Viral video: ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಬೆಂಕಿ ಎಸೆದು ಕೋಲಾಹಲ ಸೃಷ್ಟಿಸಿದ ಮಹಿಳೆ! - Vistara News

ಉಡುಪಿ

Viral video: ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಬೆಂಕಿ ಎಸೆದು ಕೋಲಾಹಲ ಸೃಷ್ಟಿಸಿದ ಮಹಿಳೆ!

ಬಂಧಿಸಲು ಬಂದ ಪೊಲೀಸರನ್ನು ಎಳೆದಾಡಿ ಅವಾಂತರ ಸೃಷ್ಟಿ ಮಾಡಿದ ಮಹಿಳೆಯನ್ನು ಸಾರ್ವಜನಿಕರ ಸಹಾಯದಿಂದ ಬಂಧಿಸಿ ಪೊಲೀಸರು ಬೆಂಕಿ ನಂದಿಸಿದರು.

VISTARANEWS.COM


on

woman with fire viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಹಾಗೂ ಬೆಂಕಿ ಎಸೆದು ಕೋಲಾಹಲ ಸೃಷ್ಟಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್‌ (Viral video) ಆಗಿದೆ.

ಕುಂದಾಪುರ ತಾಲೂಕು ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಸರೋಜಾ ದಾಸ್ ಎಂಬವರು ಹೀಗೆ ಹಲ್ಲೆಗೆ ಯತ್ನ ನಡೆಸಿದವರು. ಇವರು ಪಾದಚಾರಿ ರಸ್ತೆಯಲ್ಲಿ ತಮ್ಮ ಅಂಗಡಿ ವಿಸ್ತರಿಸಿ ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಹಾಗೂ ವಾಹನ ಸವಾರರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಅಂಗಡಿ ವಿಸ್ತರಣೆಯನ್ನು ತೆರವು ಮಾಡಲು ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಸರೋಜಾ ದಾಸ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದನೆಯ ಕೋಲಿನ ತುದಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಅದನ್ನು ಪೊಲೀಸರ ‌ಮೇಲೆ ಎಸೆದು ಕೋಲಾಹಲ ಮಾಡಿದ್ದಾರೆ. ಬಂಧಿಸಲು ಬಂದ ಪೊಲೀಸರನ್ನು ಎಳೆದಾಡಿ ಅವಾಂತರ ಸೃಷ್ಟಿ ಮಾಡಿದ ಮಹಿಳೆಯನ್ನು ಸಾರ್ವಜನಿಕರ ಸಹಾಯದಿಂದ ಬಂಧಿಸಿ ಪೊಲೀಸರು ಬೆಂಕಿ ನಂದಿಸಿದರು.

ಮಹಿಳೆ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಅಮಾವಾಸ್ಯೆ ಬೈಲು ಮತ್ತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಾವುದೇ ಕೋರ್ಟು ವಾರಂಟ್‌ಗಳಿಗೂ ಕ್ಯಾರೇ ಮಾಡದ ಈ ಮಹಿಳೆ ಕೋರ್ಟ್‌ಗಳಿಗೆ ಹಾಜರಾಗಿರಲಿಲ್ಲ. ಇದೀಗ ಮಹಿಳೆಯ ಬೆಂಕಿ, ಹಲ್ಲೆ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ!

ಇದನ್ನೂ ಓದಿ: Assault Case: ಉಬರ್ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ! ಅಲ್ಲಿ ಏನಾಯಿತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Malpe Beach: ಕುಟುಂಬದೊಂದಿಗೆ ಬಂದಿದ್ದ ಶ್ರೇಯಸ್ ಸಮುದ್ರದಲ್ಲಿ ಆಟವಾಡುತ್ತಿದ್ದ. ಈ ವೇಳೆ ಸಮುದ್ರದ ಅಲೆಗಳು ಹೆಚ್ಚಿದ್ದು, ಶ್ರೇಯಸ್‌ ನಿಯಂತ್ರಣ ತಪ್ಪಿದ್ದಾನೆ. ಹೀಗಾಗಿ ಮುಳುಗಳು ಆರಂಭಿಸಿದ್ದಾನೆ. ಇದನ್ನು ಕಂಡ ಲೈಫ್‌ ಗಾರ್ಡ್‌ಗಳು ಕೂಡಲೇ ಕಾರ್ಯಾಚರಣೆಗಳಿದು ಆತನನ್ನು ರಕ್ಷಣೆ ಮಾಡಿದ್ದಾರೆ. ಶ್ರೇಯಸ್‌ಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಅಲ್ಲಿಂದ ಕುಟುಂಬದವರು ತೆರಳಿದ್ದಾರೆ.

