Heart Attack : ಮೀನುಗಾರರ ಮುಖಂಡ ರಾಜು ತಾಂಡೇಲ್‌ ಹೃದಯಾಘಾತದಿಂದ ನಿಧನ - Vistara News

ಉತ್ತರ ಕನ್ನಡ

Heart Attack : ಮೀನುಗಾರರ ಮುಖಂಡ ರಾಜು ತಾಂಡೇಲ್‌ ಹೃದಯಾಘಾತದಿಂದ ನಿಧನ

Heart attack : ಕಾರವಾರದಲ್ಲಿ ಮೀನುಗಾರರ ಮುಖಂಡ ರಾಜು ತಾಂಡೇಲ್‌ ಹೃದಯಾಘಾತದಿಂದ ಮೃತಪಟ್ಟರೆ, ಚಿತ್ರದುರ್ಗದಲ್ಲಿ ಮೀನು ಹಿಡಿಯಲು ಹೋದ ಯುವಕರ್ನೊವ ನೀರಿನಲ್ಲಿ ಕೊಚ್ಚಿಕೊಂಡು (Drowned in water) ಹೋಗಿದ್ದಾನೆ.

VISTARANEWS.COM


on

Heart attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಮೀನುಗಾರ ಮುಖಂಡ ರಾಜು ತಾಂಡೇಲ್ ಅವರು ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ. ರಾಜು ತಾಂಡೇಲ್ ಜಿಲ್ಲಾ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾಗಿದ್ದರು. ಬೆಳಗಿನ ಜಾವ 3:30ರ ವೇಳೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಅಂತಿಮ ದರ್ಶನ ಪಡೆದರು.

ಜಿಲ್ಲಾ ಆಸ್ಪತ್ರೆಯಿಂದ ಹೊರಟ ಅಂತಿಮ ಮೆರವಣಿಗೆಯಲ್ಲಿ ಶಾಸಕ ಸತೀಶ್ ಸೈಲ್, ಮಾಜಿ ಸಚಿವ ಆನಂದ ಅಸ್ನೋಟಿಕರ್, ಮೀನುಗಾರ ಮುಖಂಡರು, ನೂರಾರು ಮೀನುಗಾರರು ಭಾಗಿಯಾಗಿದ್ದರು. ಕಾರವಾರ ತಾಲೂಕಿನ‌ ಚಿತ್ತಾಕುಲದ ಆಜಾದ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರುಪಾಲು

ನದಿ ಪಾತ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬ ನೀರುಪಾಲಾಗಿದ್ದಾರೆ. ಚಿತ್ರದುರ್ಗದ ಕೆಲ್ಲೋಡು ಬಳಿಯ ವೇದಾವತಿ ನದಿ ಪಾತ್ರದಲ್ಲಿ ಘಟನೆ ನಡೆದಿದೆ. ಜಾನಕಲ್ ಗ್ರಾಮದ ಶಿವು ನೀರಲ್ಲಿ ಕೊಚ್ಚಿ ಹೋದವರು.

