈಸೂರಿನಲ್ಲಿ ನಿರಂತರ ಮಳೆಗೆ ಶ್ರೀರಾಂಪುರ ಜಂಕ್ಷನ್ ಸಮೀಪದ ರಿಂಗ್ ರಸ್ತೆಯಲ್ಲಿ ಭೂಮಿ ಕುಸಿದಿದೆ. ಮುಖ್ಯ ರಸ್ತೆಯಲ್ಲೇ ಭೂಮಿ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಸರ್ವಿಸ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ತರಾತುರಿಯಲ್ಲಿ ದುರಸ್ತಿ ಕಾರ್ಯಕ್ಕೆ ಮುಂದಾದರು. ಜೆಸಿಬಿ ಯಂತ್ರದ ಮೂಲಕ ದುರಸ್ತಿ ಕಾರ್ಯ ನೆರವೇರಿಸಿದರು. ಇನ್ನೂ ಸಾರ್ವಜನಿಕರು ಹೊಂಡವನ್ನು ಕುತೂಹಲದಿಂದ ನೋಡುತ್ತಿರುವುದು ಕಂಡು ಬಂತು. ಭಾರಿ ಗಾತ್ರದ ವಾಹನಗಳು ಕೂಡ ಸರ್ವೀಸ್ ರಸ್ತೆಯಲ್ಲಿ ಚಲಿಸುತ್ತಿದ್ದವು.

ಇದನ್ನೂ ಓದಿ: Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

ಮಳೆಗೆ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟು ಆಕ್ರೋಶ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿರುವ ಮತ್ತಿಘಟ್ಟ ಗ್ರಾಮ ಪಂಚಾಯತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರಮುಖ ರಸ್ತೆಗಳು ಕೆಸರು ಗದ್ದೆಯಂತಾಗಿದೆ. ಹೀಗಾಗಿ ಕೆಸರು ರಸ್ತೆಗೆ ರಾಗಿ ಸಸಿ ನೆಟ್ಟು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಓಡಾಟಲು ಹರಸಾಹಸ ಪಡೆಯುವಂತಾಗಿದೆ. ಪರ್ಯಾಯ ರಸ್ತೆಯಿಲ್ಲದೇ ಕೆಸರು ರಸ್ತೆಯಲ್ಲೆ ಓಡಾಟ ನಡೆಸುವ ಪರಿಸ್ಥಿತಿ ಇದೆ.

ವರದಾ ನದಿಯಲ್ಲಿ ಈಶ್ವರ ದೇಗುಲ ಮುಳುಗಡೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ವರದಾ ನದಿ ತುಂಬಿ ಹರಿಯುತ್ತಿದೆ. ವರದಾ ನದಿಯಲ್ಲಿ ನೀರಿನ‌ ಹರಿವು ಹೆಚ್ಚಾಗಿದ್ದು, ಹಾವೇರಿಯ ದೇವಗಿರಿ ಬಳಿ ದೇಗುಲ ಮುಳುಗಡೆಯಾಗಿದೆ. ನದಿ ದಡದಲ್ಲಿದ್ದಈಶ್ವರ ದೇಗುಲ ಮುಳುಗುಡೆಯಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲಿ ಮಳೆಗೆ ಇತಿಹಾಸ ಪ್ರಸಿದ್ಧ ವಿಷ್ಣುಸಮುದ್ರ (ಬಿಸ್ಟಮ್ಮನ ಕೆರೆ) ಕೆರೆ ಕೋಡಿ ಬಿದ್ದಿದೆ. ಬೇಲೂರು ಪಟ್ಟಣದಲ್ಲಿರುವ ಬಿಸ್ಟಮ್ಮನ ಕೆರೆಯು ಕಳೆದ ಎರಡು ವರ್ಷಗಳ ಹಿಂದೆ ಕೋಡಿ ಬಿದ್ದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

Karnataka Rain : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗಿದೆ. ಹಾಸನದಲ್ಲಿ ಮನೆ ಗೋಡೆ ಕುಸಿದು ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಮೃತಪಟ್ಟಿವೆ.