VISTARANEWS.COM


on

Rescue of a boy who drowned at Malpe beach Two boys die after taking bath in Sindagi
Koo

ವಿಜಯಪುರ/ಉಡುಪಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಸ್ನಾನಕ್ಕೆಂದು ಬಾವಿಗೆ ಇಳಿದಿದ್ದ ಇಬ್ಬರು ಬಾಲಕರು (Drowned in well) ಮೃತಪಟ್ಟಿದ್ದರೆ, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ (Malpe Beach) ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಿಸಿಲಿನ ಬೇಗೆಯಿಂದ ಸ್ನಾನಕ್ಕೆಂದು ಬಾವಿಗೆ ಇಳಿದಿದ್ದ ಬಾಲಕರಿಬ್ಬರು ಮೃತಪಟ್ಟಿದ್ದಾರೆ. ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಮೃತ ಬಾಲಕರು ಎಂದು ಗುರುತಿಸಲಾಗಿದೆ. ಈಜಲು ಬಾರದೆ ಇಬ್ಬರು ಗೆಳೆಯರು ಮೃತಪಟ್ಟಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rescue of a boy who drowned at Malpe beach Two boys die after taking bath in Sindagi
‌ಮೃತ ಸೋಮಶೇಖರ್ ಮತ್ತು ಮಲ್ಲಿಕ್

ಮಲ್ಪೆ ಬೀಚ್‌ನಲ್ಲಿ ಬಾಲಕನ ರಕ್ಷಣೆ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಸಮುದ್ರದಲ್ಲಿ ಆಟವಾಡುತ್ತಾ ನೀರು ಪಾಲಾಗುತ್ತಿದ್ದ ಬಾಲಕನನ್ನು ಲೈಫ್ ಗಾರ್ಡ್‌ಗಳು ಗಮನಿಸಿದ್ದರಿಂದ ರಕ್ಷಣೆ ಸಾಧ್ಯವಾಗಿದೆ.

ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ಬಚಾವಾದ ಬಾಲಕ. ಕುಟುಂಬದೊಂದಿಗೆ ಬಂದಿದ್ದ ಶ್ರೇಯಸ್ ಸಮುದ್ರದಲ್ಲಿ ಆಟವಾಡುತ್ತಿದ್ದ. ಈ ವೇಳೆ ಸಮುದ್ರದ ಅಲೆಗಳು ಹೆಚ್ಚಿದ್ದು, ಶ್ರೇಯಸ್‌ ನಿಯಂತ್ರಣ ತಪ್ಪಿದ್ದಾನೆ. ಹೀಗಾಗಿ ಮುಳುಗಳು ಆರಂಭಿಸಿದ್ದಾನೆ. ಇದನ್ನು ಕಂಡ ಲೈಫ್‌ ಗಾರ್ಡ್‌ಗಳು ಕೂಡಲೇ ಕಾರ್ಯಾಚರಣೆಗಳಿದು ಆತನನ್ನು ರಕ್ಷಣೆ ಮಾಡಿದ್ದಾರೆ. ಶ್ರೇಯಸ್‌ಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಅಲ್ಲಿಂದ ಕುಟುಂಬದವರು ತೆರಳಿದ್ದಾರೆ.

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಇಡುಕ್ಕಿ(ಕೇರಳ): ಮಾನಸಿಕ ಅಸ್ವಸ್ಥ (mentally challenged) 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ (Physical Abuse) ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ 44 ವರ್ಷದ ವ್ಯಕ್ತಿಯೊಬ್ಬನಿಗೆ ಕೇರಳ (kerala) ನ್ಯಾಯಾಲಯವು ಸೋಮವಾರ ಒಟ್ಟು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ದೇವಿಕುಲಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (POCSO) ನ್ಯಾಯಾಧೀಶ ಸಿರಾಜುದ್ದೀನ್ ಪಿ.ಎ. ಈ ಮಹತ್ವದ ಆದೇಶವನ್ನು ನೀಡಿದ್ದಾರೆ. ಸಂತ್ರಸ್ತೆಯ ತಾಯಿಯ ಸ್ನೇಹಿತನಾಗಿದ್ದ ವ್ಯಕ್ತಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಹಲವು ಪ್ರಕರಣಗಳಡಿ ಒಟ್ಟು 106 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಮಿಜು ಕೆ. ದಾಸ್ ಹೇಳಿದ್ದಾರೆ.

ಇದನ್ನೂ ಓದಿ: Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

ಶಿಕ್ಷೆಯನ್ನು ಏಕಕಾಲದಲ್ಲಿ ಪೂರೈಸಬೇಕಾಗುತ್ತದೆ. ಆದರೆ, ಈ ಅಪರಾಧಿಗೆ ನೀಡಲಾದ ಜೈಲು ಶಿಕ್ಷೆಗಳಲ್ಲಿ ಗರಿಷ್ಠ 22 ವರ್ಷಗಳಾಗಿವೆ. ಅಂದರೆ ಅವರು 22 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಆರೋಪಿಗೆ ನ್ಯಾಯಾಲಯವು 60,000 ರೂ. ದಂಡವನ್ನೂ ವಿಧಿಸಿದೆ. ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಅಪರಾಧಿ ಹೆಚ್ಚುವರಿ 22 ತಿಂಗಳ ಕಠಿಣ ಸಜೆ ಅನುಭವಿಸಬೇಕಾಗುತ್ತದೆ.

