Shivaram Hebbar: ಇನ್ನು ಮುಂದೆ ನನ್ನ ರಾಜಕಾರಣ ಬದಲಾಗಲಿದೆ: ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌ - Vistara News

ಉತ್ತರ ಕನ್ನಡ

Shivaram Hebbar: ಇನ್ನು ಮುಂದೆ ನನ್ನ ರಾಜಕಾರಣ ಬದಲಾಗಲಿದೆ: ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌

ಬನವಾಸಿಯಲ್ಲಿ ಶಾಸಕ ಶಿವರಾಮ್‌ ಹೆಬ್ಬಾರ್‌ (Shivaram Hebbar) ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇನ್ನು ಮುಂದೆ ತನ್ನ ರಾಜಕಾರಣ ಬದಲಾಗಲಿದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬನವಾಸಿ: “ನಾನು ಯಾವುದೇ ಸಮಯದಲ್ಲಿ ಜಾತಿ ರಾಜಕಾರಣ ಮಾಡುವುದಿಲ್ಲ. ನೀತಿ ರಾಜಕಾರಣ ಮಾಡುವವನು. ಬಡವರ ಪರ, ಧರ್ಮದ ಪರ ರಾಜಕಾರಣವನ್ನು ಮಾಡುವವನು” ಎಂದು ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಹೇಳಿದರು.

ಸೋಮವಾರ ಸಂಜೆ ಪಟ್ಟಣದ ನಾಮದೇವ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ನಾನು ಕಳೆದ ನಾಲ್ಕು ದಶಕದಿಂದ ದ್ವೇಷದ ರಾಜಕಾರಣ, ಅನ್ಯಾಯ ಹಾಗೂ ವಿರೋಧದ ರಾಜಕಾರಣ ಮಾಡಿಕೊಂಡು ಬಂದವನಲ್ಲ. ವಿರೋಧಿಗಳನ್ನು ಪ್ರೀತಿಯಿಂದ ಕಂಡವನು. ಈ ಸಲ ರಾಜ್ಯದ ರಾಜಕಾರಣದಲ್ಲಿ ನನಗೆ ಬಹಳ ಕಷ್ಟದ ಗೆಲುವನ್ನು ತಂದು ಕೊಟ್ಟಿದ್ದೀರಿ. ಬಹಳ ಜನ ಪಕ್ಷದಲ್ಲಿಯೇ ಇದ್ದು ಪಕ್ಷಕ್ಕೆ ಚೂರಿ ಹಾಕುವ, ಮೋಸ ಮಾಡುವ ಕೆಲಸ ಮಾಡಿದ್ದಾರೆ. ಆಡಳಿತ ಪಕ್ಷದಲ್ಲಿದ್ದು ಗಟ್ಟಿಯಾದ ಶಾಸಕನಾಗಿ, ಮಂತ್ರಿಯಾಗಿದ್ದು ರಾಜ್ಯದಲ್ಲಿ ಹಿಡಿತವನ್ನು ಇಟ್ಟುಕೊಂಡಿದ್ದರೂ ಯಾವತ್ತೂ ಯಾರಿಗೂ ಮೋಸ, ದ್ರೋಹ ಮಾಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ವಿಶ್ವಾಸವನ್ನು ಇಟ್ಟುಕೊಂಡವನು. ವಿರೋಧಿಗಳನ್ನು ಪ್ರೀತಿಯಿಂದ ಕಂಡಿದ್ದು ನನಗೆ ಅಪಾಯವಾಯಿತೇನೊ ಎಂಬ ಅನಿಸಿಕೆ ಮೂಡುತ್ತಿದೆ” ಎಂದರು.

ಇದನ್ನೂ ಓದಿ: Karnataka Election: ಜನರಿಗಾಗಿ ಬದುಕಿದ್ದೇನೆ, ಮೋಸ ಮಾಡುವ ಅವಶ್ಯಕತೆಯಿಲ್ಲ: ಸಚಿವ ಶಿವರಾಮ್‌ ಹೆಬ್ಬಾರ್‌

“ಇನ್ನು ಮುಂದೆ ನನ್ನ ರಾಜಕಾರಣ ಬದಲಾವಣೆ ಆಗುತ್ತದೆ. ವಿಷವನ್ನು ನುಂಗಿದ ವಿಷಕಂಠನಾಗುತ್ತೇನೆ. ಯಾರಿಗೆ ಬಿಜೆಪಿ ಮೇಲೆ ವಿಶ್ವಾಸವಿದೆ ಅವರು ಮಾತ್ರ ಬಿಜೆಪಿ ಪಕ್ಷದಲ್ಲಿ ಉಳಿಯಬೇಕು. ಕೇಂದ್ರದಲ್ಲಿ ನರೇಂದ್ರ ಮೋದಿ ಬೇಕು, ಯಲ್ಲಾಪುರ ಕ್ಷೇತ್ರದಲ್ಲಿ ಹೆಬ್ಬಾರ ಬೇಡ ಎಂಬ ರೀತಿಯಲ್ಲಿ ರಾಜಕಾರಣ ಮಾಡುವವವರಿಗೆ ಪಕ್ಷದಲ್ಲಿ ಜಾಗವಿಲ್ಲ. ನನ್ನ ವೈಯಕ್ತಿಕ ತೇಜೋವಧೆ ಮಾಡುತ್ತಿರುವ ಜನ ತಾಕತ್ತಿದ್ದರೆ ರಾಜಕಾರಣದಲ್ಲಿ ಎದುರಿಸಿ. ಗೆಲ್ಲಿಸುವುದು ತುಂಬಾ ಕಷ್ಟ, ಸೋಲಿಸುವುದು ತುಂಬಾ ಸುಲಭ ಎಂದು ಹೇಳಿದರು.

ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿರುಗಾಳಿ ವಿರುದ್ಧ ಜಯ ಸಾಧಿಸಿದ್ದೇನೆ. ಈ ಬಾರಿ ಕಾಂಗ್ರೆಸ್ ಬಿರುಗಾಳಿಯ ನಡುವೆ ಗೆಲುವು ಸಾಧಿಸಿದ್ದೇನೆ. ಎರಡು ಬಾರಿಯು ನಿಮ್ಮೆಲ್ಲರ ಆಶೀರ್ವಾದ, ವಿಶ್ವಾಸದಿಂದ ಬಿರುಗಾಳಿಯ ವಿರುದ್ಧ ಜಯಗಳಿಸಿದ್ದೇನೆ. ಯಾವುದೇ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸ್ಟಾರ್ ಪ್ರಚಾರಕರನ್ನು ನನ್ನ ಕ್ಷೇತ್ರಕ್ಕೆ ಕರೆಸಲಿಲ್ಲ. ಕ್ಷೇತ್ರದ ಕಾರ್ಯಕರ್ತರೇ ನನ್ನ ಸ್ಟಾರ್ ಪ್ರಚಾರಕರು. ನನ್ನನ್ನು ನಾಲ್ಕನೆಯ ಬಾರಿಗೆ ವಿಧಾನಸಭೆಗೆ ಆಯ್ಕೆ ಮಾಡಿದ ಕ್ಷೇತ್ರದ ಜನರಿಗೆ ಕೋಟಿ ನಮನಗಳು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ ಎನ್ನುವ ಆತಂಕ ಕ್ಷೇತ್ರದ ಜನತೆಗೆ ಬೇಡ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವುದು ಶಾಸಕನಾಗಿ ನನ್ನ ಹಕ್ಕು. ವಿರೋಧ ಪಕ್ಷದಲ್ಲಿದ್ದರೂ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತೇನೆ” ಎಂದರು.

ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ನರಸಿಂಹ ಹೆಗಡೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ನಾಯ್ಕ್, ಗ್ರಾಪಂ ಅಧ್ಯಕ್ಷರಾದ ತುಳಸಿ ಆರೇರ, ಪ್ರಸನ್ನ ಹೆಗಡೆ, ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಗಣೇಶ ಸಣ್ಣಲಿಂಗಣ್ಣನವರ, ಎಪಿಎಂಸಿ ಸದಸ್ಯರಾದ ಶಿವಕುಮಾರ್ ಗೌಡ, ಪ್ರಶಾಂತ ಗೌಡ, ಮಲ್ಲಸರ್ಜನ್ ಗೌಡ, ಗಣಪತಿ ನಾಯ್ಕ್, ಪ್ರಸಾದ ಭಟ್ ಮಾತನಾಡಿದರು.

ಇದನ್ನೂ ಓದಿ: Karnataka Election 2023: ಸಿಎಂ ಬಳಿಕ ಸಂಪುಟ ಪ್ಲ್ಯಾನ್‌; ಸಚಿವರ ಆಯ್ಕೆಗೆ ಹೈಕಮಾಂಡ್‌ 10 ಅಂಶ ಸೂತ್ರ

ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳಿಂದ ಶಾಸಕರನ್ನು ಸನ್ಮಾನಿಸಲಾಯಿತು. ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಅಧ್ಯಕ್ಷರು, ಬಿಜೆಪಿ ಮುಖಂಡರು, ಸಾವಿರಾರು ಬಿಜೆಪಿ ಕಾರ್ಯಕರ್ತರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

Elephant attack : ಭಾರಿ ಮಳೆಗೆ (Karnataka Rain) ಜನರು ತತ್ತರಿಸಿ ಹೋಗಿದ್ದಾರೆ. ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಇತ್ತ ನದಿಗಳು ಉಕ್ಕಿ ಹರಿಯುತ್ತಿದ್ದು 150 ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

Elephant attack
Koo

ಚಿಕ್ಕಮಗಳೂರು: ಮಳೆ (Karnataka Rain) ಮಧ್ಯೆ ಮಲೆನಾಡಲ್ಲಿ ಕಾಡಾನೆಗಳ ಕಾಟ (Elephant attack) ಶುರುವಾಗಿದೆ. 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್ತ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗುತ್ತಿದೆ.

ದಿನಕ್ಕೊಂದು ಹಳ್ಳಿಯಲ್ಲಿ ಕಾಡಾನೆಗಳು ಕಾಣಿಸುಕೊಳ್ಳುತ್ತಿದ್ದು, ಕಾಫಿ ತೋಟಗಳನ್ನು ನಾಶ ಮಾಡುತ್ತಿವೆ. ಮಳೆಯಿಂದ ನಾನಾ ಅವಾಂತರವೇ ಸೃಷ್ಟಿಯಾಗಿದೆ. ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಜನರು ಕಂಗಾಲಾಗಿದದಾರೆ. ಆನೆಗಳನ್ನ ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಆಗ್ರಹಿಸಿದ್ದಾರೆ.

