Uttara Kannada News Theft on the pretext of buying gold jewellery Arrest of 3 inter district accused Uttara Kannada News : ಚಿನ್ನಾಭರಣ ಖರೀದಿ ಸೋಗಿನಲ್ಲಿ ಕಳ್ಳತನ; 3 ಚಾಲಾಕಿ ಮಹಿಳೆಯರ ಬಂಧನ - Vistara News

ಉತ್ತರ ಕನ್ನಡ

Uttara Kannada News : ಚಿನ್ನಾಭರಣ ಖರೀದಿ ಸೋಗಿನಲ್ಲಿ ಕಳ್ಳತನ; 3 ಚಾಲಾಕಿ ಮಹಿಳೆಯರ ಬಂಧನ

Uttara Kannada News: ಚಿನ್ನಾಭರಣ ಖರೀದಿ ಮಾಡುವ ಸೋಗಿನಲ್ಲಿ ಶಿರಸಿಯ ಓಂಕಾರ ಜ್ಯುವೆಲ್ಲರಿ ಶಾಪ್ ಗೆ ಗದಗ್‌ದಿಂದ ಬಂದಿದ್ದ ಮೂವರು ಖತರ್ನಾಕ್ ಕಳ್ಳಿಯರು 93 ಸಾವಿರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

VISTARANEWS.COM


on

Theft on gold jewellery Arrest of 3 accused at shirasi
ಶಿರಸಿ ನಗರದ ಓಂಕಾರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ, ಪೊಲೀಸರ ಅತಿಥಿಯಾದ ಗದಗ್‌ ಮೂಲದ 3 ಮಹಿಳಾ ಆರೋಪಿಗಳು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಉಚಿತ ಬಸ್ ಪ್ರಯಾಣವನ್ನೇ ಬಂಡವಾಳವನ್ನಾಗಿಸಿಕೊಂಡ ಖತರ್ನಾಕ್ ಕಳ್ಳಿಯರು (Thieves) ಇದೀಗ ಹೊರ ಜಿಲ್ಲೆಯಿಂದ ಆಗಮಿಸಿ ಕಳ್ಳತನ (Theft) ನಡೆಸಿದ್ದು, ಶಿರಸಿ ನಗರದ ಜ್ಯುವೆಲ್ಲರಿ ಶಾಪ್‌ನಲ್ಲಿ (Jewellery Shop) ತಮ್ಮ ಕೈಚಳಕ ತೋರಿಸಿ, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಚಿನ್ನಾಭರಣ ಖರೀದಿ ಮಾಡುವ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್‌ನಲ್ಲಿ ತಮ್ಮ ಕೈಚಳಕ ತೋರಿದ ಚಾಲಾಕಿ ಮಹಿಳೆಯರು ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡಿ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Weather Report: ಕರಾವಳಿಯಲ್ಲಿ ಮುಂದುವರಿದ ಮಳೆಯಾಟ; ಒಳನಾಡಿನಲ್ಲಿ ಕೊಂಚ ಬ್ರೇಕ್‌

ಶಿರಸಿ ನಗರದ ಮಾರುಕಟ್ಟೆ ಸಮೀಪವಿರುವ ಓಂಕಾರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿದ್ದು, ಚಿನ್ನಾಭರಣ ಖರೀದಿ ಮಾಡುವ ಸೋಗಿನಲ್ಲಿ ಅಂಗಡಿ ನುಗ್ಗಿದ ಕಳ್ಳಿಯರು 93 ಸಾವಿರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಜ್ಯುವೆಲ್ಲರಿ‌ ಶಾಪಲ್ಲಿ ತಮ್ಮ ಕೈಚಳಕ ತೋರಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಗದಗ ಮೂಲದ ಸಂಗೀತಾ(42) ಶೋಭಾಬಾಯಿ(63) ಹುಬ್ಬಳಿ ಮೂಲದ ರಾಜೇಶ್ವರಿ (48) ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದು, ಈದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಡಿಎಸ್ಪಿ ಕೆ.ಎಲ್. ಗಣೇಶ್ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜಕುಮಾರ ಎಸ್. ಉಕ್ಕು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Yoga Day 2023: ಸೂರ್ಯ ನಮಸ್ಕಾರ… ಎಷ್ಟೊಂದು ಸಮಸ್ಯೆಗಳಿಗೆ ಪರಿಹಾರ!