ಆರೋಪಿಯು ದಂಡವನ್ನು ಪಾವತಿಸಿದರೆ ಇಡುಕ್ಕಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂತ್ರಸ್ತ ಪರಿಹಾರ ಯೋಜನೆಯಿಂದ ಬಾಲಕಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2022ರಲ್ಲಿ ನಡೆದ ಘಟನೆ

2022ರಲ್ಲಿ ತ್ರಿಶೂರ್ ಮೂಲದ ಈ ವ್ಯಕ್ತಿಯು ಕೆಲಸದ ನಿಮಿತ್ತ ಅಡಿಮಾಲಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಹುಡುಗಿಯ ತಾಯಿಯೊಂದಿಗೆ ಹೋಟೆಲ್‌ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಈತ ಆಕೆಯ ಜತೆ ಸ್ನೇಹ ಬೆಳೆಸಿದ್ದ. ಅನಂತರ ಆಕೆಯ ಮನೆಯಲ್ಲಿಯೇ ಇದ್ದ.

ಆದರೆ, ಬಾಲಕಿಯ ತಾಯಿ ಮತ್ತು ಸಹೋದರರು ಮನೆಯಲ್ಲಿ ಇಲ್ಲದಿದ್ದಾಗ ಆರೋಪಿಯು ಬಾಲಕಿಯನ್ನು ಲೈಂಗಿಕವಾಗಿ ಶೋಷಿಸಲು ಪ್ರಾರಂಭಿಸಿದ್ದಾನೆ. ಈ ಘಟನೆಯನ್ನು ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಆರೋಗ್ಯ ತೊಂದರೆಯಿಂದಾಗಿ ತಾಯಿ ಬಾಲಕಿಯನ್ನು ಆದಿಮಾಲಿ ತಾಲೂಕು ಆಸ್ಪತ್ರೆಗೆ ಕರೆತಂದಾಗ ಬಾಲಕಿ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ಕುರಿತು ವೈದ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇಡುಕ್ಕಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಯ ಗರ್ಭಪಾತವಾಗಿದೆ. ಬಳಿಕ ಬಾಲಕಿ ಮತ್ತು ಗರ್ಭಪಾತವಾದ ಭ್ರೂಣದ ವೈದ್ಯಕೀಯ ಮಾದರಿಗಳ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಇದರಿಂದ ಆರೋಪಿಯನ್ನು ಪತ್ತೆ ಹಚ್ಚಲಾಗಿತ್ತು. ಈ ಪ್ರಕರಣದಲ್ಲೀಗ ಆರೋಪಿಗೆ ಶಿಕ್ಷೆಯಾಗಿದೆ.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Columbia University
ವಿದೇಶ8 mins ago

Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

High-tec Gadget
ತಂತ್ರಜ್ಞಾನ20 mins ago

High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌

hassan pen drive case hd revanna prajwal revanna
ಕ್ರೈಂ29 mins ago

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Bhavyashree Poojary exit Neenade Naa Serial
ಕಿರುತೆರೆ31 mins ago

Bhavyashree Poojary: ರಮೇಶ್‌ ಅರವಿಂದ್‌ ನಿರ್ಮಾಣದ ಧಾರಾವಾಹಿಗೆ ಗುಡ್‌ಬೈ ಹೇಳಿದ ಭವ್ಯಶ್ರೀ ಪೂಜಾರಿ! ಕಾರಣವೇನು?

Heat Wave
ದೇಶ56 mins ago

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

SS Rajamouli Announces Baahubali Crown of Blood Animated Series
ಟಾಲಿವುಡ್57 mins ago

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

Viral video
ವೈರಲ್ ನ್ಯೂಸ್1 hour ago

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

lok sabha election 2024 voting
ಪ್ರಮುಖ ಸುದ್ದಿ1 hour ago

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Aamir Khan on collaborating with SRK, Salman Khan
ಸಿನಿಮಾ1 hour ago

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Godrej Group
ದೇಶ2 hours ago

Godrej Group: ಶತಮಾನದ ಇತಿಹಾಸ ಹೊಂದಿರುವ ಗೋದ್ರೇಜ್‌ ಗ್ರೂಪ್‌ ಇಬ್ಬಾಗ; ಎರಡು ಕುಟುಂಬಗಳಲ್ಲಿ ಆಡಳಿತ ವಿಭಜನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