VISTARANEWS.COM


on

By

karnataka Rain
Koo

ಹಾಸನ: ಹಾಸನದಲ್ಲಿ ಮಳೆಯಾರ್ಭಟ (Karnataka Rain) ಮುಂದುವರಿದಿದ್ದು, ಭಾರಿ ಗಾಳಿ-ಮಳೆಗೆ ವಾಸದ ಮನೆಯು ಕುಸಿದು ಬಿದ್ದಿದೆ. ಪರಿಣಾಮ ಮನೆಯ ಕೊಟ್ಟಿಗೆಯಲ್ಲಿದ್ದ ಮೂರು ಜಾನುವಾರುಗಳು ಮೃತಪಟ್ಟಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಸತತ ಮಳೆಗೆ ಶನಿವಾರ ಮುಂಜಾನೆ ಗ್ರಾಮದ ದ್ಯಾವಮ್ಮ ಎಂಬುವವರ ಮನೆ ಏಕಾಏಕಿ ಕುಸಿದು ಬಿದ್ದಿದೆ. ಇತ್ತ ಕುಸಿದ ಗೋಡೆಗಳ ನಡುವೆ ಸಿಲುಕಿದ ಮೂರು ಜಾನುವಾರುಗಳು ಸ್ಥಳದಲ್ಲೇ ಮೃತಪಟ್ಟಿವೆ. ಸದ್ಯ ಮನೆ ಕಳೆದುಕೊಂಡು, ಜೀವನೋಪಾಯಕ್ಕೆ ಇದ್ದ ಜಾನುವಾರುಗಳನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ. ಸೂಕ್ತ ಪರಿಹಾರಕ್ಕಾಗಿ ನೊಂದ ಕುಟುಂಬವು ಒತ್ತಾಯ ಮಾಡಿದೆ.

ಪಶು ಆಸ್ಪತ್ರೆ ಹಿಂಭಾದ ಭೂ ಕುಸಿತ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಪಶು ಆಸ್ಪತ್ರೆ ಹಿಂಭಾಗದಲ್ಲಿ ಭಾರಿ ಭೂ ಕುಸಿತ ಉಂಟಾಗಿದೆ. ಇನ್ನು ಉದ್ಘಾಟನೆಯಾಗದ ಪಶು ಆಸ್ಪತ್ರೆಯ ಗೋಡೆಯ ಮೇಲೆ ಮಣ್ಣು ಬಿದ್ದಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಭೂ ಕುಸಿತದಿಂದ ಆಸ್ಪತ್ರೆ ಕಟ್ಟಡ ಒಳಭಾಗದಲ್ಲಿ ಕೆಸರುಮಯವಾಗಿದೆ. ಇನ್ನಷ್ಟು ಭೂಮಿ ಕುಸಿತವಾಗುವ ಭೀತಿ ಇದೆ. ಇನ್ನೂ ಬಿಎಸ್‌ಎನ್‌ಎಲ್‌ ಟವರ್‌, ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆ ಇದೆ.

ಚಾರ್ಮಾಡಿಯಲ್ಲಿ ವಾಹನ ದಟ್ಟಣೆ

ಗುಡ್ಡ ಕುಸಿತದಿಂದಾಗಿ ಶಿರಾಡಿ, ಸಂಪಾಜೆ ಮಾರ್ಗ ಬಂದ್ ಆದ ಹಿನ್ನೆಲೆಯಲ್ಲಿ ಇತ್ತ ಚಾರ್ಮಾಡಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಚಾರ್ಮಾಡಿ ಹೆದ್ದಾರಿ ಸಾಮರ್ಥ್ಯಕ್ಕೂ ಮೀರಿ ವಾಹನಗಳು ಸಂಚಾರಿಸುತ್ತಿವೆ. ಅಪಾಯಕ್ಕೂ ಮುನ್ನ ಚಿಕ್ಕಮಗಳೂರು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಸಂಚಾರ ದುಸ್ತರವಾಗಿದೆ. 2019ರಲ್ಲಿ ಲ್ಯಾಂಡ್ ಸ್ಲೈಡಿಂಗ್ ಆದ ಜಾಗದಲ್ಲಿ ವಾಹನ ಸಂಚಾರ ನಿಧಾನಗತಿಗೆ NHA ಹಾಗೂ ಅರಣ್ಯ ಅಧಿಕಾರಿಗಳಿಗೆ ಚಿಕ್ಕಮಗಳೂರು ಡಿಸಿ ಎಸ್‌ಪಿ ಸೂಚನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಶಾಲಾ ಕಾಂಪೌಂಡ್‌ ಕುಸಿತ

ಶಿವಮೊಗ್ಗದಲ್ಲಿ ಮಳೆಯ ಅಬ್ಬರಕ್ಕೆ ಶಾಲಾ ಕಾಂಪೌಂಡ್ ಕುಸಿದು ಬಿದ್ದಿದೆ. ಶಿವಮೊಗ್ಗ ನಗರದ ಬುದ್ದನಗರದಲ್ಲಿ ಘಟನೆ ನಡೆದಿದೆ. ಇನ್ನೂ ಕಾಂಪೌಂಡ್ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಎರಡು ಕಾರು ಜಖಂಗೊಂಡಿವೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ದುರಂತವೊಂದು ತಪ್ಪಿದೆ.

