Site icon Vistara News

Amit Shah: ತಡರಾತ್ರಿ 2.30ಕ್ಕೆ ಬೀದರ್​ಗೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ; ಇಂದು ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ

Union Home Minister Amit Shah reached to Bidar to inaugurate vijay sankalp abhiyan

#image_title

ಬೀದರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ತಡರಾತ್ರಿ 2.30ರ ಹೊತ್ತಿಗೆ ಬೀದರ್​ಗೆ ಆಗಮಿಸಿದ್ದಾರೆ. ರಾತ್ರಿ 10.45ಕ್ಕೆ ಅಮಿತ್​ ಶಾ ಬೀದರ್​ಗೆ ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ತಡರಾತ್ರಿ ಅವರು, ವಾಯುಸೇನೆ ವಿಮಾನದ ಮೂಲಕ ಬೀದರ್ ಏರ್​ಬೇಸ್​ಗೆ ಬಂದು ಇಳಿದಿದ್ದಾರೆ. ಅಮಿತ್​ ಶಾ (Amit Shah) ಅವರು ಫೆ.23ರಂದು ಬಳ್ಳಾರಿಗೆ ಆಗಮಿಸಿದ್ದರು. ಅದರ ಬೆನ್ನಲ್ಲೇ ಇಂದು (ಮಾರ್ಚ್​ 3) ಬೀದರ್​ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ಗುರುದ್ವಾರ ಶ್ರೀ ನಾನಕ್ ಝೀರಾ ಸಾಹೀಬ್‌ ಮತ್ತು ಉಗ್ರನರಸಿಂಹ ದೇವಸ್ಥಾನಕ್ಕೆ ಭೇಟಿಕೊಡಲಿದ್ದಾರೆ. 11.45ಕ್ಕೆ ಬೀದರ್ ಏರ್​ಬೇಸ್​​ನಿಂದ ವಾಯುಸೇನೆ ಹೆಲಿಕಾಪ್ಟರ್​ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಅನುಭವ ಮಂಟಪಕ್ಕೆ ತೆರಳಲಿದ್ದಾರೆ. ಇಲ್ಲಿ ಮಧ್ಯಾಹ್ನ 12.20 ಗಂಟೆಗೆ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು ಉದ್ಘಾಟಿಸುವರು. ನಂತರ ಥೇರು ಮೈದಾನದಲ್ಲಿ ಬೃಹತ್​ ಬಹಿರಂಗ ಸಮಾವೇಶ ಇದೆ. ಅಮಿತ್​ ಶಾ ಅವರಿಗೆ ಈ ಎಲ್ಲ ಕಾರ್ಯಕ್ರಮಗಳಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಾಥ್​ ಕೊಡಲಿದ್ದಾರೆ. ಸಂಜೆ 5.10ಕ್ಕೆ ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ 4ನೇ ರಥ ಯಾತ್ರೆಯನ್ನು ಉದ್ಘಾಟಿಸಿ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ದೆಹಲಿಗೆ ಹಿಂತಿರುಗಲಿದ್ದಾರೆ.

ಇದನ್ನೂ ಓದಿ: Amit Shah: ಜೆಡಿಎಸ್‌ ಕುಟುಂಬದಲ್ಲಿ ಎಲ್ಲರೂ ರಾಜಕೀಯದಲ್ಲಿದ್ದಾರೆ; ಅವರ ಮನೆ ಯಾರು ನಡೆಸ್ತಾರೆ?: ಅಮಿತ್ ಶಾ ಗೇಲಿ

Exit mobile version