ಘಟನೆಯ ಹಿನ್ನೆಲೆ ಏನು?

ಕಳೆದ ಜೂನ್ 15ರಂದು ಗದಗದಿಂದ ಆಗಮಿಸಿದ್ದ ಮೂವರು ಖತರ್ನಾಕ್ ಕಳ್ಳಿಯರು ಚಿನ್ನಾಭರಣ ಖರೀದಿ ಮಾಡುವ ನೆಪದಲ್ಲಿ ಶಿರಸಿಯ ಉರ್ದು ಶಾಲೆ ಪಕ್ಕದ ಮಾರುಕಟ್ಟೆಯಲ್ಲಿರುವ ಓಂಕಾರ ಜ್ಯುವೆಲ್ಲರಿ ಶಾಪ್‌ಗೆ ಬಂದಿದ್ದಾರೆ. ಸುಮಾರು ಮದ್ಯಾಹ್ನ 2 ಗಂಟೆಗೆ ಆಗಮಿಸಿದ ಕಳ್ಳಿಯರು ಚಿನ್ನಾಭರಣ ನೋಡುವ ನೆಪದಲ್ಲಿ ಮಾಲೀಕರನ್ನ ಯಾಮಾರಿಸಿ ಚಿನ್ನ- ಬೆಳ್ಳಿಯನ್ನ ಕಳ್ಳತನ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದರು. ನಂತರ ಓಂಕಾರ ಜ್ಯುವೆಲ್ಲರಿ ಶಾಪ್ ಮಾಲೀಕ ನಾಗೇಶ್ ನಾಯ್ಕ ಅಂಗಡಿಯಲ್ಲಿನ ಚಿನ್ನಾಭರಣ ಪರಿಶೀಲಿಸಿದಾಗ‌ ಚಿನ್ನಾಭರಣ ಕಳುವಾದ ಮಾಹಿತಿ‌ ಸಿಕ್ಕಿದೆ. ನಂತರ‌ ಸಿಸಿ ಕ್ಯಾಮರಾ ದೃಶ್ಯ ಚೆಕ್ ಮಾಡಿದ ನಾಗೇಶ್ ಕೂಡಲೇ ಕಳ್ಳಿಯರ ಕೈಚಳಕ ಗಮನಿಸಿದ್ದಾರೆ. ಕೂಡಲೇ ಬೆನ್ನಟ್ಟಿದ್ದ ಮಾಲೀಕ ನಾಗೇಶ್ ಶಿರಸಿ ಹಳೇ ಬಸ್‌ಸ್ಟಾಂಡ್ ನಲ್ಲಿ ಚಿನ್ನಾಭರಣ ಸಹಿತ ರೆಡ್ ಹ್ಯಾಂಡಾಗಿ ಹಿಡಿದಿದ್ದರು. ನಂತರ ಸಾರ್ವಜನಿಕರು ಜಮಾಯಿಸಿ ಖತರ್ನಾಕ್ ಕಳ್ಳಿಯರನ್ನ ಪೊಲೀಸರಿಗೆ ಒಪ್ಪಿಸಿದ್ದರು. ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Karnataka Weather Forecast : ರಾಜ್ಯದಲ್ಲಿ ಆಗಾಗ ಮಳೆಯು (Rain News) ದರ್ಶನ ಕೊಡುತ್ತಿದ್ದರೂ, ಸೂರ್ಯನ ಶಾಖಕ್ಕೆ ಭೂಮಿ ಕಾದ ಕೆಂಡವಾಗುತ್ತಿದೆ. ಬಿಸಿಲ ಧಗೆಯು ಹೆಚ್ಚಾಗುತ್ತಲೇ ಇದ್ದು, ಮಳೆಗಾಗಿ ತಾವರೆಕೆರೆ ಗ್ರಾ.ಪಂ ಪಿಡಿಓ ವರುಣ ದೇವನನ್ನು ಪ್ರತಿಷ್ಠಾಪಿಸಿ ತಲೆ ಮೇಲೆ ಹೊತ್ತು ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

By

Karnataka Weather Forecast
ದೇವರ ಮೊರೆ ಹೋದ ತಾವರೆಕೆರೆ ಗ್ರಾ.ಪಂ ಪಿಡಿಒ
Koo

ತುಮಕೂರು/ಬೆಂಗಳೂರು: ಬಿಸಿಲ ಬೇಗೆಗೆ ಬೇಸತ್ತ ಜನರು ಮಳೆಗಾಗಿ (Rain News) ದೇವರ ಮೊರೆ ಹೋಗುತ್ತಿದ್ದಾರೆ. ಮಳೆರಾಯನ (Karnataka Weather Forecast) ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಮಳೆಗಾಗಿ ಪೂಜೆ ನಡೆದಿದೆ.

ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು ಸ್ವತಃ ಮಳೆರಾಯನ ಹೊತ್ತು ಜಲಾಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು. ವರುಣ ದೇವನನ್ನು ಪ್ರತಿಷ್ಠಾಪಿಸಿ ನಂತರ ತಲೆ ಮೇಲೆ ಹೊತ್ತು ಮನೆ ಮನೆಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು. ಭೀಕರ ಬರಗಾಲ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

ಇನ್ನೂ‌ ಶನಿವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರದ ಎಂ.ಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 44.7 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

ಮತ್ತಷ್ಟು ದಿನ ಬಿಸಿಲ ತಾಪ

ರಣಬಿಸಿಲು, ಉಷ್ಣಗಾಳಿ ಹೊಡೆತಕ್ಕೆ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಮತ್ತಷ್ಟು ದಿನ ಬಿಸಿಲ ತಾಪ ಹೆಚ್ಚಾಗಲಿದ್ದು, ಆರೋಗ್ಯದ ಕಾಳಜಿ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉಷ್ಣತೆಯು ಇದ್ದಕ್ಕಿದ್ದಂತೆ ತೀಕ್ಷ್ಣವಾಗಿ ಮೇಲೇರಿ, ತನ್ನ ಸಾಮಾನ್ಯ ಮಟ್ಟವನ್ನು ಮೀರುವುದನ್ನು ಶಾಖದ ಅಲೆಗಳು ಅಥವಾ ಹೀಟ್‌ವೇವ್‌ ಎನ್ನಲಾಗುತ್ತದೆ. ಸದ್ಯ ಸಾಮಾನ್ಯ ಮಟ್ಟವನ್ನು ಮೀರಿ, ಉಷ್ಣತೆ ಮೇಲೇರುವುದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಸುಸ್ತು, ಆಯಾಸ, ಎಚ್ಚರ ತಪ್ಪುವುದು ಆಗಲಿದೆ. ಹೀಗಾಗಿ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.

ಮೇ.8ರವೆರೆಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಲಿದೆ.

ಮಳೆ ಸೂಚನೆ ಇದ್ಯಾ?

ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದರ ಹೊರತಾಗಿಯೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮತ್ತೆ ತಾಪಮಾನ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನಿರ್ಮಲ ಆಕಾಶ ಇರಲಿದ್ದು, ಗರಿಷ್ಠ ಉಷ್ಣಾಂಶವು 39ರ ಗಡಿ ದಾಟಲಿದೆ.‌ ಜತೆಗೆ ಆಗಾಗ ಗಾಳಿ ವೇಗವು ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

Murder case : ಸಿಟ್ಟು ಮನುಷ್ಯನನ್ನು ಏನೆಲ್ಲ ತಪ್ಪು ಮಾಡಿಸುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.. ಪತಿ ಮೇಲಿನ ಸಿಟ್ಟಿಗೆ ತಾಯಿಯೊಬ್ಬಳು 6 ವರ್ಷ ಪ್ರಾಯದ ಮಗನನ್ನು ನಾಲೆಗೆ ಎಸೆದಿದ್ದಾಳೆ. ನೀರಲ್ಲಿ ಮುಳುಗಿದ ಮಗುವಿನ ಬಲಗೈ ಅನ್ನು ಮೊಸಳೆ ಕಚ್ಚಿ ತಿಂದಿದೆ.

VISTARANEWS.COM


on

By

murder case In karwar
ರವಿಕುಮಾರ್‌ ಹಾಗೂ ಸಾವಿತ್ರಿ ದಂಪತಿ.. ಮತ್ತೊಂದು ಬದಿಯಲ್ಲಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ ಪೊಲೀಸರು
Koo

