Super Speciality Hospital | ಕುಮಟಾ ಅಕ್ಕಪಕ್ಕದಲ್ಲೇ ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ - Vistara News

ಆರೋಗ್ಯ

Super Speciality Hospital | ಕುಮಟಾ ಅಕ್ಕಪಕ್ಕದಲ್ಲೇ ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ

Super Speciality Hospital | ಉತ್ತರ ಕನ್ನಡ ಜಿಲ್ಲೆಯ ಹೃದಯ ಭಾಗವಾಗಿರುವ ಕುಮಟಾದ ಆಸುಪಾಸಿನಲ್ಲಿ ಸುಸಜ್ಜಿತ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಜನಪ್ರತಿನಿಧಿಗಳ ಪ್ರಸ್ತಾವನೆಗೆ ಆರೋಗ್ಯ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.

VISTARANEWS.COM


on

uttara kannada multi super speclaity hospital 5
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾ ತಾಲೂಕಿನ ಆಸುಪಾಸಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಾಣ ಮಾಡುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಆದರೆ, ಜಾಗದ ಹುಡುಕಾಟ ನಡೆಸಲಾಗುತ್ತಿದೆ. ಜಾಗ ಅಂತಿಮಗೊಂಡ ಬಳಿಕ ನಿರ್ಧಾರವನ್ನು ಪ್ರಕಟ ಮಾಡಲಾಗುತ್ತದೆ. ಅಂತಿಮವಾಗಿ ಆರ್ಥಿಕ ಇಲಾಖೆಯು ಮುಖ್ಯಮಂತ್ರಿಯವರ ಬಳಿಯೇ ಇರುವುದರಿಂದ ಒಪ್ಪಿಗೆ ಸಿಗಲಿದೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಂಬಂಧ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರನ್ನೊಳಗೊಂಡ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಸಭೆಯಲ್ಲಿ ಏನೇನು ಚರ್ಚೆ?
ಯಾವುದೇ ಇಲಾಖೆ ಇದ್ದರೂ ಸಹ ಅಂತಿಮವಾಗಿ ಮುಖ್ಯಮಂತ್ರಿಗಳೇ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಅಂಶಗಳನ್ನೂ ಪರಿಶೀಲನೆ ನಡೆಸಿದ ಬಳಿಕ ಮುಂದಿನ ನಿರ್ಧಾರವನ್ನು ಸಿಎಂ ಪ್ರಕಟಿಸುತ್ತಾರೆ. ಹೀಗಾಗಿ ಈ ಬಗ್ಗೆ ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಸಬೇಕಿದೆ. ಜಿಲ್ಲೆಯ ಶಾಸಕರು ಒಮ್ಮತದಿಂದ ಆಸ್ಪತ್ರೆಗೆ ಜಾಗವನ್ನು ಗುರುತಿಸುವತ್ತ ಗಮನಹರಿಸಬೇಕು ಎಂಬ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಇದನ್ನೂ ಓದಿ | Super Speciality Hospital | ಕೊನೆಗೂ ಉತ್ತರ ಕನ್ನಡಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ, ಆರೋಗ್ಯ ಸಚಿವರ ಭೇಟಿ ಶೀಘ್ರ

ಕ್ರಿಮ್ಸ್‌ನಲ್ಲಿ ಏಕೆ ಅಸಾಧ್ಯ?
ಕಾರವಾರದಲ್ಲಿ ಈಗಾಗಲೇ ಇರುವ ವೈದ್ಯಕೀಯ ಕಾಲೇಜನ್ನು (ಕ್ರಿಮ್ಸ್‌) ಮೇಲ್ದರ್ಜೆಗೇರಿಸಿ ಅಲ್ಲಿಯೇ ಸುಸಜ್ಜಿತ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಸಂಬಂಧ ಚರ್ಚೆ ನಡೆದಿದೆ. ಆದರೆ, ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಸಾಲದು ಎಂಬ ವಿಷಯ ಗಮನಕ್ಕೆ ಬಂದಿದೆ. ನಿರ್ಮಾಣಕ್ಕೆ ಬೇಕಿರುವ ಜಮೀನು ಬೇರೆ ಬೇರೆ ಇಲಾಖೆಗೆ ಸೇರಿದ್ದಾಗಿದೆ ಎಂಬ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಆದರೆ, ಈ ಮೆಡಿಕಲ್‌ ಕಾಲೇಜಿಗೆ ಸಕಲ ಸೌಕರ್ಯವನ್ನು ಕೊಡುವ ಸಂಬಂಧ ಮಾತುಕತೆಗಳಾಗಿವೆ ಎನ್ನಲಾಗಿದೆ.

ನಮ್ಮ ಪ್ರಸ್ತಾವನೆಗೆ ಸರ್ಕಾರ ಒಪ್ಪಿದೆ- ಕೋಟ ಶ್ರೀನಿವಾಸ ಪೂಜಾರಿ
ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ವ್ಯಾಪ್ತಿಯನ್ನು ಗಮನಿಸಿದಾಗ ಕುಮಟಾವನ್ನು ಹೃದಯಭಾಗವೆಂದು ಪರಿಗಣಿಸಬಹುದಾಗಿದ್ದು, ತಾಲೂಕಿನ ಅಕ್ಕಪಕ್ಕದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂಬ ಪ್ರಸ್ತಾಪವನ್ನು ಸಭೆಯಲ್ಲಿ ಇಡಲಾಯಿತು. ಈ ಬಗ್ಗೆ ಚರ್ಚೆ ನಡೆಸಿ ಕೊನೆಗೂ ಆರೋಗ್ಯ ಸಚಿವರು ಒಪ್ಪಿಗೆ ನೀಡಿದ್ದಾರೆ. ಅಲ್ಲದೆ ಅಧಿವೇಶನ ಬಳಿಕ ಜಿಲ್ಲೆಗೆ ಭೇಟಿ ನೀಡುವುದಾಗಿಯೂ ತಿಳಿಸಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲೆಯ ಯಾವ ಭಾಗದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಪರಿಶೀಲನೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಆ ನಂತರ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ನಿರ್ಮಾಣ ಮಾಡುವ ಬಗ್ಗೆ ಸರ್ಕಾರದಿಂದ ಘೋಷಣೆಯಾಗಲಿದೆ. ನಮ್ಮ ಬೇಡಿಕೆಗಳಿಗೆ ಆರೋಗ್ಯ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ಈಗಿರುವ ಮೆಡಿಕಲ್ ಕಾಲೇಜಿಗೆ ಎಲ್ಲ ಸೌಲಭ್ಯ ಒದಗಿಸಲೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸುದ್ದಿಗಾರರಿಗೆ ತಿಳಿಸಿದರು.