ಝರಿ ಫಾಲ್ಸ್‌ಗೆ ನಿಷೇಧ

ಚಿಕ್ಕಮಗಳೂರು ತಾಲೂಕಿನ ದತ್ತಪೀಠ ತಪ್ಪಲಿನಲ್ಲಿರುವ ಝರಿ ಫಾಲ್ಸ್‌ಗೆ ನಿಷೇಧ ಹೇರಲಾಗಿದೆ. ಭಾರಿ ಮಳೆ ಬೆನ್ನಲ್ಲೇ ಝರಿ ಫಾಲ್ಸ್ ರೌದ್ರಾವತಾರ ತಾಳಿದೆ. ಹೀಗಾಗಿ ಝರಿ ಫಾಲ್ಸ್ ಪ್ರವಾಸಕ್ಕೆ ಪ್ರವಾಸಿಗರು, ಸಾರ್ವಜನಿಕರಿಗೆ ನಿಷೇಧಿಸಲಾಗಿದೆ. ಫಾಲ್ಸ್‌ಗೆ ಹೋಗುವ ರಸ್ತೆಯನ್ನು ಪೊಲೀಸರು ಬಂದ್‌ ಮಾಡಿಸಿದ್ದಾರೆ.

ಇದನ್ನೂ ಓದಿ: Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ

ವಿಜಯನಗರದ ನದಿ ಪಾತ್ರದ ಜನರಿಗೆ ತುಂಗಭದ್ರಾ ಆಡಳಿತ ಮಂಡಳಿ ಎಚ್ಚರಿಕೆ ಸಂದೇಶ ರವಾನಿಸಿದೆ. ಯಾವುದೇ ಕ್ಷಣದಲ್ಲೂ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಬಹುದು. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಜತೆಗೆ ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ತೀರಕ್ಕೆ ಯಾರು ತೆರಳದಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಸೂಚನೆ ನೀಡಿದ್ದಾರೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಚನ್ನಾಗಿ ಆಗುತ್ತಿದೆ. ಆಲಮಟ್ಟಿ ಡ್ಯಾಂನಿಂದ ನಾರಾಯಣಪುರ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿ ತೀರದ 80 ಗ್ರಾಮಗಳ ಪಟ್ಟಿ ಮಾಡಲಾಗಿದೆ. ಪ್ರವಾಹಕ್ಕೆ ಒಳಗಾಗುವ 80 ಗ್ರಾಮಗಳಿಗೆ ಈಗಾಗಲೇ ನೊಡೇಲ್ ಅಧಿಕಾರಿಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಯಾರು ನದಿ ತೀರಕ್ಕೆ ತೆರಳದೇ ಅಗತ್ಯ ಎಚ್ಚರಿಕೆ ವಹಿಸಬೇಕು. ಪ್ರವಾಹ ಎದುರಾದರೇ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. 32 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 32 ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಳ್ಳ ದಾಟಲು ಹೋಗಿ ಎತ್ತುಗಳು ಸಾವು

ಶಿವಮೊಗ್ಗದಲ್ಲಿ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಹಳ್ಳ ದಾಟಲು ಹೋಗಿ ಎತ್ತುಗಳು ಮೃತಪಟ್ಟಿವೆ. ರಭಸವಾಗಿ ಹರಿಯುತ್ತಿದ್ದ ಹಳ್ಳ‌ ದಾಟಲು ಹೋಗಿ ಒಂದು ಎತ್ತು, ಒಂದು ಆಕಳು, ಒಂದು ಎಮ್ಮೆ ಮೃತಪಟ್ಟಿವೆ. ಬದುಕಿಗೆ ಆಸರೆಯಾಗಿದ್ದ ಎತ್ತು, ಗೋವು ಕಳೆದುಕೊಂಡ ರೈತ ಕಂಗಲಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಆಗ್ರಹಾರ ಮುಚಡಿಯಲ್ಲಿ ಘಟನೆ ನಡೆದಿದೆ.