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Karnataka Weather Forecast : ಬೆಂಗಳೂರಲ್ಲಿ ಎರಡು ದಿನಗಳಿಂದ ಮಳೆಯು ಅಬ್ಬರಿಸಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ (Rain News) ಜತೆಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ನಿನ್ನೆ ಶುಕ್ರವಾರ ಬಂದ ಬಿರುಗಾಳಿ ಮಳೆಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

karnataka weather Forecast
ಬಿರುಗಾಳಿಗೆ ಸಿಲುಕಿ ಮೃತಪಟ್ಟ ವೃದ್ಧೆ ಮಾದಮ್ಮ
Koo

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಬಿಸಿಲು ಸಿಕ್ಸರ್‌ ಬಾರಿಸುತ್ತಿದ್ದರೆ, ಅತ್ತ ಮಳೆಯು ಫೋರ್ ಬಾರಿಸುತ್ತಿದೆ. ಗುರುವಾದ ಅಬ್ಬರಿಸಿದ ಬಿರುಗಾಳಿ ಮಳೆಗೆ (Rain News) ವೃದ್ಧೆಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಘಟನೆ (Karnataka Weather Forecast) ನಡೆದಿದೆ.

ಮಾದಮ್ಮ (66) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಮಾದಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ತಮ್ಮ ಜಮೀನಿಗೆ ಮೇವು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿ ಮಳೆಗೆ ಸಿಲುಕಿದ್ದಾರೆ. ಮೇವನ್ನು ತೆಗೆದುಕೊಂಡು ಬರುವಾಗ ರಸ್ತೆ ಮಧ್ಯದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಕುಸಿದು ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ಮಾದಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನಾಗರಹೊಳೆ ಅಭಯಾರಣ್ಯಕ್ಕೆ ತಂಪೆರೆದ ಮಳೆರಾಯ

ನಾಗರಹೊಳೆ ಅಭಯಾರಣ್ಯದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕಾಡ್ಗಿಚ್ಚು ಆತಂಕದಲ್ಲಿದ್ದ ಸಿಬ್ಬಂದಿಗೆ ವರಣನ ಸಿಂಚನದಿಂದ ಆತಂಕ ದೂರವಾಗಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದವು.

ಎಚ್.ಡಿ ಕೋಟೆಯ ದಮ್ಮನಕಟ್ಟೆ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ಒಣಗಿ ನಿಂತ ಕಾನನಕ್ಕೆ ಜೀವ ಕಳೆ ಬಂದಿದೆ. ರಸ್ತೆಯ ಹಿಕ್ಕೆಲೆಗಳ ಹಸಿರು ಹುಲ್ಲು ಬರಲು ಮೊದಲ ಮಳೆ ಸಹಕಾರಿಯಾಗಿದೆ. ಸದ್ಯಕ್ಕೆ ಕಾಡಿಗೆ ಬೆಂಕಿ ಬೀಳುವ ಆತಂಕವು ಅರಣ್ಯ ಇಲಾಖೆ‌ ಸಿಬ್ಬಂದಿಗೆ ದೂರಾವಾಗಿದೆ.

ಶನಿವಾರವೂ ಮಳೆ ಅಬ್ಬರ

ಶನಿವಾರ ಮಧ್ಯಾಹ್ನದಂದು ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

ಮೇ.5ರ ಭಾನುವಾರದಂದು ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏ. 6ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ಶಾಖದ ಅಲೆಯ ಎಚ್ಚರಿಕೆ

ಮಳೆ ನಡುವೆಯೂ ಕೆಲವೆಡೆ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಮುಂದಿನ 4 ದಿನಗಳವರೆಗೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಕರಾವಳಿಯಲ್ಲಿ ಬಿಸಿ ಗಾಳಿ ಬೀಸಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Job Alert
ಉದ್ಯೋಗ2 mins ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Ithichanda Ramesh Uthappaʼs Four books to be released in Mysore on May 9
ಮೈಸೂರು8 mins ago

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Karnataka Weather Forecast
ಮಳೆ13 mins ago

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Prajwal Revanna Case HD Revanna may be shifted to Parappana Agrahara SIT custody is doubtful
ಕ್ರೈಂ17 mins ago

Prajwal Revanna Case: ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

Narendra Modi
ದೇಶ18 mins ago

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Police Officer
ದೇಶ26 mins ago

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Covishield Vaccine
ದೇಶ46 mins ago

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ICC Women's T20 World Cup
ಕ್ರೀಡೆ1 hour ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

Pakistan
ವಿದೇಶ1 hour ago

Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ; ಅಧಿಕೃತವಾಗಿ ತರಗತಿ ಆರಂಭ

Prajwal Revanna Case HD Revanna arrest is correct says R Ashok
ರಾಜಕೀಯ2 hours ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