ಸ್ಪೀಕರ್ ಕಾಗೇರಿ, ಸಿಎಂ ಬೊಮ್ಮಾಯಿ ಜತೆ ಚರ್ಚೆ- ಸುಧಾಕರ್‌
ಕಾರವಾರದಲ್ಲಿರುವ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಸಾಲುವುದಿಲ್ಲ. ಅದಕ್ಕೆ ಬೇಕಾದ ಜಮೀನು ಬೇರೆ ಬೇರೆ ಇಲಾಖೆಗೆ ಸೇರಿದ್ದಾಗಿದೆ. ಹೀಗಾಗಿ ಸ್ಥಳ ಇನ್ನೂ ಅಂತಿಮ ಮಾಡಿಲ್ಲ. ಸ್ಥಳದ ವಿಚಾರವಾಗಿ ಸ್ಪೀಕರ್ ಕಾಗೇರಿ, ಸಿಎಂ ಬಸವರಾಜ ಬೊಮ್ಮಾಯಿ ಅವರ ಚರ್ಚೆ ಮಾಡಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಸುಧಾಕರ್‌ ಹೇಳಿದರು.

ಅಧಿವೇಶನದ ಬಳಿಕ ಉತ್ತರ ಕನ್ನಡ ಜಿಲ್ಲೆಯ ಪ್ರವಾಸವನ್ನು ಮಾಡುತ್ತೇವೆ. ಸಚಿವರು, ಶಾಸಕರನ್ನೂ ಜತೆಗೆ ಕರೆದೊಯ್ದು ಆರೋಗ್ಯ ವ್ಯವಸ್ಥೆ ಬಗ್ಗೆ ಸಮಾಲೋಚನೆ ಮಾಡಲಾಗುವುದು. ಅಂತಿಮವಾಗಿ ಆರ್ಥಿಕ ಇಲಾಖೆ ಮುಖ್ಯಮಂತ್ರಿ ಬಳಿಯೇ ಇದೆ. ಜಾಗ ಸಿಕ್ಕ ಬಳಿಕ ಸಿಎಂ ಈ ಬಗ್ಗೆ ನಿರ್ಧಾರವನ್ನು ಪ್ರಕಟಿಸುತ್ತಾರೆ ಎಂದು ಎಂದು ಸಚಿವ ಸುಧಾಕರ್‌ ತಿಳಿಸಿದರು.

ಭೌಗೋಳಿಕ ದೃಷ್ಟಿಕೋನ ಗಮನದಲ್ಲಿದೆ
ಇಡೀ ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆ ನಿರ್ಮಾಣವನ್ನು ಮಾಡಲಾಗುವುದು. ಎಲ್ಲ ಪ್ರದೇಶಗಳಿಗೂ ಸೂಕ್ತ ಎಂದು ಅನ್ನಿಸುವಂತಹ ಜಾಗದಲ್ಲಿ ನಿರ್ಮಾಣ ಮಾಡುತ್ತೇವೆ. ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಮನಸ್ಸು ಸರ್ಕಾರಕ್ಕಿದೆ ಎಂದು ಸಚಿವ ಸುಧಾಕರ್ ಸುದ್ದಿಗಾರರಿಗೆ ತಿಳಿಸಿದರು.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಮತ್ತು ಉ.ಕ. ಜಿಲ್ಲೆಯ ಜನಪ್ರತಿನಿಧಿಗಳು, ಮಿಂಟೋ ಆಸ್ಪತ್ರೆ ನಿರ್ದೇಶಕಿ ಸುಜಾತಾ ರಾಥೋಡ್‌ ಸೇರಿದಂತೆ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಿಗೆ ಸರ್ಕಾರ ಬದ್ಧ: ಸಚಿವ ಡಾ.ಕೆ.ಸುಧಾಕರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಅರೆಬರೆ ನಿದ್ದೆಯಂಥ ಭಾವ ಅಥವಾ ನಿದ್ದೆ ಬರಲು ಹೆಚ್ಚು ಸಮಯ ಹಿಡಿಯುವುದು ಇತ್ಯಾದಿ ಸಮಸ್ಯೆಗಳು ನಿಮ್ಮದಾಗಿದ್ದರೆ ಈಗಲೇ ಎಚ್ಚೆತ್ತುಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಈ ಸಮಸ್ಯೆ ಬಹಳ ಮಂದಿಯನ್ನು ಕಾಡುತ್ತಿದೆ. ಅತಿಯಾದ ಕೆಲಸ, ನಿದ್ದೆಯ ಸಮಯದ ಏರಿಳಿತ, ಕಚೇರಿಯ ಒತ್ತಡ, ತಡರಾತ್ರಿಯವರೆಗೆ ಮೊಬೈಲ್‌ ವೀಕ್ಷಣೆ, ಸಾಮಾಜಿಕ ಜಾಲತಾಣಗಳ ವೀಕ್ಷಣೆ, ಮಿತಿ ಮೀರಿ ಸಿನಿಮಾ ನೋಡುವುದು ಇತ್ಯಾದಿಗಳಿಂದಾಗಿ ನಿದ್ದೆಯ ಸಮಯ ಅಲ್ಲೋಲಕಲ್ಲೋಲವಾಗಿದೆ. ಇದಕ್ಕೇನು ಪರಿಹಾರ? ಇಲ್ಲಿದೆ (Sleeping Tips) ಸಲಹೆ.

