Site icon Vistara News

Multi specialty hospital | ಉತ್ತರ ಕನ್ನಡ ಆಸ್ಪತ್ರೆ ಹೋರಾಟ: ಬೆಂಗಳೂರಿನಲ್ಲಿ ಇಂದು ಬೃಹತ್​ ಪ್ರತಿಭಟನೆ

Multi specialty

ಕಾರವಾರ/ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ (Multi specialty) ಬೇಡಿಕೆ ಹೆಚ್ಚಾಗಿದೆ. ಈ ಸಂಬಂಧ ಶನಿವಾರ (ಜು.30) ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10 ಗಂಟೆಗೆ ನೂರಾರು ಸಂಖ್ಯೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನರಿಂದ ಪ್ರತಿಭಟನೆ ನಡೆಯಲಿದೆ.

ಪ್ರಮುಖವಾಗಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಚಿತ್ರ ನಟ-ನಟಿಯರು, ಸಾಹಿತಿಗಳು ಹಾಗೂ ಭಾಗಿಯಾಗಲಿದ್ದಾರೆ. ಈ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಮುಖಾಂತರ ಅಭಿಯಾನ ಆರಂಭಗೊಂಡಿದೆ. ಪ್ರತಿಭಟನೆ ಬಳಿಕ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಮುಖಂಡರು ಸಿಎಂಗೆ ಮನವಿ ಸಲ್ಲಿಸಲಿದ್ದಾರೆ. ಸಿಎಂ ಆಗಸ್ಟ್‌ ಮೊದಲ ವಾರ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಆ ವೇಳೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಲ್ ಆಸ್ಪತ್ರೆ ಘೋಷಣೆ ಮಾಡಬೇಕೆಂದು ಒತ್ತಾಯಿಸಲಿದ್ದಾರೆ.

ಇದನ್ನೂ ಓದಿ | Multi specialty | ಉ.ಕ.ಕ್ಕೆ ಬರಲು ವೈದ್ಯರೇ ಒಪ್ಪುತ್ತಿಲ್ಲವೆಂದ ಶಾಸಕಿ; ಸಿಎಂ ಜತೆ ಚರ್ಚಿಸುವೆನೆಂದ ಆರೋಗ್ಯ ಸಚಿವ

2019ರಲ್ಲಿ ಈ ಮುಂಚೆ ಇದೇ ವಿಚಾರವಾಗಿ ಟ್ವಿಟರ್‌ ಅಭಿಯಾನ ಆಗಿತ್ತು. ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕ್ರಮದ ಬಗ್ಗೆ ಭರವಸೆ ನೀಡಿದ್ದರು. ಉತ್ತರ ಕನ್ನಡ ಮಟ್ಟಿಗೆ ಸುಸಜ್ಜಿತ ಆಸ್ಪತ್ರೆ ಕನಸಾಗೇ ಉಳಿದಿತ್ತು. ಜಿಲ್ಲೆಯಲ್ಲಿ ಎಲ್ಲೇ ಅಪಘಾತವಾದರೂ ಜೀವ ಕೈಯಲ್ಲಿ ಹಿಡಿದು ಆಂಬ್ಯುಲೆನ್ಸ್​ನಲ್ಲಿ ನೆರೆಯ ಜಿಲ್ಲೆಗಳಿಗೆ ಸಾಗಬೇಕಾದ ಅನಿವಾರ್ಯ ಒದಗಿದೆ. ಈ ನಿಟ್ಟಿನಲ್ಲಿ ಇದೀಗ ಉತ್ತರ ಕನ್ನಡದ ಜನಪ್ರತಿನಿಧಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ | Multi-Specialty Hospital | ಉತ್ತರ ಕನ್ನಡದ ಜನತೆಯ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲ

Exit mobile version