ಇತ್ತ ಸಾಗರ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿವೆ. ಸಾಗರದ ಗಾಂಧಿನಗರದ 19ನೇ ವಾರ್ಡ್‌ನಲ್ಲಿ ಮೂರು ಹೆಂಚಿನ ಮನೆಗಳು ಧರೆಗುರುಳಿವೆ. ಹಬೀಬಾ , ಇನಾಯತ್ ಹಾಗೂ ನಿಸಾರ್ ಎಂಬುವರಿಗೆ ಸೇರಿದ ಮೂರು ಮನೆಗಳು ಧ್ವಂಸವಾಗಿವೆ.

ಮನೆ ಕುಸಿಯುತ್ತಿದ್ದಂತೆ ಓಡಿ ಬಂದ ಸದಸ್ಯರು

ನಿರಂತರ ಮಳೆಗೆ ತಡರಾತ್ರಿ ಮನೆಯೊಂದು ಕುಸಿದಿದೆ. ಮನೆ ಕುಸಿಯುತ್ತಿದ್ದಂತೆ ಒಳಗೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಬೆಳಗಾವಿಯ ಬೈಲಹೊಂಗಲ ತಾಲೂಕಿನ ಪಟ್ಟಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಬಸಪ್ಪ ಹಡಪದ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಡಿ ಬಿದ್ದ ಹಿರೇಕೊಳಲೆ ಕೆರೆ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟಕ್ಕೆ ಹಿರೇಕೊಳಲೆ ಐತಿಹಾಸಿಕ ಕೆರೆ ಸಂಪೂರ್ಣ ತುಂಬಿ ಕೊಡಿ ಬಿದ್ದಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಒದಗಿಸುವ ದೊಡ್ಡ ಕೆರೆ ಇದಾಗಿದೆ. ಕೆರೆ ಭರ್ತಿಯಿಂದಾಗಿ ಚಿಕ್ಕಮಗಳೂರು ನಗರದ ನಿವಾಸಿಗಳಲ್ಲಿ ಸಂತಸ ಮೂಡಿದೆ.

ದೇವಸ್ಥಾನದಕ್ಕೆ ಜಲದಿಗ್ಭಂಧನ

ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನಾರಾಯಣಪುರ ಜಲಾಶಯದಿಂದ ಒಳಹರಿವು ಹೆಚ್ಚಿದೆ. ಪರಿಣಾಮ ರಾಯಚೂರಲ್ಲಿ ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದಲ್ಲಿರುವ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ದೇವಸ್ಥಾನದ ಚಾವಣಿ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಹೂವಿನಹೆಡಗಿ ಸೇತುವೆ ಮುಳುಗಡೆಗೂ ಕೆಲವೇ ಕೆಲವು ಅಡಿ ಬಾಕಿ ಇದೆ.

ವರದಾ ನದಿ ಸೇತುವೆ ಮೇಲೆ ಓಡಾಡುವ ಸವಾರರಿಗೆ ಎಚ್ಚರಿಕೆ

ಭಾರಿ ಮಳೆಗೆ ಅಪಾಯಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಉತ್ತರಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಭಾಗದಲ್ಲಿ ತೋಟ, ಗದ್ದೆಗಳು ಮುಳುಗಡೆಯಾಗಿದೆ. ನದಿ ಪಾತ್ರದ ನೂರಾರು ಎಕರೆ ಅಡಿಕೆ, ಬಾಳೆ ತೋಟ, ಅನಾನಸ್, ಶುಂಠಿ ಗದ್ದೆಗಳು ಜಲಾವೃತಗೊಂಡಿದೆ. ಬನವಾಸಿ-ಭಾಶಿ ನಡುವಿನ ಸಂಪರ್ಕ‌ ಸೇತುವೆ ಮುಳುಗಡೆ ಹಂತ ತಲುಪಿದೆ. ಹೀಗಾಗಿ ಬನವಾಸಿ-ಚಂದ್ರಗುತ್ತಿ ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ವರದಾ ನದಿ ಸೇತುವೆ ಮೇಲೆ ಓಡಾಡುವ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇತ್ತ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾಜಿಮನೆ ಗ್ರಾಮದಲ್ಲಿ ಭಾರೀ ಮಳೆಗೆ ಅಡಿಕೆ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದೆ. ಹಳ್ಳದ ನೀರು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು, ಬಾಳೆ ಗಿಡಗಳಿಗೆ ಹಾನಿಯಅಗಿದೆ. ತೋಟಕ್ಕೆ ಹಾಕಲಾಗಿದ್ದ ಗೊಬ್ಬರ ನೀರುಪಾಲು, 2-3 ಲಕ್ಷ ನಷ್ಟವಾಗಿದೆ. ನೀರಿನ ಹರಿವು ಹೆಚ್ಚಳದಿಂದ ಕಿರುಸೇತುವೆ ಮುಳುಗಡೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

