Unemployment in Karnataka: ನಿರುದ್ಯೋಗ 'ಗ್ಯಾರಂಟಿ'; ರಾಜ್ಯದಲ್ಲಿ 2,55 ಲಕ್ಷ ಸರ್ಕಾರಿ ಹುದ್ದೆ ಖಾಲಿ! ಯುವ ಜನರ ಆಕ್ರೋಶ - Vistara News

ಕರ್ನಾಟಕ

Unemployment in Karnataka: ನಿರುದ್ಯೋಗ ‘ಗ್ಯಾರಂಟಿ’; ರಾಜ್ಯದಲ್ಲಿ 2,55 ಲಕ್ಷ ಸರ್ಕಾರಿ ಹುದ್ದೆ ಖಾಲಿ! ಯುವ ಜನರ ಆಕ್ರೋಶ

Unemployment in Karnataka: ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ವಿಸ್ತಾರ ನ್ಯೂಸ್ ʼನಿರುದ್ಯೋಗ ಗ್ಯಾರಂಟಿʼ ಎಂಬ ವಿಶೇಷ ಅಭಿಯಾನ ಆರಂಭಿಸಿದ್ದು, ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲಾ ಕಡೆಯೂ ಬರೀ ಹಗರಣಗಳೇ? ಯಾರಿಗೆ ಬೇಕು ಸರ್ಕಾರದ ಗ್ಯಾರಂಟಿಗಳು. ಮೊದಲು ಉದ್ಯೋಗ ಕೊಡಲಿ ಎಂದು ಉದ್ಯೋಗಾಕಾಂಕ್ಷಿಗಳು ಒತ್ತಾಯಿಸಿದ್ದಾರೆ. ಇನ್ನು ವಿಸ್ತಾರ ನ್ಯೂಸ್‌ ಅಭಿಯಾನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ರಾಜಕೀಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Unemployment in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
VISTARA-VISHESHA

ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗವಕಾಶ ಸಿಗದ ಹಿನ್ನೆಲೆಯಲ್ಲಿ ಯುವ ಜನ ಬೇಸತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬರೋಬ್ಬರಿ 2,55,920 ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ವಿಸ್ತಾರ ನ್ಯೂಸ್ ʼನಿರುದ್ಯೋಗ ಗ್ಯಾರಂಟಿʼ (Unemployment in Karnataka) ಎಂಬ ವಿಶೇಷ ಅಭಿಯಾನ ಆರಂಭಿಸಿದ್ದು, ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಯಾವುದೇ ಸರ್ಕಾರ ಬಂದರೂ ನಿರುದ್ಯೋಗ ಸಮಸ್ಯೆ ಪರಿಹರಿಸುವುದೇ ದೊಡ್ಡ ಸವಾಲು ಆಗಿರುತ್ತದೆ. ಆದರೆ, ಚುನಾವಣೆಯಲ್ಲಿ ಜನರ ಮತ ಸೆಳೆಯಲು ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಯುವಜನತೆಗೆ ಯಾಕೆ ಉದ್ಯೋಗ ಗ್ಯಾರಂಟಿ ನೀಡುತ್ತಿಲ್ಲ ಎಂದು ಉದ್ಯೋಗಾಕಾಂಕ್ಷಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಹೊಸ ಉದ್ಯೋಗ ಸೃಷ್ಟಿಸದಿದ್ದರೂ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನಾದರೂ ಭರ್ತಿ ಮಾಡಬೇಕಲ್ಲವೇ ಎಂಬುವುದು ರಾಜ್ಯದ ಯುವ ಜನತೆಯ ಪ್ರಶ್ನೆಯಾಗಿದೆ.

ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

ಸಣ್ಣ ಕೈಗಾರಿಗಳು

ಮಂಜೂರಾದ ಹುದ್ದೆಗಳು: 563
ಕಾರ್ಯನಿರತ ಸಿಬ್ಬಂದಿ: 201
ಖಾಲಿ ಹುದ್ದೆಗಳು: 362
ಶೇ. ಖಾಲಿ ಹುದ್ದೆ: 64%

ನಗರಾಭಿವೃದ್ಧಿ ಇಲಾಖೆ

ಮಂಜೂರಾದ ಹುದ್ದೆಗಳು: 1447
ಕಾರ್ಯನಿರತ ಸಿಬ್ಬಂದಿ: 559
ಖಾಲಿ ಹುದ್ದೆಗಳು: 888
ಶೇ.ಖಾಲಿ ಹುದ್ದೆ: 61%