VISTARANEWS.COM


on

Sleeping tips
Koo

ಪ್ರತಿದಿನ ನಿದ್ದೆ ಮಾಡುವುದು ಹೇಗೆ ಎಂದು ಹೆಣಗಾಡುತ್ತಿದ್ದೀರಾ? ಬೇಗ ನಿದ್ದೆ ಮಾಡಬೇಕು ಎಂದು ಹೊರಟು ನಿದ್ದೆ ಬರದೆ, ಬಂದ ನಿದ್ದೆಯಲ್ಲೂ ಏನೇನೋ ಕನಸುಗಳು, ಅರೆಬರೆ ನಿದ್ದೆಯಂಥ ಭಾವ ಅಥವಾ ನಿದ್ದೆ ಬರಲು ಹೆಚ್ಚು ಸಮಯ ಹಿಡಿಯುವುದು ಇತ್ಯಾದಿ ಸಮಸ್ಯೆಗಳು ನಿಮ್ಮದಾಗಿದ್ದರೆ ಅದರ ಬಗ್ಗೆ ನೀವು ಮೊದಲೇ ಎಚ್ಚೆತ್ತುಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಈ ಸಮಸ್ಯೆ ಬಹಳ ಮಂದಿಯನ್ನು ಕಾಡುತ್ತಿದೆ. ಕಾರಣ ಗೊತ್ತೇ ಇದೆ. ಅತಿಯಾದ ಕೆಲಸ, ನಿದ್ದೆಯ ಸಮಯದ ಏರಿಳಿತ, ಕಚೇರಿಯ ಒತ್ತಡ, ತಡರಾತ್ರಿಯವರೆಗೆ ಮೊಬೈಲ್‌ ವೀಕ್ಷಣೆ, ಸಾಮಾಜಿಕ ಜಾಲತಾಣಗಳ ವೀಕ್ಷಣೆ, ಸಿನಿಮಾ ನೋಡುವುದು ಇತ್ಯಾದಿಗಳಿಂದಾಗಿ ನಿದ್ದೆಯ ಸಮಯವಿದು ಅಲ್ಲೋಲಕಲ್ಲೋಲವಾಗಿದೆ. ಹೀಗಾಗಿ, ಕೆಲವೊಮ್ಮೆ ಬೇಕೆಂದರೂ ನಿದ್ದೆ ಬರುವುದಿಲ್ಲ. ನಿದ್ದೆಯ ಈ ಸಮಸ್ಯೆಯಿಂದ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹಾಗಾದರೆ, ಇಂಥ ಸಮಸ್ಯೆ ಇರುವ ಮಂದಿ ಇದು ವಿಕೋಪಕ್ಕೆ ಹೋಗುವ ಮುನ್ನವೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ನಿದ್ದೆಗೆ ಸಹಕಾರಿಯಾಗುವ ಆಹಾರವೂ ಸೇರಿದಂತೆ ನಿದ್ದೆಗೆ ಒಂದೆರಡು ಗಂಟೆಯ ಮೊದಲೇ ಮೊಬೈಲನ್ನು ದೂರವಿಡುವುದು, ಸಿನಿಮಾ ವೀಕ್ಷಣೆ ನಿಲ್ಲಿಸುವುದು ಇತ್ಯಾದಿ ಮುಂಜಾಗರೂಕತೆ ವಹಿಸಿಕೊಂಡರೆ, ಮತ್ತೆ ನಿಮ್ಮ ನಿದ್ರಾದೇವಿ ನಿಮ್ಮ ಬಳಿಗೆ ಬರುತ್ತಾಳೆ. ಸರಿಯಾದ ಆಹಾರಕ್ರಮದ ಜೊತೆಗೆ ಈ ಕೆಳಗಿನ ಕೆಲವು ಡ್ರಿಂಕ್‌ಗಳನ್ನು ರಾತ್ರಿ ಸೇವಿಸಿ ಮಲಗುವುದರಿಂದ ನಿಮಗೆ ನಿದ್ದೆ (Sleeping Tips) ಸುಲಭವಾಗುತ್ತದೆ.

Milk and Other Forest Products Foods Consumed By Lord Rama During His 14 Year Exile

ಮಲಗುವ ಮೊದಲು ಹಾಲು ಕುಡಿಯಿರಿ

ರಾತ್ರಿ ಮಲಗುವ ಮುಂಚೆ ಒಂದು ಲೋಟ ಬಿಸಿಯಾದ ಹಾಲು ಕುಡಿಯುವುದರಿಂದ ಸೊಂಪಾದ ನಿದ್ರೆ ಬರುತ್ತದೆ. ಆಯುರ್ವೇದವೂ ಇದನ್ನು ಪುಷ್ಠೀಕರಿಸುತ್ತದೆ. ದೇಹಕ್ಕೆ ಬೇಕಾದ ಕ್ಯಾಲ್ಶಿಯಂ ಕೂಡಾ ಹಾಲಿನಲ್ಲಿ ದೊರೆಯುವ ಜೊತೆಗೆ, ಈ ಕ್ಯಾಲ್ಶಿಯಂನಿಂದ ನಿದ್ರಾಹೀನತೆಯ ಸಮಸ್ಯೆಯೂ ಪರಿಹಾರವಾಗುತ್ತದೆ. ಹಾಲಿನಲ್ಲಿರುವ ಸೆರೆಟೋನಿನ್‌ ಎಂಬ ಅಂಶವು ನಮ್ಮನ್ನು ರಿಲ್ಯಾಕ್ಸ್‌ ಮಾಡಿಸುತ್ತದೆ.

Coconut water Foods For Fight Against Dengue Fever

ಎಳನೀರು ಕುಡಿಯಿರಿ

ಮೆಗ್ನೀಶಿಯಂನ ಕೊರತೆ ಕೂಡ ಖಿನ್ನತೆ ಹಾಗೂ ಉದ್ವೇಗದಂತಹ ಸಮಸ್ಯೆಯನ್ನು ತರುತ್ತದೆ. ಇದರಿಂದಾಗಿ ನಿದ್ರಾಹೀನತೆಯೂ ಕೂಡಾ ಬರುತ್ತದೆ. ಹಾಗಾಗಿ ಹೆಚ್ಚು ಮೆಗ್ನೀಶಿಯಂ ಇರುವ ಎಳನೀರನ್ನು ಕುಡಿಯುವುದರಿಂದಲೂ ಈ ಸಮಸ್ಯೆಗೆ ಉತ್ತರ ದೊರೆಯುತ್ತದೆ. ಮನಸ್ಸನ್ನೂ ಇದು ಶಾಂತಿಯುತವಾಗಿ ಇರಿಸುತ್ತದೆ.

Banana shake

ಬಾಳೆಹಣ್ಣಿನ ಶೇಕ್‌

ಬಾಳೆಹಣ್ಣಿನಲ್ಲಿ ಮೆಗ್ನೀಶಿಯಂ ಹಾಗೂ ಪೊಟಾಶಿಯಂ ಹೇರಳವಾಗಿ ಇರುವುದರಿಂದ ರಾತ್ರಿ ಮಲಗುವ ಮೊದಲು ಬಾಳೆಹಣ್ಣಿನ ಶೇಕ್‌ ಮಾಡಿಯೂ ಕುಡಿಯಬಹುದು. ಮಧುಮೇಹ ಹಾಗೂ ಇತರ ಸಮಸ್ಯೆಗಳಿಲ್ಲದವರು ಹೀಗೆ ಮಾಡುವ ಮೂಲಕ ರಾತ್ರಿ ಸೊಂಪಾದ ನಿದ್ದೆಯನ್ನು ಮಾಡಬಹುದು.

ಇದನ್ನೂ ಓದಿ: Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

ಬಾದಾಮಿ ಹಾಲು

ಬಿಸಿಬಿಸಿಯಾದ ಬಾದಾಮಿ ಹಾಲನ್ನು ಕುಡಿಯುವುದರಿಂದಲೂ ರಾತ್ರಿ ಚೆನ್ನಾಗಿ ನಿದ್ದೆ ಬರುತ್ತದೆ. ಬಾದಾಮಿ ಹಾಲು ಮಾಡಿಕೊಂಡು, ಅದಕ್ಕೆ ಕೇಸರಿ ದಳಗಳನ್ನು ಹಾಕಿ ಕುಡಿಯುವುದು ಬಹಳ ಒಳ್ಳೆಯದು. ಇದು ನರ ಸಂಬಂಧೀ ಸಮಸ್ಯೆಗಳನ್ನು ಪರಿಹಾರ ಮಾಡಿ ಸೊಂಪಾದ ನಿದ್ರೆಯನ್ನು ಕರುಣಿಸುತ್ತದೆ.