ಮಳೆಗೆ ಮನೆಗಳಿಗೆ ನುಗ್ಗುತ್ತಿರುವ ಹಾವುಗಳು

ಕೊಪ್ಪಳದಲ್ಲಿ ವ್ಯಾಪಕ ಮಳೆಗೆ ಆಶ್ರಯ ಪಡೆಯಲು ಮನೆಗಳಿಗೆ, ಗುಡಿಸಲಿಗೆ ಹಾವುಗಳು ನುಗ್ಗುತ್ತಿವೆ. ಹಾವುಗಳ ರಕ್ಷಣೆ ಮಾಡಿ ಉರಗ ಪ್ರೇಮಿ ಅನಿಲ್ ಕಾಡಿಗೆ ಬಿಡುತ್ತಿದ್ದಾರೆ. 1,500ಕ್ಕೂ ಹೆಚ್ಚು ಹಾವುಗಳ ರಕ್ಷಣೆ ಮಾಡಲಾಗಿದೆ. ಕೊಪ್ಪಳ ತಾಲೂಕಿ ಹಿಟ್ನಾಳ ಗ್ರಾಮದ ಸ್ನೇಕ್ ಅನಿಲ್ ಅವರು, ಮಳೆಗಾಲದಲ್ಲಿ ಹೆಚ್ಚು ಹಾವುಗಳ ರಕ್ಷಣೆ ಮಾಡಿ ಕಾಡಿಗೆ ಬಿಡುತ್ತಾರೆ. ನಾಗರಹಾವು, ರಸೆಲ್ ವೈಪರ್, ಕಾಮನ್ ಕ್ರೇಟ್, ಕೇರೆ ಹಾವು, ತೋಳದ ಹಾವು, ನೀರು ಹಾವು, ಚೆಕ್ ಕೀಲ್ ಬ್ಯಾಕ್ಸ್ ಹಾವುಗಳ ರಕ್ಷಣೆ ಮಾಡಲಾಗಿದೆ.

ಭಾರಿ ಮಳೆಗೆ 150 ಮನೆಗಳು ಜಲಾವೃತ

ಘಟಪ್ರಭಾ ನದಿ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮ ಪತರಗುಟ್ಟಿದೆ. ಇದೊಂದೇ ಗ್ರಾಮದಲ್ಲಿ ಬೆಳಗಾಗುವಷ್ಟರಲ್ಲಿ 150 ಮನೆಗಳು ಜಲಾವೃತಗೊಂಡಿದೆ. ಗ್ರಾಮದಲ್ಲಿರುವ ಚರ್ಚ್‌ವರೆಗೂ ನೀರು ನುಗ್ಗಿದೆ. ಮನೆಗೆ ನೀರು ಬರುತ್ತಿದ್ದಂತೆ ಸಾಮಾಗ್ರಿಗಳನ್ನು ಬಿಟ್ಟು ಜನರು ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ನೆರೆ ಸಂತ್ರಸ್ತರ ಒತ್ತಾಯಿಸಿದ್ದಾರೆ. ನಮಗೆ ಪರಿಹಾರ ಬೇಡ ಮನೆಗಳನ್ನು ಕಟ್ಟಿಸಿಕೊಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

ಹರಿಯುವ ನೀರಿನಲ್ಲಿ ಪಂಪ್‌ಸೆಟ್‌ ತಂದ ರೈತರು

ನದಿ ತೀರದಲ್ಲಿ ಇಟ್ಟಿದ್ದ ಮೋಟಾರ್ ಪಂಪ್‌ಸೆಟ್‌ಗಳನ್ನು ಹೊರ ತೆಗೆಯಲು ರೈತರು ಹರಸಾಹಸ ಪಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚನ್ನೂರು ಗ್ರಾಮದ ರೈತರು ಕಳೆದ ಎರಡು ತಿಂಗಳ ಹಿಂದೆ ನೀರು ಇಲ್ಲದೇ ಇದ್ದಾಗ, ನದಿ ಸಮೀಪ ಪಂಪ್ ಸೆಟ್ ಬಿಟ್ಟಿದ್ದರು. ಈಗ ನದಿಗೆ ನೀರು ಹರಿದು ಬರುತ್ತಿದ್ದು, ಪಂಪ್ ಸೆಟ್‌ಗಳು ಕೊಚ್ಚಿ ಹೋಗುವ ಆತಂಕವಿದೆ. ಈ ಕಾರಣಕ್ಕೆ ತೆಪ್ಪದ ಮೂಲಕ ತೆರಳಿ ಪಂಪ್ ಸೆಟ್ ತಂದಿದ್ದಾರೆ. ಹರಿಯುವ ನದಿ ನೀರಲ್ಲೇ ಜೀವದ ಹಂಗು ತೊರೆದು ಪಂಪ್ ಸೆಟ್ ಗಳನ್ನು ತಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

Karnataka Rain : ಕೊಡಗಿನ ಮಾದಪುರ ಟೌನ್‌ ಸಮೀಪ ಗುಡ್ಡ ಕುಸಿದು, ಭೂಮಿ ಬಿರುಕು ಬಿಟ್ಟಿದೆ. ಚಿಕ್ಕಮಗಳೂರಿನಲ್ಲಿ ಮಳೆಯ ನಡುವೆ ಆತಂಕದ ಹುಟ್ಟಿಸಿದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ. ವಿಜಯನಗರದಲ್ಲಿ ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆಯಾದರೆ, ಗೋಕಾಕ ನಗರ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ.

VISTARANEWS.COM


on

By

karnataka Rain
Koo

ಕೊಡಗು: ಕೊಡಗು ಜಿಲ್ಲೆಯಾದ್ಯಂತ ವರುಣನ (Karnataka Rain) ಆರ್ಭಟ ಕೊಂಚ ತಗ್ಗಿದೆ. ಮಳೆ ಕಡಿಮೆಯಾದರೂ ಮಳೆಯ ಅನಾಹುತ ನಿಂತಿಲ್ಲ. ಮಾದಪುರ ಟೌನ್ ಸಮೀಪ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಜಾಗದಲ್ಲೆ ಭೂಮಿ ಬಿರುಕು ಬಿಟ್ಟಿದೆ. ಮಳೆ ಹೆಚ್ಚಾದಲ್ಲಿ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಮಡಿಕೇರಿ ಮಾದಪುರ ಸೋಮವಾರಪೇಟೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ಗುಡ್ಡ ಕುಸಿದರೆ ಮಡಿಕೇರಿ – ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ. ಸದ್ಯ ಆತಂಕದಲ್ಲೇ ವಾಹನ ಸವಾರರು ಓಡಾಡುತ್ತಿದ್ದಾರೆ.