ಸಾರಿಗೆ ಇಲಾಖೆ

ಮಂಜೂರಾದ ಹುದ್ದೆಗಳು: 2826
ಕಾರ್ಯನಿರತ ಸಿಬ್ಬಂದಿ: 1159
ಖಾಲಿ ಹುದ್ದೆಗಳು: 1667
ಶೇ.ಖಾಲಿ ಹುದ್ದೆ: 59%

ಗೃಹ ಇಲಾಖೆ

ಮಂಜೂರಾದ ಹುದ್ದೆಗಳು: 1,27,481
ಕಾರ್ಯನಿರತ ಸಿಬ್ಬಂದಿ: 1,05,412
ಖಾಲಿ ಹುದ್ದೆಗಳು: 22,069
ಶೇ.ಖಾಲಿ ಹುದ್ದೆ: 17%

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ

ಮಂಜೂರಾದ ಹುದ್ದೆಗಳು: 11099
ಕಾರ್ಯನಿರತ ಸಿಬ್ಬಂದಿ: 5093
ಖಾಲಿ ಹುದ್ದೆಗಳು: 6006
ಶೇ.ಖಾಲಿ ಹುದ್ದೆ: 54%

ರೇಷ್ಮೆ ಇಲಾಖೆ

ಮಂಜೂರಾದ ಹುದ್ದೆಗಳು: 4560
ಕಾರ್ಯನಿರತ ಸಿಬ್ಬಂದಿ: 1552
ಖಾಲಿ ಹುದ್ದೆಗಳು: 3008
ಶೇ.ಖಾಲಿ ಹುದ್ದೆ: 66%

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ

ಮಂಜೂರಾದ ಹುದ್ದೆಗಳು: 602
ಕಾರ್ಯನಿರತ ಸಿಬ್ಬಂದಿ: 242
ಖಾಲಿ ಹುದ್ದೆಗಳು: 360
ಶೇ.ಖಾಲಿ ಹುದ್ದೆ: 60%

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಮಂಜೂರಾದ ಹುದ್ದೆಗಳು: 12269
ಕಾರ್ಯನಿರತ ಸಿಬ್ಬಂದಿ: 7153
ಖಾಲಿ ಹುದ್ದೆಗಳು: 5116
ಶೇ.ಖಾಲಿ ಹುದ್ದೆ: 42%

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌

ಮಂಜೂರಾದ ಹುದ್ದೆಗಳು: 28198
ಕಾರ್ಯನಿರತ ಸಿಬ್ಬಂದಿ: 17252
ಖಾಲಿ ಹುದ್ದೆಗಳು: 10,946
ಶೇ.ಖಾಲಿ ಹುದ್ದೆ: 39%

ಇದನ್ನೂ ಓದಿ | Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

ವಿಸ್ತಾರನ್ಯೂಸ್ ಅಭಿಯಾನಕ್ಕೆ ಧ್ವನಿಗೂಡಿಸಿದ ಉದ್ಯೋಗಾಕಾಂಕ್ಷಿಗಳು

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ಬೇಸರ ಹೊರಹಾಕಿದ್ದು, ವಿಸ್ತಾರ ನ್ಯೂಸ್ ಅಭಿಯಾನಕ್ಕೆ ಧ್ವನಿಗೂಡಿಸಿದ್ದಾರೆ.

ಹಲವು ವರ್ಷದಿಂದ ಪರಿಕ್ಷೆಗೆ ತಯಾರಿ ನಡೆಸುತ್ತಿದ್ದೇವೆ. ಸರ್ಕಾರ ನೇಮಕಾತಿ ನಡೆಸುತ್ತಿಲ್ಲ. ವಯಸ್ಸು ಮೀರುತ್ತಿದ್ದು, ಅಧ್ಯಯನಕ್ಕೆ ಪ್ರತಿ ತಿಂಗಳು ಸಾವಿರಾರು ರೂಪಾಯಿ ಖರ್ಚು ಮಾಡಬೇಕು. ಕೆಲಸವಿಲ್ಲದೆ ನಾವು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಎಲ್ಲಾ ಕಡೆಯೂ ಬರೀ ಹಗರಣಗಳೇ? ಯಾರಿಗೆ ಬೇಕು ಸರ್ಕಾರದ ಗ್ಯಾರಂಟಿಗಳು. ಮೊದಲು ಉದ್ಯೋಗ ಕೊಡಲಿ ಎಂದು ಉದ್ಯೋಗಾಕಾಂಕ್ಷಿಗಳು ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ ಇದೂವರೆಗೂ ಕೆಪಿಎಸ್‌ಸಿ 19 ನೇಮಕಾತಿ ಅಧಿಸೂಚನೆ ಹೊರಡಿಸಿದೆ. 2243 ಹುದ್ದೆಗಳಿಗೆ ರಾಜ್ಯದ 10,79,236 ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ಎಲ್ಲಾ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿದೆ. ಎಲ್ಲವೂ ತಾತ್ಕಾಲಿಕ ಪಟ್ಟಿ ಬಿಡುಗಡೆ, ದಾಖಲೆಗಳ ಪರಿಶೀಲನೆ, ಪೂರ್ವ ಭಾವಿ ಪರೀಕ್ಷಾ ಹಂತದಲ್ಲೇ ಇವೆ ಎಂದು ನೇಮಕಾತಿ ವಿಳಂಬಕ್ಕೆ ಕಿಡಿಕಾರಿದ್ದಾರೆ.