Karnataka rain : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯು ನಾನಾ ಅವಾಂತರವನ್ನೇ (Rain Effect) ಸೃಷ್ಟಿಸಿದೆ. ಚಿಕ್ಕಮಗಳೂರಲ್ಲಿ ಹಳ್ಳ ದಾಟಲು ಹೋದ ಜಾನುವಾರುವೊಂದು ನೀರುಪಾಲಾಗಿದೆ. ಜೋರಾಗಿ ಬೀಸಿದ ಬಿರುಗಾಳಿ ವಿಂಡ್‌ ಫ್ಯಾನ್‌ ನೆಲಕಚ್ಚಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಭಯಂಕರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು (Karnataka Rain) ಉಕ್ಕಿ ಉರಿಯುತ್ತಿದೆ. ಹೀಗೆ ಉಕ್ಕಿ ಉರಿಯುತ್ತಿದ್ದ ನೀರಿನಲ್ಲಿ ಹಳ್ಳ ದಾಟಲು ಹೋದ ಎಮ್ಮೆಯೊಂದು ನೀರುಪಾಲಾಗಿದೆ. ಕಳಸ ತಾಲೂಕಿನ ಮಾವಿನ ಹೊಲ ಬಳಿ ಘಟನೆ ನಡೆದಿದೆ. ಜನರ ಕಣ್ಣೆದುರೇ ರಭಸವಾದ ಹಳ್ಳದಲ್ಲಿ ಜಾನುವಾರು ಕೊಚ್ಚಿ ಹೋಗಿದೆ. ಈವರೆಗೂ ಕಳಸ ತಾಲೂಕಿನಲ್ಲೇ ಮೂರು ಹಸುಗಳು ಬಲಿಯಾಗಿವೆ.

ಬಳ್ಳಾರಿಯಲ್ಲಿ ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಎರಡು ದಿನಗಳಿಂದ ಬೀಸುತ್ತಿರುವ ಬಿರುಗಾಳಿಗೆ ತಡರಾತ್ರಿ ವಿಂಡ್ ಫ್ಯಾನ್ ನೆಲಕ್ಕೆ ಉರುಳಿದೆ. ನಿನ್ನೆ ಶುಕ್ರವಾರ ತಡರಾತ್ರಿ ಸಂಡೂರಿನ ಹೀರಾಳ್ ಬಳಿ ಇರುವ ಬೃಹತ್ ವಿಂಡ್ ಫ್ಯಾನ್ ಧರೆಗೆ ಉರುಳಿದೆ. ತಡ ರಾತ್ರಿಯಾಗಿರುವುದರಿಂದ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಂದಾಲ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಬಿದ್ದ ಪರಿಣಾಮ ಕೆಲಸ ತೆರಳುವವರಿಗೆ ತೊಂದರೆ ಆಯ್ತು. ವಿದ್ಯುತ್ ಉತ್ಪಾದನೆಗಾಗಿ ಜಿಂದಾಲ್ ಕಂಪನಿಯವರು ರೈತರ ಹೊಲದಲ್ಲಿ ವಿಂಡ್‌ ಫ್ಯಾನ್‌ ಅಳವಡಿಸಿದ್ದರು. ಚೋರನೂರು ಹೋಬಳಿಯಲ್ಲಿ ಬೃಹತ್ ಪ್ರಮಾಣದ ವಿಂಡ್ ಫ್ಯಾನ್‌ಗಳನ್ನು ಅಳವಡಿಸಲಾಗಿದೆ.