Chamomile tea

ಕ್ಯಾಮೋಮೈಲ್‌ ಚಹಾ

ಕ್ಯಾಮೋಮೈಲ್‌ ಚಹಾ ಕುಡಿಯುವುದರಿಂದಲೂ ಪರಿಹಾರ ಸಿಗುತ್ತದೆ. ಇದರಲ್ಲಿ ಫ್ಲೇವನಾಯ್ಡ್‌ಗಳು ಇರುವುದರಿಂದ ಇದು ನಿದ್ದೆಗೆ ಸಹಾಯ ಮಾಡುತ್ತದೆ. ಆದಷ್ಟೂ ಸಂಜೆಯಾದ ಮೇಲೆ ಕೆಫೀನ್‌ ಇರುವ ಡ್ರಿಂಕ್‌ಗಳನ್ನು ಸೇವಿಸದಿರಿ. ರಾತ್ರಿಯೂಟ ಆದಷ್ಟೂ ಸರಳವಾಗಿರಲಿ. ಹಿತಮಿತವಾಗಿರಲಿ. ಮಲಗುವುದಕ್ಕೂ ಮೊದಲು ಮೂರು ಗಂಟೆಗಳ ಮೊದಲೇ ಊಟ ಮುಗಿಸಿಕೊಳ್ಳಿ. ಚುರುಕಾಗಿರಿ. ಮೊಬೈಲನ್ನು ದೂರವಿಟ್ಟು, ಮನೆಯವರೊಂದಿಗೆ ಖುಷಿಯಿಂದ ಸಮಯ ಕಳೆದು ನಿದ್ದೆಗೆ ಜಾರಿ. ಈ ಶಿಸ್ತುಬದ್ಧ ಜೀವನ ಅಳವಡಿಸಿಕೊಂಡರೆ ನಿದ್ದೆ ಸಮಸ್ಯೆಯಾಗದು. ಆರೋಗ್ಯವೂ ವೃದ್ಧಿಯಾಗುತ್ತದೆ.

Continue Reading

ಆರೋಗ್ಯ

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

ಬಣ್ಣ ನೋಡಿ ಮರುಳಾಗುವ ಅಭ್ಯಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಕಾಟನ್‌ ಕ್ಯಾಂಡಿ ಸಾಕ್ಷಿ. ರಂಗುರಂಗಿನ ಸಕ್ಕರೆ ಮಿಠಾಯಿಯ ಹಿಂದಿರುವ ಕಪ್ಪನ್ನು ಅರ್ಥ ಮಾಡಿಕೊಂಡು ಜಾಗೃತರಾಗುವುದು ಗ್ರಾಹಕರ ಕರ್ತವ್ಯ. ಈ ಸಿಹಿ ಕ್ಯಾಂಡಿಯಿಂದ (Cotton Candy) ಆರೋಗ್ಯಕ್ಕಾಗುವ ಹಾನಿಯೇನು? ಇದನ್ನು ಯಾಕೆ ನಾವು ತಿನ್ನಬಾರದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Cotton Candy
Koo

ಬಣ್ಣಬಣ್ಣದ ಹತ್ತಿಯ ಉಂಡೆಯಂಥ ಕಾಟನ್‌ ಕ್ಯಾಂಡಿ ಇತ್ತೀಚೆಗೆ ಸುದ್ದಿಯಾಗಿದೆ. ಕಡು ಗುಲಾಬಿ ಬಣ್ಣದಲ್ಲಿ ಸಾಮಾನ್ಯವಾಗಿ ಕಂಡು ಬರುತಿದ್ದ ಕಾಟನ್‌ ಕ್ಯಾಂಡಿಗಳು ಇತ್ತೀಚೆಗೆ ವರ್ಣಾಂತರ ಹೊಂದಿ, ಹಸಿರು, ನೇರಳೆಯಂಥ ಕಣ್ಣು ಕೋರೈಸುವ ಬಣ್ಣಗಳಿಂದ ಶೋಭಿಸಿ, ಚಿಣ್ಣರ ಬಾಯಲ್ಲಿ ನೀರೂರಿಸುತ್ತಿದ್ದವು. ಆದರೆ ಆರೋಗ್ಯಾಧಿಕಾರಿಗಳು ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ, ಇಂಥ ವರ್ಣರಂಜಿತ ಕಾಟನ್‌ಕ್ಯಾಂಡಿಗಳ ಹಿಂದಿನ ಬಣ್ಣ ಬಯಲು ಮಾಡಿದ್ದಾರೆ. ಏನಿತ್ತು ಈ ಬಣ್ಣದ ಹತ್ತಿಯುಂಡೆಯಂಥ ಕ್ಯಾಂಡಿಗಳಲ್ಲಿ? ಅವು ಆರೋಗ್ಯಕ್ಕೆ (Cotton Candy) ಹಾಳು ಎಂದೇಕೆ ಹೇಳಲಾಗುತ್ತಿದೆ? ಜವಳಿ ಉದ್ದಿಮೆಗಳಲ್ಲಿ ಬಳಸಲಾಗುವ ರೋಡಮೈನ್‌ ಬಿ (Harmful Effects of ‘Rhodamine B’) ಎನ್ನುವ ಡೈ ಈ ತಿನ್ನುವ ವಸ್ತುಗಳಲ್ಲಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಈ ಬಗೆಗಿನ ವಿವರಗಳಿಲ್ಲಿವೆ. ರೋಡಮೈನ್‌ ಬಿ ಎನ್ನುವುದು ಸಿಂಥೆಟಿಕ್‌ ಡೈ. ಇದನ್ನು ಯಾವುದೇ ತಿನ್ನುವ ವಸ್ತುಗಳಲ್ಲಿ ಬಳಸುವಂತಿಲ್ಲ. ಆದರೆ ಕಾಟನ್‌ ಕ್ಯಾಂಡಿಗೆ ಕಡು ಗುಲಾಬಿಯಿಂದ ಹಿಡಿದು ತರಹೇವಾರಿ ಬಣ್ಣಗಳನ್ನು ನೀಡುವಲ್ಲಿ ಇಂಥ ಸಿಂಥೆಟಿಕ್‌ ಬಣ್ಣಗಳು ಪ್ರಧಾನವಾಗಿ ಬಳಕೆಯಲ್ಲಿವೆ. ಆರೋಗ್ಯವನ್ನು ಕಡೆಗಣಿಸಿ, ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ, ಕ್ಯಾಂಡಿ ತಯಾರಕರು ಇಂಥ ಹಾನಿಕಾರಕ ಬಣ್ಣಗಳನ್ನು ಬಳಸುತ್ತಿರುವುದು ಆಘಾತಕಾರಿ. ಏನು ಇಂಥ ಬಣ್ಣಗಳು ಉಂಟುಮಾಡುವ ಕೆಟ್ಟ ಪರಿಣಾಮಗಳು?