ಉಕ್ಕಿ ಹರಿಯುವ ನೀರಿಗೆ ಜಿಗಿದು ಯುವಕರ ಈಜಾಟ

ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನದಿ ಸೇರಿದಂತೆ ಕಾಲುವೆಗಳಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇತ್ತ ಬಾಲಕರು ಜೀವದ ಹಂಗು ತೊರೆದು, ಕಾಲುವೆಗಳಿಗೆ ಜಿಗಿಯುತ್ತಿದ್ದಾರೆ. ರಕ್ಷಣಾ ಕವಚಗಳು ಇಲ್ಲದೆ ಕಾಲುವೆಗಳಿಗೆ ಮೇಲಿಂದ ಜಿಗಿದು ಆಟವಾಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಜಲಾಶಯದ ಬಳಿ ಇರುವ ಕಾಲುವೆಗಳಲ್ಲಿ ಜಿಗಿದು ಈಜಾಡುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆಯ ನಡುವೆ ಆತಂಕದ ಹುಟ್ಟಿಸಿದ ಕಾಳಿಂಗ

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರ ನಡುವೆ ಕಾಳಿಂಗ ಸರ್ಪವೊಂದು ಪ್ರತ್ಯಕ್ಷಗೊಂಡು ಆತಂಕದ ಹುಟ್ಟಿಸಿತ್ತು. 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ. ಕಳಸದ ಸಂಸೆ ಗ್ರಾ.ಪಂ ವ್ಯಾಪ್ತಿಯ ಪಾತಿಗುಡ್ಡದಲ್ಲಿ‌ ಘಟನೆ ನಡೆದಿದೆ. ಕಾಳಿಂಗ ಸರ್ಪ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿತ್ತು. ಉರಗತಜ್ಞ ರಿಜ್ವಾನ್ ಹಾಗೂ ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ವಿಜಯನಗರದಲ್ಲಿ ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆ

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಐತಿಹಾಸಿಕ ಹಂಪಿಯ ನಾನಾ ಸ್ಮಾರಕಗಳು ಮುಳುಗಡೆಯಾಗಿದೆ. ವಿಜಯನಗರದ ಕೋದಂಡರಾಮ ದೇಗುಲದ ಅರ್ಧಕ್ಕೆ ನೀರು ಹರಿದು ಬಂದಿದೆ. ಸೀತೆ ಸೆರಗು, ಸುಗ್ರೀವ ಗುಹೆಯ ಬಳಿಯೂ ಜಲಾವೃತಗೊಂಡಿದೆ. ನದಿ ಪಾತ್ರಕ್ಕೆ ತೆರಳದಂತೆ ಸ್ಥಳೀಯ ಆಡಳಿತ ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆಯೇ ಸ್ನಾನಘಟ್ಟಗಳು, ಪುರಂದರ ದಾಸರ ಮಂಟಪಗಳು ಮುಳುಗಿದೆ.

ಇತ್ತ ತುಂಗಭದ್ರಾ ನದಿಯ ನೀರು ತುಂಬಿ ಐತಿಹಾಸಿಕ ಮದಲಘಟ್ಟ ಆಂಜನೇಯ ದೇಗುಲದ ಬಳಿ ಹರಿದಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮದಲಘಟ್ಟ ಆಂಜನೇಯ ಸ್ವಾಮಿ ದೇಗುಲದಲ್ಲಿ ಇನ್ನೂ ಸ್ವಲ್ಪ ನೀರು ಹೆಚ್ಚಾದರೆ ಜಲಾವೃತ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

ಪ್ರವಾಹಕ್ಕೆ ಸಿಲುಕಿ ನಲುಗಿ ಹೋದ ಗೋಕಾಕ ನಗರ

ಪ್ರವಾಹಕ್ಕೆ ಸಿಲುಕಿ ಗೋಕಾಕ ನಗರ ನಲುಗಿ ಹೋಗಿದೆ. ಹೀಗಾಗಿ ಶಾಸಕ‌ ರಮೇಶ ಜಾರಕಿಹೊಳಿಯವರಿಂದ ಪರಿಸ್ಥಿತಿ ಅವಲೋಕನ ಮಾಡಿದರು. ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ವಿವಿಧ ಸ್ಥಳಗಳಿಗೆ ರಮೇಶ ಭೇಟಿ ನೀಡಿದರು. ಬೆಳಗಾವಿ, ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮುಂದುವರೆದ ಮಳೆ ಅಬ್ಬರಕ್ಕೆ ಚಿಕ್ಕೋಡಿ ಉಪವಿಭಾಗದ ಜನಜೀವನ ಅಸ್ತವ್ಯಸ್ತವಾಗಿದೆ. ಸರಿಯಾಗಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸದ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ರೈತನ ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯ ಆಡಳಿತದವರು ನದಿಪಾತ್ರದಿಂದ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸುತ್ತಿದ್ದಾರೆ. ಆದರೆ ನಾವು ಹೋಗುವುದಾದರೂ ಎಲ್ಲಿಗೆ ? ರಾಜ್ಯದ ಜನತೆಗೆ ಬೆಳೆದ ಬೆಳೆಗಳನ್ನು ಪೂರೈಸಿ ಪ್ರತಿಯೊಬ್ಬರಿಗೂ ಆಸರೆಯಾಗುತ್ತೇವೆ.