ಬೆಳೆಗಳನ್ನು ನುಂಗಿ ಹಾಕಿದ ಬಳ್ಳಾರಿ ನಾಲೆ

ಬಳ್ಳಾರಿ ನಾಲೆಯ ರುದ್ರ ನರ್ತನವನ್ನು ಡ್ರೋಣ್ ಕಣ್ಣು ಬಿಚ್ಚಿಟ್ಟಿದೆ. ಹೊಲ ಗದ್ದೆಗಳು ಹಾಗೂ ಅದರಲ್ಲಿದ್ದ ಬೆಳೆಗಳು ನಾಶವಾಗಿವೆ. ವಡಗಾಂವಿ, ಶಹಪೂರ, ಅನಗೋಳ, ಯಳ್ಳೂರು ಗ್ರಾಮದ ರೈತರ ಬೆಳೆ ಸರ್ವನಾಶವಾಗಿವೆ. ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ಬೆಳೆದ ಬೆಳೆ ನೀರು ಪಾಲಾಗಿದೆ. ಪಕ್ಕದಲ್ಲಿಯೇ ಇರುವ ಮನೆಗಳಿಗೂ ನೀರು ನುಗ್ಗುವ ಆತಂಕ ಎದುರಾಗಿದೆ. ಯಾವಾಗ ಮನೆಗೆ ನೀರು ನುಗ್ಗುತ್ತೊ ಎಂಬ ಆತಂಕದಲ್ಲಿಯೇ ಜನರು ದಿನದೂಡುತ್ತಿದ್ದಾರೆ. ಬಳ್ಳಾರಿ ನಾಲೆಯ ನೀರು ಎಲ್ಲ ಕಡೆ ನುಗ್ಗಿ ಆತಂಕ ಸೃಷ್ಟಿಸಿದೆ.

ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಗಾತ್ರದ ಅಲೆಗಳು

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯ ಜತೆಗೆ ಸಮುದ್ರದ ಅಲೆಗಳು ಅಬ್ಬರಿಸುತ್ತಿದೆ. ಕಡಲತೀರದಲ್ಲಿ ದಡಕ್ಕೆ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಉಡುಪಿ ತಾಲೂಕಿನ ಮಲ್ಪೆ ಸಮೀಪದ ಗುಜ್ಜರಬೆಟ್ಟುವಿನಲ್ಲಿ ರಕ್ಕಸ ಗಾತ್ರದ ಅಲೆಗೆ ತಡೆಗೋಡೆ, ತೆಂಗಿನ ಮರ ಸಮುದ್ರ ಪಾಲಾಗಿದೆ. ಈಗಾಗಲೇ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದನ್ನೂ ಓದಿ: Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

ಚೋರ್ಲಾ ಮಾರ್ಗದಲ್ಲಿ ಬಿರುಕು ಬಿಟ್ಟ ಸೇತುವೆ

ಗೋವಾ ಮಾರ್ಗವಾಗಿ ತೆರಳುವ ವಾಹನ ಸವಾರರಿಗೆ ಬೆಳಗಾವಿ ಪೊಲೀಸರು ಬದಲಾವಣೆ ಸೂಚಿಸಿದ್ದಾರೆ. ಚೋರ್ಲಾ ಮಾರ್ಗದಲ್ಲಿ ಸೇತುವೆ ಬಿರುಕುಗೊಂಡಿರುವ ಹಿನ್ನೆಲೆಯಲ್ಲಿ ಚೋರ್ಲಾ ಮಾರ್ಗದ ಬದಲಾಗಿ ಖಾನಾಪುರ ಮಾರ್ಗವಾಗಿ ಪ್ರಯಾಣಿಸಲು ಸೂಚನೆ ನೀಡಲಾಗಿದೆ. ಜಾಂಬೋಟಿ ಚೋರ್ಲಾ ಮಾರ್ಗದಲ್ಲಿ ಸತತ ಮಳೆ ಹಿನ್ನೆಲೆಯಿಂದಾಗಿ ಪೀರಣವಾಡಿ ಕ್ರಾಸ್‌ನಿಂದ ಖಾನಾಪುರ ಮಾರ್ಗವಾಗಿ ಚಲಿಸಲು ಸೂಚನೆ ನೀಡಲಾಗಿದೆ.

