ಉತ್ತರ ಕನ್ನಡ
Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ
Uttara Kannada News: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ಐವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಕಾರವಾರ: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾ.22ರಿಂದ 25ರವರೆಗೆ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ (Uttara Kannada News) ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಮೂವರು ಪ್ರಥಮ ಸ್ಥಾನ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಾಕ್ಪ್ರತಿಯೋಗಿತಾ ಸ್ಪರ್ಧೆಯ ಸಾಹಿತ್ಯ ಭಾಷಣದಲ್ಲಿ ನಾಗರಾಜ ಭಟ್ಟ ಪ್ರಥಮ, ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ ಗಣೇಶ ಪ್ರಸಾದ ಭಟ್ಟ ಪ್ರಥಮ, ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ವಿನಾಯಕ ಭಟ್ಟ ದ್ವಿತೀಯ, ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಸುಮಂತ್ ಜೋಶಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೆಯೇ ಇದೇ ಶಾಲೆಯಲ್ಲಿ ಅಧ್ಯಯನ ಮಾಡಿದ ಪಿಎಚ್ಡಿ ವಿದ್ಯಾರ್ಥಿ ಕುಮಾರ ಹೆಗಡೆ ಅಕ್ಷರಶ್ಲೋಕಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 14 ಚಿನ್ನದ ಪದಕ ಪಡೆದು ಕರ್ನಾಟಕ ರಾಜ್ಯವು ಸತತ 41ನೇ ಬಾರಿ ವಿಜಯ ವೈಜಯಂತೀ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇದನ್ನೂ ಓದಿ | ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ!
ವೇದಭಾಷ್ಯ ಭಾಷಣದಲ್ಲಿ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ
ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆಯ ಕೃಷ್ಣ ಯಜುರ್ವೇದ ವಿದ್ಯಾರ್ಥಿಯಾದ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ಪಾಠಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿ.ಪ್ರಸಾದ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸ್ವರ್ಣವಲ್ಲೀ ಶ್ರೀಗಳು, ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ
Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ
Weather report: ಉತ್ತರ ಒಳನಾಡಿನಲ್ಲಿ ಬ್ರೇಕ್ ನೀಡಿರುವ ಮಳೆರಾಯ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ (Rain News) ಅಬ್ಬರಿಸಲಿದ್ದಾನೆ. ಭಾನುವಾರ (ಮೇ 28) ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಗಂಟೆಗೆ 30-40 ಕಿ.ಮೀ ವ್ಯಾಪಿಸಲಿದೆ.
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ಉಡುಪಿ
Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ
Rising temperature: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಕಾದ ಕಾವಲಿಯಂತಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮಳೆ ತೀವ್ರತೆ ಕಡಿಮೆ ಆಗಿದ್ದು, ಇನ್ನೊಂದು ವಾರ ತಾಪಮಾನದಲ್ಲಿ (Heat wave) ಏರಿಳಿತ ಆಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆಯಾದರೂ ಹಲವು ಕಡೆ ಬಿಸಿಲು ಝಳಪಿಸಲಿದ್ದು, ನಾಗರಿಕರು ಮತ್ತಷ್ಟು ಹೈರಾಣಾಗಬಹುದು ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಜಿಲ್ಲೆಯಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ ಮತ್ತು ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ಚಿತ್ರದುರ್ಗದಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ರಾಜಧಾನಿಯಲ್ಲಿ ಗುಡುಗಲಿರುವ ವರುಣ
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರಲ್ಲಿ ಮಂಡೆ ಬಿಸಿ
ರಾಜ್ಯದಲ್ಲಿ ಶುಕ್ರವಾರದಂದು (ಮೇ 26) ಗರಿಷ್ಠ ಉಷ್ಣಾಂಶ 39.0 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಅಂಕೋಲ, ವಿಜಯಪುರದ ದೇವರಹಿಪ್ಪರಿಗಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಹೊನ್ನಾವರ ಹಾಗೂ ಉಡುಪಿಯ ಕೋಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ: Video: ಹಿಂದು ಹುಡುಗನೊಂದಿಗೆ ಮುಸ್ಲಿಂ ಹುಡುಗಿ ಡಿನ್ನರ್; ಸ್ಕೂಟರ್ ಅಡ್ಡಗಟ್ಟಿ ಗಲಾಟೆ ಮಾಡಿದ ಗುಂಪು, ಚಾಕು ಇರಿತ
ಶನಿವಾರ ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ
ಶನಿವಾರ (ಮೇ 27) ಕರಾವಳಿಯಲ್ಲಿ ಬೆಳ್ಳಂ ಬೆಳಗ್ಗೆ ವರುಣನ ಅಬ್ಬರ ಜೋರಾಗಿತ್ತು. ಬಿಸಿಲಿಗೆ ಕಾದಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕಾರವಾರ, ಅಂಕೋಲಾ ತಾಲೂಕು ಸುತ್ತಮುತ್ತ ಒಂದೂವರೆ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ.