ಬಿ.ವೈ. ವಿಜಯೇಂದ್ರ ಸೇರಿ ಹಲವು ಜನಪ್ರತಿನಿಧಿಗಳ ಮೆಚ್ಚುಗೆ

ವಿಸ್ತಾರ ನ್ಯೂಸ್ ಅಭಿಯಾನದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ನಡೆಗೂ, ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ. ಒಂದೆಡೆ ಕೇಂದ್ರ ಸರ್ಕಾರವನ್ನು ದೂರುತ್ತಾರೆ, ಹೆಚ್ಚು ಹುದ್ದೆ ಸೃಷ್ಟಿ ಮಾಡಲು ವಿಫಲ ಆಗಿದೆ ಎಂದು ಹೇಳುತ್ತಾರೆ. ಮತ್ತೊಂದೆಡೆ ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲು ಇಡಬೇಕು ಎಂದು ನಾಟಕ ಆಡುತ್ತಾರೆ. ತಮ್ಮದೆ ಸರ್ಕಾರದಲ್ಲಿ ಎರಡುವರೆ ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ವಿಧಿಯಡಿ ಮೀಸಲಾತಿ ಜಾರಿಯಾಗಿದೆ. ಅಲ್ಲಿಯೂ 30 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿವೆ. ಸರ್ಕಾರ ಪ್ರಾಮಾಣಿಕವಾಗಿ ಆಲೋಚನೆ ಮಾಡಿದ್ದರೇ ಖಾಲಿ ಇರುವ ಹುದ್ದೆಗಳು ಭರ್ತಿ ಮಾಡಲು ತತ್‌ಕ್ಷಣ ಕ್ರಮ ಕೈಗೊಳ್ಳಬೇಕು. ವಿಸ್ತಾರ ನ್ಯೂಸ್‌ಗೆ ಅಭಿನಂದೆ ಸಲ್ಲಿಸುತ್ತೇನೆ. ಬಹಳ ಪ್ರಮುಖ ವಿಚಾರವನ್ನು ವಿಸ್ತಾರ ನ್ಯೂಸ್ ಕೈಗೆತ್ತಿಗೊಂಡಿದೆ ಎಂದು ಶ್ಲಾಘಿಸಿದರು.

ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪ

ವಿಸ್ತಾರ ನ್ಯೂಸ್‌ನ ನಿರುದ್ಯೋಗ ಗ್ಯಾರಂಟಿ ಅಭಿಯಾನಕ್ಕೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾದುದು, ಈ ಸರ್ಕಾರ ಗ್ಯಾರಂಟಿ ಕೊಡುವುದರ ಬದಲಿಗೆ ನಿರುದ್ಯೋಗಿಗಳ ಕೈಗೆ ಉದ್ಯೋಗ ಕೊಡುವ ಗ್ಯಾರಂಟಿ ಕೊಡಬೇಕಿತ್ತು. ವಾಜಪೇಯಿ ಯುವಕರ ಕೈಗೆ ಉದ್ಯೋಗ ಕೊಡಿ ಎಂದು ಹೇಳಿದ್ದರು. ನಿರುದ್ಯೋಗ ಹೆಚ್ಚು ಮಾಡುವ ಗ್ಯಾರಂಟಿಗಳು ಯಾರಿಗೆ ಬೇಕಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ರಾಜ್ಯದಲ್ಲಿ 2.56 ಲಕ್ಷ ನಿರುದ್ಯೋಗ ಇಟ್ಟುಕೊಂಡು ಹೇಗೆ ಕೆಲಸ ಮಾಡುತ್ತಿದ್ದಾರೆ. ಕಂದಾಯ, ಶಿಕ್ಷಣ, ಆರೋಗ್ಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಾವಿರಾರು ಹುದ್ದೆ ಖಾಲಿ ಇದೆ. ಇದನ್ನು ನಾನು ನಾಳೆ ವಿಧಾನ ಪರಿಷತ್ ಒಳಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest10 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest12 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest15 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest16 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