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ನಿಪ್ಪಾಣಿ ತಾಲೂಕಿನ ಹಲವು ಗ್ರಾಮಗಳಿಗೆ ನೆರೆಯ ಆತಂಕ ಶುರುವಾಗಿದೆ. ಅಪಾಯದ ಮಟ್ಟ ಮೀರಿ ದೂದಗಂಗಾ ನದಿ ಹರಿಯುತ್ತಿದ್ದು, ಕಾರದಗಾ ಗ್ರಾಮದ ಬಂಗಾಲಿಬಾಬಾ ದರ್ಗಾ ಜಲಾವೃತಗೊಂಡಿದೆ. ನದಿ ನೀರು ಕ್ರಮೇಣ ಏರಿಕೆ ಆಗುತ್ತಿದ್ದು, ಗ್ರಾಮಕ್ಕೆ ನುಗ್ಗುವ ಆತಂಕವಿದೆ.

ಇತ್ತ ಬೆಳಗಾವಿ ನಗರದ ಹಲವು ಬಡಾವಣೆ ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಈಗಾಗಲೇ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿಯಾಗಿದೆ. ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ವಡಗಾಂವಿ ಅನಗೋಳ , ಶಹಪೂರ ಯಳ್ಳೂರು ಗ್ರಾಮಗಳಿಗೂ ಆತಂಕ ಹೆಚ್ಚಿದೆ. 2,500ಕ್ಕೂ ಹೆಚ್ಚು ಎಕರೆ ಪ್ರದೇಶ ನೀರಲ್ಲಿ ಮುಳುಗಿದೆ. ಸದ್ಯ ಭತ್ತ, ಕಬ್ಬು, ಜೋಳ ಬೆಳೆಗಳು ನೀರಲ್ಲಿ ತೇಲುತ್ತಿದೆ. ಪ್ರತಿ ವರ್ಷವೂ ಬಳ್ಳಾರಿ ನಾಲೆಯಿಂದ ಸಾವಿರಾರು ಎಕರೆ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗುತ್ತಿದೆ.

ಸೇತುವೆ ಮುಳುಗಡೆ- ಗ್ರಾಮಗಳ ಸಂಪರ್ಕ ಕಡಿತ

ಹಾವೇರಿಯ ಕುಮದ್ವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಮೂರು ಗ್ರಾಮಗಳ ಸಂಪರ್ಕ ಸೇತುವೆ ಕಡಿತದಿಂದಾಗಿ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಎಲಿವಾಳ ಮತ್ತು ರಟ್ಟಿಹಳ್ಳಿಯ ಸೇತುವೆ ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಯಡಗೋಡ ಮತ್ತು ಬಡಸಂಗಾಪುರ ಸಂಪರ್ಕ ಸೇತುವೆ ಬಂದ್ ಆಗಿದೆ. ಸೇತುವೆ ಮೇಲೆ ಗ್ರಾಮಸ್ಥರು ಓಡಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗಾಳಿ ಸಹಿತ ಜೋರು ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿ ಸುತ್ತಮುತ್ತ ಭಾರಿ ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜತೆಗೆ ಹಾಸನದ ಕೆಲ ಶಾಲೆಗಳಿಗೆ ರಜೆ (Rain news) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ (Heavy Rain) ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ (Holiday) ಮಾಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗಾಳಿ ಸಹಿತ ಭಾರಿ ಮಳೆ- ರೆಡ್‌ ಅಲರ್ಟ್‌ ಘೋಷಣೆ

ನಿರಂತರ ಗಾಳಿ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
ಕ್ರೈಂ9 mins ago

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

CM Siddaramaiah
ರಾಜಕೀಯ33 mins ago

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

Monsoon Fashion
ಫ್ಯಾಷನ್39 mins ago

Monsoon Fashion: ಮಾನ್ಸೂನ್‌ಗೆ ತಕ್ಕಂತೆ ಬದಲಾದ ಸೂಪರ್‌ ಮಾಡೆಲ್‌ ಸಂತೋಷ್‌ ರೆಡ್ಡಿ ಫ್ಯಾಷನ್‌!

karnataka rain
ಮಳೆ42 mins ago

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Paris Olympic 2024:
ಕ್ರೀಡೆ44 mins ago

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Manoj Soni
ದೇಶ1 hour ago

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

ಕರ್ನಾಟಕ1 hour ago

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

UP Minister Resigns
ದೇಶ1 hour ago

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

Belgavi News
ಬೆಳಗಾವಿ1 hour ago

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Sonu Sood
ದೇಶ2 hours ago

Sonu Sood : ಸೋನು ಸೂದ್​, ಕಂಗನಾ ರಣಾವತ್​ ‘ಎಂಜಲು ರೊಟ್ಟಿಯ’ ಗಲಾಟೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ7 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