Cotton Candy

ಕ್ಯಾನ್ಸರ್‌ಕಾರಕ

ರೋಡಮೈನ್‌ ಬಿ ಮನುಷ್ಯರಲ್ಲಿ ಕ್ಯಾನ್ಸರ್‌ ಉಂಟುಮಾಡುವ, ಅದರಲ್ಲೂ ಪ್ರಧಾನವಾಗಿ ಮೂತ್ರಜನಕಾಂಗಗಳ ಕ್ಯಾನ್ಸರ್‌ ತರುವ ಸಾಧ್ಯತೆಯಿದೆ ಎನ್ನುತ್ತದೆ ಕ್ಯಾನ್ಸರ್‌ ಸಂಶೋಧನೆ ಕುರಿತಾದ ಅಂತಾರಾಷ್ಟ್ರೀಯ ಸಂಸ್ಥೆ (ಐಎಆರ್‌ಸಿ). ಈ ಬಗ್ಗೆ ವಿಶ್ವ ಮಟ್ಟದಲ್ಲಿ ನಡೆದಿರುವ ಕೆಲವು ಅ‍ಧ್ಯಯನಗಳು ಸಹ ಈ ವಿಷಯವನ್ನು ದೃಢಪಡಿಸಿವೆ.

ಅಲರ್ಜಿ

ಈ ರಾಸಾಯನಿಕ ಹಲವು ರೀತಿಯಲ್ಲಿ ಅಲರ್ಜಿಗಳನ್ನು ತರಬಲ್ಲದು. ಸೂಕ್ಷ್ಮ ಚರ್ಮದವರಿಗೆ ತುರಿಕೆಯಾಗಿ ಚರ್ಮ ಕೆಂಪಾಗಿ ಉರಿಯೇಳುವ ಸಾಧ್ಯತೆಯಿದೆ. ಕಣ್ಣಿಗೇನಾದರೂ ಹೋದರೆ ಕಣ್ಣುರಿ, ಕೆಂಪಾಗುವುದು, ನೀರು ಸುರಿಯುವುದು, ಕಿರಿಕಿರಿಯಂಥ ಸಮಸ್ಯೆಗಳು ಎದುರಾಗಬಹುದು. ಶ್ವಾಸಕೋಶದಲ್ಲಿ ಉರಿಯೂತ ಕಾಣಿಸಿಕೊಂಡು ಅಸ್ತಮಾ, ಉಸಿರಾಟದ ತೊಂದರೆ, ಕೆಮ್ಮಿನಂಥ ಆರೋಗ್ಯ ತೊಂದರೆಗಳು ಕಾಣಬಹುದು. ಇವೆಲ್ಲ ಸೂಕ್ಷ್ಮ ಇರುವವರಿಗೆ ಮಾತ್ರವೇ ಅಲ್ಲ, ಯಾರಲ್ಲಿಯೂ ಅಲರ್ಜಿ ಸಮಸ್ಯೆಗಳನ್ನು ಹುಟ್ಟುಹಾಕಬಹುದು.

ealthy internal organs of human digestive system / highlighted blue organs

ಜೀರ್ಣಾಂಗದ ತೊಂದರೆಗಳು

ರೋಡಮೈನ್‌ ಹೊಟ್ಟೆಗೆ ಹೋಗುವುದರಿಂದ ಜೀರ್ಣಾಂಗಗಳಲ್ಲಿ ಹಲವು ರೀತಿಯ ವೈಪರಿತ್ಯಗಳು ಕಂಡುಬಂದೀತು. ಹೊಟ್ಟೆ ತೊಳೆಸುವುದು, ಹೊಟ್ಟೆ ನೋವು, ವಾಂತಿ, ಡಯರಿಯದಂಥ ಸಮಸ್ಯೆಗಳು ಸಾಮಾನ್ಯ. ಕೆಲವು ಅಪರೂಪದ ಪ್ರಕರಣಗಳಲ್ಲಿ ಜೀರ್ಣಾಂಗಗಳಲ್ಲಿ ರಕ್ತಸ್ರಾವವೂ ಆಗಬಹುದು.

ಭ್ರೂಣಕ್ಕೆ ತೊಂದರೆ

ಗರ್ಭಿಣಿಯರು ಈ ರಾಸಾಯನಿಕವನ್ನು ಸೇವಿಸಿದಲ್ಲಿ ಹೊಟ್ಟೆಯಲ್ಲಿರುವ ಶಿಶುವಿಗೆ ತೊಂದರೆ ಸಂಭವಿಸಬಹುದು. ಮಗುವಿನ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆಯನ್ನು ಅಧ್ಯಯನಗಳು ಸೂಚಿಸುತ್ತವೆ. ಈ ರಾಸಾಯನಿಕಕ್ಕೆ ಅತಿಯಾಗಿ ತೆರೆದುಕೊಂಡಲ್ಲಿ ಫಲವಂತಿಕೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಬಹುದು.

ಇದನ್ನೂ ಓದಿ: Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

ಪರಿಸರದ ಮೇಲಿನ ಪರಿಣಾಮ

ಮಣ್ಣಿನಲ್ಲಿ ಸುಲಭವಾಗಿ ಕರಗದಿರುವಂಥ ರಾಸಾಯನಿಕವಿದು. ವಾತಾವರಣದಲ್ಲಿ ದೀರ್ಘಕಾಲದವರೆಗೆ ಅಳಿಯದೇ ಉಳಿಯುವಂಥ ಈ ವಸ್ತುವು, ಮಣ್ಣು, ನೀರು, ಗಾಳಿಯನ್ನೆಲ್ಲ ಮಲಿನ ಮಾಡಬಲ್ಲದು. ಜಲಚರಗಳ ಆರೋಗ್ಯಕ್ಕೆ ಹಾನಿ ಮಾಡಬಲ್ಲದು. ಎಲ್ಲಾ ನಿಸರ್ಗ ಮೂಲಗಳ ಮೂಲಕ ಮತ್ತೆ ನಮ್ಮದೇ ದೇಹವನ್ನು ಪ್ರವೇಶಿಸಿ, ಇನ್ನಷ್ಟು ಸಮಸ್ಯೆಗಳನ್ನು ಸೃಷ್ಟಿಸಬಲ್ಲದು.

Continue Reading

ಆರೋಗ್ಯ

Vitamin Side Effects: ವಿಟಮಿನ್‌ ಮಾತ್ರೆಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?

