Site icon Vistara News

Killer BMTC: ಕಿಲ್ಲರ್ ಬಿಎಂಟಿಸಿಗೆ ದ್ವಿಚಕ್ರ ವಾಹನ ಚಾಲಕ ಬಲಿ

bmtc bus

ಬೆಂಗಳೂರು: ರಾಜಧಾನಿಯಲ್ಲಿ ಕಿಲ್ಲರ್‌ ಬಿಎಂಟಿಸಿ (killer BMTC) ಬಸ್ಸಿಗೆ ವ್ಯಕ್ತಿಯೊಬ್ಬರು (Road Accident) ಬಲಿಯಾಗಿದ್ದಾರೆ. ಭರತ ರೆಡ್ಡಿ ಬಿ. (24) ಮೃತ ದುರ್ದೈವಿ.

ಯಲಹಂಕ ಡಿ ಮಾರ್ಟ್ ಬಳಿ ಘಟನೆ ನಡೆದಿದೆ. ಸುಜುಕಿ ಆಕ್ಸಿಸ್ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಿಎಂಟಿಸಿ ಬಸ್ ಬಂದು ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಸಂಬಂದ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾವಿಗೆ ಬಿದ್ದು ಮಗು ಸಾವು

ಶಿರಸಿ: ಬಾವಿಗೆ ಬಿದ್ದು 3 ವರ್ಷದ ಮಗು ಸಾವು ಕಂಡಿದೆ. ಶಿರಸಿ ನಗರದ ಸಿಪಿ ಬಜಾರ್ ಬಳಿ ಈ ದುರ್ಘಟನೆ ನಡೆದಿದೆ. ಸಿಪಿ ಬಜಾರ್‌ನ ಅನುಶ್ರೀ ರಾಜಶೇಖರ್ (3) ಸಾವನ್ನಪ್ಪಿದ ಮಗು.

ತಾಯಿ‌ ಜೊತೆ ಬಾವಿಯಿಂದ ನೀರು ತರುವ ವೇಳೆ ಈ ದುರ್ಘಟನೆ ನಡೆದಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು ಅಸುನೀಗಿದೆ. ಮಗು ರಕ್ಷಣೆಗೆ ಸ್ಥಳೀಯರು ಹರಸಾಹಸಪಟ್ಟರಾದರೂ, ಬದುಕುಳಿಸಲು ಸಫಲವಾಗಲಿಲ್ಲ. ಶಿರಸಿ ನಗರ ಠಾಣೆಯಲ್ಲಿ‌‌ ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು: ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಡಿಯಾಲ ಗ್ರಾಮದ ಮಣಿಕಂಠ(37) ಮೃತ ದುರ್ದೈವಿ.

ಹೆಡಿಯಾಲ ಸಮೀಪದ ಈರೇಗೌಡನ ಹುಂಡಿ ಗ್ರಾಮದ ತನ್ನ ಜಮೀನಿನಲ್ಲಿ ಮಣಿಕಂಠ ನೇಣಿಗೆ ಶರಣಾಗಿದ್ದಾನೆ. ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಮತ್ತಿತರ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: KILLER BMTC : ಬಿಎಂಟಿಸಿ ಬಸ್‌ ಹರಿದು ದುರಂತ; ಅಪ್ಪನೊಂದಿಗೆ ಶಾಲೆಗೆ ಹೋಗುತ್ತಿದ್ದ ಪುಟ್ಟ ಮಗು ಸಾವು

Exit mobile version