ಆದರೆ ಪ್ರವಾಹದ ಪರಿಸ್ಥಿತಿ ಸಂದರ್ಭದಲ್ಲಿ ನಮ್ಮ ಬಗ್ಗೆ ಕಾಳಜಿ ವಹಿಸಲು ಸರ್ಕಾರದಿಂದ ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ನಾವು ಎಲ್ಲಿಯಾದರೂ ಗುಡಿ-ಗುಂಡಾತರಗಳಲ್ಲಿ ತಂಗಿ ಜೀವನ ನಡೆಸುತ್ತೇವೆ. ಆದರೆ ನಮ್ಮ ಬಳಿ ಲಕ್ಷಾಂತರ ರೂಪಾಯಿ ಮೌಲ್ಯದ ಜಾನುವಾರುಗಳಿವೆ. ಜಾನುವಾರುಗಳು ಬೆಚ್ಚಗೆ ವಾತಾವರಣ ಬೇಕಾಗುತ್ತದೆ. ಸರ್ಕಾರಿ ಜಾಗಗಳಲ್ಲಿ ಜಾನುವಾರುಗಳಲ್ಲಿ ಶೆಡ್ ನಿರ್ಮಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇತ್ತ ಘಟಪ್ರಭಾ ನದಿ ತೀರದಲ್ಲಿ ಪ್ರವಾಹದ ಆತಂಕ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ. ಢವಳೇಶ್ವರ ಗ್ರಾಮದ ಸುಪ್ರಸಿದ್ಧ ಲಕ್ಷ್ಮೀ ದೇವಿ ದೇವಸ್ಥಾನ ಜಲಾವೃತಗೊಂಡಿದೆ. ಜತೆಗೆ ಡವಳೇಶ್ವರ ಮಹಾಲಿಂಗಪುರ ಸಂಪರ್ಕ ಕಲ್ಪಿಸುವ ನಂದಗಾಂವ ಸೇತುವೆ ಮುಳುಗಡೆಯಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಕ್ಕೆ ಜಿಲ್ಲಾ ಆಡಳಿತ ಆದೇಶಿಸಿದೆ. ಈಗಾಗಲೇ ಢವಳೇಶ್ವರ ಗ್ರಾಮದಲ್ಲಿ ಗಂಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ.

ಮಳೆ ನಿಂತರೂ ನಿಲ್ಲದ ಅನಾಹುತ

ಹಾವೇರಿಯಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದೆ. ಮಳೆ ನಿಂತರೂ ಅದರಿಂದ ಆಗುತ್ತಿರುವ ಅನಾಹುತಕ್ಕೆ ರೈತರು ಕಂಗಾಲಾಗಿದ್ದಾರೆ. ಹಾನಗಲ್ ತಾಲೂಕಿನ ವರ್ದಿ ಗ್ರಾಮದಲ್ಲಿ ವರದಾ ನದಿಯ ನೀರು ಹರಿದು ರೈತರು ಬೆಳೆ ಕಳೆದುಕೊಂಡಿದ್ದಾರೆ. ರೈತರ ಹೊಲಗಳಿಗೆ ನೀರು ನುಗ್ಗಿ ಶೇಂಗಾ, ಕಬ್ಬು ಬೆಳೆ ಹಾನಿಯಾಗಿದೆ.

ಮುಳುಗಡೆ ಹಂತ ತಲುಪಿದ ವೆಲ್ಲೆಸ್ಲಿ ಸೇತುವೆ

ಮಂಡ್ಯದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ಕೆಆರ್‌ಎಸ್ ಡ್ಯಾಂನಿಂದ 1.30,867 ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಶ್ರೀರಂಗಪಟ್ಟಣದ ಐತಿಹಾಸಿಕ ಸೇತುವೆಯನ್ನು 1804 ರಲ್ಲಿ ಸಂಪೂರ್ಣ ಕಲ್ಲುಗಳಿಂದಲೇ ನಿರ್ಮಿಸಲಾಗಿದೆ. ಆಗಿನ ದಿನಗಳಲ್ಲಿ ಬೆಂಗಳೂರು- ಮೈಸೂರು ನಡುವೆ ಸಂಚರಿಸಲು ಇದ್ದ ಏಕೈಕ ಸೇತುವೆ ಇದಾಗಿದೆ. ಡ್ಯಾಂ ನಿರ್ಮಾಣವಾದಗಿನಿಂದ ಈ ವರೆಗೆ ಮೂರು ಬಾರಿ ಸೇತುವೆ ಮುಳುಗಡೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka Rain : ಹಲವೆಡೆ ರಭಸವಾಗಿ ಬೀಸುತ್ತಿರುವ ಗಾಳಿ-ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಮನೆ ಮೇಲೆ ತೆಂಗಿನ ಮರ ಬಿದ್ದರೆ, ಹಲವೆಡೆ ಸೇತುವೆಗಳು ಮುಳುಗಡೆಯಾಗಿ, ದೇವಸ್ಥಾನಗಳು ಜಲಾವೃತಗೊಂಡಿದೆ. ಜತೆಗೆ ಉಕ್ಕಿ ಹರಿಯುತ್ತಿರುವ ನದಿ ನೀರು ಸೇವಿಸದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Rain
Koo

ತುಮಕೂರು: ರಾಜ್ಯಾದ್ಯಂತ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ರಭಸವಾಗಿ ಬೀಸುತ್ತಿರುವ ಗಾಳಿಗೆ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕೆ ಅಪ್ಪಿಸುತ್ತಿದೆ. ಸದ್ಯ ತುಮಕೂರಿನ ತುರುವೇಕೆರೆ ತಾಲೂಕಿನ ದಬ್ಬೆಘಟ್ಟ ಹೋಬಳಿಯ ಮಾವಿನ ಕೆರೆ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ತೆಂಗಿನ ಮರವೊಂದು ಮನೆ ಮೇಲೆ ಉರುಳಿ ಬಿದ್ದಿದೆ. ಮಾವಿನಕೆರೆ ಗ್ರಾಮದ ನಿಂಗಮ್ಮ ಎಂಬುವರ ಮನೆ ಮೇಲೆ ತೆಂಗಿನ ಮರ ಬಿದ್ದಿದೆ.