ಅತಿಯಾದರೆ ಅಮೃತವೂ ವಿಷ ಎನ್ನುವ ಮಾತಿದೆ. ದೇಹಕ್ಕೆ ಪೂರಕ ಎನ್ನುವ ಉದ್ದೇಶದಿಂದ ಅತಿಯಾಗಿ ವಿಟಮಿನ್‌ ಪೂರಕಗಳನ್ನು ಸೇವಿಸುವುದು ನಿಶ್ಚಿತವಾಗಿ ಸಮಸ್ಯೆಗಳನ್ನು ತರಬಲ್ಲದು. ಜೀವಸತ್ವಗಳ ಪ್ರಮಾಣ ಹೆಚ್ಚಾದರೆ (Vitamin Side Effects) ಅದರ ಅಡ್ಡ ಪರಿಣಾಮಗಳೇನು ಎಂಬುದರ ಬಗ್ಗೆ ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Vitamin Side Effects
Koo

ವಿಟಮಿನ್‌ಗಳು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಪೋಷಕಾಂಶಗಳು. ಶರೀರ ಆರೋಗ್ಯವಾಗಿರಲು ಮಾತ್ರವಲ್ಲ, ತನ್ನ ಕೆಲಸವನ್ನು ಮಾಡಿಕೊಳ್ಳಲು ಸಹ ಜೀವಸತ್ವಗಳ ಅಗತ್ಯವಿದೆ. ಆಹಾರದ ಮೂಲಕ ದೊರೆಯುವ ಈ ಸತ್ವಗಳು ಸಾಕಾಗದು ಎನಿಸಿದ ಬಹಳಷ್ಟು ಮಂದಿ ವಿಟಮಿನ್‌ ಪೂರಕಗಳನ್ನು ಸೇವಿಸುತ್ತಾರೆ. ಇದಕ್ಕೆ ವೈದ್ಯರ ಸಲಹೆ ಅಗತ್ಯ. ಪೂರಕಗಳನ್ನು ತಮ್ಮಷ್ಟಕ್ಕೆ ಇಷ್ಟ ಬಂದಂತೆ ಸೇವಿಸಿದರೆ ಸಮಸ್ಯೆಗಳಾಗಬಹುದು. ಕಾರಣ, ವಿಟಮಿನ್‌ ಅತಿಯಾದರೆ (Vitamin Side Effects) ಅದಕ್ಕೂ ಅಡ್ಡಪರಿಣಾಮಗಳಿಗೆ. ಏನದು? ಜೀವಸತ್ವಗಳಲ್ಲಿ ಕೆಲವು ನೀರಿನಲ್ಲಿ ಕರಗಬಲ್ಲಂಥವು, ಕೆಲವು ಕೊಬ್ಬಿನಲ್ಲಿ ಕರಗಬಲ್ಲವು. ನೀರಲ್ಲಿ ಕರಗಬಲ್ಲ ಸಿ ವಿಟಮಿನ್‌ನಂಥವು ಕೊಂಚ ಹೆಚ್ಚಾದರೆ ಅತಿಯಾದ ದುಷ್ಪರಿಣಾಮಗಳೇನು ಆಗುವುದಿಲ್ಲ. ಕಾರಣ, ಇವು ಹೆಚ್ಚಾದಷ್ಟು ಮೂತ್ರದಲ್ಲಿ ಹೊರಗೆ ಹೋಗಿಬಿಡುತ್ತದೆ. ಆದರೆ ಕೊಬ್ಬಿನಲ್ಲಿ ಕರಗಬಲ್ಲ ವಿಟಮಿನ್‌ ಎ, ಡಿ, ಇ ಮತ್ತು ಕೆ-ನಂಥವು ಸಮಸ್ಯೆಗಳು ತರಬಲ್ಲವು. ಏಕೆಂದರೆ, ದೇಹದ ಕೊಬ್ಬಿನ ಕೋಶಗಳಲ್ಲಿ ಉಳಿಯುವ ಇವನ್ನು ದೇಹದಿಂದ ವರ್ಜಿಸುವುದು ಕಷ್ಟವಾಗಿಬಿಡಬಹುದು. ಯಾವ ವಿಟಮಿನ್‌ ಅತಿಯಾದರೆ ಆರೋಗ್ಯದ ಮೇಲಿನ ಪರಿಣಾಮವೇನು ಎಂಬುದನ್ನು ಗಮನಿಸೋಣ.

Vitamin A

ವಿಟಮಿನ್‌ ಎ

ಯಾವುದೇ ಜೀವಸತ್ವಗಳು ಆಹಾರದ ಮೂಲಕ ದೇಹ ಸೇರಿದರೆ ಹೆಚ್ಚು ಸುರಕ್ಷಿತ. ಹಾಗಲ್ಲದೆ ಪೂರಕಗಳನ್ನು ಸೇವಿಸುವಾಗ ಮಾತ್ರ ಎಚ್ಚರ ಬೇಕು. ಎ ಜೀವಸತ್ವ ಹೆಚ್ಚಾದರೆ ತಲೆನೋವು, ತಲೆಸುತ್ತು, ಹೊಟ್ಟೆ ತೊಳೆಸುವುದು, ಚರ್ಮದ ಕಿರಿಕಿರಿ, ಮೂಳೆ ಮತ್ತು ಕೀಲುಗಳಲ್ಲಿ ನೋವುಗಳು ಸಾಮಾನ್ಯವಾಗಿ ಕಂಡುಬರುವಂಥ ಅಡ್ಡ ಪರಿಣಾಮಗಳು. ಆದರೆ ವಿಪರೀತ ಹೆಚ್ಚಾದ ಪ್ರಕರಣಗಳಲ್ಲಿ, ದೃಷ್ಟಿದೋಷ, ಮೂಳೆಗಳಲ್ಲಿ ಉರಿಯೂತ, ಕೂದಲು ಉದುರುವುದು, ಚರ್ಮ ಒಣಗುವುದು, ಯಕೃತ್‌ಗೆ ಹಾನಿಯಾಗುವಂಥದ್ದು ಕಂಡು ಬರಬಹುದು.

Vitamin D

ವಿಟಮಿನ್‌ ಡಿ

ಆಹಾರದ ಮೂಲಕ ಅಥವಾ ಸೂರ್ಯನ ಬೆಳಕಿನ ಮೂಲಕ ನಮ್ಮ ದೇಹ ಸೇರುವ ರೀತಿಯೇ ಸೂಕ್ತವಾದದ್ದು. ಆದರೆ ವಿಟಮಿನ್‌ ಡಿ ಕೊರತೆಯಾದ ಸಂದರ್ಭಗಳಲ್ಲಿ ವೈದ್ಯರ ಸೂಚನೆಯ ಮೇರೆಗೆ ಪೂರಕ ಮಾತ್ರೆಗಳನ್ನು ಸೇವಿಸಬೇಕು. ಅದಿಲ್ಲದಿದ್ದರೆ, ಹೊಟ್ಟೆ ತೊಳೆಸುವುದು, ವಾಂತಿ, ಅಶಕ್ತತೆ ಕಾಡಬಹುದು. ತೀವ್ರವಾದ ಪ್ರಕರಣಗಳಲ್ಲಿ ರಕ್ತದಲ್ಲಿ ಕ್ಯಾಲ್ಶಿಯಂ ಮಟ್ಟ ಏರುವುದು ಅಥವಾ ಕಿಡ್ನಿ ತೊಂದರೆಗಳು ಬಾಧಿಸಬಹುದು.