ಸಂಜೆ ವೇಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಶನಿವಾರ (ಮೇ 27) ಸಂಜೆ ಬಳಿಕ ಬೆಂಗಳೂರು ನಗರ, ಧಾರವಾಡ, ಕಲಬುರಗಿ, ಕೋಲಾರ, ತುಮಕೂರಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Weather report: ಬೆಂಗಳೂರಲ್ಲಿ ತಣ್ಣಗಾದ ವರುಣ; ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
Weather Report: ರಾಜ್ಯಾದ್ಯಂತ ವರುಣ ತಣ್ಣಗಾಗಿದ್ದು, ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ. ಜತೆಗೆ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆಯೂ ಇದೆ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ಮಳೆಯಾಗಲಿದೆ.
ಕಳೆದೆರಡು ದಿನಗಳಿಂದ ಬೆಂಗಳೂರಲ್ಲಿ ವರುಣ ತಣ್ಣಗಾಗಿದ್ದು, ಶನಿವಾರದಂದು ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನದ ಸಮಯ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನ ಏರಿಕೆ ಸಾಧ್ಯತೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Cabinet Expansion Live : ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 26 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್ ಚಾಲಕ ಅಪಘಾತ ತಡೆಯಲು ಬ್ರೇಕ್ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್ ಪಲ್ಟಿಯಾಗಿದೆ.
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ನಡೆದಿದೆ. ಅಪಘಾತದಲ್ಲಿ (Honnavar News) ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.
ಮಂಕಿ ಬಳಿ ಒಳರಸ್ತೆಗೆ ಕಾರು ತಿರುಗಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಹಿಂದಿನಿಂದ ಬಸ್ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದನಾದರೂ ಕಾರಿಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕಾರಿನಲ್ಲಿದ್ದ ಜಿಲ್ಲಾ ಪಂಚಾಯಿತಿ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Theft Case: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮಹಿಳೆಯರ ತಲೆ ಒಡೆದು ದರೋಡೆ ಮಾಡಿದ ಕಿರಾತಕಿ
ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ; ಪಿಡಿಒ ಅಮಾನತು
ರಾಯಚೂರು: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಜಾಗೀರ ಜಾಡಲದಿನ್ನಿ ಪಿಡಿಒ ರೇಣುಕಾ ಎಂಬುವವರನ್ನು ಅಮಾನತು ಮಾಡಲಾಗಿದೆ.
ದೇವದುರ್ಗ ತಾಲೂಕು ರೇಕಲಮರಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪೈಪ್ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗಿತ್ತು. ಆ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆಗೆ ಪಿಡಿಒ ನಿರ್ಲಕ್ಷ್ಯ ಕಾರಣ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ದೇವದುರ್ಗ ಇಒ ನೀಡಿದ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಒ ರೇಣುಕಾ ಅವರನ್ನು ರಾಯಚೂರು ಜಿ.ಪಂ. ಸಿಇಒ ಶಶಿಧರ್ ಕುರೇರ್ ಆದೇಶ ಹೊರಡಿಸಿದ್ದಾರೆ.
-
ಕರ್ನಾಟಕ23 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ23 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ22 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ17 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್13 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ6 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ14 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER4 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?