ಸಣ್ಣನಂಜೇಗೌಡ ಎಂಬುವರ ತೋಟದ ತೆಂಗಿನ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ನಿಂಗಮ್ಮ ಎಂಬುವರ ಮನೆಯ ಮೇಲೆ ಮರ ಬಿದ್ದು, ಜಖಂಗೊಂಡಿದೆ. ನಿಂಗಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೆಂಗಿನ ಮರಗಳು ಎತ್ತರವಾಗಿದ್ದು ತೀರಾ ಹಳೆ ಮರಗಳಾಗಿವೆ. ಹಳೆಯದಾದ ತೆಂಗಿನ ಮರಗಳನ್ನು ತೆರವುಗೊಳಿಸುವಂತೆ ಕೆಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾ.ಪಂ ಪಿಡಿಒಗೆ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ನದಿ ತೀರದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ

ಬೆಳಗಾವಿಯ ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ನದಿ ತೀರದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದೆ. ಮಲಪ್ರಭಾ ನದಿ ತೀರದಲ್ಲಿ ಸುಮಾರು 10 ಅಡಿ ಉದ್ದದ ಮೊಸಳೆಯು ಕಾಣಿಸಿಕೊಂಡಿದೆ. ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಬೃಹತ್ ಗಾತ್ರದ ಮೊಸಳೆ ಕಂಡು ಗ್ರಾಮಸ್ಥರು ಭಯಗೊಂಡಿದ್ದಾರೆ. ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.

ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಹೊರ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಹಂಚಿನಾಳ, ಯರಗೋಡಿ, ಕಡದರಗಡ್ಡಿ, ಯಳಗುಂದಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ನಡುಗಡ್ಡೆಯಲ್ಲಿ ವಾಸಿಸುವ ಜನರಿಗೆ ಸಂಪೂರ್ಣ ಜಲದಿಗ್ಭಂಧನ ಹಾಕಲಾಗಿದೆ. ರೈತರ ಪಂಪ್ ಸೆಟ್, ಪೈಪ್‌ಗಳು ಮುಳುಗಡೆಯಾಗಿದೆ.

ಇದೇ ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡು ಕುರಿಗಾಹಿಗಳು ಪೇಚಿಗೆ ಸಿಲುಕಿದರು. ಮುಳುಗಡೆಯಾದ ಶೀಲಹಳ್ಳಿ ಸೇತುವೆ ಬಳಿಯ ಗುಡ್ಡದಲ್ಲಿ ಕುರಿಗಳನ್ನು ಮೇಯಲುಬಿಟ್ಟು,ಮೂವರು ಕುರಿಗಾಹಿಗಳು ಬೆಟ್ಟ ಇಳಿದಿದ್ದರು. ಈ ವೇಳೆ ಧುಮ್ಮಿಕ್ಕಿ ಹರಿಯಿತ್ತಿರುವ ನದಿ ನೋಡಿ‌ ಬೆಚ್ಚಿ ಬಿದ್ದರು. ಕೆಲಹೊತ್ತು ಹೇಗೆ ಸುರಕ್ಷಿತವಾಗಿ ಸ್ಥಳ ತಲುಪ ಬೇಕೆಂದು ಗೊತ್ತಾಗದೇ ಕಂಗಾಲಾಗಿದ್ದರು. ಸುಮಾರು ಒಂದು ಗಂಟೆ ಬೆಟ್ಟದಲ್ಲೇ ಅತ್ತಿತ್ತ ಓಡಾಡಿ, ಬಳಿಕ ಮತ್ತೊಂದು ದಡದಲ್ಲಿ ವ್ಯಕ್ತಿಯೊಬ್ಬ ಸೂಚಿಸಿದ ದಿಕ್ಕಿನತ್ತ ಹೊರಟು ಹೋದರು.

ಇತ್ತ ತುಂಗಭದ್ರಾ ಡ್ಯಾಂನಿಂದ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ರಾಯಚೂರಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ರಾಯರ ಜಪದ ಕಟ್ಟೆಗೆ ಮುಳುಗಿದೆ. ಜಪದ ಕಟ್ಟೆ ಬಳಿ ತೆರಳದಂತೆ ಆಡಳಿತ ಮಂಡಳಿ ಬ್ಯಾರಿಕೇಡ್ ಅಳವಡಿಸಿ-ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ. ರಾಯಚೂರಿನ ಕೃಷ್ಣಾ ತೀರದ ಮತ್ತೊಂದು ದೇವಸ್ಥಾನ ಜಲಾವೃತಗೊಂಡಿದೆ. ಕೊಪ್ಪರದಲ್ಲಿರೊ ಲಕ್ಷ್ಮೀ ನರಸಿಂಹ ದೇವಸ್ಥಾನ ಮುಳುಗುಡೆಯಾಗಿದೆ. ದೇವಸ್ಥಾನ ಜಲಾವೃತ ಹಿನ್ನೆಲೆ ಅರ್ಚಕರು ನೀರಲ್ಲೇ ನಡೆದುಕೊಂಡು ಹೋಗಿ ಪೂಜಾ ಕೈಂಕರ್ಯ ನಡೆಸಿದ್ದಾರೆ.