Vitamin E

ಇ ಜೀವಸತ್ವ

ಈ ವಿಟಮಿನ್‌ ಅಧಿಕವಾದರೆ ಆಗುವ ಅಡ್ಡ ಪರಿಣಾಮಗಳು ತೀವ್ರವಾಗುವ ಸಾಧ್ಯತೆ ಹೆಚ್ಚು. ಇದು ಕಾಡುವುದು ಆಂತರಿಕ ರಕ್ತಸ್ರಾವದ ರೂಪದಲ್ಲಿ. ನೈಸರ್ಗಿಕವಾಗಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯಲ್ಲಿ ಹೆಚ್ಚುವರಿ ವಿಟಮಿನ್‌ ಇ ಅಡ್ಡಗಾಲು ಹಾಕುತ್ತದೆ. ಇದರಿಂದ ಹೆಮೊರೇಜ್‌ಗಳ ಭೀತಿ ಹೆಚ್ಚಬಹುದು. ಇದಲ್ಲದೆ, ದುಷ್ಪರಿಣಾಮ ಸೌಮ್ಯ ಸ್ವರೂಪದಲ್ಲಿದ್ದರೆ, ವಾಂತಿ, ಡಯರಿಯ, ಹೊಟ್ಟೆ ನೋವು, ತಲೆನೋವು, ಅಲರ್ಜಿಯ ಸೂಚನೆಗಳು ಕಾಡಬಹುದು.

Vitamin K

ವಿಟಮಿನ್‌ ಕೆ

ಈ ಸತ್ವವು ಹೆಚ್ಚಾಗುವ ಮಟ್ಟಿಗೆ ದೇಹ ಸೇರುವ ಸಾಧ್ಯತೆ ಉಳಿದವಕ್ಕೆ ಹೋಲಿಸಿದರೆ ಕಡಿಮೆ. ಆದಾಗ್ಯೂ ಕೆ ಜೀವಸತ್ವ ಹೆಚ್ಚಾದರೆ ಕೆಂಪುರಕ್ತಕಣಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿ, ಯಕೃತ್‌ಗೂ ತೊಂದರೆ ನೀಡಬಹುದು. ರಕ್ತ ನೀರಾಗುವಂಥ ಔಷಧಿ ಸೇವಿಸುವವರಲ್ಲಿ, ಈ ಔಷಧಿಯ ಪರಿಣಾಮದಲ್ಲೂ ಅಡ್ಡಗಾಲು ಹಾಕುತ್ತದೆ ಕೆ ಜೀವಸತ್ವ.

Vitamin C

ವಿಟಮಿನ್‌ ಸಿ

ಈವರೆಗೆ ಹೇಳಿದ ಜೀವಸತ್ವಗಳೆಲ್ಲವೂ ಕೊಬ್ಬಿನಲ್ಲಿ ಕರಗುವಂಥವು. ಇನ್ನು ಮೇಲಿನವು ನೀರಲ್ಲಿ ಕರಗಬಲ್ಲ ಜೀವಸತ್ವಗಳು. ಆಸ್ಕಾರ್ಬಿಕ್‌ ಆಮ್ಲವೆಂದೂ ಕರೆಯಲಾಗುವ ಇದು ಹೆಚ್ಚಾದರೆ ಸಾಮಾನ್ಯವಾಗಿ ಮೂತ್ರದ ಮೂಲಕ ದೇಹದಿಂದ ಹೊರಹೋಗುತ್ತದೆ. ಈ ಮಿತಿಯನ್ನೂ ಮೀರಿ ವಿಟಮಿನ್‌ ಸಿ ಸೇವಿಸಿದರೆ, ಜೀರ್ಣಾಂಗಗಳ ತೊಂದರೆ ಬಾಧಿಸಬಹುದು. ಇನ್ನೂ ಹೆಚ್ಚಾದರೆ ಮೂತ್ರಪಿಂಡಗಳಲ್ಲಿ ಕಲ್ಲುಗಳು ಉಂಟಾಗಬಹುದು.

Vitamin B

ವಿಟಮಿನ್‌ ಬಿ

ಇದರಲ್ಲಿ ಹಲವಾರು ವಿಟಮಿನ್‌ಗಳಿವೆ. ಒಂದೊಂದನ್ನೂ ಪ್ರತ್ಯೇಕವಾಗಿ ಹೇಳುವುದಾದರೆ- ವಿಟಮಿನ್‌ ಬಿ೩ ಹೆಚ್ಚಾದರೆ, ಚರ್ಮ ಕೆಂಪಾಗಿ ಬಿಸಿಯಾಗುವುದು, ಹೃದಯ ಬಡಿತ ಏರುವುದು, ವಾಂತಿ, ಯಕೃತ್‌ಗೆ ಹಾನಿ ಮತ್ತು ಜೀರ್ಣಾಂಗಗಳ ಸಮಸ್ಯೆ ಉಂಟಾಗಬಹುದು. ವಿಟಮಿನ್‌ ಬಿ೬ ಹೆಚ್ಚಾದರೆ, ನರಗಳಿಗೆ ಹಾನಿಯಾಗಬಹುದು, ಸ್ನಾಯುಗಳು ದುರ್ಬಲವಾಗಬಹುದು. ಫಾಲಿಕ್‌ ಆಮ್ಲ ಅಥವಾ ಬಿ9 ಜೀವಸತ್ವ ಅತಿಯಾದರೆ, ವಿಟಮಿನ್‌ ಬಿ12 ಕೊರತೆಯನ್ನು ಮರೆಮಾಚಿಬಿಡುತ್ತದೆ. ಇದರಿಂದ ನರಗಳ ಸಮಸ್ಯೆಯೂ ತಲೆದೋರಬಹುದು. ವಿಟಮಿನ್‌ ಬಿ12 ವಿಪರೀತವಾದರೆ ತಲೆನೋವು, ತಲೆಸುತ್ತು, ವಾಂತಿ, ಒತ್ತಡಗಳು ಕಾಡಬಹುದು.

ಇದನ್ನೂ ಓದಿ: Which Sweetener Is Better: ಸಕ್ಕರೆ, ಬೆಲ್ಲ, ಕಲ್ಲುಸಕ್ಕರೆ- ಯಾವುದು ಒಳ್ಳೆಯದು?

Continue Reading

Latest

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

ಕಡಿಮೆ ಚಟುವಟಿಕೆಯುಳ್ಳ ಪುರುಷರು ಮತ್ತು ಮಹಿಳೆಯರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಕುರಿತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮಾರ್ಗಸೂಚಿಯನ್ನು (Dietary Guidelines) ಬಿಡುಗಡೆ ಮಾಡಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Dietary Guidelines
Koo

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಕಡಿಮೆ ಚಟುವಟಿಕೆ ಹೊಂದಿರುವ ಪುರುಷರು (men) ಮತ್ತು ಮಹಿಳೆಯರು (women) ಆಹಾರದಲ್ಲಿ (food) ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದು, ಇದಕ್ಕಾಗಿ ಇಂಥವರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಮಾರ್ಗಸೂಚಿಯನ್ನು (Dietary Guidelines) ಬಿಡುಗಡೆ ಮಾಡಿದೆ.

ಉಪಾಹಾರದಲ್ಲಿ ಏನು ಇರಬೇಕು?