ತುಂಬಿ ಹರಿಯುತ್ತಿದ್ದ ವೇದವತಿ ನದಿ ನೀರಲ್ಲಿ ಮೀನಿಗಾಗಿ ಬಲೆ ಹಾಕುವಾಗ ಶಿವು ಮುಗ್ಗರಿಸಿ ಬಿದ್ದಿದ್ದಾನೆ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ನದಿ ಪಾತ್ರಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಕೊಚ್ಚಿ ಹೋದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಶ್ರೀರಾಂಪುರ ಪೊಲೀಸ್ ಠಾಣೆ ಪಿಎಸ್‌ಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಳ್ಳ ದಾಟುವಾಗ ನೀರಲ್ಲಿ ಸಿಕ್ಕಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬರು ಹಳ್ಳ ದಾಟುವಾಗಲೇ ನೋಡ ನೋಡುತ್ತಿದ್ದಂತೆ ನೀರು ರಭಸವಾಗಿ ಹರಿದು ಬಂದಿದೆ. ಬೈಕ್ ಸಮೇತ ನೀರಲ್ಲಿ‌ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮೈ ಜುಮ್ ಎನ್ನಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾವಣಗೆರೆಯ ಹರಪನಹಳ್ಳಿಯ ಹೊಸಹಳ್ಳಿ ಸೇತುವೆ ಬಳಿ ಘಟನೆ ನಡೆದಿದೆ. ಮಲ್ಲೇಶ್(61) ಸಾವಿನ ದವಡೆಯಿಂದ ಪಾರಾದವರು. ಸ್ಥಳೀಯರು ಮಲ್ಲೇಶ್‌ರ ಕೈ ಹಿಡಿದು ಎಳೆದು ಪಾರು ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Karnataka Weather Forecast : ಮುಕ್ಕಾಲು ಕರ್ನಾಟಕಕ್ಕೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಇದರ ಪ್ರಭಾವದಿಂದಾಗಿ ಇಂದು ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain news) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

karnataka weather Forecast
karnataka weather Forecast

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

karnataka weather Forecast
karnataka weather Forecast

ಆರೆಂಜ್ ಅಲರ್ಟ್‌

ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಪಿಎಂ ಸ್ವ-ನಿಧಿ ಯೋಜನೆಯಡಿ (Uttara Kannada News) ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Uttara Kannada News
Koo

ಕಾರವಾರ: ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ (Uttara Kannada News) ಕಾರವಾರ ನಗರಸಭೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಾರವಾರ ನಗರಸಭೆಯು “Best Performing ULB-in Loan performance at State Level” ಪ್ರಶಸ್ತಿಗೆ ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ವತಿಯಿಂದ ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ನವದೆಹಲಿಯಲ್ಲಿ ಸಮಾರಂಭ ಆಯೋಜಿಸಿ ರಾಷ್ಟ್ರಮಟ್ಟದ Utkrishtata Ki ore Badhte Kadam & Celebreating Achivements, Inspiring Excellence ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದೇ ಆಗಸ್ಟ್ 22 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾರವಾರ ನಗರಸಭೆಯಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು ನಗರಸಭೆಯ ಪೌರಾಯುಕ್ತ ಜಗದೀಶ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫೀಸರ್ ಸುನೀಲ ವಸಂತ ನಾಯ್ಕ, ಸಮುದಾಯ ಸಂಘಟಕರಾದ ಪ್ರಭಾಕರ ನಾಯ್ಕ ಮತ್ತು ಮೇರಿ ಡಿಸೋಜಾ , ಸಿಆರ್‌ಪಿಗಳಾದ ಗೀತಾ, ನಂದಿನಿ ಶ್ರಮಿಸಿದ್ದರು.

Continue Reading

ಮಳೆ

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Karnataka Weather Forecast : ಬೆಂಗಳೂರು, ದೊಡ್ಡಬಳ್ಳಾಪುರದಲ್ಲಿ ಸುರಿದ ಮಳೆಗೆ (Rain News) ರಸ್ತೆಗಳು ಜಲಾವೃತಗೊಂಡು ಅವಾಂತರವೇ ಸೃಷ್ಟಿಯಾಗಿದೆ. ಆಗಸ್ಟ್‌ 23ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಸೋಮವಾರ ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ (Bengaluru rain) ಸುರಿದಿದೆ. ಕೇವಲ10-15 ನಿಮಿಷ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಹೆಬ್ಬಾಳದ ರಸ್ತೆಗಳು ಕೆರೆಯಂತಾಗಿ ಸವಾರರು, ಸಾರ್ವಜನಿಕರು ಹೈರಣಾದರು. ಇತ್ತ ಮಳೆ ಕಡಿಮೆಯಾಗುತ್ತಿದ್ದಂತೆ ಸವಾರರು ಟ್ರಾಫಿಕ್‌ನಲ್ಲಿ (Karnataka Weather Forecast) ಸಿಲುಕಿದ್ದರು.

ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ವಾಹನಗಳು ನಿಂತಲ್ಲೇ ನಿಲ್ಲುವಂತಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು. ಹೆಬ್ಬಾಳ ಸಂಪರ್ಕ ಕಲ್ಪಿಸುವ ಅಕ್ಕಪಕ್ಕದ ರಸ್ತೆಗಳು, ವಸಂತನಗರ, ರೈಲ್ವೆ ಪ್ಯಾರಲಲ್ ರಸ್ತೆ, ಪ್ಯಾಲೇಸ್ ಗುಟ್ಟಳ್ಳಿ ಸೇರಿದಂತೆ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮರವೊಂದ ಧರೆಗುರುಳಿದೆ. ಸಂಜಯ್ ನಗರದಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಮರ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತ ದೊಡ್ಡಬಳ್ಳಾಪುರದಲ್ಲೂ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ರಸ್ತೆಯ ಮೇಲೆ ನೀರು ತುಂಬಿ ಹರಿದಿತ್ತು. ದೊಡ್ಡಬಳ್ಳಾಪುರದ ತಾಲೂಕು ಕಚೇರಿ, ತೇರಿನ ಬೀದಿ ಸರ್ಕಲ್ ಬಳಿ ವಾಹನ ಸವಾರರು ಪರದಾಡಿದರು. ಒಂದು ಅಡಿಗೂ‌ ಹೆಚ್ಚು ನೀರು ನಿಂತು, ಜತೆಗೆ ಚರಂಡಿ ನೀರೆಲ್ಲಾ ತುಂಬಿ ರಸ್ತೆಯ ಮೇಲೆ ಹರಿದಿತ್ತು. ತಾಲೂಕು ಕಚೇರಿಯ ಮುಂದೆಯೇ ರಸ್ತೆ ಅವ್ಯವಸ್ಥೆಗೊಂಡಿತ್ತು. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ರಸ್ತೆಗಳು ನದಿಯಂತಾಗಿತ್ತು. ಬಾಳೆಹೊನ್ನೂರು-ಕಳಸ- ಕೊಟ್ಟಿಗೆಹಾರ ಸಂಪರ್ಕ ಕಡಿತಗೊಂಡಿತ್ತು. ಎನ್ ಆರ್ ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿವೆ.ವಿಜಯಪುರದ ನಾಲತವಾಡನಲ್ಲಿ ಭಾರಿ ಮಳೆಗೆ ಸಾರ್ವಜನಿಕರು, ಗ್ರಾಹಕರು ಪರದಾಡಿದರು. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮಾರ್ಕೆಟ್‌ಗೆ ಚರಂಡಿ ನೀರು ನುಗ್ಗಿತ್ತು.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಬಾಗಲಕೋಟೆಯಲ್ಲಿ ಅಬ್ಬರಿಸಿದ ಮಳೆ

ತಡರಾತ್ರಿ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರದಲ್ಲಿ ಮಳೆಯು ಅಬ್ಬರಿಸಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಇಡೀ ಬನಹಟ್ಟಿ ನಗರ ನದಿಯಂತೆ ಕಂಡು ಬಂತು. ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ನಿದ್ದೆಗೆಟ್ಟು ಬಕೆಟ್ ಮೂಲಕ ನೀರು ಹೊರ ಹಾಕಿದರು. ಬ್ಯಾರೆಲ್, ಮನೆ ಮುಂಭಾಗದ ಬೈಕ್‌ಗಳು ಜಲಾವೃತಗೊಂಡಿದ್ದವು. 1 ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಬನಹಟ್ಟಿ ಜನರು ತತ್ತರಿಸಿ ಹೋಗಿದ್ದರು.

ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ ಅವಾಂತರ

ರಾತ್ರಿ ಸುರಿದ ಮಳೆಗೆ ಕೆರೆಯ ಏರಿ ಒಡೆದು ಜಮೀನಿಗೆ ನೀರು ನುಗ್ಗಿದ್ದರಿಂದ ಸುಮಾರು 30 ಎಕರೆ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ಕೊಚ್ಚಿ ಹೋಗಿವೆ. ಕೂಡಲೇ ಏರಿ ದುರಸ್ತಿ ಮಾಡಿ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇತ್ತ ಚಿಕ್ಕಮಗಳೂರು ನಗರದ ಕಲ್ಲು ದೊಡ್ಡಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿ ಪರದಾಟ ಅನುಭವಿಸಿದರು. ರಸ್ತೆ ನೀರು ಹಳ್ಳದಂತೆ ಮನೆಗೆ ನುಗ್ಗಿತ್ತು. ನೀರು ಹೊರ ಹಾಕಲಾಗದೆ ಜನರು ಪರದಾಡಿದರು. ಮನೆಯಲ್ಲಿದ್ದ ಆಹಾರ ಪದಾರ್ಥ ಹಾಗೂ ವಸ್ತುಗಳು ಹಾನಿಯಾಗಿದ್ದವು. ನಗರ ಸಭೆ ವಿರುದ್ಧ ಸ್ಥಳೀಯ ನಾಗರಿಕರು ಇಡಿ ಶಾಪ ಹಾಕಿದ್ದರು.

ಆಗಸ್ಟ್‌ 23ರವರಗೆ ಭಾರಿ ಮಳೆ ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ (ಆ.19) ಆಗಸ್ಟ್ 23ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಹೀಗಾಗಿ ಆಗಸ್ಟ್ 19 ರಿಂದ 23 ರ ವರೆಗೆ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23 ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ್, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paralympic 2024
ಕ್ರೀಡೆ47 seconds ago

Paralympic 2024: ಒತ್ತಡಕ್ಕೆ ಒಳಗಾಗಬೇಡಿ; ಭಾರತದ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸಲಹೆ

Celina Jaitley
ಸಿನಿಮಾ23 mins ago

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Viral Video
Latest28 mins ago

Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

Kannada New Movie
ಬೆಂಗಳೂರು32 mins ago

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

Viral Video
Latest35 mins ago

Viral Video: ಈಜಲು ಹೋಗಿದ್ದವನ ಶರ್ಟ್‍ನೊಳಗೆ ನುಸುಳಿದ ಬೃಹತ್‌ ಹಾವು! ಮುಂದೇನಾಯ್ತು ನೋಡಿ

Vinesh Phogat
ದೇಶ48 mins ago

Vinesh Phogat: ಸಹೋದರಿಯ ವಿರುದ್ಧವೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ವಿನೇಶ್​ ಫೋಗಟ್​?

DK Shivakumar
ಕರ್ನಾಟಕ1 hour ago

DK Shivakumar: ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪ್ರತಿನಿಧಿ ಎಂದ ಡಿಕೆಶಿ

Viral News
ದೇಶ1 hour ago

Viral News: ದರೋಡೆ, ಪಿಕ್‌ಪಾಕೆಟಿಂಗ್‌, ಕಳ್ಳತನವೇ ಸಬ್ಜೆಕ್ಟ್‌.. ಕ್ರಿಮಿನಲ್‌ಗಳಿಗಾಗಿಯೇ ಇಲ್ಲಿವೆ ಶಾಲೆಗಳು; ಫೀಸ್‌ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

Supreme Court
ಪ್ರಮುಖ ಸುದ್ದಿ2 hours ago

Supreme Court: ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

Mohammed Shami
ಕ್ರೀಡೆ2 hours ago

Mohammed Shami: ರಣಜಿ ಟೂರ್ನಿಗೆ ಮೊಹಮ್ಮದ್ ಶಮಿ ಲಭ್ಯ?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