ಇದನ್ನೂ ಓದಿ: Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

ರೌದ್ರಾವತಾರ ತಾಳಿದ ಐತಿಹಾಸಿಕ ಮದಗದ ಕೆರೆ

ಚಂದ್ರದ್ರೋಣ ಪರ್ವತದ ಸಾಲಿನ ಗಿರಿ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಐತಿಹಾಸಿಕ ಮದಗದ ಕೆರೆ ರೌದ್ರಾವತಾರ ತಾಳಿದೆ. ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಮದಗದ ಕೆರೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಟ್ ಆಗಿದೆ. ಸಖರಾಯಪಟ್ಟಣ-ಮದಗದ ಕೆರೆ-ಮದಗದ ಕೆರೆ- ಮುಸ್ಲಾಪುರ ರಸ್ತೆ ಸಂಪರ್ಕ ಬಂದ್‌ ಆಗಿದೆ. ಸಾವಿರಾರು ಎಕರೆ ತೋಟ, ಜಮೀನುಗಳು ಜಲಾವೃತಗೊಂಡಿದೆ

ನದಿಯ ನೀರು ನೇರವಾಗಿ ಸೇವಿಸದಂತೆ ಸೂಚನೆ

ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ದೇವಸ್ಥಾನಕ್ಕೆ ಬರುವ ಭಕ್ತರು, ನದಿ ದಡದ ಗ್ರಾಮಸ್ಥರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿಯಲ್ಲಿ ಪ್ರವಾಹ ಇರುವ ಹಿನ್ನೆಲೆಯಲ್ಲಿ ನದಿಗೆ ಇಳಿಯದಂತೆ ಭದ್ರತಾ ಸಿಬ್ಬಂದಿ, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಗ್ರಾಮಸ್ಥರು ನದಿಯ ನೀರು ನೇರವಾಗಿ ಸೇವಿಸದಂತೆ ಸೂಚನೆ ನೀಡಲಾಗಿದೆ. ಇದರಿಂದ ವಾಂತಿ- ಬೇಧಿ ಕಾಣಿಸಿಕೊಳ್ಳುವ ಸಾಧ್ಯತೆ ಎಂದು ಪ್ರಚಾರ ಮಾಡಲಾಗುತ್ತಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗ್ರಾಮದ ನದಿಯ ದಡದಲ್ಲಿನ ಹೊಳೆ ಬಸವವೇಶ್ವರ ದೇವಸ್ಥಾನ‌ ಮುಳುಗಡೆಯಾಗಿದೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದೆ. ಹೀಗಾಗಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ದೇವಸ್ಥಾನಕ್ಕೆ ನುಗ್ಗಿದ ಘಟಪ್ರಭೆ

ಘಟಪ್ರಭೆಯ ರುದ್ರ ಪ್ರತಾಪಕ್ಕೆ ದೇವಸ್ಥಾನಕ್ಕೆ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದ ಪ್ರಸಿದ್ಧ ಉದ್ದಮ್ಮ ದೇವಸ್ಥಾನ ಮುಳುಗುಡೆಯಾಗಿದೆ. ನೀರಿಲ್ಲಿಯೇ ದೇವಸ್ಥಾನದ ಅರ್ಚಕರು ಪೂಜೆ ಸಲ್ಲಿಸಿದ್ದಾರೆ. ಇನ್ನೂ ಸುಣಧೋಳಿ ಗ್ರಾಮಕ್ಕೂ ಘಟಪ್ರಭಾ ನದಿ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ದೇವಸ್ಥಾನ ಆವರಣದ ಮಳಿಗೆಗಳಿಗೂ ನುಗ್ಗಿದ ನೀರು ನುಗ್ಗಿದ್ದು, ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗುವ ಆತಂಕವಿದೆ.

ಇನ್ನೂ ಮುಸುಗುಪ್ಪಿ‌ ಗ್ರಾಮವು ದ್ವೀಪದಂತಾಗಿದೆ. ಗ್ರಾಮದ ೪೫೦ ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮುಸುಗುಪ್ಪಿ ಗ್ರಾಮಸ್ಥರು ನಡುಮಟ್ಟದ ನೀರಲ್ಲಿ ಸರ್ಕಸ್ ಮಾಡಿಕೊಂಡು ಓಡಾಡುವಂತಾಗಿದೆ. ಗ್ರಾಮದ ಲಕ್ಷ್ಮೀ ದೇವಿ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಬಹುತೇಕ‌ ಗ್ರಾಮಸ್ಥರು ಜಲಾವೃತವಾದ ಗ್ರಾಮದಿಂದ ಕಾಳಜಿ‌ ಕೇಂದ್ರಕ್ಕೆ ಶಿಫ್ಟ್ ಆಗಿದ್ದಾರೆ.

ಇನ್ನೂ ಮುಸಗುಪ್ಪಿ ಗ್ರಾಮದಲ್ಲಿ ಲಕ್ಷ್ಮಿ ದೇವಿ ದೇವಸ್ಥಾನ ಮಾತ್ರವಲ್ಲದೇ ಬ್ಯಾಂಕ್, ಕಲ್ಯಾಣ ಮಂಟಪವು ಮುಳುಗಿದೆ. ದೇವಸ್ಥಾನ ಮುಂಭಾಗದ ಮಳಿಗೆಗಳು, ರಂಗಮಂದಿರ, ಮನೆ ಕೂಡ ಮುಳುಗಡೆಯಾಗಿದೆ. ನದಿಯಿಂದ ಅರ್ಧ ಕಿಮೀ ದೂರದಲ್ಲಿರುವ ದೇವಸ್ಥಾನ, ಊರಿಗೆ ನೀರು ನುಗ್ಗಿದೆ. ನೀರು ಬರುವ ಸುದ್ದಿ ತಿಳಿದು ವರಮಹಾಲಕ್ಷ್ಮಿ ಬ್ಯಾಂಕ್ ಸಿಬ್ಬಂದಿ ಹಣ ಸೇರಿ ಸಾಮಾಗ್ರಿ ತೆಗೆದುಕೊಂಡು ಹೋಗಿದ್ದಾರೆ. ಇನ್ನೂ ಗ್ರಾಮದ 200ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಲಾವೃತವಾಗಿದ್ದು, ಸೇತುವೆ ರಸ್ತೆ ಸೇರಿ ಎಲ್ಲವೂ ನೀರಲ್ಲಿ ತೇಲಿ ಹೋಗುವ ಸ್ಥಿತಿ ಇದೆ. ಬೆಳೆದ ಬೆಳೆ ಕೊಚ್ಚಿ ಹೋಗಿದೆ.