ಐಸಿಎಂಆರ್ ಪ್ರಕಾರ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರ ಉಪಾಹಾರದಲ್ಲಿ ನೆನೆಸಿದ ಮತ್ತು ಬೇಯಿಸಿದ ಬಜ್ರಾ 90 ಗ್ರಾಂ ಮತ್ತು ತರಕಾರಿಗಳು 50 ಗ್ರಾಂ ಒಳಗೊಂಡಿರಬೇಕು. ಅದೇ ರೀತಿ ಮಹಿಳೆಯರಿಗೆ ನೆನೆಸಿದ ಮತ್ತು ಬೇಯಿಸಿದ ಬಜ್ರಾವನ್ನು ಉಪಾಹಾರದಲ್ಲಿ 60 ಗ್ರಾಂ ಮತ್ತು ತರಕಾರಿಗಳು 100 ಗ್ರಾಂ ಸೇರಿಸಿಕೊಳ್ಳಬೇಕು.

ಊಟದಲ್ಲಿ ಏನು ಇರಬೇಕು?

ಮಧ್ಯಾಹ್ನದ ಊಟದಲ್ಲಿ ಪುರುಷರು ಧಾನ್ಯಗಳನ್ನು 100 ಗ್ರಾಂ ಮತ್ತು ಬೇಳೆಕಾಳುಗಳು 30 ಗ್ರಾಂ, ಮಹಿಳೆಯರು ಮಧ್ಯಾಹ್ನದ ಊಟದಲ್ಲಿ ಧಾನ್ಯಗಳು 80 ಗ್ರಾಂ ಮತ್ತು ದ್ವಿದಳ ಧಾನ್ಯಗಳನ್ನು 20 ಗ್ರಾಂ ತೆಗೆದುಕೊಳ್ಳಬಹುದು. ಸಂಜೆ ಇಬ್ಬರಿಗೂ 50 ಮಿಲಿ ಲೀಟರ್ ಹಾಲು ಕುಡಿಯಲು ಸೂಚಿಸಲಾಗುತ್ತದೆ.


ನಮ್ಮ ಆಹಾರ ಹೇಗಿರಬೇಕು?

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಆಧುನಿಕ ಆಹಾರ ಪದ್ಧತಿಗೆ ಸರಿ ಹೊಂದುವಂತೆ ಭಾರತೀಯರಿಗೆ ನವೀಕರಿಸಿದ ಆಹಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ಐಸಿಎಂಆರ್ ನ ಆಹಾರ ಮಾರ್ಗಸೂಚಿಗಳ ಪ್ರಕಾರ ಆರೋಗ್ಯಕರ ಊಟವು ಹೆಚ್ಚಿನ ತರಕಾರಿ, ಸಾಕಷ್ಟು ಧಾನ್ಯ, ಕಾಳು, ಬೀನ್ಸ್, ಬೀಜಗಳು, ಹಣ್ಣುಗಳನ್ನು ಒಳಗೊಂಡಿರುತ್ತದೆ. ಜೊತೆಗೆ ಮೊಸರು ಆಹಾರದಲ್ಲಿ ಸೇರಿಸಿಕೊಳ್ಳುವುದು ಉತ್ತಮ ಆಯ್ಕೆಯಾಗಿದೆ. ಹೆಚ್ಚುವರಿ ಸಕ್ಕರೆಗಳಿಂದ ಮುಕ್ತ ಅಥವಾ ಅತೀ ಕಡಿಮೆ ಪ್ರಮಾಣದಲ್ಲಿ ಎಣ್ಣೆ, ಕೊಬ್ಬು ಮತ್ತು ಉಪ್ಪನ್ನು ಹೊಂದಿರುವ ಆಹಾರ ಒಳ್ಳೆಯ ಆಯ್ಕೆಯಾಗಿರುತ್ತದೆ.

ಆರೋಗ್ಯಕರವಾಗಿರಲು ಆಹಾರ ಮಾತ್ರವಲ್ಲ ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಮುಖ್ಯವಾಗಿರುತ್ತದೆ. ಇದಕ್ಕಾಗಿ ನಿಯಮಿತವಾಗಿ ವ್ಯಾಯಾಮ ಮಾಡಲು ಸೂಚಿಸಲಾಗಿದೆ. ತಾಜಾ ಆಹಾರ ಸೇವಿಸುವುದು ಬಹು ಮುಖ್ಯ. ಆಹಾರ ಸುರಕ್ಷತೆಯ ಕಡೆಗೂ ಗಮನವಿರಬೇಕು. ಕನಿಷ್ಠ ಸಂಸ್ಕರಿಸಿದ ಆಹಾರಗಳ ಆಯ್ಕೆ ಒಳ್ಳೆಯದು ಎಂಬುದನ್ನು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Which Sweetener Is Better: ಸಕ್ಕರೆ, ಬೆಲ್ಲ, ಕಲ್ಲುಸಕ್ಕರೆ- ಯಾವುದು ಒಳ್ಳೆಯದು?

ದೈಹಿಕ ಚಟುವಟಿಕೆ ಹೇಗಿರಬೇಕು?

ಮಾರ್ಗಸೂಚಿಗಳ ಪ್ರಕಾರ ಎಲ್ಲಾ ವಯಸ್ಸಿನ ವ್ಯಕ್ತಿಗಳು ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 30ರಿಂದ 45 ನಿಮಿಷಗಳ ಮಧ್ಯಮ, ತೀವ್ರತೆಯ ದೈಹಿಕ ಚಟುವಟಿಕೆಯನ್ನು ನಡೆಸಲೇಬೇಕು. ಮಕ್ಕಳಲ್ಲಿ ದಿನಕ್ಕೆ ಕನಿಷ್ಠ 60 ನಿಮಿಷಗಳ ನಿಯಮಿತ ದೈಹಿಕ ಚಟುವಟಿಕೆ ಇದ್ದರೆ ಅಧಿಕ ತೂಕ ಮತ್ತು ಸ್ಥೂಲಕಾಯತೆಯನ್ನು ತಡೆಯಬಹುದು ಎನ್ನುತ್ತದೆ ಐಸಿಎಂಆರ್ ಮಾರ್ಗಸೂಚಿ.

Continue Reading
Advertisement
7th Pay Commission
ನೌಕರರ ಕಾರ್ನರ್18 mins ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

James Anderson
ಪ್ರಮುಖ ಸುದ್ದಿ22 mins ago

James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

Sleeping tips
ಆರೋಗ್ಯ29 mins ago

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

Lok Sabha Election
ದೇಶ30 mins ago

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Babar Azam
ಪ್ರಮುಖ ಸುದ್ದಿ46 mins ago

Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

Money Guide
ಮನಿ-ಗೈಡ್47 mins ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Karnataka rain
ಮಳೆ59 mins ago

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

IPL 2024
ಕ್ರೀಡೆ1 hour ago

IPL 2024 : ಗೆಲುವಿನ ನಡುವೆಯೂ ಬೇಸರ; ಶುಭ್​ಮನ್ ಗಿಲ್​ಗೆ 24 ಲಕ್ಷ ರೂಪಾಯಿ ದಂಡ

Arvind Kejriwal
ದೇಶ1 hour ago

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Hair Color Fashion
ಫೋಟೊ1 hour ago

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು3 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