ಹೇಮಾವತಿ ಜಲಾಶಯಕ್ಕೆ ಇಂದಿನಿಂದ ಸಾರ್ವಜನಿಕರಿಗೆ ಪ್ರವೇಶ

ಭಾನುವಾರದಿಂದ (ಜು.28) ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ. ಹಾಸನದ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಲ್ಲಿ ಕಡಿಮೆ ಪ್ರಮಾಣದಲ್ಲಿ ನೀರು ಹೊರಹರಿವು ಬಿಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಅತ್ಯಧಿಕ ಪ್ರಮಾಣದಲ್ಲಿ ಹೊರಹರಿವು ಬಿಡುತ್ತಿದ್ದ ಕಾರಣ ಹೇಮಾವತಿ ಅಣೆಕಟ್ಟು ವಿಭಾಗದ ಅಧಿಕಾರಿಗಳು ಜಲಾಶಯಕ್ಕೆ ನಿರ್ಬಂಧ ಹೇರಿದ್ದರು. ಇದೀಗ ಮಳೆ ಕಡಿಮೆಯಾದ ಕಾರಣ ಕಡಿಮೆ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋಲಾರ

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

BEML Factory KGF: ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

VISTARANEWS.COM


on

beml factory kgf
Koo

ಕೋಲಾರ: ಬೆಮೆಲ್ ಕಾರ್ಖಾನೆಯ (BEML Factory KGF) ನೇಮಕಾತಿಯಲ್ಲಿ (Employments) ಸ್ಥಳೀಯರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸಾವಿರಾರು ಕನ್ನಡಿಗ ಕಾರ್ಮಿಕರು (labourers) ಧರಣಿ ಪ್ರತಿಭಟನೆ (Workers protest) ನಡೆಸಿದ್ದಾರೆ. ಸುಮಾರು 2500 ಕಾರ್ಮಿಕರಿಂದ ಪ್ರತಿಭಟನೆ ಮುಂದುವರಿದಿದೆ.

ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

ಕಾಂಟ್ರಾಕ್ಟ್ ಆಪರೇಟರ್ಸ್ ಸೇರಿ ವಿವಿಧ ಗುತ್ತಿಗೆ ನೌಕರರಿಂದ ಪ್ರತಿಭಟನೆ ನಡೆಯುತ್ತಿದೆ. ಬೆಮೆಲ್ ಕಾರ್ಖಾನೆ ಎದುರು ಜಮಾಯಿಸಿರುವ ಸೆಕೆಂಡ್ ಶಿಫ್ಟ್ ಹಾಗೂ ರಾತ್ರಿ ಪಾಳಯದ ನೌಕರರು, ಕೆಲಸಕ್ಕೆ ಹೋಗದೆ ಮುಷ್ಕರ ನಡೆಸಿದ್ದಾರೆ. ಆಡಳಿತ ಮಂಡಳಿ ನೌಕರರ ಮನವೊಲಿಸಲು‌ ಮುಂದಾಗಿದೆ. ಕೆಜಿಎಫ್ ಪೊಲೀಸರಿಂದ ಸಂಸ್ಥೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು ಸ್ಥಳದಲ್ಲಿ ನಾಲ್ಕು ಡಿಎಆರ್ ವ್ಯಾನ್, ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ.

ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Tomato Price: ದಿಢೀರ್‌ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ

Continue Reading
Advertisement
Decline of Vultures
ಆರೋಗ್ಯ5 mins ago

Indian Vultures : ಹದ್ದುಗಳೇ ಜೀವರಕ್ಷಕ; ಭಾರತದಲ್ಲಿ ರಣಹದ್ದುಗಳ ಸಂಖ್ಯೆ ಕುಸಿತದಿಂದ 5 ಲಕ್ಷ ಮಂದಿ ಸಾವು ಎಂದಿದೆ ಅಧ್ಯಯನ ವರದಿ

KRS Dam
ಕರ್ನಾಟಕ11 mins ago

KRS Dam: ಕೆಆರ್‌ಎಸ್, ಕಬಿನಿ ಜಲಾಶಯ ಭರ್ತಿ ಹಿನ್ನೆಲೆ ನಾಳೆ ಸಿಎಂ ಬಾಗಿನ ಅರ್ಪಣೆ

Sugar Vs Jaggery In Tea
ಆರೋಗ್ಯ32 mins ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ41 mins ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

theft case
ಚಿತ್ರದುರ್ಗ48 mins ago

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Paris Olympics boxing
ಕ್ರೀಡೆ59 mins ago

Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

Unveiling of IPT 12 Cricket Trophy, Jersey by N1 Cricket Academy
ಕ್ರಿಕೆಟ್1 hour ago

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

Bengaluru South District
ಕರ್ನಾಟಕ1 hour ago

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

ಪ್ರಮುಖ ಸುದ್ದಿ1 hour ago

UPSC Coaching : ನೈತಿಕತೆಯ ಪಾಲನೆ ವಿಚಾರದಲ್ಲಿ ಶ್ರೀರಾಮನಿಗಿಂತ ಅಕ್ಬರನೇ ಶ್ರೇಷ್ಠ ಎಂದ ಯುಪಿಎಸ್​ಸಿ ಬೋಧಕಿ ಶುಭ್ರಾ ರಂಜನ್; ಕೇಸ್​ ದಾಖಲಾದ ಬಳಿಕ ಕ್ಷಮೆ ಕೋರಿಕೆ

Murder case
ಕಲಬುರಗಿ1 hour ago

Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack
ಮಳೆ2 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ5 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ23 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಟ್ರೆಂಡಿಂಗ್‌